Homeಮುಖಪುಟಆಪತ್ತಿನ ಕತೆಗಳು-ಕತ್ತಿಯವರಿಗೇಕೆ ಬೈತೀರಿ…ಪಾಪ | ರಾಜಾರಾಮ್ ತಲ್ಲೂರು ಬರಹ

ಆಪತ್ತಿನ ಕತೆಗಳು-ಕತ್ತಿಯವರಿಗೇಕೆ ಬೈತೀರಿ…ಪಾಪ | ರಾಜಾರಾಮ್ ತಲ್ಲೂರು ಬರಹ

ಸನ್ಮಾನ್ಯ ಪ್ರಧಾನಮಂತ್ರಿಗಳು ಮೊನ್ನೆ ಎಂಎಸ್‌ಪಿ ಥಾ; ಎಂಎಸ್‌ಪಿ ಹೈ; ಎಂಎಸ್‌ಪಿ ರಹೇಗಾ ಅಂದಿದ್ದರಲ್ವಾ? ಅವರು ಸತ್ಯ ಹೇಳಿದ್ದಾರೆ. ಆದರೆ, ಈ ಕ್ರೊನಾಲಜಿ ಸ್ವಲ್ಪ … ಸಮಝೀಯೆ…!

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ನೀತಿಯ ಅಂತಿಮ ಪರಿಣಾಮಗಳಲ್ಲಿ ಸಚಿವ ಕತ್ತಿಯವರ ಪ್ರಕಟಣೆಯೂ ಒಂದು. ಕೃಷಿ-ಆಹಾರ ಸಬ್ಸಿಡಿಗಳಿಂದ ಕೈತೊಳೆದುಕೊಳ್ಳುವ ಪ್ರಯತ್ನದ ಭಾಗ ಇದು. ಅಷ್ಟೇ.

ಸನ್ಮಾನ್ಯ ಪ್ರಧಾನಮಂತ್ರಿಗಳು ಮೊನ್ನೆ ‘ಎಂಎಸ್‌ಪಿ ಥಾ; ಎಂಎಸ್‌ಪಿ ಹೈ; ಎಂಎಸ್‌ಪಿ ರಹೇಗಾ’ ಅಂದಿದ್ದರಲ್ವಾ? ಅವರು ಸತ್ಯ ಹೇಳಿದ್ದಾರೆ. ಆದರೆ, ಈ ಕ್ರೊನಾಲಜಿ ಸ್ವಲ್ಪ … ಸಮಝೀಯೆ…!

  • ಎಪಿಎಂಸಿಗಳಿಂದ ಹೊರಗೆ ಖರೀದಿಗೆ ಅವಕಾಶ ಕೊಟ್ಟಾಗ, ಎಪಿಎಂಸಿಗಳು ನಿಧಾನಕ್ಕೆ ಅಪ್ರಸ್ತುತಗೊಳ್ಳುತ್ತವೆ. ಅಲ್ಲಿ ಎಂಎಸ್‌ಪಿ ಕೊಟ್ಟು ಅತಿ ಹೆಚ್ಚಿನ ಪ್ರಮಾಣದಲ್ಲಿ ಆಹಾರ ಧಾನ್ಯಗಳನ್ನು ಖರೀದಿಸುವವರು ಯಾರು ಗೊತ್ತೆ? ಕೇಂದ್ರ ಸರ್ಕಾರದ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ ಯಾನೆ ಎಫ್‌ಸಿಐ.
  • ಎಫ್‌ಸಿಐ ತಾನು ಸಂಗ್ರಹಿಸಿ ಉಗ್ರಾಣಗಳಲ್ಲಿರಿಸಿದ ಆಹಾರಧಾನ್ಯಗಳನ್ನು ಪಡಿತರ ವಿತರಣೆಯ ಮೂಲಕ ವಿತರಿಸಲು ರಾಜ್ಯಸರ್ಕಾರಗಳ ಪಡಿತರ ವ್ಯವಸ್ಥೆಗೆ ಬಿಡುಗಡೆ ಮಾಡುತ್ತದೆ.

ಇದನ್ನೂ ಓದಿ: ಹೊಸ ಕೃಷಿ ಕಾನೂನುಗಳ ಹಿನ್ನೆಲೆ ಏನು? ಯಾಕಾಗಿ ಇವು ಈಗ ತಲೆ ಎತ್ತಿವೆ?

  • ಕೇಂದ್ರ ಸರ್ಕಾರ ತನ್ನ ಆಹಾರ ಸಬ್ಸಿಡಿ ಕಡಿತ ಕಾರ್ಯಕ್ರಮದ ಭಾಗವಾಗಿ ಎಫ್‌ಸಿಐಗೆ ನೀಡುವ ಸಬ್ಸಿಡಿ ಕಡಿಮೆ ಮಾಡಿದಾಗ, ಸಹಜವಾಗಿಯೇ ಅದು ಪಡಿತರಕ್ಕೆಂದು ಖರೀದಿಸುವ ಆಹಾರಧಾನ್ಯಗಳ ಪ್ರಮಾಣ ಕಡಿಮೆ ಆಗುತ್ತಾ ಬರುತ್ತದೆ. (ಚಿತ್ರದಲ್ಲಿ ಸಬ್ಸಿಡಿ ಶೇಕಡಾವಾರು ಈ ಸರ್ಕಾರದ ಅವಧಿಯಲ್ಲಿ ಕುಸಿಯುತ್ತಾ ಬಂದಿರುವ ಪ್ರಮಾಣವನ್ನು ಗಮನಿಸಿ)

  • ಆಗ ಸಹಜವಾಗಿಯೇ ರಾಜ್ಯ ಸರ್ಕಾರಗಳು ತಮ್ಮ ಆಹಾರ ಪಡಿತರ ವಿತರಣಾ ವ್ಯವಸ್ಥೆಯ ಗಾತ್ರವನ್ನು ಸಂಕುಚಿಸಬೇಕಾಗುತ್ತದೆ. ಅದನ್ನೇ ಕತ್ತಿಯವರು ಹೇಳಿದ್ದು. ಟಿವಿ-ಫ್ರಿಡ್ಜು ಇತ್ಯಾದಿ ಇರುವವರಿಗೆಲ್ಲ ಬಿಪಿಎಲ್ ಕಾರ್ಡು ಯಾಕೆ ಎಂದು. ಅವರೀಗ ಜನಕ್ಕೆ ಸಿಟ್ಟು ಬಂದಿದೆ ಎಂದು ತೀರ್ಮಾನವನ್ನು ಹಿಂತೆಗೆದುಕೊಂಡರೂ ಕೂಡ ಅದು ಗವಾಕ್ಷೀಲಿ ಹಿಂದಿರುಗೋದು ಖಂಡಿತಾ!
  • ಈ ಬಾರಿ ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಅವರು ಎಫ್‌ಸಿಐನ ಸಾಲದ ಹೊಂಡ ಭರ್ತಿ ಮಾಡಲು ಈ ಬಾರಿಯ ಫುಡ್ ಸಬ್ಸಿಡಿಯನ್ನು ವ್ಯಯಿಸಲಾಗುವುದು ಎಂದು ಹೇಳಿದ್ದಾರೆ. ಅಂದರೆ, ಎಫ್‌ಸಿಐ ಹೆಚ್ಚಿನಂಶ ತನ್ನ ಹೊಂಡಗಳನ್ನು ಮುಚ್ಚಿಕೊಂಡು ದುಂಡಗಾಗಿ, ಖಾಸಗೀಕರಣಕ್ಕೆ ಸಿದ್ಧವಾಗುತ್ತಿದೆ. ಯಾವುದೋ ಒಂದು ಆನಿ ಕಂಪನಿಯ ಖಾಸಗಿ ಸಿಲೊ ಆಗಲು ತಯಾರಾಗುತ್ತಿದೆ.
  • ಹೀಗೆ, ಒಟ್ಟಿನಲ್ಲಿ ಎಪಿಎಂಸಿ ಅಪ್ರಸ್ತುತವಾದರೆ, ಎಂಎಸ್‌ಪಿ ಇದ್ದೂ ಸತ್ತಂತೆ; ಎಂಎಸ್‌ಪಿ ಸತ್ತರೆ ಎಫ್‌ಸಿಐ ಸತ್ತಂತೆ; ಎಫ್‌ಸಿಐ ಸತ್ತರೆ ಆಹಾರ ಪಡಿತರ ವಿತರಣಾ ವ್ಯವಸ್ಥೆ ಸತ್ತಂತೆ. ನಾನು ಅರ್ಥ ಮಾಡಿಕೊಂಡಂತೆ, ಇದು ಸಂಪೂರ್ಣ ಚಿತ್ರ.

ಒಟ್ಟಿನಲ್ಲಿಸರ್ಕಾರದ್ದು ಬಡವರ ನಿರ್ಮೂಲನಾ ಕಾರ್ಯಕ್ರಮ!

ಇದನ್ನೂ ಓದಿ: ಪ್ರಭುತ್ವದ ಬೇಟೆಯಾಗುತ್ತಿರುವುದೇ ಪತ್ರಿಕೋದ್ಯಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...