Homeಕರ್ನಾಟಕಕಾಗೇರಿ ಸ್ಪೀಕರಿಕೆ ಸುತ್ತ ಛೂಮಂತ್ರಿ ಗಾಳಿ!!

ಕಾಗೇರಿ ಸ್ಪೀಕರಿಕೆ ಸುತ್ತ ಛೂಮಂತ್ರಿ ಗಾಳಿ!!

ಉತ್ತರಕನ್ನಡದ ಇನ್ನುಳಿದ ಮೂವರು ಬಿಜೆಪಿ ಶಾಸಕರು ಶಿವರಾಮ ಹೆಬ್ಬಾರ್ ವನವಾಸ ಮುಗಿಸಿ ಬರುವವರೆಗೆ ಆತನ ಪಾದುಕೆ ಇಟ್ಟುಕೊಂಡು ಮಂತ್ರಿಗಿರಿ ಮಾಡುವ ಮಾತಾಡುತ್ತಿದ್ದಾರೆ.

- Advertisement -
- Advertisement -

ಕಾಗೇರಿ ತನಗೇ ಅರಿವಿಲ್ಲದೆ ಸ್ಪೀಕರ್ ಪೀಠ ಏರಿಬಿಟ್ಟಿದ್ದಾರೆ. ಹೊಸ ಸ್ಪೀಕರ್ ಅಭಿನಂದಿಸುತ್ತಾ ನಿರ್ಗಮಿತ ಸ್ಪೀಕರ್ ರಮೇಶ್‍ಕುಮಾರ್ ಆಡಿದ ಅರ್ಥಪೂರ್ಣ ಮಾತುಗಳು ಕಾಗೇರಿಯ ಕಂಗೆಟ್ಟ ಸ್ಥಿತಿಗತಿಗೆ ಹಿಡಿದ ಕನ್ನಡಿಯಂತಿತ್ತು!

“ಸ್ಪೀಕರ್ ಸ್ಥಾನ ತುಂಬ ದೊಡ್ಡದು… ಒದ್ದು ಮೇಲಕ್ಕೆ ಕಳಿಸ್ತಾರೆ… ಕೇಳಿದ್ರೆ ನೀನು ತುಂಬಾ ಎತ್ತರದಲ್ಲಿದ್ದೀಯಾ ಅಂತಾರೆ… ಸಾಮಾನ್ಯವಾಗಿ ಸ್ಪೀಕರ್ ಮಾಡೋದು, ಯಾರನ್ನು ಮಂತ್ರಿ ಮಾಡಲಿಕ್ಕೆ ಆಗೋದಿಲ್ಲವೋ ಅಥವಾ ಯಾರು ನಿವೃತ್ತಿ ಅಂಚಿನಲ್ಲಿರ್ತಾರೋ ಅಂಥೋರಿಗೆ” ಎಂದು ರಮೇಶ್‍ಕುಮಾರ್ ಹೇಳಿದಾಗ ಇಡೀ ಸದನ ನಗೆಗಡಲಲ್ಲಿ ತೇಲಿತ್ತು.

ಮೇಲುನೋಟಕ್ಕೆ ರಮೇಶ್ ಕುಮಾರ್ ಮಾತುಗಾರಿಕೆ ತಮಾಷೆಯಾಗಿ ಕಂಡರೂ ವಾಸ್ತವಿಕವಾಗಿ ಕಾಗೇರಿ ಸ್ಪೀಕರ್ ಹುದ್ದೆ ಒಪ್ಪಿಕೊಳ್ಳಬೇಕಾಗಿ ಬಂದ ಸಂದರ್ಭಕ್ಕೆ ಅಕ್ಷರಶಃ ಅನ್ವಯವಾಗುತ್ತದೆ. ಕಾಗೇರಿ ಸಭಾಧ್ಯಕ್ಷತೆ ಬಯಸಿ ಪಡೆದದ್ದಲ್ಲ, ಆ ಉಸಾಬರಿ ತನಗೆ ಬೇಡವೆಂದು ಕೊನೆಕ್ಷಣದವರೆಗೂ ಕಾಗೇರಿ ಕ್ಯಾತೆ ತೆಗೆಯುತ್ತಲೇ ಇದ್ದರು. ತನಗೆ ಸ್ಪೀಕರ್ ಪೀಠ ಅನಿವಾರ್ಯವಾಗಬಹುದೆಂದು ಕನಸುಮನಸಿನಲ್ಲಿಯೂ ಕಾಗೇರಿ ಎಣಿಸಿರಲಿಲ್ಲ. ತನಗೆಂದೂ ನಿಷ್ಠನಲ್ಲದ, ವಿರೋಧಿ ಬ್ರಾಹ್ಮಣ ಲಾಬಿಯ ಕಾಗೇರಿಯನ್ನು ಸ್ಪೀಕರ್ ಪೀಠದಲ್ಲಿ ಪ್ರತಿಷ್ಠಾಪಿಸುವ ಮನಸ್ಸು ಯಡ್ಡಿಗೂ ಒಂಚೂರು ಇರಲಿಲ್ಲ. ಯಡ್ಡಿಯ ಶತ್ರುವೂ, ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿರುವ ಬಿ.ಎಲ್.ಸಂತೋಷ್ ತಂಡದ ತಂತ್ರಗಾರಿಕೆಯಿಂದಾಗಿ ಕಾಗೇರಿ ಸ್ಪೀಕರ್ ಆಗಬೇಕಾಗಿ ಬಂತು.

ಕಾಗೇರಿಗೆ ಮತ್ತೊಂದು ಸಂದಿಗ್ಧವೂ ಎದುರಾಗಿತ್ತು. ಆತನ ಶಿರಸಿ ಕ್ಷೇತ್ರದ ಪಕ್ಕದ ಯಲ್ಲಾಪುರದ ಶಾಸಕನಾಗಿದ್ದ ಶಿವರಾಮ ಹೆಬ್ಬಾರ್ ಕಾಂಗ್ರೆಸ್‍ಗೆ ಕೈಕೊಟ್ಟು ಬಿಜೆಪಿ ಪಾಲಾಗಿದ್ದು ಕಾಗೇರಿಗೆ ದುಬಾರಿಯಾಗಿ ಪರಿಣಮಿಸಿತ್ತು. ಬಿಜೆಪಿ ಸರ್ಕಾರ ಹಿಂಬಾಗಿಲ ಮೂಲಕ ಸ್ಥಾಪನೆ ಆಗಿರುವುದೇ ಶಿವರಾಮ ಹೆಬ್ಬಾರ್ ಮತ್ತಿತರ 16 ಶಾಸಕರ ಬುರ್ನಾಸ್ ನಿಷ್ಠಾವಂತರಿಂದಲ್ಲವಾ? ಇವರನ್ನೆಲ್ಲಾ ಮಂತ್ರಿ ಮಾಡಬೇಕಾದ ದರ್ದು ಬಿಜೆಪಿಗಿದೆ. ಹೆಬ್ಬಾರ್‍ಗೆ ಮಂತ್ರಿ ಮಾಡಿದರೆ ಅದೇ ಹವ್ಯಕ ಜಾತಿಯ ಕಾಗೇರಿಗೆ ಸಚಿವ ಸ್ಥಾನ ಕೊಡಲಾಗದು. ಈ ಜಾತಿ-ಪ್ರಾದೇಶಿಕತೆ ಲೆಕ್ಕಾಚಾರ ಕಾಗೇರಿಯ ಆಸೆಗೆ ಕಲ್ಲು ಹಾಕಿತ್ತು. ಸ್ಪೀಕರಿಕೆ ಒಪ್ಪದಿದ್ದರೆ ಬರೀ ಶಾಸಕನಾಗಿ ಮಂತ್ರಿ ಹೆಬ್ಬಾರ್ ಎದುರು ಹೆತ್ಲಾಂಡಿಯಂತಾಗುವ ಆತಂಕ ಶುರುವಾಯಿತು. ಇದೇ ಹೊತ್ತಿಗೆ ಎಬಿವಿಪಿ ಕೇಡರಿನ ಕಾಗೇರಿಗೆ ಸಂಘಿ ಪರಿವಾರದ ಆದೇಶ ಧಿಕ್ಕರಿಸುವ ಧೈರ್ಯವೂ ಬರಲಿಲ್ಲ. ಆರ್‍ಎಸ್‍ಎಸ್ ಆಣತಿಯಂತೆ ಮತ್ತು ಅಸ್ತಿತ್ವದ ಅಂಜಿಕೆಯಿಂದ ಕಾಗೇರಿ ಸ್ಪೀಕರಿಕೆಗೆ ಸಿದ್ಧವಾಗಬೇಕಾಗಿ ಬಂತು, ಪಾಪ!!

ಈ ನೈಚ್ಚಾನುಸಂಧಾನದ ಹೊತ್ತಲ್ಲಿ ಕಾಗೇರಿ ಮಂತ್ರಿಗಿರಿ ತ್ಯಾಗಕ್ಕೆ ಒಂದು ಷರತ್ತು ವಿಧಿಸಿದ್ದಾರೆ. ಹೆಬ್ಬಾರ್ ಬಿಟ್ಟು ಉತ್ತರ ಕನ್ನಡದ ಬೇರ್ಯಾವ ಬಿಜೆಪಿ ಶಾಸಕನಿಗೂ ಮಂತ್ರಿ ಭಾಗ್ಯ ಕೊಡಬಾರದು, ಇದಕ್ಕೆ ಸಮ್ಮತಿಸಿದರಷ್ಟೇ ಸ್ಪೀಕರ್ ಆಫರ್ ಒಪ್ಪುತ್ತೇನೆಂದು ಕಾಗೇರಿ ಕಡ್ಡಿ ಮುರಿದಂತೆ ಯಡ್ಡಿಗೆ ಹೇಳಿದ್ದಾರೆ.

ಇದಕ್ಕೆ ಸಂಘ ಪರಿವಾರದ ಪ್ರಚೋದನೆ, ಅನುಮೋದನೆ ಎರಡೂ ಇತ್ತು. ಆದರೆ ಹೆಬ್ಬಾರ್‍ಗೆ ಬಿಜೆಪಿ ಸರ್ಕಾರದಲ್ಲಿ ಸಚಿವನಾಗುವ ಕಾಲ ಯಾವಾಗ ಕೂಡಿಬರುತ್ತದೋ ಹೇಳಲಾಗದು. ಅನರ್ಹತೆ ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಹೋಗಿರುವ ಅತೃಪ್ತರು ವಿಚಾರಣೆ ಮುಗಿದು ತೀರ್ಪು ಬರುವತನಕ ಮಂತ್ರಿ ಆಗಲಾರರು. ಈ ವಿಚಾರಣೆ ಎಷ್ಟು ದೂರ ಎಳೆದುಕೊಂಡು ಹೋಗುತ್ತದೋ ಹೇಳಲಾಗದು. ಹಿಂದೆ ಯಡ್ಡಿ ಪರ್ವದಲ್ಲಿ ಬಾಲಚಂದ್ರ ಜಾರಕಿಹೊಳಿ, ಆನಂದ್ ಅಸ್ನೋಟಿಕರ್, ಶಿವನಗೌಡ ನಾಯಕ್,,,, ವಗೈರೆಗಳು ಬರೋಬ್ಬರಿ ಒಂಬತ್ತು ತಿಂಗಳು ಅಂತರ್‍ಪಿಶಾಚಿಗಳಾಗಿದ್ದರು.

ಹೆಬ್ಬಾರ್ ಅತಂತ್ರತೆ ಅನಿರ್ದಿಷ್ಟಾವಧಿ ಎಂಬುದಂತೂ ಗ್ಯಾರಂಟಿ. ಹೀಗಾಗಿ ಉತ್ತರಕನ್ನಡದ ಇನ್ನುಳಿದ ಮೂವರು ಬಿಜೆಪಿ ಶಾಸಕರಲ್ಲಿ ನಿಧಾನಕ್ಕೆ ಮಂತ್ರಿ ಆಗುವ ಆಸೆ ಮೊಳೆಯುತ್ತಿದೆ. ಕಾರವಾರದ ರೂಪಾಲಿ ನಾಯಕ್, ಕುಮುಟದ ದಿನಕರ ಶೆಟ್ಟಿ ಮತ್ತು ಭಟ್ಕಳದ ಸುನೀಲ್ ನಾಯ್ಕ ಒಬ್ಬರಿಗೊಬ್ಬರು ಗೊತ್ತಾಗದಂತೆ ಹೆಬ್ಬಾರ್ ಭೇಟಿ ಮಾಡುತ್ತಿದ್ದಾರೆ. ಎಲ್ಲರದೂ ಒಂದೇ ಬೇಡಿಕೆ!! “ಹೆಬ್ಬಾರಣ್ಣ ನಿಮಗೆ ಮಂತ್ರಿ ಮಾಡುವತನಕ ನನಗೊಂದು ಚಾನ್ಸ್ ಕೊಡ್ಸಿ… ಸುಪ್ರೀಂನಲ್ಲಿ ನೀವು ಗೆದ್ದು ಬಂದತಕ್ಷಣ ಅಥವಾ ಉಪಚುನಾವಣೇಲಿ ನೀವು ಗೆದ್ದ ಕ್ಷಣವೇ ಮಂತ್ರಿಗಿರಿ ಬಿಟ್ಟುಕೊಡ್ತೀನಿ…. ನೀವೇ ಮಂತ್ರಿ ಆಗ್ರಿ….” ಎಂದು ಮಸ್ಕ ಹೊಡೆಯುತ್ತಿದ್ದಾರೆ. ಹೆಬ್ಬಾರ್ ವನವಾಸ ಮುಗಿಸಿ ಬರುವವರೆಗೆ ಆತನ ಪಾದುಕೆ ಇಟ್ಟುಕೊಂಡು ಮಂತ್ರಿಗಿರಿ ಮಾಡುವ ಮಾತಾಡುತ್ತಿದ್ದಾರೆ.

ಕುಮಟೆಯ ದಿನಕರ ಶೆಟ್ಟಿಯಂತೂ ಒಂದು ಹೆಜ್ಜೆ ಮುಂದೆಯೇ ಹೋಗಿದ್ದಾರೆ. “ಹೆಬ್ಬಾರ್ ನನ್ನ ಎಲ್‍ಎಚ್ ರೂಮಿಗೆ ಬಂದು ನೀನೆ ಮಂತ್ರಿಯಾಗು… ನಿನ್ನ ಹೆಸರು ಸಿಎಂ ಮತ್ತು ಬಿಜೆಪಿ ಹೈಕಮಾಂಡ್‍ಗೆ ರೆಕಮೆಂಡ್ ಮಾಡ್ತೇನೆ… ನನ್ನ ಚಾನ್ಸ್ ಕುದುರಿದಾಗ ತಕರಾರು ಮಾಡದೆ ಸ್ಥಾನ ಬಿಟ್ಟುಕೊಡುವುದು ಎಂದು ಹೇಳಿದ್ದಾರೆ.” ಹಾಗಾಗಿ ನನಗೇ ಮಂತ್ರಿಖಾತೆ ಎಂದು ಪೊಕಳೆ ಬಿಡುತ್ತಿದ್ದಾನೆ ಪಾಪದ ಕಾರ್ಯಕರ್ತರೆದುರು.

ಮಹಿಳಾ ಕೋಟಾದಲ್ಲಿ “ಯಡ್ಡಿಫಾದರ್” ತನಗೆ ಅವಕಾಶ ಕೊಡೋದು ಖಂಡಿತ ಎಂಬ ಭ್ರಮೆಯಲ್ಲಿ ತೇಲಾಡುತ್ತಿರುವ ರೂಪಾಲಿ ನಾಯಕ್‍ಗೆ ಈಗಾಗಲೇ ಮಂತ್ರಿ ಭೂತ ಆವಾಹನೆ ಆಗಿಹೋಗಿದೆ. ಭಂಡ ಬಂಡುಕೋರ ಶಾಸಕರು ಸ್ವಾರ್ಥಸಾಧನೆಗಾಗಿ ಮುಂಬೈ ಹೊಟೇಲು ಸೇರಿಕೊಂಡು ಸಮ್ಮಿಶ್ರ ಸರ್ಕಾರ ಉರುಳಿಸುವ ಹಿಕಮತ್ತು ಮಾಡುತ್ತಿದ್ದಾಗ ಬಿಜೆಪಿ ಶಾಸಕರನ್ನು ಬೆಂಗಳೂರಿನ ರೆಸಾರ್ಟ್‍ನಲ್ಲಿ ಜಮೆ ಮಾಡಲಾಗಿತ್ತಲ್ಲವಾ? ಅದರಲ್ಲಿ ಕಾರವಾರದ ರೂಪಾಲಿಯೂ ಇದ್ದರು. ಆ ಹೊತ್ತಲ್ಲಿ ಕಾರವಾರ-ಆಂಕೋಲಾ ಮಳೆ ಆರ್ಭಟದಿಂದ ತತ್ತರಿಸುತ್ತಿತ್ತು. ಶಾಸಕಿ ನೊಂದವರ ಕೈಗೆಟುಕಲಿಲ್ಲ. ಜನರು ಕೆರಳಿದ್ದರು. ಇದರಿಂದ ಫಜೀತಿಗೆ ಬಿದ್ದ ರೂಪಾಲಿ ಸ್ಥಳೀಯ ಪತ್ರಿಕೆಯಲ್ಲಿ “ತಪೋಪ್ಪಿಗೆ” (ತಪ್ಪೊಪ್ಪಿಗೆ) ಜಾಹೀರಾತು ಕೊಟ್ಟು ನಗೆಪಾಟಲಿಗೀಡಾಗಿದ್ದಾರೆ. ಇಂಥ ರೂಪಾಲಿ ಮಂತ್ರಿಯಾಗುತ್ತಾಳೆಂದರೆ ಅದು ಕಾರವಾರ ಕ್ಷೇತ್ರದ ದುರಂತವೆಂದೇ ಜನರಾಡಿಕೊಳ್ಳುತ್ತಾರೆ.

ಮಂತ್ರಿಯಾಗಿ ಜೀವನದ ಕೊನೆಯ ಆಸೆ ಈಡೇರಿಸಿಕೊಳ್ಳಬೇಕು ಮತ್ತು ಅದಿರು ಅವ್ಯವಹಾರದ ಕೇಸ್ ಕುಣಿಕೆಯಿಂದ ಬಚಾವಾಗಬೇಕೆಂಬ ಎರಡು ಉದ್ದೇಶವಿಟ್ಟುಕೊಂಡು ಅನೈತಿಕ ರಾಜಕಾರಣ ಹೆಬ್ಬಾರ್ ಶುರುವಿಟ್ಟುಕೊಂಡಿರುವುದು ಕಾಂಗ್ರೆಸ್‍ನಲ್ಲೂ ಕಂಪನಗಳನ್ನೆಬ್ಬಿಸುತ್ತಿದೆ. ಸುಪ್ರೀಂ ತೀರ್ಪು ಹೇಗೆ ಬರಲಿ, ಯಲ್ಲಾಪುರ-ಮುಂಡಗೋಡ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವುದಂತು ಪಕ್ಕ. ಹೀಗಾಗಿ ಕಾಂಗ್ರೆಸ್ ಕ್ಯಾಂಡಿಡೇಟ್ ತಲಾಷೆಗಿಳಿದಿದೆ.

ಒಂದುಮೂಲದ ಪ್ರಕಾರ ಮಾಜಿ ಮಂತ್ರಿ ದೇಶಪಾಂಡೆ ಈ ಸಮರ ಸೀರಿಯಸ್ಸಾಗಿ ಪರಿಗಣಿಸಿದ್ದರಂತೆ. ಏಕೆಂದರೆ ತಾನು ಕಾಂಗ್ರೆಸ್ ಬಿಡಲು ಬಲಾಢ್ಯ ದೇಶಪಾಂಡೆಯ ಕಿರುಕುಳವೇ ಕಾರಣ ಎಂಬಂತೆ ಸೀನ್ ಸೃಷ್ಟಿಸಿರುವ ಹೆಬ್ಬಾರ್‍ಗೆ ಪಾಠ ಕಲಿಸುವ ಹಟಕ್ಕೆ ದೇಶಪಾಂಡೆ ಬಿದ್ದಿದ್ಧರಂತೆ. ಹಾಗಾಗಿ ಆತ ತನ್ನ ಮಗ ಪ್ರಶಾಂತ ದೇಶಪಾಂಡೆಯನ್ನೇ ಕಾಂಗ್ರೆಸ್ ಕ್ಯಾಂಡಿಡೇಟ್ ಮಾಡಲು ಸ್ಕೆಚ್ ಹಾಕಿದ್ದರಂತೆ. ಇನ್ನೊಂದು ಬಾತ್ಮಿ ಪ್ರಕಾರ ದೇಶಪಾಂಡೆ ಮುದಿ ವಯಸ್ಸಿನಲ್ಲಿ ಮಗನನ್ನು ಪಣಕ್ಕಿಟ್ಟು ರಾಜಕಾರಣ ಮಾಡುವ ರಿಸ್ಕ್ ತೆಗೆದುಕೊಳ್ಳಲು ಸಾಧ್ಯವೇ ಇಲ್ಲವೆಂದು ಕಾಂಗ್ರೆಸ್ ಮೂಲಗಳು ಹೇಳುತ್ತಿವೆ.

ಡಿಸಿಸಿ ಅಧ್ಯಕ್ಷ ಭೀಮಣ್ಣ ನಾಯ್ಕ ಇದೇ ಕ್ಷೇತ್ರದವರು. ಆತ ಕಳೆದ ಬಾರಿ ಶಿರಸಿಯಲ್ಲಿ ನಿಂತು ಎಡವಿದ್ದರು. ಈಗ ಯಲ್ಲಾಪುರದಲ್ಲಿ ಗೆಲ್ಲುತ್ತೇನೆಂದು ಹೇಳುತ್ತಿದ್ದಾರೆ. ಆದರೆ ಆತನಿಗೆ ಗೆಲ್ಲುವ ತಾಕತ್ತು ಇಲ್ಲ. ಜನಸಾಮಾನ್ಯರ ವಿಶ್ವಾಸ ಗಳಿಸಿದ ವ್ಯಕ್ತಿತ್ವವೇ ಭೀಮಣ್ಣನದಲ್ಲ. ಆತ ಬರೀ ಡಮ್ಮಿ! ಇದು ಕೆಪಿಸಿಸಿ ಕಿಂಗ್‍ಗಳಿಗೂ ಗೊತ್ತಿದೆ. ಹಾಗಾಗಿ ಬೆಂಗಳೂರು ಮಟ್ಟದಲ್ಲಿ ಸದ್ಯಕ್ಕೆ ಜೆಡಿಎಸ್‍ನಲ್ಲಿರುವ ರಾಮಕೃಷ್ಣ ಹೆಗಡೆಜೀ ದಾಯಾದಿ ಮೊಮ್ಮಗ ಶಶಿಭೂಷಣ ಹೆಗಡೆ ಕಾಂಗ್ರೆಸ್ ಕ್ಯಾಂಡಿಡೇಟ್ ಮಾಡಿದ್ರೆ ಹೇಗೆಂಬ ಚರ್ಚೆ ನಡೆದಿದೆ.

ಹಾಗೊಮ್ಮೆ ಶಶಿಭೂಷಣ ಹೆಗಡೆ ಕಾಂಗ್ರೆಸ್ ಕ್ಯಾಂಡಿಡೇಟ್ ಆದರೆ ಹೆಬ್ಬಾರ್‍ಗೆ ದೊಡ್ಡ ಸವಾಲಾಗೋದು ನಿಸ್ಸಂಶಯ. ಯಲ್ಲಾಪುರ ಕ್ಷೇತ್ರದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹವ್ಯಕ ಬ್ರಾಹ್ಮಣರು ಇರುವುದರಿಂದ ಶಶಿಗೆ ಈ ಸಮುದಾಯದ ಒಂದು ಭಾಗದ ಮತ ಖಂಡಿತ ಸಿಗುತ್ತದೆ. ಜೊತೆಗೆ ಕಾಂಗ್ರೆಸ್‍ನ ಸಾಂಪ್ರದಾಯಿಕ ಮತಗಳು ಮತ್ತು ಹೆಬ್ಬಾರ್‍ನ ವಿರೋಧಿಸುವ ಬಿಜೆಪಿ ಮೂಲನಿವಾಸಿಗಳ ತಂತ್ರ ಶಶಿಗೆ ನೆರವಾಗುತ್ತದೆ.
ಆರ್ಥಿಕವಾಗಿಯೂ ತೊಂದರೆಯಲ್ಲಿರುವ ಹೆಬ್ಬಾರ್‍ಗೆ ಪಕ್ಷದ್ರೋಹ ಆಟ ದುಬಾರಿಯಾಗಿ ಪರಿಣಮಿಸುತ್ತಿದೆ. ಕಂಗಾಲಾಗಿರುವ ಹಬ್ಬಾರ್ ಅಸ್ತಿತ್ವ ಉಳಿಸಿಕೊಳ್ಳಲು ನಿದ್ದೆಗೆಡುವಂತಾಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...