Homeಅಂತರಾಷ್ಟ್ರೀಯಭಾರತದ ಸೊಸೆಯ ದೇಶೋಚ್ಛಾಟನೆಯ ದಾರುಣ ಕತೆ! ..

ಭಾರತದ ಸೊಸೆಯ ದೇಶೋಚ್ಛಾಟನೆಯ ದಾರುಣ ಕತೆ! ..

- Advertisement -
- Advertisement -

ಆಕೆ ಎಳೆಯ ಪ್ರಾಯದ ಅಮಾಯಕ ಹೆಂಗಸು. ಮೂರು ಪುಟ್ಟ-ಪುಟ್ಟ ಕಂದಮ್ಮಗಳ ತಾಯಿ. ಹುಟ್ಟಿದ್ದು ಪಾಕಿಸ್ತಾನದಲ್ಲಿ. ಆಕೆಯ ಅಜ್ಜನ ಕರುಳುಬಳ್ಳಿ ಸಂಬಂಧ ಭಟ್ಕಳದಲ್ಲಿದೆ. ದೇಶ ವಿಭಜನೆ ಸಂದರ್ಭದಲ್ಲಿ ಆತ ಪಾಕ್ ಪಾಲಾಗಿದ್ದ. ಆದರೆ ಆತನ ಮೊಮ್ಮಗಳು ಹದಿಮೂರು ವರ್ಷದ ಹಿಂದೆ ಭಾರತದ ಭಟ್ಕಳಕ್ಕೆ ಸೊಸೆಯಾಗಿ ಬಂದಿದ್ದಳು. ನವಾಯತ ಮುಸ್ಲಿಂ ಸಮುದಾಯದ “ಲಂಕಾ” ಕುಟುಂಬದ ಹಿರಿಯ ಸೊಸೆಯಾಗಿ ಮನೆ ತುಂಬಿಕೊಂಡಿದ್ದಳು. ಆ ಹುಡುಗಿಯ ಹೆಸರು- ಅರ್ಸೆಲಾ ಅಬೀರಾ!!

ಆರಂಭದಲ್ಲಿ ಆಕೆಯ ಬದುಕು ಚಂದವಾಗೇ ಇತ್ತು. ಸಾಮಾನ್ಯ ಹೆಣ್ಣು ಮಕ್ಕಳಂತೆ ಗಂಡ-ಮಕ್ಕಳು-ಅತ್ತೆ-ಮಾವ-ಅತ್ತೆಮನೆ-ನೆಮ್ಮದಿಯ ಬದುಕು… ಹತ್ತಾರು ಸಹಜ ಕನಸು ಕಟ್ಟಿಕೊಂಡು ಅರ್ಸೆಲಾ ಮದುವೆಯಾಗಿ ಭಟ್ಕಳಕ್ಕೆ ಬಂದಿದ್ದಳು. ಗಂಡ ’ಅಫಾಕ್‌ ಲಂಕಾ’ ಭಟ್ಕಳದಲ್ಲಿ ಯುನಾನಿ ವೈದ್ಯನಾಗಿದ್ದ. ಅರ್ಸೆಲಾ ಗಂಡನಿಗೆ ನೆರವಾಗುತ್ತಿದ್ದಳು. ಆಕೆಯ ಬದುಕಿಗೆ ಬರಸಿಡಿಲು ಬಡಿದು ನುಚ್ಚುನೂರಾಗಿದ್ದು 2015ರಲ್ಲಿ. ಆಗ ಬೆಂಗಳೂರಲ್ಲಿ ಚರ್ಚ್‌ ಸ್ಫೋಟ ಆಗಿತ್ತಲ್ಲ, ಆ ವಿಧ್ವಂಸಕ ಕೃತ್ಯಕ್ಕೆ ಸ್ಫೋಟಕ ಒದಗಿಸಿದ್ದು ಅಫಾಕ್‌ ಲಂಕಾ ಎಂದು ಪೊಲೀಸ್ ಏಜೆನ್ಸಿಗಳು ಶಂಕಿಸಿದ್ದವು. ದೇಶದ ಹಲವು ಸ್ಫೋಟ ಪ್ರಕರಣದಲ್ಲೂ ಅಫಾಕ್‌ನ ಬಾಂಬ್‌ ಕಾರಣವೆಂಬ ಆರೋಪದಲ್ಲಿ ಆತನನ್ನು ಜೈಲಿಗೆ ಅಟ್ಟಲಾಗಿತ್ತು.

ಎರಡು ವರ್ಷಕೊಮ್ಮೆ ತನ್ನ ವೀಸಾ ನವೀಕರಿಸುತ್ತಿದ್ದಳು ಅರ್ಸೆಲಾ. ಕಳೆದ ಆಗಸ್ಟ್‌ನಲ್ಲಿ ಕೇಂದ್ರ ವಿದೇಶಾಂಗ ಇಲಾಖೆ ವೀಸಾ ಮುಂದುವರಿಸಲು ನಿರಾಕರಸಿತು. ಭಯೋತ್ಪಾದಕನ ಹೆಂಡತಿ ವೈರಿ ರಾಷ್ಟ್ರ ಪಾಕ್‌ನವಳು. ಇಲ್ಲಿದ್ದರೆ ದೇಶದ ಭದ್ರತೆಗೆ ಗಂಡಾಂತರವೆಂಬ ನಿರ್ಧಾರ ಗೃಹ ಇಲಾಖೆಯದ್ದಾಗಿತ್ತು. ಸ್ವಯಂಪ್ರೇರಣೆಯಿಂದ ದೇಶ ಬಿಟ್ಟು ಹೋಗಬೇಕು, ಮೂರು ತಿಂಗಳಷ್ಟೇ ಕಾಲಾವಕಾಶ. ಭಾರತದಿಂದ ಹೋಗದಿದ್ದರೆ ಪಾಕ್‌ಗೆ ನಾವೇ ಬಿಟ್ಟುಬರಬೇಕಾಗುತ್ತದೆಂದು ಗೃಹ ಇಲಾಖೆ ಅರ್ಸೆಲಾಳಿಗೆ ನೋಟೀಸು ಕಳಿಸಿತ್ತು.

ಹೆತ್ತ ಮೂರು ಮಕ್ಕಳನ್ನು ಬಿಟ್ಟು ಆಕೆ ದೇಶಾಂತರ ಹೋಗುವುದಾದರೂ ಹೇಗೆ? ಮಕ್ಕಳಿನ್ನು ಚಿಕ್ಕವರು; ಅವರೊಂದಿಗಿರಲು ಅವಕಾಶ ಕೊಡುವಂತೆ ಅರ್ಸೆಲಾ ಕೇಂದ್ರಕ್ಕೆ ಮಂಡಿಯೂರಿ ಮೊರೆಯಿಟ್ಟಿದ್ದಳು. ನಾನು ನಿರಪರಾಧಿ. ಗಂಡನ ತಪ್ಪಿಗೆ ನನಗೆ ನನ್ನ ಮಕ್ಕಳಿಗೆ ಶಿಕ್ಷೆ ಕೊಡಬೇಡಿ ಎಂದು ಬೇಡಿಕೊಂಡಿದ್ದಳು. ಇದಕ್ಕೊಪ್ಪದ ಪ್ರಭುತ್ವದ ಪೊಲೀಸರು ಅರ್ಸೇಲಾಳನ್ನು ದಿಲ್ಲಿ ಮೂಲಕ ಪಾಕ್‌ಗೆ ಕರೆದೊಯ್ದು ಬಿಟ್ಟು ಬಂದಿದ್ದಾರೆ!

ಭಟ್ಕಳ ಬಿಡಲೇಬೇಕಾದ ಸಂದರ್ಭದಲ್ಲಿ ಆ ಮುಗ್ಧೆ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿ ಚಡಪಡಿಸಿದ್ದಾಳೆ. ಕರುಳ ಕುಡಿಗಳನ್ನು ಬಲವಂತವಾಗಿ ತೊರೆಯಬೇಕಾದ ದುರ್ವಿಧಿಗೆ ಹಳಿಯುತ್ತ ಕಣ್ಣೀರ ಕೋಡಿಯಾಗಿದ್ದಾಳೆ. ಭಟ್ಕಳದ ಪರಿಸರ, ಮುದಿ ಅತ್ತೆ-ಮಾವಂದೀರು, ಮಕ್ಕಳಿಂದ ದೂರಾಗುವ ದಿನ ಹತ್ತಿರ ಬಂದಂತೆ ಹೇಳತೀರದ ಸಂಕಟ ಅನುಭವಿಸಿದ್ದಾಳೆ. ಆ ಕ್ಷಣದಿಂದ ಪಾಕ್‌ನ ತವರು ಮನೆ ಸೇರಿದ ನಂತರದವರೆಗಿನ ಹಿಂಸೆಗೆ ಅಕ್ಷರ ರೂಪ ಕೊಡಲು ಪ್ರಯತ್ನಿಸಿದ್ದಾಳೆ. ತನ್ನ ಸುದೀರ್ಘ ಪತ್ರದಲ್ಲಿ ವೈವಾಹಿಕ ಬದುಕಿನ ಕನಸು-ಕಷ್ಟ, ಅತ್ತೆ ಮನೆ ಪ್ರೀತಿ-ಹೊಣೆಗಾರಿಕೆ, ಗಂಡ ಶಂಕಿತ ಭಯೋತ್ಪಾದಕನೆಂದು ಸುದ್ದಿಯಾಗಿ ಜೈಲುಪಾಲಾದಾಗಿನ ನಂತರದ ಸಾಮಾಜಿಕ ಅಪನಿಂದನೆ, ಅವಮಾನ, ಗಂಡನ ನಿರೀಕ್ಷೆಯಲ್ಲಿ ಕಳೆದ ಭ್ರಮೆಯ ಕಾಲ…. ಹೀಗೆ ಹಲವು ಸಂಗತಿಗಳನ್ನು ದಾಖಲಿಸಿ ಆಪ್ತೇಷ್ಟರಿಗೆ ಕಳಿಸಿದ್ದಾಳೆ.

ಅರ್ಸೆಲಾಳನ್ನು ಪೊಲೀಸರು ಭಟ್ಕಳದಿಂದ ಕರೆದೊಯ್ಯುವ ಮುನ್ನ ದಿನ ಆಕೆ ಭಾವನಾತ್ಮಕ ತಳಮಳಕ್ಕೆ ಈಡಾಗಿದ್ದಳೆಂದು ಪತ್ರಾಕಥನವೇ ಹೇಳುತ್ತದೆ. ಆ ಪತ್ರದ ಸಾರ ಈ ಮುಂದಿನಂತಿದೆ…

ಅರೇ! ನನ್ನ ಮನೆಯಲ್ಲೇ ನಾನೀಗ ಅಪರಿಚಿತಳು. ನನಗೆ ನನ್ನದೆ ಪರಿಚಯ ಸಿಗುತ್ತಿಲ್ಲ. ಕೋಣೆಯಲ್ಲಿರುವ ಬಟ್ಟೆ ಬರೆಗಳು ಬೇರೆಯವರದ್ಯಾರವೋ ಅನ್ನಿಸುತ್ತದೆ. ಕೋಣೆಯ ಗೋಡೆಗಳು ’ನೀನು ಭಟ್ಕಳಕ್ಕೆ ಮತ್ತೆ ಬರ್‍ತಿಯೋ?  ಇಲ್ಲವೋ? ಇದೇ ಕೊನೆಯದಾ? ಎಂದು ಕೇಳುತ್ತಿವೆ. ನನ್ನ ನೋವನ್ನು ನನ್ನ ಮಕ್ಕಳಿಗೂ ತೋರಿಸಿಕೊಳ್ಳುವಂತಿಲ್ಲ. ಆ ಮೂರೂ ಮಕ್ಕಳ ಮುಖ ಕಂಡಾಗ ಹೃದಯ ಛಿದ್ರಛಿದ್ರವಾಗುತ್ತಿದೆ. ಇದ್ದಕ್ಕಿದ್ದಂತೆ ರಾತ್ರಿ ಆವರಿಸಿಕೊಳ್ಳುತ್ತಿದೆ. ಇದೊಂದು ಕೆಟ್ಟರಾತ್ರಿ. ನಾಳೆ ಹೊರಡಲೇಬೇಕು. ಬ್ಯಾಗು ಕಟ್ಟಿಕೊಳ್ಳುವಾಗ ಮಕ್ಕಳು ಎಲ್ಲಿಗಮ್ಮ? ಎನ್ನುತ್ತವೆ. ಅವರಿಗೇನೂ ಹೇಳುವಂತಿಲ್ಲ. ಅಯ್ಯೋ ದೇವರೆ, ಈ ಕಂದಮ್ಮಗಳನ್ನು ಚೆನ್ನಾಗಿ ನೋಡಿಕೋ ಎಂದಷ್ಟೇ ಬೇಡುತ್ತೇನೆ.

ಮಕ್ಕಳು ಉತ್ತರವಿಲ್ಲದ ಪ್ರಶ್ನೆ ಕೇಳಿ, ಕೇಳಿ ಸುಸ್ತಾಗಿ ನಿದ್ದೆಗೆ ಜಾರಿವೆ. ರೂಮಿನಲ್ಲಿ ನೀರವ ಮೌನ! ಕಿಟಕಿಯಿಂದ ಚಂದ್ರ ಇಣುಕುತ್ತಿದ್ದಾನೆ. ಆ ಚಂದ್ರ ಏನೇನೋ ಹೇಳುತ್ತಿದ್ದಾನೆ ಅನ್ನಿಸುತ್ತದೆ. ಬೆಳಿಗ್ಗೆ ಕಿವಿಯಲ್ಲಿ ನಮಾಜಿನ ಕತೆ! ಬೆಳಗು ಹರಿಯುತ್ತಿದ್ದಂತೆಯೇ ನೆಂಟರು, ಆಚೀಚೆ ಮನೆಯವರು ಬರುತ್ತಿದ್ದಾರೆ. ನನ್ನಿಂದ ಮಾತೇ ಹೊರಡುತ್ತಿಲ್ಲ. ಅವರೂ ಭಾವುಕರಾಗಿದ್ದಾರೆ. ದೇವರ ನೆನೆಯುವುದು ಬಿಟ್ಟು ಇನ್ನೇನೂ ನನ್ನಿಂದ ಮಾತಲಾಗುತ್ತಿಲ್ಲ. ಮಕ್ಕಳ ಮುಖ ಕಂಡಾಗ ದುಃಖ ಉಮ್ಮಳಿಸಿ ಬರುತ್ತಿತ್ತು. ಈ ಥರ ಮಕ್ಕಳನ್ನು ಬಿಟ್ಟುಹೋಗುವ ಸ್ಥಿತಿ ಯಾವ ತಾಯಿಗೂ ಬರುವುದು ಬೇಡ. ದೇವರೇ ನನ್ನನ್ನು ಕೊಂದುಬಿಡು ಎಂದು ಮನದಲ್ಲೇ ಹೇಳತೊಡಗಿದೆ!!

ನನ್ನನ್ನು ಕರೆದೊಯ್ಯಲು ಪೊಲೀಸರ ವಾಹನ ಬಂದೇ ಬಿಟ್ಟಿತು. ಅದು ನಂಗೆ ಶವ ಪೆಟ್ಟಿಗೆಯಂತೆ ಕಾಣಿಸುತ್ತಿತ್ತು. ಅನಿವಾರ್ಯವಾಗಿ ಗಾಡಿ ಹತ್ತಿದೆ. ಆ ವಾಹನದಲ್ಲಿ ನನ್ನ ದೇಹವಷ್ಟೇ ಇತ್ತು; ಅದಕ್ಕೆ ಜೀವವೇ ಇರಲಿಲ್ಲ!! ನನ್ನ ಕೊನೆಯ ಮಗ ಪದೇ ಪದೇ ಫೋನು ಮಾಡುತ್ತಿದ್ದ. “ನನ್ನನ್ನು ಬಿಟ್ಟು ನೀನೊಬ್ಬಳೇ ಹೊಗುತ್ತೀಯಲ್ಲಾ… ನೀನೆಷ್ಟು ಕೆಟ್ಟವಳು” ಅಂತಿದ್ದ. ನಾನೀಗ ತವರು ಸೇರಿದ್ದೇನೆ. ಇಲ್ಲಿಯೂ ನಾನು ಅಪರಿಚಿತಳೇ!!….

ಈ ಪತ್ರದ ಶುರುವಿನಲ್ಲಿ ಅರ್ಸೆಲಾ ತನ್ನ ವೈವಾಹಿಕ ಬದುಕಿನ ಆರಂಭದ ಸಂತಸ, ನಂತರದ ಅತ್ತೆ ಮನೆ ಜವಾಬ್ದಾರಿ, ಮೈದುನರು, ಅತ್ತೆ-ಮಾವ ತೋರಿಸಿದ ಪ್ರೀತಿ-ವಾತ್ಸಲ್ಯ, ಜೈಲು ಸೇರಿದ ಗಂಡ ನಿರಪರಾಧಿಯಾಗಿ ಬರುತ್ತಾನೆಂದು ನಿರೀಕ್ಷಿಸಿದ್ದು, ಸುಳ್ಳಾಗಿದ್ದು, ಪೊಲೀಸರ ಭಯ, ಮಕ್ಕಳೊಂದಿಗೆ ಕೋಣೆಯಲ್ಲಿರುವಾಗ ಕಾಡುತ್ತಿದ್ದ ಆತಂಕ, ಮನೆಯ ಗೇಟಿನ ಸದ್ದಾದಾಗ ಗಂಡನೇ ಬಂದಂತೆ ಭ್ರಮೆ, ಭಯೋತ್ಪಾದಕನ ಮಡದಿಯೆಂದು ಸಂಬಂಧಿಕರು ಮಾತಾಡದೆ ಅಡ್ಡ ಮುಖ ಹಾಕಿ ಹೋಗುತ್ತಿದ್ದುದ್ದು, ಮೂರು ತಿಂಗಳು ಭಟ್ಕಳ(ಭಾರತ)ದಲ್ಲಿ ಉಳಿಯಲು ಕೇಂದ್ರ ಸರ್ಕಾರ ಅವಕಾಶ ಕೊಟ್ಟಾಗ ಆದ ಗೊಂದಲ, ಒತ್ತಡಕ್ಕೆ ಸಿಲುಕಿದ್ದು, ಅಧಿಕಾರಿಗಳ ಬಗ್ಗೆ ಅನುಮಾನ ಬಂದಿದ್ದನ್ನು ಪತ್ರದಲ್ಲಿ ವ್ಯಕ್ತಪಡಿಸಿದ್ದಾಳೆ.

ಗಂಡನ ಮೇಲೆ ಆರೋಪ; ನಿಷ್ಕಳಂಕಿತ ಹೆಂಡತಿಗೆ ಚಿತ್ರಹಿಂಸೆ, ಆಡಳಿತ ವ್ಯವಸ್ಥೆ ಪಾಪದ ಅರ್ಸೆಲಾಳನ್ನು ತವರಿಗಟ್ಟಿದೆ. ಆಕೆಯ ಗಂಡ ನಿಜವಾಯಿಗೂ ಅಪರಾಧಿಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಆದರೆ ಆಕೆ ಮಾತ್ರ ಎರಡೂ ನನ್ನದೇ ದೇಶಗಳು ಅಂತಿದ್ದಾಳೆ. ಗಡಿ ಮೀರಿ ಬದುಕು ಕಟ್ಟಿಕೊಂಡಿದ್ದ ಅರ್ಸೆಲಾ ಈಗ ಖಾಲಿ-ಖಾಲಿ!! ಆಕೆಯ ಅನಾಥ ಪ್ರಜ್ಞೆ, ಯಾಚನೆ, ಕಣ್ಣಾಚೆಯ ದೂರದಲ್ಲಿರುವ ಮಕ್ಕಳ ಗೋಳು, ಆಕೆಯ ಪತ್ರದ ಒಂದೊಂದು ಪದ ನೂರು ಪ್ರಶ್ನೆಗಳನ್ನು ವಿಶ್ವಮಾನವ ಪ್ರಪಂಚದಲ್ಲಿ ಕೇಳುತ್ತಲೇ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...