Homeಅಂತರಾಷ್ಟ್ರೀಯಭಾರತದ ಸೊಸೆಯ ದೇಶೋಚ್ಛಾಟನೆಯ ದಾರುಣ ಕತೆ! ..

ಭಾರತದ ಸೊಸೆಯ ದೇಶೋಚ್ಛಾಟನೆಯ ದಾರುಣ ಕತೆ! ..

- Advertisement -
- Advertisement -

ಆಕೆ ಎಳೆಯ ಪ್ರಾಯದ ಅಮಾಯಕ ಹೆಂಗಸು. ಮೂರು ಪುಟ್ಟ-ಪುಟ್ಟ ಕಂದಮ್ಮಗಳ ತಾಯಿ. ಹುಟ್ಟಿದ್ದು ಪಾಕಿಸ್ತಾನದಲ್ಲಿ. ಆಕೆಯ ಅಜ್ಜನ ಕರುಳುಬಳ್ಳಿ ಸಂಬಂಧ ಭಟ್ಕಳದಲ್ಲಿದೆ. ದೇಶ ವಿಭಜನೆ ಸಂದರ್ಭದಲ್ಲಿ ಆತ ಪಾಕ್ ಪಾಲಾಗಿದ್ದ. ಆದರೆ ಆತನ ಮೊಮ್ಮಗಳು ಹದಿಮೂರು ವರ್ಷದ ಹಿಂದೆ ಭಾರತದ ಭಟ್ಕಳಕ್ಕೆ ಸೊಸೆಯಾಗಿ ಬಂದಿದ್ದಳು. ನವಾಯತ ಮುಸ್ಲಿಂ ಸಮುದಾಯದ “ಲಂಕಾ” ಕುಟುಂಬದ ಹಿರಿಯ ಸೊಸೆಯಾಗಿ ಮನೆ ತುಂಬಿಕೊಂಡಿದ್ದಳು. ಆ ಹುಡುಗಿಯ ಹೆಸರು- ಅರ್ಸೆಲಾ ಅಬೀರಾ!!

ಆರಂಭದಲ್ಲಿ ಆಕೆಯ ಬದುಕು ಚಂದವಾಗೇ ಇತ್ತು. ಸಾಮಾನ್ಯ ಹೆಣ್ಣು ಮಕ್ಕಳಂತೆ ಗಂಡ-ಮಕ್ಕಳು-ಅತ್ತೆ-ಮಾವ-ಅತ್ತೆಮನೆ-ನೆಮ್ಮದಿಯ ಬದುಕು… ಹತ್ತಾರು ಸಹಜ ಕನಸು ಕಟ್ಟಿಕೊಂಡು ಅರ್ಸೆಲಾ ಮದುವೆಯಾಗಿ ಭಟ್ಕಳಕ್ಕೆ ಬಂದಿದ್ದಳು. ಗಂಡ ’ಅಫಾಕ್‌ ಲಂಕಾ’ ಭಟ್ಕಳದಲ್ಲಿ ಯುನಾನಿ ವೈದ್ಯನಾಗಿದ್ದ. ಅರ್ಸೆಲಾ ಗಂಡನಿಗೆ ನೆರವಾಗುತ್ತಿದ್ದಳು. ಆಕೆಯ ಬದುಕಿಗೆ ಬರಸಿಡಿಲು ಬಡಿದು ನುಚ್ಚುನೂರಾಗಿದ್ದು 2015ರಲ್ಲಿ. ಆಗ ಬೆಂಗಳೂರಲ್ಲಿ ಚರ್ಚ್‌ ಸ್ಫೋಟ ಆಗಿತ್ತಲ್ಲ, ಆ ವಿಧ್ವಂಸಕ ಕೃತ್ಯಕ್ಕೆ ಸ್ಫೋಟಕ ಒದಗಿಸಿದ್ದು ಅಫಾಕ್‌ ಲಂಕಾ ಎಂದು ಪೊಲೀಸ್ ಏಜೆನ್ಸಿಗಳು ಶಂಕಿಸಿದ್ದವು. ದೇಶದ ಹಲವು ಸ್ಫೋಟ ಪ್ರಕರಣದಲ್ಲೂ ಅಫಾಕ್‌ನ ಬಾಂಬ್‌ ಕಾರಣವೆಂಬ ಆರೋಪದಲ್ಲಿ ಆತನನ್ನು ಜೈಲಿಗೆ ಅಟ್ಟಲಾಗಿತ್ತು.

ಎರಡು ವರ್ಷಕೊಮ್ಮೆ ತನ್ನ ವೀಸಾ ನವೀಕರಿಸುತ್ತಿದ್ದಳು ಅರ್ಸೆಲಾ. ಕಳೆದ ಆಗಸ್ಟ್‌ನಲ್ಲಿ ಕೇಂದ್ರ ವಿದೇಶಾಂಗ ಇಲಾಖೆ ವೀಸಾ ಮುಂದುವರಿಸಲು ನಿರಾಕರಸಿತು. ಭಯೋತ್ಪಾದಕನ ಹೆಂಡತಿ ವೈರಿ ರಾಷ್ಟ್ರ ಪಾಕ್‌ನವಳು. ಇಲ್ಲಿದ್ದರೆ ದೇಶದ ಭದ್ರತೆಗೆ ಗಂಡಾಂತರವೆಂಬ ನಿರ್ಧಾರ ಗೃಹ ಇಲಾಖೆಯದ್ದಾಗಿತ್ತು. ಸ್ವಯಂಪ್ರೇರಣೆಯಿಂದ ದೇಶ ಬಿಟ್ಟು ಹೋಗಬೇಕು, ಮೂರು ತಿಂಗಳಷ್ಟೇ ಕಾಲಾವಕಾಶ. ಭಾರತದಿಂದ ಹೋಗದಿದ್ದರೆ ಪಾಕ್‌ಗೆ ನಾವೇ ಬಿಟ್ಟುಬರಬೇಕಾಗುತ್ತದೆಂದು ಗೃಹ ಇಲಾಖೆ ಅರ್ಸೆಲಾಳಿಗೆ ನೋಟೀಸು ಕಳಿಸಿತ್ತು.

ಹೆತ್ತ ಮೂರು ಮಕ್ಕಳನ್ನು ಬಿಟ್ಟು ಆಕೆ ದೇಶಾಂತರ ಹೋಗುವುದಾದರೂ ಹೇಗೆ? ಮಕ್ಕಳಿನ್ನು ಚಿಕ್ಕವರು; ಅವರೊಂದಿಗಿರಲು ಅವಕಾಶ ಕೊಡುವಂತೆ ಅರ್ಸೆಲಾ ಕೇಂದ್ರಕ್ಕೆ ಮಂಡಿಯೂರಿ ಮೊರೆಯಿಟ್ಟಿದ್ದಳು. ನಾನು ನಿರಪರಾಧಿ. ಗಂಡನ ತಪ್ಪಿಗೆ ನನಗೆ ನನ್ನ ಮಕ್ಕಳಿಗೆ ಶಿಕ್ಷೆ ಕೊಡಬೇಡಿ ಎಂದು ಬೇಡಿಕೊಂಡಿದ್ದಳು. ಇದಕ್ಕೊಪ್ಪದ ಪ್ರಭುತ್ವದ ಪೊಲೀಸರು ಅರ್ಸೇಲಾಳನ್ನು ದಿಲ್ಲಿ ಮೂಲಕ ಪಾಕ್‌ಗೆ ಕರೆದೊಯ್ದು ಬಿಟ್ಟು ಬಂದಿದ್ದಾರೆ!

ಭಟ್ಕಳ ಬಿಡಲೇಬೇಕಾದ ಸಂದರ್ಭದಲ್ಲಿ ಆ ಮುಗ್ಧೆ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿ ಚಡಪಡಿಸಿದ್ದಾಳೆ. ಕರುಳ ಕುಡಿಗಳನ್ನು ಬಲವಂತವಾಗಿ ತೊರೆಯಬೇಕಾದ ದುರ್ವಿಧಿಗೆ ಹಳಿಯುತ್ತ ಕಣ್ಣೀರ ಕೋಡಿಯಾಗಿದ್ದಾಳೆ. ಭಟ್ಕಳದ ಪರಿಸರ, ಮುದಿ ಅತ್ತೆ-ಮಾವಂದೀರು, ಮಕ್ಕಳಿಂದ ದೂರಾಗುವ ದಿನ ಹತ್ತಿರ ಬಂದಂತೆ ಹೇಳತೀರದ ಸಂಕಟ ಅನುಭವಿಸಿದ್ದಾಳೆ. ಆ ಕ್ಷಣದಿಂದ ಪಾಕ್‌ನ ತವರು ಮನೆ ಸೇರಿದ ನಂತರದವರೆಗಿನ ಹಿಂಸೆಗೆ ಅಕ್ಷರ ರೂಪ ಕೊಡಲು ಪ್ರಯತ್ನಿಸಿದ್ದಾಳೆ. ತನ್ನ ಸುದೀರ್ಘ ಪತ್ರದಲ್ಲಿ ವೈವಾಹಿಕ ಬದುಕಿನ ಕನಸು-ಕಷ್ಟ, ಅತ್ತೆ ಮನೆ ಪ್ರೀತಿ-ಹೊಣೆಗಾರಿಕೆ, ಗಂಡ ಶಂಕಿತ ಭಯೋತ್ಪಾದಕನೆಂದು ಸುದ್ದಿಯಾಗಿ ಜೈಲುಪಾಲಾದಾಗಿನ ನಂತರದ ಸಾಮಾಜಿಕ ಅಪನಿಂದನೆ, ಅವಮಾನ, ಗಂಡನ ನಿರೀಕ್ಷೆಯಲ್ಲಿ ಕಳೆದ ಭ್ರಮೆಯ ಕಾಲ…. ಹೀಗೆ ಹಲವು ಸಂಗತಿಗಳನ್ನು ದಾಖಲಿಸಿ ಆಪ್ತೇಷ್ಟರಿಗೆ ಕಳಿಸಿದ್ದಾಳೆ.

ಅರ್ಸೆಲಾಳನ್ನು ಪೊಲೀಸರು ಭಟ್ಕಳದಿಂದ ಕರೆದೊಯ್ಯುವ ಮುನ್ನ ದಿನ ಆಕೆ ಭಾವನಾತ್ಮಕ ತಳಮಳಕ್ಕೆ ಈಡಾಗಿದ್ದಳೆಂದು ಪತ್ರಾಕಥನವೇ ಹೇಳುತ್ತದೆ. ಆ ಪತ್ರದ ಸಾರ ಈ ಮುಂದಿನಂತಿದೆ…

ಅರೇ! ನನ್ನ ಮನೆಯಲ್ಲೇ ನಾನೀಗ ಅಪರಿಚಿತಳು. ನನಗೆ ನನ್ನದೆ ಪರಿಚಯ ಸಿಗುತ್ತಿಲ್ಲ. ಕೋಣೆಯಲ್ಲಿರುವ ಬಟ್ಟೆ ಬರೆಗಳು ಬೇರೆಯವರದ್ಯಾರವೋ ಅನ್ನಿಸುತ್ತದೆ. ಕೋಣೆಯ ಗೋಡೆಗಳು ’ನೀನು ಭಟ್ಕಳಕ್ಕೆ ಮತ್ತೆ ಬರ್‍ತಿಯೋ?  ಇಲ್ಲವೋ? ಇದೇ ಕೊನೆಯದಾ? ಎಂದು ಕೇಳುತ್ತಿವೆ. ನನ್ನ ನೋವನ್ನು ನನ್ನ ಮಕ್ಕಳಿಗೂ ತೋರಿಸಿಕೊಳ್ಳುವಂತಿಲ್ಲ. ಆ ಮೂರೂ ಮಕ್ಕಳ ಮುಖ ಕಂಡಾಗ ಹೃದಯ ಛಿದ್ರಛಿದ್ರವಾಗುತ್ತಿದೆ. ಇದ್ದಕ್ಕಿದ್ದಂತೆ ರಾತ್ರಿ ಆವರಿಸಿಕೊಳ್ಳುತ್ತಿದೆ. ಇದೊಂದು ಕೆಟ್ಟರಾತ್ರಿ. ನಾಳೆ ಹೊರಡಲೇಬೇಕು. ಬ್ಯಾಗು ಕಟ್ಟಿಕೊಳ್ಳುವಾಗ ಮಕ್ಕಳು ಎಲ್ಲಿಗಮ್ಮ? ಎನ್ನುತ್ತವೆ. ಅವರಿಗೇನೂ ಹೇಳುವಂತಿಲ್ಲ. ಅಯ್ಯೋ ದೇವರೆ, ಈ ಕಂದಮ್ಮಗಳನ್ನು ಚೆನ್ನಾಗಿ ನೋಡಿಕೋ ಎಂದಷ್ಟೇ ಬೇಡುತ್ತೇನೆ.

ಮಕ್ಕಳು ಉತ್ತರವಿಲ್ಲದ ಪ್ರಶ್ನೆ ಕೇಳಿ, ಕೇಳಿ ಸುಸ್ತಾಗಿ ನಿದ್ದೆಗೆ ಜಾರಿವೆ. ರೂಮಿನಲ್ಲಿ ನೀರವ ಮೌನ! ಕಿಟಕಿಯಿಂದ ಚಂದ್ರ ಇಣುಕುತ್ತಿದ್ದಾನೆ. ಆ ಚಂದ್ರ ಏನೇನೋ ಹೇಳುತ್ತಿದ್ದಾನೆ ಅನ್ನಿಸುತ್ತದೆ. ಬೆಳಿಗ್ಗೆ ಕಿವಿಯಲ್ಲಿ ನಮಾಜಿನ ಕತೆ! ಬೆಳಗು ಹರಿಯುತ್ತಿದ್ದಂತೆಯೇ ನೆಂಟರು, ಆಚೀಚೆ ಮನೆಯವರು ಬರುತ್ತಿದ್ದಾರೆ. ನನ್ನಿಂದ ಮಾತೇ ಹೊರಡುತ್ತಿಲ್ಲ. ಅವರೂ ಭಾವುಕರಾಗಿದ್ದಾರೆ. ದೇವರ ನೆನೆಯುವುದು ಬಿಟ್ಟು ಇನ್ನೇನೂ ನನ್ನಿಂದ ಮಾತಲಾಗುತ್ತಿಲ್ಲ. ಮಕ್ಕಳ ಮುಖ ಕಂಡಾಗ ದುಃಖ ಉಮ್ಮಳಿಸಿ ಬರುತ್ತಿತ್ತು. ಈ ಥರ ಮಕ್ಕಳನ್ನು ಬಿಟ್ಟುಹೋಗುವ ಸ್ಥಿತಿ ಯಾವ ತಾಯಿಗೂ ಬರುವುದು ಬೇಡ. ದೇವರೇ ನನ್ನನ್ನು ಕೊಂದುಬಿಡು ಎಂದು ಮನದಲ್ಲೇ ಹೇಳತೊಡಗಿದೆ!!

ನನ್ನನ್ನು ಕರೆದೊಯ್ಯಲು ಪೊಲೀಸರ ವಾಹನ ಬಂದೇ ಬಿಟ್ಟಿತು. ಅದು ನಂಗೆ ಶವ ಪೆಟ್ಟಿಗೆಯಂತೆ ಕಾಣಿಸುತ್ತಿತ್ತು. ಅನಿವಾರ್ಯವಾಗಿ ಗಾಡಿ ಹತ್ತಿದೆ. ಆ ವಾಹನದಲ್ಲಿ ನನ್ನ ದೇಹವಷ್ಟೇ ಇತ್ತು; ಅದಕ್ಕೆ ಜೀವವೇ ಇರಲಿಲ್ಲ!! ನನ್ನ ಕೊನೆಯ ಮಗ ಪದೇ ಪದೇ ಫೋನು ಮಾಡುತ್ತಿದ್ದ. “ನನ್ನನ್ನು ಬಿಟ್ಟು ನೀನೊಬ್ಬಳೇ ಹೊಗುತ್ತೀಯಲ್ಲಾ… ನೀನೆಷ್ಟು ಕೆಟ್ಟವಳು” ಅಂತಿದ್ದ. ನಾನೀಗ ತವರು ಸೇರಿದ್ದೇನೆ. ಇಲ್ಲಿಯೂ ನಾನು ಅಪರಿಚಿತಳೇ!!….

ಈ ಪತ್ರದ ಶುರುವಿನಲ್ಲಿ ಅರ್ಸೆಲಾ ತನ್ನ ವೈವಾಹಿಕ ಬದುಕಿನ ಆರಂಭದ ಸಂತಸ, ನಂತರದ ಅತ್ತೆ ಮನೆ ಜವಾಬ್ದಾರಿ, ಮೈದುನರು, ಅತ್ತೆ-ಮಾವ ತೋರಿಸಿದ ಪ್ರೀತಿ-ವಾತ್ಸಲ್ಯ, ಜೈಲು ಸೇರಿದ ಗಂಡ ನಿರಪರಾಧಿಯಾಗಿ ಬರುತ್ತಾನೆಂದು ನಿರೀಕ್ಷಿಸಿದ್ದು, ಸುಳ್ಳಾಗಿದ್ದು, ಪೊಲೀಸರ ಭಯ, ಮಕ್ಕಳೊಂದಿಗೆ ಕೋಣೆಯಲ್ಲಿರುವಾಗ ಕಾಡುತ್ತಿದ್ದ ಆತಂಕ, ಮನೆಯ ಗೇಟಿನ ಸದ್ದಾದಾಗ ಗಂಡನೇ ಬಂದಂತೆ ಭ್ರಮೆ, ಭಯೋತ್ಪಾದಕನ ಮಡದಿಯೆಂದು ಸಂಬಂಧಿಕರು ಮಾತಾಡದೆ ಅಡ್ಡ ಮುಖ ಹಾಕಿ ಹೋಗುತ್ತಿದ್ದುದ್ದು, ಮೂರು ತಿಂಗಳು ಭಟ್ಕಳ(ಭಾರತ)ದಲ್ಲಿ ಉಳಿಯಲು ಕೇಂದ್ರ ಸರ್ಕಾರ ಅವಕಾಶ ಕೊಟ್ಟಾಗ ಆದ ಗೊಂದಲ, ಒತ್ತಡಕ್ಕೆ ಸಿಲುಕಿದ್ದು, ಅಧಿಕಾರಿಗಳ ಬಗ್ಗೆ ಅನುಮಾನ ಬಂದಿದ್ದನ್ನು ಪತ್ರದಲ್ಲಿ ವ್ಯಕ್ತಪಡಿಸಿದ್ದಾಳೆ.

ಗಂಡನ ಮೇಲೆ ಆರೋಪ; ನಿಷ್ಕಳಂಕಿತ ಹೆಂಡತಿಗೆ ಚಿತ್ರಹಿಂಸೆ, ಆಡಳಿತ ವ್ಯವಸ್ಥೆ ಪಾಪದ ಅರ್ಸೆಲಾಳನ್ನು ತವರಿಗಟ್ಟಿದೆ. ಆಕೆಯ ಗಂಡ ನಿಜವಾಯಿಗೂ ಅಪರಾಧಿಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಆದರೆ ಆಕೆ ಮಾತ್ರ ಎರಡೂ ನನ್ನದೇ ದೇಶಗಳು ಅಂತಿದ್ದಾಳೆ. ಗಡಿ ಮೀರಿ ಬದುಕು ಕಟ್ಟಿಕೊಂಡಿದ್ದ ಅರ್ಸೆಲಾ ಈಗ ಖಾಲಿ-ಖಾಲಿ!! ಆಕೆಯ ಅನಾಥ ಪ್ರಜ್ಞೆ, ಯಾಚನೆ, ಕಣ್ಣಾಚೆಯ ದೂರದಲ್ಲಿರುವ ಮಕ್ಕಳ ಗೋಳು, ಆಕೆಯ ಪತ್ರದ ಒಂದೊಂದು ಪದ ನೂರು ಪ್ರಶ್ನೆಗಳನ್ನು ವಿಶ್ವಮಾನವ ಪ್ರಪಂಚದಲ್ಲಿ ಕೇಳುತ್ತಲೇ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...