Homeಮುಖಪುಟಮೋದಿಯವರೆ ಚೀನಾವನ್ನು ಟಾರ್ಗೆಟ್ ಮಾಡಿ, ರೈತರನ್ನಲ್ಲ: ರೈತಹೋರಾಟದ ಇಂದಿನ ಘೋಷಣೆ

ಮೋದಿಯವರೆ ಚೀನಾವನ್ನು ಟಾರ್ಗೆಟ್ ಮಾಡಿ, ರೈತರನ್ನಲ್ಲ: ರೈತಹೋರಾಟದ ಇಂದಿನ ಘೋಷಣೆ

ಇಂದು ನೀವು ರಾಷ್ಟ್ರೀಯತೆಯನ್ನು ವ್ಯಾಖ್ಯಾನಿಸಲು ಬಯಸಿದರೆ "ಕಿಸಾನ್ ಮೋರ್ಚಾ" ಎಂಬ ಎರಡು ಸರಳ ಪದಗಳಲ್ಲಿ ವ್ಯಾಖ್ಯಾನಿಸಬಹುದು. ಅಲ್ಲಿ ಎಲ್ಲಾ ಧರ್ಮ ಮತ್ತು ಜಾತಿಗಳ ಜನರು ಒಟ್ಟಾಗಿ ಹೋರಾಡುತ್ತಿದ್ದಾರೆ

- Advertisement -
- Advertisement -

ದಿಲ್ಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟ ಭರ್ತಿ 60 ದಿನಗಳನ್ನು ಪೂರೈಸಿದೆ. ಈ ನಡುವೆ ಒಂದೂವರೆ ವರ್ಷಗಳ ಕಾಲ ಕೃಷಿ ಕಾಯ್ದೆಗಳನ್ನು ತಡೆಹಿಡಿಯುವುದಾಗಿ ಘೋಷಿಸಿರುವ ಕೇಂದ್ರ ಸರ್ಕಾರದಕ್ಕೆ ನಿರ್ಧಾರಕ್ಕೆ ರೈತರು ಕಿವಿಗೊಟ್ಟಿಲ್ಲ. ಜನವರಿ 26 ರಂದು ಗಣರಾಜ್ಯೋತ್ಸವದಂದು ಬೃಹತ್ ಟ್ರಾಕ್ಟರ್ ಪೆರೇಡ್ ನಡೆಸುವ ಮೂಲಕ ಇಡಿ ವಿಶ್ವಕ್ಕೆ ತಮ್ಮ ಹೋರಾಟವನ್ನು ಪ್ರದರ್ಶಿಸುವತ್ತ ಅವರು ಗಮನ ನೀಡಿದ್ದಾರೆ. ಅಲ್ಲದೇ ರೈತ ಹೋರಾಟದ ಮುಖವಾಣಿ ಕಿಸಾನ್ ಏಕ್ತಾ ಮೋರ್ಚಾ ಪ್ರತಿದಿನವೂ ಒಂದೊಂದು ಹ್ಯಾಷ್‌ಟ್ಯಾಗ್‌ ಅನ್ನು ಟ್ರೆಂಡ್ ಮಾಡುವ ಮೂಲಕ ಗಮನ ಸೆಳೆಯುತ್ತಿದ್ದು ಇಂದು #StopChinaNotFarmers ಎಂಬ ಘೋಷಣೆ ನೀಡಿದೆ.

ಕೇಂದ್ರ ಸರ್ಕಾರ ಹೇಗಾದರೂ ಮಾಡಿ ರೈತ ಹೋರಾಟವನ್ನು ತಡೆಯಬೇಕೆಂದು ಪ್ರಯತ್ನಿಸುತ್ತಿದೆ. ಆದರೆ ಅದೇ ಸಮಯದಲ್ಲಿ ಚೀನಾ ದೇಶವು ಅರುಣಾಚಲ ಪ್ರದೇಶದಲ್ಲಿ ಗಡಿ ಕ್ಯಾತೆ ತೆಗೆದಿದೆ. ಭಾರತದ ಪ್ರದೇಶದೊಳಕ್ಕೆ ನುಗ್ಗಿರುವ ಚೀನಾ ಅರುಣಾಚಲ ಪ್ರದೇಶದಲ್ಲಿ ಪುಟ್ಟ ಗ್ರಾಮವನ್ನೇ ನಿರ್ಮಿಸಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮೋದಿ ಸರ್ಕಾರ ಚೀನಾವನ್ನು ತಡೆಯಬೇಕೆ ಹೊರತು ರೈತ ಹೋರಾಟವನ್ನಲ್ಲ ಎಂದು ಕಿಸಾನ್ ಏಕ್ತಾ ಮೋರ್ಚಾ ಪ್ರತಿಪಾದಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ಆರಂಭವಾಗಿವೆ.

“ಯುದ್ಧದ ಸಮಯದಲ್ಲಿ, ಕಾನೂನು ಮೌನವಾಗುತ್ತದೆ. ಮೋದಿಯವರೆ ಚೀನಾವನ್ನು ಟಾರ್ಗೆಟ್ ಮಾಡಿ, ರೈತರನ್ನಲ್ಲ. ಮೋದಿ ಸರ್ಕಾರಕ್ಕೆ ನಾಚಿಕೆಯಾಗಬೇಕು” ಎಂದು ರಾಜ್ ಸಂದು ಕಿಸಾನ್ ಎಂಬುವವರು ಟ್ವೀಟ್ ಮಾಡಿದ್ದಾರೆ.

‘ಇಂದು ನೀವು ರಾಷ್ಟ್ರೀಯತೆಯನ್ನು ವ್ಯಾಖ್ಯಾನಿಸಲು ಬಯಸಿದರೆ “ಕಿಸಾನ್ ಮೋರ್ಚಾ” ಎಂಬ ಎರಡು ಸರಳ ಪದಗಳಲ್ಲಿ ವ್ಯಾಖ್ಯಾನಿಸಬಹುದು. ಅಲ್ಲಿ ಎಲ್ಲಾ ಧರ್ಮ ಮತ್ತು ಜಾತಿಗಳ ಜನರು ಒಟ್ಟಾಗಿ ಹೋರಾಡುತ್ತಿದ್ದಾರೆ. ಸಹೋದರತ್ವವನ್ನು ಕಾಪಾಡಿಕೊಳ್ಳಬೇಕು’ ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ. ಅದರಲ್ಲಿ ಬೌಧ್ಧರು, ಸಿಖ್ಖರು, ಮುಸ್ಲಿಂ ಮತ್ತು ಹಿಂದೂಗಳು ಒಟ್ಟಿಗೆ ಹೋರಾಟದಲ್ಲಿರುವ ಚಿತ್ರಗಳನ್ನು ಷೇರ್ ಮಾಡಲಾಗಿದೆ.

ಇಂದಿನ ಹ್ಯಾಷ್‌ಟ್ಯಾಗ್ #StopChinaNotFarmers ಆಗಿದೆ. ಇದನ್ನು ಬಳಸಿ ಷೇರ್ ಮಾಡಿ, ವೈರಲ್ ಮಾಡಿ. ನಮ್ಮ ಧ್ವನಿ ಸರ್ಕಾರಕ್ಕೆ ಕೇಳಲೇಬೇಕು ಮತ್ತು ಅದು ಈ ಕರಾಳ ಕಾನೂನುಗಳನ್ನು ವಾಪಸ್ ಪಡೆಯಲೇಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ. ರೈತರ ಕರೆ ಸಫಲ ನೀಡಿದ್ದು ಕೆಲವೇ ಗಂಟೆಗಳಲ್ಲಿ ಈ ಹ್ಯಾಷ್‌ಟ್ಯಾಗ್‌ ಇಡೀ ಭಾರತದಲ್ಲಿ ನಂಬರ್ ಒನ್ ಸ್ಥಾನದಲ್ಲಿ ಟ್ರೆಂಡ್‌ ಆಗುತ್ತಿದೆ.

ರೈತರನ್ನು ತಡೆಯಲು ಸಿಂಗು ಗಡಿಯಲ್ಲಿ ಮರಳು ತುಂಬಿದ ಟ್ರಕ್‌ಗಳು, ಮುಳ್ಳುತಂತಿ, ಬ್ಯಾರಿಕೇಡ್‌ಗಳು ಮತ್ತು ಕಂಟೈನರ್‌ಗಳನ್ನು ಅಡ್ಡಲಾಗಿ ನಿಲ್ಲಿಸಲಾಗಿದೆ. ಮೋದಿಯವರು ಇದೇ ಕೋಪವನ್ನು ಚೀನಾದೊಂದಿಗೆ ತೋರಿಸಿದ್ದರೆ ಇಂದು ಅರುಣಾಚಲ ಪ್ರದೇಶದಲ್ಲಿ ಚೀನಾ ಗ್ರಾಮವೊಂದನ್ನು ನಿರ್ಮಿಸುತ್ತಿರಲಿಲ್ಲ ಎಂದು ನವಜೋತ್ ಕೌರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಗಣರಾಜ್ಯೋತ್ಸವವನ್ನು ಆಚರಿಸಲು ದೆಹಲಿಯಲ್ಲಿ ರೈತರು ತಮ್ಮ ಟ್ರ್ಯಾಕ್ಟರ್ ರ್ಯಾಲಿ ಮಾಡುವುದನ್ನು ತಡೆಯಲು ದೆಹಲಿ ಗಡಿಯಲ್ಲಿ ಸರ್ಕಾರದ ಸಿದ್ಧತೆ ಇದು! ಅವರು ಚೀನಾ ಗಡಿಯಲ್ಲಿ ಈ ರೀತಿಯ ತಯಾರಿ ಮಾಡಿದ್ದರೆ, ಅವರು ಲಡಾಖ್ ಮತ್ತು ಅರುಣಾಚಲದಲ್ಲಿ ನಮ್ಮ ಭೂಮಿಯನ್ನು ಚೀನಾ ಆಕ್ರಮಿಸದಂತೆ ತಡೆಯಬಹುದಿತ್ತು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದಾರೆ.

ನಮ್ಮ ವರ್ತಮಾನವು ನಮ್ಮ ಭವಿಷ್ಯದ ಹಿಂದಿನದು. ಇದು ನಮ್ಮ ಐತಿಹಾಸಿಕ ಕ್ಷಣ. ನಾವು ಅದನ್ನು ಹೇಗೆ ಗೆದ್ದೆವೆ ಎಂಬುದನ್ನು ಜಗತ್ತಿಗೆ ತೋರಿಸುತ್ತೇವೆ ಎಂದು ಮಣಿ ಕೌರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಯಾರನ್ನೂ ಗೆಲ್ಲಲು ಅಥವಾ ಸೋಲಿಸಲು ನಾವು ಇಲ್ಲಿಲ್ಲ. ನಾವು ನಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದೇವೆ !! ಎಲ್ಲಾ 3 ಮಸೂದೆಗಳನ್ನು ರದ್ದುಪಡಿಸಬೇಕೆಂದು ನಾವು ಬಯಸುತ್ತೇವೆಯೇ ಹೊರತು ಮುಂದೂಡಲೆಂದಲ್ಲ ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕೃಷಿ ಕಾನೂನುಗಳಿಗೆ ಒಂದೂವರೆ ವರ್ಷ ತಡೆ – ಕೇಂದ್ರದ ಪ್ರಸ್ತಾವ ತಿರಸ್ಕರಿಸಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...