Homeಮುಖಪುಟಆಪತ್ತಿನ ಕತೆಗಳು-ಕತ್ತಿಯವರಿಗೇಕೆ ಬೈತೀರಿ…ಪಾಪ | ರಾಜಾರಾಮ್ ತಲ್ಲೂರು ಬರಹ

ಆಪತ್ತಿನ ಕತೆಗಳು-ಕತ್ತಿಯವರಿಗೇಕೆ ಬೈತೀರಿ…ಪಾಪ | ರಾಜಾರಾಮ್ ತಲ್ಲೂರು ಬರಹ

ಸನ್ಮಾನ್ಯ ಪ್ರಧಾನಮಂತ್ರಿಗಳು ಮೊನ್ನೆ ಎಂಎಸ್‌ಪಿ ಥಾ; ಎಂಎಸ್‌ಪಿ ಹೈ; ಎಂಎಸ್‌ಪಿ ರಹೇಗಾ ಅಂದಿದ್ದರಲ್ವಾ? ಅವರು ಸತ್ಯ ಹೇಳಿದ್ದಾರೆ. ಆದರೆ, ಈ ಕ್ರೊನಾಲಜಿ ಸ್ವಲ್ಪ … ಸಮಝೀಯೆ…!

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ನೀತಿಯ ಅಂತಿಮ ಪರಿಣಾಮಗಳಲ್ಲಿ ಸಚಿವ ಕತ್ತಿಯವರ ಪ್ರಕಟಣೆಯೂ ಒಂದು. ಕೃಷಿ-ಆಹಾರ ಸಬ್ಸಿಡಿಗಳಿಂದ ಕೈತೊಳೆದುಕೊಳ್ಳುವ ಪ್ರಯತ್ನದ ಭಾಗ ಇದು. ಅಷ್ಟೇ.

ಸನ್ಮಾನ್ಯ ಪ್ರಧಾನಮಂತ್ರಿಗಳು ಮೊನ್ನೆ ‘ಎಂಎಸ್‌ಪಿ ಥಾ; ಎಂಎಸ್‌ಪಿ ಹೈ; ಎಂಎಸ್‌ಪಿ ರಹೇಗಾ’ ಅಂದಿದ್ದರಲ್ವಾ? ಅವರು ಸತ್ಯ ಹೇಳಿದ್ದಾರೆ. ಆದರೆ, ಈ ಕ್ರೊನಾಲಜಿ ಸ್ವಲ್ಪ … ಸಮಝೀಯೆ…!

  • ಎಪಿಎಂಸಿಗಳಿಂದ ಹೊರಗೆ ಖರೀದಿಗೆ ಅವಕಾಶ ಕೊಟ್ಟಾಗ, ಎಪಿಎಂಸಿಗಳು ನಿಧಾನಕ್ಕೆ ಅಪ್ರಸ್ತುತಗೊಳ್ಳುತ್ತವೆ. ಅಲ್ಲಿ ಎಂಎಸ್‌ಪಿ ಕೊಟ್ಟು ಅತಿ ಹೆಚ್ಚಿನ ಪ್ರಮಾಣದಲ್ಲಿ ಆಹಾರ ಧಾನ್ಯಗಳನ್ನು ಖರೀದಿಸುವವರು ಯಾರು ಗೊತ್ತೆ? ಕೇಂದ್ರ ಸರ್ಕಾರದ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ ಯಾನೆ ಎಫ್‌ಸಿಐ.
  • ಎಫ್‌ಸಿಐ ತಾನು ಸಂಗ್ರಹಿಸಿ ಉಗ್ರಾಣಗಳಲ್ಲಿರಿಸಿದ ಆಹಾರಧಾನ್ಯಗಳನ್ನು ಪಡಿತರ ವಿತರಣೆಯ ಮೂಲಕ ವಿತರಿಸಲು ರಾಜ್ಯಸರ್ಕಾರಗಳ ಪಡಿತರ ವ್ಯವಸ್ಥೆಗೆ ಬಿಡುಗಡೆ ಮಾಡುತ್ತದೆ.

ಇದನ್ನೂ ಓದಿ: ಹೊಸ ಕೃಷಿ ಕಾನೂನುಗಳ ಹಿನ್ನೆಲೆ ಏನು? ಯಾಕಾಗಿ ಇವು ಈಗ ತಲೆ ಎತ್ತಿವೆ?

  • ಕೇಂದ್ರ ಸರ್ಕಾರ ತನ್ನ ಆಹಾರ ಸಬ್ಸಿಡಿ ಕಡಿತ ಕಾರ್ಯಕ್ರಮದ ಭಾಗವಾಗಿ ಎಫ್‌ಸಿಐಗೆ ನೀಡುವ ಸಬ್ಸಿಡಿ ಕಡಿಮೆ ಮಾಡಿದಾಗ, ಸಹಜವಾಗಿಯೇ ಅದು ಪಡಿತರಕ್ಕೆಂದು ಖರೀದಿಸುವ ಆಹಾರಧಾನ್ಯಗಳ ಪ್ರಮಾಣ ಕಡಿಮೆ ಆಗುತ್ತಾ ಬರುತ್ತದೆ. (ಚಿತ್ರದಲ್ಲಿ ಸಬ್ಸಿಡಿ ಶೇಕಡಾವಾರು ಈ ಸರ್ಕಾರದ ಅವಧಿಯಲ್ಲಿ ಕುಸಿಯುತ್ತಾ ಬಂದಿರುವ ಪ್ರಮಾಣವನ್ನು ಗಮನಿಸಿ)

  • ಆಗ ಸಹಜವಾಗಿಯೇ ರಾಜ್ಯ ಸರ್ಕಾರಗಳು ತಮ್ಮ ಆಹಾರ ಪಡಿತರ ವಿತರಣಾ ವ್ಯವಸ್ಥೆಯ ಗಾತ್ರವನ್ನು ಸಂಕುಚಿಸಬೇಕಾಗುತ್ತದೆ. ಅದನ್ನೇ ಕತ್ತಿಯವರು ಹೇಳಿದ್ದು. ಟಿವಿ-ಫ್ರಿಡ್ಜು ಇತ್ಯಾದಿ ಇರುವವರಿಗೆಲ್ಲ ಬಿಪಿಎಲ್ ಕಾರ್ಡು ಯಾಕೆ ಎಂದು. ಅವರೀಗ ಜನಕ್ಕೆ ಸಿಟ್ಟು ಬಂದಿದೆ ಎಂದು ತೀರ್ಮಾನವನ್ನು ಹಿಂತೆಗೆದುಕೊಂಡರೂ ಕೂಡ ಅದು ಗವಾಕ್ಷೀಲಿ ಹಿಂದಿರುಗೋದು ಖಂಡಿತಾ!
  • ಈ ಬಾರಿ ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಅವರು ಎಫ್‌ಸಿಐನ ಸಾಲದ ಹೊಂಡ ಭರ್ತಿ ಮಾಡಲು ಈ ಬಾರಿಯ ಫುಡ್ ಸಬ್ಸಿಡಿಯನ್ನು ವ್ಯಯಿಸಲಾಗುವುದು ಎಂದು ಹೇಳಿದ್ದಾರೆ. ಅಂದರೆ, ಎಫ್‌ಸಿಐ ಹೆಚ್ಚಿನಂಶ ತನ್ನ ಹೊಂಡಗಳನ್ನು ಮುಚ್ಚಿಕೊಂಡು ದುಂಡಗಾಗಿ, ಖಾಸಗೀಕರಣಕ್ಕೆ ಸಿದ್ಧವಾಗುತ್ತಿದೆ. ಯಾವುದೋ ಒಂದು ಆನಿ ಕಂಪನಿಯ ಖಾಸಗಿ ಸಿಲೊ ಆಗಲು ತಯಾರಾಗುತ್ತಿದೆ.
  • ಹೀಗೆ, ಒಟ್ಟಿನಲ್ಲಿ ಎಪಿಎಂಸಿ ಅಪ್ರಸ್ತುತವಾದರೆ, ಎಂಎಸ್‌ಪಿ ಇದ್ದೂ ಸತ್ತಂತೆ; ಎಂಎಸ್‌ಪಿ ಸತ್ತರೆ ಎಫ್‌ಸಿಐ ಸತ್ತಂತೆ; ಎಫ್‌ಸಿಐ ಸತ್ತರೆ ಆಹಾರ ಪಡಿತರ ವಿತರಣಾ ವ್ಯವಸ್ಥೆ ಸತ್ತಂತೆ. ನಾನು ಅರ್ಥ ಮಾಡಿಕೊಂಡಂತೆ, ಇದು ಸಂಪೂರ್ಣ ಚಿತ್ರ.

ಒಟ್ಟಿನಲ್ಲಿಸರ್ಕಾರದ್ದು ಬಡವರ ನಿರ್ಮೂಲನಾ ಕಾರ್ಯಕ್ರಮ!

ಇದನ್ನೂ ಓದಿ: ಪ್ರಭುತ್ವದ ಬೇಟೆಯಾಗುತ್ತಿರುವುದೇ ಪತ್ರಿಕೋದ್ಯಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...