Homeಮುಖಪುಟಆಪತ್ತಿನ ಕತೆಗಳು-ಕತ್ತಿಯವರಿಗೇಕೆ ಬೈತೀರಿ…ಪಾಪ | ರಾಜಾರಾಮ್ ತಲ್ಲೂರು ಬರಹ

ಆಪತ್ತಿನ ಕತೆಗಳು-ಕತ್ತಿಯವರಿಗೇಕೆ ಬೈತೀರಿ…ಪಾಪ | ರಾಜಾರಾಮ್ ತಲ್ಲೂರು ಬರಹ

ಸನ್ಮಾನ್ಯ ಪ್ರಧಾನಮಂತ್ರಿಗಳು ಮೊನ್ನೆ ಎಂಎಸ್‌ಪಿ ಥಾ; ಎಂಎಸ್‌ಪಿ ಹೈ; ಎಂಎಸ್‌ಪಿ ರಹೇಗಾ ಅಂದಿದ್ದರಲ್ವಾ? ಅವರು ಸತ್ಯ ಹೇಳಿದ್ದಾರೆ. ಆದರೆ, ಈ ಕ್ರೊನಾಲಜಿ ಸ್ವಲ್ಪ … ಸಮಝೀಯೆ…!

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ನೀತಿಯ ಅಂತಿಮ ಪರಿಣಾಮಗಳಲ್ಲಿ ಸಚಿವ ಕತ್ತಿಯವರ ಪ್ರಕಟಣೆಯೂ ಒಂದು. ಕೃಷಿ-ಆಹಾರ ಸಬ್ಸಿಡಿಗಳಿಂದ ಕೈತೊಳೆದುಕೊಳ್ಳುವ ಪ್ರಯತ್ನದ ಭಾಗ ಇದು. ಅಷ್ಟೇ.

ಸನ್ಮಾನ್ಯ ಪ್ರಧಾನಮಂತ್ರಿಗಳು ಮೊನ್ನೆ ‘ಎಂಎಸ್‌ಪಿ ಥಾ; ಎಂಎಸ್‌ಪಿ ಹೈ; ಎಂಎಸ್‌ಪಿ ರಹೇಗಾ’ ಅಂದಿದ್ದರಲ್ವಾ? ಅವರು ಸತ್ಯ ಹೇಳಿದ್ದಾರೆ. ಆದರೆ, ಈ ಕ್ರೊನಾಲಜಿ ಸ್ವಲ್ಪ … ಸಮಝೀಯೆ…!

  • ಎಪಿಎಂಸಿಗಳಿಂದ ಹೊರಗೆ ಖರೀದಿಗೆ ಅವಕಾಶ ಕೊಟ್ಟಾಗ, ಎಪಿಎಂಸಿಗಳು ನಿಧಾನಕ್ಕೆ ಅಪ್ರಸ್ತುತಗೊಳ್ಳುತ್ತವೆ. ಅಲ್ಲಿ ಎಂಎಸ್‌ಪಿ ಕೊಟ್ಟು ಅತಿ ಹೆಚ್ಚಿನ ಪ್ರಮಾಣದಲ್ಲಿ ಆಹಾರ ಧಾನ್ಯಗಳನ್ನು ಖರೀದಿಸುವವರು ಯಾರು ಗೊತ್ತೆ? ಕೇಂದ್ರ ಸರ್ಕಾರದ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ ಯಾನೆ ಎಫ್‌ಸಿಐ.
  • ಎಫ್‌ಸಿಐ ತಾನು ಸಂಗ್ರಹಿಸಿ ಉಗ್ರಾಣಗಳಲ್ಲಿರಿಸಿದ ಆಹಾರಧಾನ್ಯಗಳನ್ನು ಪಡಿತರ ವಿತರಣೆಯ ಮೂಲಕ ವಿತರಿಸಲು ರಾಜ್ಯಸರ್ಕಾರಗಳ ಪಡಿತರ ವ್ಯವಸ್ಥೆಗೆ ಬಿಡುಗಡೆ ಮಾಡುತ್ತದೆ.

ಇದನ್ನೂ ಓದಿ: ಹೊಸ ಕೃಷಿ ಕಾನೂನುಗಳ ಹಿನ್ನೆಲೆ ಏನು? ಯಾಕಾಗಿ ಇವು ಈಗ ತಲೆ ಎತ್ತಿವೆ?

  • ಕೇಂದ್ರ ಸರ್ಕಾರ ತನ್ನ ಆಹಾರ ಸಬ್ಸಿಡಿ ಕಡಿತ ಕಾರ್ಯಕ್ರಮದ ಭಾಗವಾಗಿ ಎಫ್‌ಸಿಐಗೆ ನೀಡುವ ಸಬ್ಸಿಡಿ ಕಡಿಮೆ ಮಾಡಿದಾಗ, ಸಹಜವಾಗಿಯೇ ಅದು ಪಡಿತರಕ್ಕೆಂದು ಖರೀದಿಸುವ ಆಹಾರಧಾನ್ಯಗಳ ಪ್ರಮಾಣ ಕಡಿಮೆ ಆಗುತ್ತಾ ಬರುತ್ತದೆ. (ಚಿತ್ರದಲ್ಲಿ ಸಬ್ಸಿಡಿ ಶೇಕಡಾವಾರು ಈ ಸರ್ಕಾರದ ಅವಧಿಯಲ್ಲಿ ಕುಸಿಯುತ್ತಾ ಬಂದಿರುವ ಪ್ರಮಾಣವನ್ನು ಗಮನಿಸಿ)

  • ಆಗ ಸಹಜವಾಗಿಯೇ ರಾಜ್ಯ ಸರ್ಕಾರಗಳು ತಮ್ಮ ಆಹಾರ ಪಡಿತರ ವಿತರಣಾ ವ್ಯವಸ್ಥೆಯ ಗಾತ್ರವನ್ನು ಸಂಕುಚಿಸಬೇಕಾಗುತ್ತದೆ. ಅದನ್ನೇ ಕತ್ತಿಯವರು ಹೇಳಿದ್ದು. ಟಿವಿ-ಫ್ರಿಡ್ಜು ಇತ್ಯಾದಿ ಇರುವವರಿಗೆಲ್ಲ ಬಿಪಿಎಲ್ ಕಾರ್ಡು ಯಾಕೆ ಎಂದು. ಅವರೀಗ ಜನಕ್ಕೆ ಸಿಟ್ಟು ಬಂದಿದೆ ಎಂದು ತೀರ್ಮಾನವನ್ನು ಹಿಂತೆಗೆದುಕೊಂಡರೂ ಕೂಡ ಅದು ಗವಾಕ್ಷೀಲಿ ಹಿಂದಿರುಗೋದು ಖಂಡಿತಾ!
  • ಈ ಬಾರಿ ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಅವರು ಎಫ್‌ಸಿಐನ ಸಾಲದ ಹೊಂಡ ಭರ್ತಿ ಮಾಡಲು ಈ ಬಾರಿಯ ಫುಡ್ ಸಬ್ಸಿಡಿಯನ್ನು ವ್ಯಯಿಸಲಾಗುವುದು ಎಂದು ಹೇಳಿದ್ದಾರೆ. ಅಂದರೆ, ಎಫ್‌ಸಿಐ ಹೆಚ್ಚಿನಂಶ ತನ್ನ ಹೊಂಡಗಳನ್ನು ಮುಚ್ಚಿಕೊಂಡು ದುಂಡಗಾಗಿ, ಖಾಸಗೀಕರಣಕ್ಕೆ ಸಿದ್ಧವಾಗುತ್ತಿದೆ. ಯಾವುದೋ ಒಂದು ಆನಿ ಕಂಪನಿಯ ಖಾಸಗಿ ಸಿಲೊ ಆಗಲು ತಯಾರಾಗುತ್ತಿದೆ.
  • ಹೀಗೆ, ಒಟ್ಟಿನಲ್ಲಿ ಎಪಿಎಂಸಿ ಅಪ್ರಸ್ತುತವಾದರೆ, ಎಂಎಸ್‌ಪಿ ಇದ್ದೂ ಸತ್ತಂತೆ; ಎಂಎಸ್‌ಪಿ ಸತ್ತರೆ ಎಫ್‌ಸಿಐ ಸತ್ತಂತೆ; ಎಫ್‌ಸಿಐ ಸತ್ತರೆ ಆಹಾರ ಪಡಿತರ ವಿತರಣಾ ವ್ಯವಸ್ಥೆ ಸತ್ತಂತೆ. ನಾನು ಅರ್ಥ ಮಾಡಿಕೊಂಡಂತೆ, ಇದು ಸಂಪೂರ್ಣ ಚಿತ್ರ.

ಒಟ್ಟಿನಲ್ಲಿಸರ್ಕಾರದ್ದು ಬಡವರ ನಿರ್ಮೂಲನಾ ಕಾರ್ಯಕ್ರಮ!

ಇದನ್ನೂ ಓದಿ: ಪ್ರಭುತ್ವದ ಬೇಟೆಯಾಗುತ್ತಿರುವುದೇ ಪತ್ರಿಕೋದ್ಯಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...