Homeಮುಖಪುಟಆಪತ್ತಿನ ಕತೆಗಳು-ಕತ್ತಿಯವರಿಗೇಕೆ ಬೈತೀರಿ…ಪಾಪ | ರಾಜಾರಾಮ್ ತಲ್ಲೂರು ಬರಹ

ಆಪತ್ತಿನ ಕತೆಗಳು-ಕತ್ತಿಯವರಿಗೇಕೆ ಬೈತೀರಿ…ಪಾಪ | ರಾಜಾರಾಮ್ ತಲ್ಲೂರು ಬರಹ

ಸನ್ಮಾನ್ಯ ಪ್ರಧಾನಮಂತ್ರಿಗಳು ಮೊನ್ನೆ ಎಂಎಸ್‌ಪಿ ಥಾ; ಎಂಎಸ್‌ಪಿ ಹೈ; ಎಂಎಸ್‌ಪಿ ರಹೇಗಾ ಅಂದಿದ್ದರಲ್ವಾ? ಅವರು ಸತ್ಯ ಹೇಳಿದ್ದಾರೆ. ಆದರೆ, ಈ ಕ್ರೊನಾಲಜಿ ಸ್ವಲ್ಪ … ಸಮಝೀಯೆ…!

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ನೀತಿಯ ಅಂತಿಮ ಪರಿಣಾಮಗಳಲ್ಲಿ ಸಚಿವ ಕತ್ತಿಯವರ ಪ್ರಕಟಣೆಯೂ ಒಂದು. ಕೃಷಿ-ಆಹಾರ ಸಬ್ಸಿಡಿಗಳಿಂದ ಕೈತೊಳೆದುಕೊಳ್ಳುವ ಪ್ರಯತ್ನದ ಭಾಗ ಇದು. ಅಷ್ಟೇ.

ಸನ್ಮಾನ್ಯ ಪ್ರಧಾನಮಂತ್ರಿಗಳು ಮೊನ್ನೆ ‘ಎಂಎಸ್‌ಪಿ ಥಾ; ಎಂಎಸ್‌ಪಿ ಹೈ; ಎಂಎಸ್‌ಪಿ ರಹೇಗಾ’ ಅಂದಿದ್ದರಲ್ವಾ? ಅವರು ಸತ್ಯ ಹೇಳಿದ್ದಾರೆ. ಆದರೆ, ಈ ಕ್ರೊನಾಲಜಿ ಸ್ವಲ್ಪ … ಸಮಝೀಯೆ…!

  • ಎಪಿಎಂಸಿಗಳಿಂದ ಹೊರಗೆ ಖರೀದಿಗೆ ಅವಕಾಶ ಕೊಟ್ಟಾಗ, ಎಪಿಎಂಸಿಗಳು ನಿಧಾನಕ್ಕೆ ಅಪ್ರಸ್ತುತಗೊಳ್ಳುತ್ತವೆ. ಅಲ್ಲಿ ಎಂಎಸ್‌ಪಿ ಕೊಟ್ಟು ಅತಿ ಹೆಚ್ಚಿನ ಪ್ರಮಾಣದಲ್ಲಿ ಆಹಾರ ಧಾನ್ಯಗಳನ್ನು ಖರೀದಿಸುವವರು ಯಾರು ಗೊತ್ತೆ? ಕೇಂದ್ರ ಸರ್ಕಾರದ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ ಯಾನೆ ಎಫ್‌ಸಿಐ.
  • ಎಫ್‌ಸಿಐ ತಾನು ಸಂಗ್ರಹಿಸಿ ಉಗ್ರಾಣಗಳಲ್ಲಿರಿಸಿದ ಆಹಾರಧಾನ್ಯಗಳನ್ನು ಪಡಿತರ ವಿತರಣೆಯ ಮೂಲಕ ವಿತರಿಸಲು ರಾಜ್ಯಸರ್ಕಾರಗಳ ಪಡಿತರ ವ್ಯವಸ್ಥೆಗೆ ಬಿಡುಗಡೆ ಮಾಡುತ್ತದೆ.

ಇದನ್ನೂ ಓದಿ: ಹೊಸ ಕೃಷಿ ಕಾನೂನುಗಳ ಹಿನ್ನೆಲೆ ಏನು? ಯಾಕಾಗಿ ಇವು ಈಗ ತಲೆ ಎತ್ತಿವೆ?

  • ಕೇಂದ್ರ ಸರ್ಕಾರ ತನ್ನ ಆಹಾರ ಸಬ್ಸಿಡಿ ಕಡಿತ ಕಾರ್ಯಕ್ರಮದ ಭಾಗವಾಗಿ ಎಫ್‌ಸಿಐಗೆ ನೀಡುವ ಸಬ್ಸಿಡಿ ಕಡಿಮೆ ಮಾಡಿದಾಗ, ಸಹಜವಾಗಿಯೇ ಅದು ಪಡಿತರಕ್ಕೆಂದು ಖರೀದಿಸುವ ಆಹಾರಧಾನ್ಯಗಳ ಪ್ರಮಾಣ ಕಡಿಮೆ ಆಗುತ್ತಾ ಬರುತ್ತದೆ. (ಚಿತ್ರದಲ್ಲಿ ಸಬ್ಸಿಡಿ ಶೇಕಡಾವಾರು ಈ ಸರ್ಕಾರದ ಅವಧಿಯಲ್ಲಿ ಕುಸಿಯುತ್ತಾ ಬಂದಿರುವ ಪ್ರಮಾಣವನ್ನು ಗಮನಿಸಿ)

  • ಆಗ ಸಹಜವಾಗಿಯೇ ರಾಜ್ಯ ಸರ್ಕಾರಗಳು ತಮ್ಮ ಆಹಾರ ಪಡಿತರ ವಿತರಣಾ ವ್ಯವಸ್ಥೆಯ ಗಾತ್ರವನ್ನು ಸಂಕುಚಿಸಬೇಕಾಗುತ್ತದೆ. ಅದನ್ನೇ ಕತ್ತಿಯವರು ಹೇಳಿದ್ದು. ಟಿವಿ-ಫ್ರಿಡ್ಜು ಇತ್ಯಾದಿ ಇರುವವರಿಗೆಲ್ಲ ಬಿಪಿಎಲ್ ಕಾರ್ಡು ಯಾಕೆ ಎಂದು. ಅವರೀಗ ಜನಕ್ಕೆ ಸಿಟ್ಟು ಬಂದಿದೆ ಎಂದು ತೀರ್ಮಾನವನ್ನು ಹಿಂತೆಗೆದುಕೊಂಡರೂ ಕೂಡ ಅದು ಗವಾಕ್ಷೀಲಿ ಹಿಂದಿರುಗೋದು ಖಂಡಿತಾ!
  • ಈ ಬಾರಿ ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಅವರು ಎಫ್‌ಸಿಐನ ಸಾಲದ ಹೊಂಡ ಭರ್ತಿ ಮಾಡಲು ಈ ಬಾರಿಯ ಫುಡ್ ಸಬ್ಸಿಡಿಯನ್ನು ವ್ಯಯಿಸಲಾಗುವುದು ಎಂದು ಹೇಳಿದ್ದಾರೆ. ಅಂದರೆ, ಎಫ್‌ಸಿಐ ಹೆಚ್ಚಿನಂಶ ತನ್ನ ಹೊಂಡಗಳನ್ನು ಮುಚ್ಚಿಕೊಂಡು ದುಂಡಗಾಗಿ, ಖಾಸಗೀಕರಣಕ್ಕೆ ಸಿದ್ಧವಾಗುತ್ತಿದೆ. ಯಾವುದೋ ಒಂದು ಆನಿ ಕಂಪನಿಯ ಖಾಸಗಿ ಸಿಲೊ ಆಗಲು ತಯಾರಾಗುತ್ತಿದೆ.
  • ಹೀಗೆ, ಒಟ್ಟಿನಲ್ಲಿ ಎಪಿಎಂಸಿ ಅಪ್ರಸ್ತುತವಾದರೆ, ಎಂಎಸ್‌ಪಿ ಇದ್ದೂ ಸತ್ತಂತೆ; ಎಂಎಸ್‌ಪಿ ಸತ್ತರೆ ಎಫ್‌ಸಿಐ ಸತ್ತಂತೆ; ಎಫ್‌ಸಿಐ ಸತ್ತರೆ ಆಹಾರ ಪಡಿತರ ವಿತರಣಾ ವ್ಯವಸ್ಥೆ ಸತ್ತಂತೆ. ನಾನು ಅರ್ಥ ಮಾಡಿಕೊಂಡಂತೆ, ಇದು ಸಂಪೂರ್ಣ ಚಿತ್ರ.

ಒಟ್ಟಿನಲ್ಲಿಸರ್ಕಾರದ್ದು ಬಡವರ ನಿರ್ಮೂಲನಾ ಕಾರ್ಯಕ್ರಮ!

ಇದನ್ನೂ ಓದಿ: ಪ್ರಭುತ್ವದ ಬೇಟೆಯಾಗುತ್ತಿರುವುದೇ ಪತ್ರಿಕೋದ್ಯಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...