Homeಅಂತರಾಷ್ಟ್ರೀಯಭಾರತದ ಸೊಸೆಯ ದೇಶೋಚ್ಛಾಟನೆಯ ದಾರುಣ ಕತೆ! ..

ಭಾರತದ ಸೊಸೆಯ ದೇಶೋಚ್ಛಾಟನೆಯ ದಾರುಣ ಕತೆ! ..

- Advertisement -
- Advertisement -

ಆಕೆ ಎಳೆಯ ಪ್ರಾಯದ ಅಮಾಯಕ ಹೆಂಗಸು. ಮೂರು ಪುಟ್ಟ-ಪುಟ್ಟ ಕಂದಮ್ಮಗಳ ತಾಯಿ. ಹುಟ್ಟಿದ್ದು ಪಾಕಿಸ್ತಾನದಲ್ಲಿ. ಆಕೆಯ ಅಜ್ಜನ ಕರುಳುಬಳ್ಳಿ ಸಂಬಂಧ ಭಟ್ಕಳದಲ್ಲಿದೆ. ದೇಶ ವಿಭಜನೆ ಸಂದರ್ಭದಲ್ಲಿ ಆತ ಪಾಕ್ ಪಾಲಾಗಿದ್ದ. ಆದರೆ ಆತನ ಮೊಮ್ಮಗಳು ಹದಿಮೂರು ವರ್ಷದ ಹಿಂದೆ ಭಾರತದ ಭಟ್ಕಳಕ್ಕೆ ಸೊಸೆಯಾಗಿ ಬಂದಿದ್ದಳು. ನವಾಯತ ಮುಸ್ಲಿಂ ಸಮುದಾಯದ “ಲಂಕಾ” ಕುಟುಂಬದ ಹಿರಿಯ ಸೊಸೆಯಾಗಿ ಮನೆ ತುಂಬಿಕೊಂಡಿದ್ದಳು. ಆ ಹುಡುಗಿಯ ಹೆಸರು- ಅರ್ಸೆಲಾ ಅಬೀರಾ!!

ಆರಂಭದಲ್ಲಿ ಆಕೆಯ ಬದುಕು ಚಂದವಾಗೇ ಇತ್ತು. ಸಾಮಾನ್ಯ ಹೆಣ್ಣು ಮಕ್ಕಳಂತೆ ಗಂಡ-ಮಕ್ಕಳು-ಅತ್ತೆ-ಮಾವ-ಅತ್ತೆಮನೆ-ನೆಮ್ಮದಿಯ ಬದುಕು… ಹತ್ತಾರು ಸಹಜ ಕನಸು ಕಟ್ಟಿಕೊಂಡು ಅರ್ಸೆಲಾ ಮದುವೆಯಾಗಿ ಭಟ್ಕಳಕ್ಕೆ ಬಂದಿದ್ದಳು. ಗಂಡ ’ಅಫಾಕ್‌ ಲಂಕಾ’ ಭಟ್ಕಳದಲ್ಲಿ ಯುನಾನಿ ವೈದ್ಯನಾಗಿದ್ದ. ಅರ್ಸೆಲಾ ಗಂಡನಿಗೆ ನೆರವಾಗುತ್ತಿದ್ದಳು. ಆಕೆಯ ಬದುಕಿಗೆ ಬರಸಿಡಿಲು ಬಡಿದು ನುಚ್ಚುನೂರಾಗಿದ್ದು 2015ರಲ್ಲಿ. ಆಗ ಬೆಂಗಳೂರಲ್ಲಿ ಚರ್ಚ್‌ ಸ್ಫೋಟ ಆಗಿತ್ತಲ್ಲ, ಆ ವಿಧ್ವಂಸಕ ಕೃತ್ಯಕ್ಕೆ ಸ್ಫೋಟಕ ಒದಗಿಸಿದ್ದು ಅಫಾಕ್‌ ಲಂಕಾ ಎಂದು ಪೊಲೀಸ್ ಏಜೆನ್ಸಿಗಳು ಶಂಕಿಸಿದ್ದವು. ದೇಶದ ಹಲವು ಸ್ಫೋಟ ಪ್ರಕರಣದಲ್ಲೂ ಅಫಾಕ್‌ನ ಬಾಂಬ್‌ ಕಾರಣವೆಂಬ ಆರೋಪದಲ್ಲಿ ಆತನನ್ನು ಜೈಲಿಗೆ ಅಟ್ಟಲಾಗಿತ್ತು.

ಎರಡು ವರ್ಷಕೊಮ್ಮೆ ತನ್ನ ವೀಸಾ ನವೀಕರಿಸುತ್ತಿದ್ದಳು ಅರ್ಸೆಲಾ. ಕಳೆದ ಆಗಸ್ಟ್‌ನಲ್ಲಿ ಕೇಂದ್ರ ವಿದೇಶಾಂಗ ಇಲಾಖೆ ವೀಸಾ ಮುಂದುವರಿಸಲು ನಿರಾಕರಸಿತು. ಭಯೋತ್ಪಾದಕನ ಹೆಂಡತಿ ವೈರಿ ರಾಷ್ಟ್ರ ಪಾಕ್‌ನವಳು. ಇಲ್ಲಿದ್ದರೆ ದೇಶದ ಭದ್ರತೆಗೆ ಗಂಡಾಂತರವೆಂಬ ನಿರ್ಧಾರ ಗೃಹ ಇಲಾಖೆಯದ್ದಾಗಿತ್ತು. ಸ್ವಯಂಪ್ರೇರಣೆಯಿಂದ ದೇಶ ಬಿಟ್ಟು ಹೋಗಬೇಕು, ಮೂರು ತಿಂಗಳಷ್ಟೇ ಕಾಲಾವಕಾಶ. ಭಾರತದಿಂದ ಹೋಗದಿದ್ದರೆ ಪಾಕ್‌ಗೆ ನಾವೇ ಬಿಟ್ಟುಬರಬೇಕಾಗುತ್ತದೆಂದು ಗೃಹ ಇಲಾಖೆ ಅರ್ಸೆಲಾಳಿಗೆ ನೋಟೀಸು ಕಳಿಸಿತ್ತು.

ಹೆತ್ತ ಮೂರು ಮಕ್ಕಳನ್ನು ಬಿಟ್ಟು ಆಕೆ ದೇಶಾಂತರ ಹೋಗುವುದಾದರೂ ಹೇಗೆ? ಮಕ್ಕಳಿನ್ನು ಚಿಕ್ಕವರು; ಅವರೊಂದಿಗಿರಲು ಅವಕಾಶ ಕೊಡುವಂತೆ ಅರ್ಸೆಲಾ ಕೇಂದ್ರಕ್ಕೆ ಮಂಡಿಯೂರಿ ಮೊರೆಯಿಟ್ಟಿದ್ದಳು. ನಾನು ನಿರಪರಾಧಿ. ಗಂಡನ ತಪ್ಪಿಗೆ ನನಗೆ ನನ್ನ ಮಕ್ಕಳಿಗೆ ಶಿಕ್ಷೆ ಕೊಡಬೇಡಿ ಎಂದು ಬೇಡಿಕೊಂಡಿದ್ದಳು. ಇದಕ್ಕೊಪ್ಪದ ಪ್ರಭುತ್ವದ ಪೊಲೀಸರು ಅರ್ಸೇಲಾಳನ್ನು ದಿಲ್ಲಿ ಮೂಲಕ ಪಾಕ್‌ಗೆ ಕರೆದೊಯ್ದು ಬಿಟ್ಟು ಬಂದಿದ್ದಾರೆ!

ಭಟ್ಕಳ ಬಿಡಲೇಬೇಕಾದ ಸಂದರ್ಭದಲ್ಲಿ ಆ ಮುಗ್ಧೆ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿ ಚಡಪಡಿಸಿದ್ದಾಳೆ. ಕರುಳ ಕುಡಿಗಳನ್ನು ಬಲವಂತವಾಗಿ ತೊರೆಯಬೇಕಾದ ದುರ್ವಿಧಿಗೆ ಹಳಿಯುತ್ತ ಕಣ್ಣೀರ ಕೋಡಿಯಾಗಿದ್ದಾಳೆ. ಭಟ್ಕಳದ ಪರಿಸರ, ಮುದಿ ಅತ್ತೆ-ಮಾವಂದೀರು, ಮಕ್ಕಳಿಂದ ದೂರಾಗುವ ದಿನ ಹತ್ತಿರ ಬಂದಂತೆ ಹೇಳತೀರದ ಸಂಕಟ ಅನುಭವಿಸಿದ್ದಾಳೆ. ಆ ಕ್ಷಣದಿಂದ ಪಾಕ್‌ನ ತವರು ಮನೆ ಸೇರಿದ ನಂತರದವರೆಗಿನ ಹಿಂಸೆಗೆ ಅಕ್ಷರ ರೂಪ ಕೊಡಲು ಪ್ರಯತ್ನಿಸಿದ್ದಾಳೆ. ತನ್ನ ಸುದೀರ್ಘ ಪತ್ರದಲ್ಲಿ ವೈವಾಹಿಕ ಬದುಕಿನ ಕನಸು-ಕಷ್ಟ, ಅತ್ತೆ ಮನೆ ಪ್ರೀತಿ-ಹೊಣೆಗಾರಿಕೆ, ಗಂಡ ಶಂಕಿತ ಭಯೋತ್ಪಾದಕನೆಂದು ಸುದ್ದಿಯಾಗಿ ಜೈಲುಪಾಲಾದಾಗಿನ ನಂತರದ ಸಾಮಾಜಿಕ ಅಪನಿಂದನೆ, ಅವಮಾನ, ಗಂಡನ ನಿರೀಕ್ಷೆಯಲ್ಲಿ ಕಳೆದ ಭ್ರಮೆಯ ಕಾಲ…. ಹೀಗೆ ಹಲವು ಸಂಗತಿಗಳನ್ನು ದಾಖಲಿಸಿ ಆಪ್ತೇಷ್ಟರಿಗೆ ಕಳಿಸಿದ್ದಾಳೆ.

ಅರ್ಸೆಲಾಳನ್ನು ಪೊಲೀಸರು ಭಟ್ಕಳದಿಂದ ಕರೆದೊಯ್ಯುವ ಮುನ್ನ ದಿನ ಆಕೆ ಭಾವನಾತ್ಮಕ ತಳಮಳಕ್ಕೆ ಈಡಾಗಿದ್ದಳೆಂದು ಪತ್ರಾಕಥನವೇ ಹೇಳುತ್ತದೆ. ಆ ಪತ್ರದ ಸಾರ ಈ ಮುಂದಿನಂತಿದೆ…

ಅರೇ! ನನ್ನ ಮನೆಯಲ್ಲೇ ನಾನೀಗ ಅಪರಿಚಿತಳು. ನನಗೆ ನನ್ನದೆ ಪರಿಚಯ ಸಿಗುತ್ತಿಲ್ಲ. ಕೋಣೆಯಲ್ಲಿರುವ ಬಟ್ಟೆ ಬರೆಗಳು ಬೇರೆಯವರದ್ಯಾರವೋ ಅನ್ನಿಸುತ್ತದೆ. ಕೋಣೆಯ ಗೋಡೆಗಳು ’ನೀನು ಭಟ್ಕಳಕ್ಕೆ ಮತ್ತೆ ಬರ್‍ತಿಯೋ?  ಇಲ್ಲವೋ? ಇದೇ ಕೊನೆಯದಾ? ಎಂದು ಕೇಳುತ್ತಿವೆ. ನನ್ನ ನೋವನ್ನು ನನ್ನ ಮಕ್ಕಳಿಗೂ ತೋರಿಸಿಕೊಳ್ಳುವಂತಿಲ್ಲ. ಆ ಮೂರೂ ಮಕ್ಕಳ ಮುಖ ಕಂಡಾಗ ಹೃದಯ ಛಿದ್ರಛಿದ್ರವಾಗುತ್ತಿದೆ. ಇದ್ದಕ್ಕಿದ್ದಂತೆ ರಾತ್ರಿ ಆವರಿಸಿಕೊಳ್ಳುತ್ತಿದೆ. ಇದೊಂದು ಕೆಟ್ಟರಾತ್ರಿ. ನಾಳೆ ಹೊರಡಲೇಬೇಕು. ಬ್ಯಾಗು ಕಟ್ಟಿಕೊಳ್ಳುವಾಗ ಮಕ್ಕಳು ಎಲ್ಲಿಗಮ್ಮ? ಎನ್ನುತ್ತವೆ. ಅವರಿಗೇನೂ ಹೇಳುವಂತಿಲ್ಲ. ಅಯ್ಯೋ ದೇವರೆ, ಈ ಕಂದಮ್ಮಗಳನ್ನು ಚೆನ್ನಾಗಿ ನೋಡಿಕೋ ಎಂದಷ್ಟೇ ಬೇಡುತ್ತೇನೆ.

ಮಕ್ಕಳು ಉತ್ತರವಿಲ್ಲದ ಪ್ರಶ್ನೆ ಕೇಳಿ, ಕೇಳಿ ಸುಸ್ತಾಗಿ ನಿದ್ದೆಗೆ ಜಾರಿವೆ. ರೂಮಿನಲ್ಲಿ ನೀರವ ಮೌನ! ಕಿಟಕಿಯಿಂದ ಚಂದ್ರ ಇಣುಕುತ್ತಿದ್ದಾನೆ. ಆ ಚಂದ್ರ ಏನೇನೋ ಹೇಳುತ್ತಿದ್ದಾನೆ ಅನ್ನಿಸುತ್ತದೆ. ಬೆಳಿಗ್ಗೆ ಕಿವಿಯಲ್ಲಿ ನಮಾಜಿನ ಕತೆ! ಬೆಳಗು ಹರಿಯುತ್ತಿದ್ದಂತೆಯೇ ನೆಂಟರು, ಆಚೀಚೆ ಮನೆಯವರು ಬರುತ್ತಿದ್ದಾರೆ. ನನ್ನಿಂದ ಮಾತೇ ಹೊರಡುತ್ತಿಲ್ಲ. ಅವರೂ ಭಾವುಕರಾಗಿದ್ದಾರೆ. ದೇವರ ನೆನೆಯುವುದು ಬಿಟ್ಟು ಇನ್ನೇನೂ ನನ್ನಿಂದ ಮಾತಲಾಗುತ್ತಿಲ್ಲ. ಮಕ್ಕಳ ಮುಖ ಕಂಡಾಗ ದುಃಖ ಉಮ್ಮಳಿಸಿ ಬರುತ್ತಿತ್ತು. ಈ ಥರ ಮಕ್ಕಳನ್ನು ಬಿಟ್ಟುಹೋಗುವ ಸ್ಥಿತಿ ಯಾವ ತಾಯಿಗೂ ಬರುವುದು ಬೇಡ. ದೇವರೇ ನನ್ನನ್ನು ಕೊಂದುಬಿಡು ಎಂದು ಮನದಲ್ಲೇ ಹೇಳತೊಡಗಿದೆ!!

ನನ್ನನ್ನು ಕರೆದೊಯ್ಯಲು ಪೊಲೀಸರ ವಾಹನ ಬಂದೇ ಬಿಟ್ಟಿತು. ಅದು ನಂಗೆ ಶವ ಪೆಟ್ಟಿಗೆಯಂತೆ ಕಾಣಿಸುತ್ತಿತ್ತು. ಅನಿವಾರ್ಯವಾಗಿ ಗಾಡಿ ಹತ್ತಿದೆ. ಆ ವಾಹನದಲ್ಲಿ ನನ್ನ ದೇಹವಷ್ಟೇ ಇತ್ತು; ಅದಕ್ಕೆ ಜೀವವೇ ಇರಲಿಲ್ಲ!! ನನ್ನ ಕೊನೆಯ ಮಗ ಪದೇ ಪದೇ ಫೋನು ಮಾಡುತ್ತಿದ್ದ. “ನನ್ನನ್ನು ಬಿಟ್ಟು ನೀನೊಬ್ಬಳೇ ಹೊಗುತ್ತೀಯಲ್ಲಾ… ನೀನೆಷ್ಟು ಕೆಟ್ಟವಳು” ಅಂತಿದ್ದ. ನಾನೀಗ ತವರು ಸೇರಿದ್ದೇನೆ. ಇಲ್ಲಿಯೂ ನಾನು ಅಪರಿಚಿತಳೇ!!….

ಈ ಪತ್ರದ ಶುರುವಿನಲ್ಲಿ ಅರ್ಸೆಲಾ ತನ್ನ ವೈವಾಹಿಕ ಬದುಕಿನ ಆರಂಭದ ಸಂತಸ, ನಂತರದ ಅತ್ತೆ ಮನೆ ಜವಾಬ್ದಾರಿ, ಮೈದುನರು, ಅತ್ತೆ-ಮಾವ ತೋರಿಸಿದ ಪ್ರೀತಿ-ವಾತ್ಸಲ್ಯ, ಜೈಲು ಸೇರಿದ ಗಂಡ ನಿರಪರಾಧಿಯಾಗಿ ಬರುತ್ತಾನೆಂದು ನಿರೀಕ್ಷಿಸಿದ್ದು, ಸುಳ್ಳಾಗಿದ್ದು, ಪೊಲೀಸರ ಭಯ, ಮಕ್ಕಳೊಂದಿಗೆ ಕೋಣೆಯಲ್ಲಿರುವಾಗ ಕಾಡುತ್ತಿದ್ದ ಆತಂಕ, ಮನೆಯ ಗೇಟಿನ ಸದ್ದಾದಾಗ ಗಂಡನೇ ಬಂದಂತೆ ಭ್ರಮೆ, ಭಯೋತ್ಪಾದಕನ ಮಡದಿಯೆಂದು ಸಂಬಂಧಿಕರು ಮಾತಾಡದೆ ಅಡ್ಡ ಮುಖ ಹಾಕಿ ಹೋಗುತ್ತಿದ್ದುದ್ದು, ಮೂರು ತಿಂಗಳು ಭಟ್ಕಳ(ಭಾರತ)ದಲ್ಲಿ ಉಳಿಯಲು ಕೇಂದ್ರ ಸರ್ಕಾರ ಅವಕಾಶ ಕೊಟ್ಟಾಗ ಆದ ಗೊಂದಲ, ಒತ್ತಡಕ್ಕೆ ಸಿಲುಕಿದ್ದು, ಅಧಿಕಾರಿಗಳ ಬಗ್ಗೆ ಅನುಮಾನ ಬಂದಿದ್ದನ್ನು ಪತ್ರದಲ್ಲಿ ವ್ಯಕ್ತಪಡಿಸಿದ್ದಾಳೆ.

ಗಂಡನ ಮೇಲೆ ಆರೋಪ; ನಿಷ್ಕಳಂಕಿತ ಹೆಂಡತಿಗೆ ಚಿತ್ರಹಿಂಸೆ, ಆಡಳಿತ ವ್ಯವಸ್ಥೆ ಪಾಪದ ಅರ್ಸೆಲಾಳನ್ನು ತವರಿಗಟ್ಟಿದೆ. ಆಕೆಯ ಗಂಡ ನಿಜವಾಯಿಗೂ ಅಪರಾಧಿಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಆದರೆ ಆಕೆ ಮಾತ್ರ ಎರಡೂ ನನ್ನದೇ ದೇಶಗಳು ಅಂತಿದ್ದಾಳೆ. ಗಡಿ ಮೀರಿ ಬದುಕು ಕಟ್ಟಿಕೊಂಡಿದ್ದ ಅರ್ಸೆಲಾ ಈಗ ಖಾಲಿ-ಖಾಲಿ!! ಆಕೆಯ ಅನಾಥ ಪ್ರಜ್ಞೆ, ಯಾಚನೆ, ಕಣ್ಣಾಚೆಯ ದೂರದಲ್ಲಿರುವ ಮಕ್ಕಳ ಗೋಳು, ಆಕೆಯ ಪತ್ರದ ಒಂದೊಂದು ಪದ ನೂರು ಪ್ರಶ್ನೆಗಳನ್ನು ವಿಶ್ವಮಾನವ ಪ್ರಪಂಚದಲ್ಲಿ ಕೇಳುತ್ತಲೇ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...