Homeಮುಖಪುಟಆಪತ್ತಿನ ಕತೆಗಳು-ಕತ್ತಿಯವರಿಗೇಕೆ ಬೈತೀರಿ…ಪಾಪ | ರಾಜಾರಾಮ್ ತಲ್ಲೂರು ಬರಹ

ಆಪತ್ತಿನ ಕತೆಗಳು-ಕತ್ತಿಯವರಿಗೇಕೆ ಬೈತೀರಿ…ಪಾಪ | ರಾಜಾರಾಮ್ ತಲ್ಲೂರು ಬರಹ

ಸನ್ಮಾನ್ಯ ಪ್ರಧಾನಮಂತ್ರಿಗಳು ಮೊನ್ನೆ ಎಂಎಸ್‌ಪಿ ಥಾ; ಎಂಎಸ್‌ಪಿ ಹೈ; ಎಂಎಸ್‌ಪಿ ರಹೇಗಾ ಅಂದಿದ್ದರಲ್ವಾ? ಅವರು ಸತ್ಯ ಹೇಳಿದ್ದಾರೆ. ಆದರೆ, ಈ ಕ್ರೊನಾಲಜಿ ಸ್ವಲ್ಪ … ಸಮಝೀಯೆ…!

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ನೀತಿಯ ಅಂತಿಮ ಪರಿಣಾಮಗಳಲ್ಲಿ ಸಚಿವ ಕತ್ತಿಯವರ ಪ್ರಕಟಣೆಯೂ ಒಂದು. ಕೃಷಿ-ಆಹಾರ ಸಬ್ಸಿಡಿಗಳಿಂದ ಕೈತೊಳೆದುಕೊಳ್ಳುವ ಪ್ರಯತ್ನದ ಭಾಗ ಇದು. ಅಷ್ಟೇ.

ಸನ್ಮಾನ್ಯ ಪ್ರಧಾನಮಂತ್ರಿಗಳು ಮೊನ್ನೆ ‘ಎಂಎಸ್‌ಪಿ ಥಾ; ಎಂಎಸ್‌ಪಿ ಹೈ; ಎಂಎಸ್‌ಪಿ ರಹೇಗಾ’ ಅಂದಿದ್ದರಲ್ವಾ? ಅವರು ಸತ್ಯ ಹೇಳಿದ್ದಾರೆ. ಆದರೆ, ಈ ಕ್ರೊನಾಲಜಿ ಸ್ವಲ್ಪ … ಸಮಝೀಯೆ…!

  • ಎಪಿಎಂಸಿಗಳಿಂದ ಹೊರಗೆ ಖರೀದಿಗೆ ಅವಕಾಶ ಕೊಟ್ಟಾಗ, ಎಪಿಎಂಸಿಗಳು ನಿಧಾನಕ್ಕೆ ಅಪ್ರಸ್ತುತಗೊಳ್ಳುತ್ತವೆ. ಅಲ್ಲಿ ಎಂಎಸ್‌ಪಿ ಕೊಟ್ಟು ಅತಿ ಹೆಚ್ಚಿನ ಪ್ರಮಾಣದಲ್ಲಿ ಆಹಾರ ಧಾನ್ಯಗಳನ್ನು ಖರೀದಿಸುವವರು ಯಾರು ಗೊತ್ತೆ? ಕೇಂದ್ರ ಸರ್ಕಾರದ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ ಯಾನೆ ಎಫ್‌ಸಿಐ.
  • ಎಫ್‌ಸಿಐ ತಾನು ಸಂಗ್ರಹಿಸಿ ಉಗ್ರಾಣಗಳಲ್ಲಿರಿಸಿದ ಆಹಾರಧಾನ್ಯಗಳನ್ನು ಪಡಿತರ ವಿತರಣೆಯ ಮೂಲಕ ವಿತರಿಸಲು ರಾಜ್ಯಸರ್ಕಾರಗಳ ಪಡಿತರ ವ್ಯವಸ್ಥೆಗೆ ಬಿಡುಗಡೆ ಮಾಡುತ್ತದೆ.

ಇದನ್ನೂ ಓದಿ: ಹೊಸ ಕೃಷಿ ಕಾನೂನುಗಳ ಹಿನ್ನೆಲೆ ಏನು? ಯಾಕಾಗಿ ಇವು ಈಗ ತಲೆ ಎತ್ತಿವೆ?

  • ಕೇಂದ್ರ ಸರ್ಕಾರ ತನ್ನ ಆಹಾರ ಸಬ್ಸಿಡಿ ಕಡಿತ ಕಾರ್ಯಕ್ರಮದ ಭಾಗವಾಗಿ ಎಫ್‌ಸಿಐಗೆ ನೀಡುವ ಸಬ್ಸಿಡಿ ಕಡಿಮೆ ಮಾಡಿದಾಗ, ಸಹಜವಾಗಿಯೇ ಅದು ಪಡಿತರಕ್ಕೆಂದು ಖರೀದಿಸುವ ಆಹಾರಧಾನ್ಯಗಳ ಪ್ರಮಾಣ ಕಡಿಮೆ ಆಗುತ್ತಾ ಬರುತ್ತದೆ. (ಚಿತ್ರದಲ್ಲಿ ಸಬ್ಸಿಡಿ ಶೇಕಡಾವಾರು ಈ ಸರ್ಕಾರದ ಅವಧಿಯಲ್ಲಿ ಕುಸಿಯುತ್ತಾ ಬಂದಿರುವ ಪ್ರಮಾಣವನ್ನು ಗಮನಿಸಿ)

  • ಆಗ ಸಹಜವಾಗಿಯೇ ರಾಜ್ಯ ಸರ್ಕಾರಗಳು ತಮ್ಮ ಆಹಾರ ಪಡಿತರ ವಿತರಣಾ ವ್ಯವಸ್ಥೆಯ ಗಾತ್ರವನ್ನು ಸಂಕುಚಿಸಬೇಕಾಗುತ್ತದೆ. ಅದನ್ನೇ ಕತ್ತಿಯವರು ಹೇಳಿದ್ದು. ಟಿವಿ-ಫ್ರಿಡ್ಜು ಇತ್ಯಾದಿ ಇರುವವರಿಗೆಲ್ಲ ಬಿಪಿಎಲ್ ಕಾರ್ಡು ಯಾಕೆ ಎಂದು. ಅವರೀಗ ಜನಕ್ಕೆ ಸಿಟ್ಟು ಬಂದಿದೆ ಎಂದು ತೀರ್ಮಾನವನ್ನು ಹಿಂತೆಗೆದುಕೊಂಡರೂ ಕೂಡ ಅದು ಗವಾಕ್ಷೀಲಿ ಹಿಂದಿರುಗೋದು ಖಂಡಿತಾ!
  • ಈ ಬಾರಿ ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಅವರು ಎಫ್‌ಸಿಐನ ಸಾಲದ ಹೊಂಡ ಭರ್ತಿ ಮಾಡಲು ಈ ಬಾರಿಯ ಫುಡ್ ಸಬ್ಸಿಡಿಯನ್ನು ವ್ಯಯಿಸಲಾಗುವುದು ಎಂದು ಹೇಳಿದ್ದಾರೆ. ಅಂದರೆ, ಎಫ್‌ಸಿಐ ಹೆಚ್ಚಿನಂಶ ತನ್ನ ಹೊಂಡಗಳನ್ನು ಮುಚ್ಚಿಕೊಂಡು ದುಂಡಗಾಗಿ, ಖಾಸಗೀಕರಣಕ್ಕೆ ಸಿದ್ಧವಾಗುತ್ತಿದೆ. ಯಾವುದೋ ಒಂದು ಆನಿ ಕಂಪನಿಯ ಖಾಸಗಿ ಸಿಲೊ ಆಗಲು ತಯಾರಾಗುತ್ತಿದೆ.
  • ಹೀಗೆ, ಒಟ್ಟಿನಲ್ಲಿ ಎಪಿಎಂಸಿ ಅಪ್ರಸ್ತುತವಾದರೆ, ಎಂಎಸ್‌ಪಿ ಇದ್ದೂ ಸತ್ತಂತೆ; ಎಂಎಸ್‌ಪಿ ಸತ್ತರೆ ಎಫ್‌ಸಿಐ ಸತ್ತಂತೆ; ಎಫ್‌ಸಿಐ ಸತ್ತರೆ ಆಹಾರ ಪಡಿತರ ವಿತರಣಾ ವ್ಯವಸ್ಥೆ ಸತ್ತಂತೆ. ನಾನು ಅರ್ಥ ಮಾಡಿಕೊಂಡಂತೆ, ಇದು ಸಂಪೂರ್ಣ ಚಿತ್ರ.

ಒಟ್ಟಿನಲ್ಲಿಸರ್ಕಾರದ್ದು ಬಡವರ ನಿರ್ಮೂಲನಾ ಕಾರ್ಯಕ್ರಮ!

ಇದನ್ನೂ ಓದಿ: ಪ್ರಭುತ್ವದ ಬೇಟೆಯಾಗುತ್ತಿರುವುದೇ ಪತ್ರಿಕೋದ್ಯಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...