Homeಕರ್ನಾಟಕಹಿಂದಿ ಹೇರಿಕೆ ನಿಲ್ಲಿಸಿ: ಟ್ವಿಟರ್‌ನಲ್ಲಿ ಗಣ್ಯರು, ಕಲಾವಿದರಿಂದ StopHindiImposition ಟ್ವೀಟ್

ಹಿಂದಿ ಹೇರಿಕೆ ನಿಲ್ಲಿಸಿ: ಟ್ವಿಟರ್‌ನಲ್ಲಿ ಗಣ್ಯರು, ಕಲಾವಿದರಿಂದ StopHindiImposition ಟ್ವೀಟ್

- Advertisement -
- Advertisement -

ಒಕ್ಕೂಟ ಸರ್ಕಾರದ ಹಿಂದಿ ದಿವಸ್ ವಿರೋಧಿಸಿ ದಕ್ಷಿಣ ಭಾರತದಲ್ಲಿ ಕರಾಳ ದಿನ ಆಚರಣೆ ಮಾಡಲಾಗುತ್ತಿದೆ. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ StopHindiImposition, #ಹಿಂದಿಹೇರಿಕೆನಿಲ್ಲಿಸಿ ಎಂಬ ಹ್ಯಾಶ್‌ಟ್ಯಾಗ್‌ಗಳನ್ನು ಟ್ರೆಂಡ್ ಮಾಡಲಾಗುತ್ತಿದೆ.

ಗಣ್ಯರು, ನಟ-ನಟಿಯರು ಸೇರಿದಂತೆ ಲಕ್ಷಾಂತರ ಜನರು ಹಿಂದಿ ಹೇರಿಕೆ ವಿರೋಧಿಸಿ ಸಾಮಾಜಿಕ ಜಾಲತಾಣದ ವೇದಿಕೆಗಳಾದ ಟ್ವಿಟರ್, ಫೇಸ್‌ಬುಕ್, ಇನ್ಸ್ಟ್ರಾಗ್ರಾಮ್‌, ವಾಟ್ಸಾಪ್‌ಗಳಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ, ಕರ್ನಾಟಕ ಜನಾಧಿಕಾರ ಪಕ್ಷ, ಜೆಡಿಎಸ್‌ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ.

ಟ್ವಿಟರ್‌ನಲ್ಲಿ ಪೋಸ್ಟ್ ಶೇರ್‌ ಮಾಡಿರುವ ನಟ ಡಾಲಿ ಧನಂಜಯ, “ಎಲ್ಲಾ ಭಾಷೆಯನ್ನು ಗೌರವಿಸುತ್ತೇವೆ, ಆದರೆ, ಯಾವುದೇ ಹೇರಿಕೆ ಸಲ್ಲದು” ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕೂಡ ಸರಣಿ ಟ್ವೀಟ್‌ಗಳನ್ನು ಮಾಡಿದ್ದು, “ಹಿಂದಿ ಹೇರಿಕೆಯನ್ನು ಕನ್ನಡಿಗರು ಒಪ್ಪುವುದಿಲ್ಲ. ಹಿಂದಿ ದಿವಸ ಆಚರಣೆಯನ್ನೂ ಸಹಿಸುವುದಿಲ್ಲ.‌ ಒಕ್ಕೂಟದ ಎಲ್ಲಾ ಭಾಷೆಗಳಂತೆ ಹಿಂದಿಯೂ ಒಂದು ಭಾಷೆಯಷ್ಟೇ. ಕೇಂದ್ರ ಸರಕಾರ ಹಿಂದಿಗೆ ʼಇಂದ್ರ ವೈಭೋಗʼ ನೀಡಿ ಅನ್ಯ ಭಾಷೆಗಳನ್ನು ಬೀದಿಪಾಲು ಮಾಡುವುದನ್ನು ಸಹಿಸಲಾಗದು” ಎಂದಿದ್ದಾರೆ.

“ಹಿಂದಿ ಹೇರುವವರಿಗೆ ತಿಳಿದಿರಲಿ. ನಮ್ಮ ಕನ್ನಡ ಅಭಿಜಾತ ಭಾಷೆ. ನಮ್ಮ ಕನ್ನಡ ಸಾವಿರಾರು ವರ್ಷಗಳ ಘನ ಚರಿತ್ರೆಯುಳ್ಳ ಭಾಷೆ. ನಮ್ಮ ಕನ್ನಡ 6.4 ಕೋಟಿ ಜನರ ಹೃದಯಮಿಡಿತ. ನಮ್ಮ ಪಾಲಿನ ಮಾತೃಸ್ವರೂಪಿಣಿ. ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ ಮತ್ತು ಅನಗತ್ಯ. ಹಿಂದಿ  ಹೇರಿಕೆಯಿಂದ ಬಹುಭಾಷೆಯ ಭಾರತದ ನೆಮ್ಮದಿ ಕದಡುವುದು ಬೇಡ” ಎಂದಿದ್ದಾರೆ.

ಇದನ್ನೂ ಓದಿ: ಸೆ.14 ರಂದು ’ಹಿಂದಿ ಹೇರಿಕೆ ನಿಲ್ಲಿಸಿ’ ಟ್ವಿಟರ್‌ ಆಂದೋಲನಕ್ಕೆ ಕರವೇ ಕರೆ

ಟ್ವಿಟರ್‌ ಆಂದೋಲನಕ್ಕೆ ಕರೆ ನೀಡಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಕೂಡ ಟ್ವೀಟ್ ಮಾಡಿ, “ಹಿಂದಿ ದಿವಸ ಎಂಬುದು ದೇಶದ ಹಿಂದಿಯೇತರ ಜನರ ಮೇಲೆ ನಡೆಸುವ ದೌರ್ಜನ್ಯ, ಭಾಷಾ ಸಮುದಾಯಗಳನ್ನು ವಂಚಿಸುವ ಹುನ್ನಾರ. ನಮ್ಮ ತೆರಿಗೆ ಹಣದಲ್ಲಿ ನಮ್ಮ ಮೇಲೇ ಒಂದು ಭಾಷೆಯನ್ನು ಹೇರುವ ಕುಟಿಲತಂತ್ರ. ನಮ್ಮ ಕೈಗೇ ಕತ್ತರಿ ಕೊಟ್ಟು ನಮ್ಮ ನರಗಳನ್ನೇ ಕತ್ತರಿಸುವ ಹೀನ ಆಚರಣೆ. ಇದನ್ನು ಧಿಕ್ಕರಿಸೋಣ” ಎಂದಿದ್ದಾರೆ.

“ಹಿಂದಿ ದಿವಸ ಎಂಬ ಆಚರಣೆ ಪ್ರಜಾಪ್ರಭುತ್ವ ವಿರೋಧಿ ಮಾತ್ರವಲ್ಲ ಅನೈತಿಕ. ದೇಶದ ಪ್ರಜೆಗಳೆಲ್ಲರೂ ಸಮಾನರು ಎಂಬ ಸಂವಿಧಾನದ ಆಶಯಕ್ಕೆ ವಿರುದ್ಧ. ಕನ್ನಡಿಗರು ಮಾತ್ರವಲ್ಲದೆ ಎಲ್ಲ ಹಿಂದಿಯೇತರ ಭಾಷಾ ಸಮುದಾಯಗಳು ಮತ್ತು ಸಮಾನತೆಯಲ್ಲಿ ನಂಬಿಕೆ ಇಟ್ಟ ಹಿಂದಿ ಭಾಷಿಕರು ಇದನ್ನು ವಿರೋಧಿಸಬೇಕು” ಎಂದು ಆಗ್ರಹಿಸಿದ್ದಾರೆ.

ಸೆಪ್ಟೆಂಬರ್ 14 ರಂದು ಕೇಂದ್ರ ಸರ್ಕಾರದ ವತಿಯಿಂದ ಆಚರಿಸುವ ‘ಹಿಂದಿ ದಿವಸ’ ಆಚರಣೆ ವಿರೋಧಿಸಿ ಜಾತ್ಯತೀತ ಜನತಾದಳ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಶಾಸಕ ಆರ್‌.ಮಂಜುನಾಥ್ ತಿಳಿಸಿದ್ದಾರೆ.

ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿ ದಿವಸವನ್ನು ವಿರೋಧಿಸಿದ್ದಾರೆ.

“ಇಂದು, ಸೆಪ್ಟೆಂಬರ್ 14ನೇ ತಾರೀಖನ್ನು ಹಿಂದಿ ದಿವಸವೆಂದು ನಮ್ಮ ಸಂವಿಧಾನದ 343ನೇ ಆರ್ಟಿಕಲ್‌ ಪ್ರಕಾರ ಗುರುತಿಸಲಾಗಿದ್ದು, ಇದು ಹಿಂದಿಯನ್ನು ನಮ್ಮ ರಾಷ್ಟ್ರದ ಅಧಿಕೃತ ಭಾಷೆಯೆಂದು ಪರಿಗಣಿಸುತ್ತದೆ.
ಇಂತಹ ಭಾಷಾ ತಾರತಮ್ಯವನ್ನು ನಾವು ವಿರೋಧಿಸುತ್ತೇವೆ. ಹಿಂದಿ ಪ್ರಾಮುಖ್ಯತೆಯನ್ನು ನಿಲ್ಲಿಸಿ, 8ನೇ ವೇಳಾಪಟ್ಟಿಯಲ್ಲಿರುವ ಎಲ್ಲಾ 22 ಭಾಷೆಗಳನ್ನೂ ಕೂಡ ಅಧಿಕೃತ ಭಾಷೆಯೆಂದು ಗುರುತಿಸಬೇಕು” ಎಂದು ಆಗ್ರಹಿಸಿದ್ದಾರೆ.
ಹೋರಾಟಗಾರ, ಕರ್ನಾಟಕ ರಾಷ್ಟ್ರ ಸಮಿತಿಯ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ತಮ್ಮ ಟ್ವಿಟರ್‌ ಖಾತೆಯಲ್ಲಿ  , “ಹಿಂದಿ ದಿವಸದ ಬದಲಿಗೆ ದೇಶ ಭಾಷಾ ದಿನ ಆಚರಿಸಿ, StopHindiImposition ಎಂದಿದ್ದಾರೆ. ಎಲ್ಲಾ ಭಾಷಿಕ ದೇಶವಾಸಿಗಳ ತೆರಿಗೆಯ ಹಣದಲ್ಲಿ ಒಕ್ಕೂಟ ಸರ್ಕಾರವು ಕೇವಲ “ಹಿಂದಿ ದಿವಸ್” ಆಚರಿಸುವುದನ್ನು ಕರ್ನಾಟಕ ರಾಷ್ಟ್ರ ಸಮಿತಿ ವಿರೋಧಿಸುತ್ತದೆ ಮತ್ತು ಈ ದಿನವನ್ನು “ದೇಶಭಾಷೆ ದಿನ”ವಾಗಿ ಆಚರಿಸಲು ಆಗ್ರಹಿಸುತ್ತದೆ” ಎಂದಿದ್ದಾರೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...