Homeಮುಖಪುಟಹಿಂಗಿದ್ದ ನಮ್ಮ ರಾಮಣ್ಣ-9; "ಉರುಬಾಡು ಮಾಡಿಕಂಡು ತಿಂತಿವಿಕಲ, ಬೇಕಿದ್ರೆ ಬಾ"

ಹಿಂಗಿದ್ದ ನಮ್ಮ ರಾಮಣ್ಣ-9; “ಉರುಬಾಡು ಮಾಡಿಕಂಡು ತಿಂತಿವಿಕಲ, ಬೇಕಿದ್ರೆ ಬಾ”

- Advertisement -
- Advertisement -

ಹರದನಳ್ಳಿಲಿ ರಾಮಣ್ಣ ಆಸ್ಪತ್ರೆ ನಿರ್ಮಾಣಕ್ಕೆ ಕೈ ಹಾಕಿದ. ಸರಕಾರದ ಮಟ್ಟದಲ್ಲಿ ಓಡಾಡಿದ್ರಿಂದ ಅಲ್ಲಿಗೆ ಆಸ್ಪತ್ರೆ ಕಟ್ಟಡ ಬಂತು. ಪ್ರೈಮರಿ ಹೆಲ್ತ ಪಾಯಿಂಟು ಯಂಗಿರಬೇಕೋ ಅಂಗೆ ಮಾಡಿದ. ಅವುನನ್ನ ನೋಡಕ್ಕೆ ಅಂತ ಬಂದ ಸಾಹಿತಿಗಳು ಹರದನಳ್ಳಿಗೂ ಹೋಗಿ ಬರೋರು. ಕಾಳೇಗೌಡ ನಾಗವಾರ ಸದಾಶಿವ ಎಣ್ಣೆಹೊಳೆ ಕ್ಯಾತನಳ್ಳಿ ರಾಮಣ್ಣ ಇವುರ್‍ಯೆಲ್ಲ ಬತ್ತಿದ್ರು. ನಾವು ಯಾವುದಾರ ಸಾಹಿತಿ ಮನಿಗೋದ್ರೆ ಏನೋ ಎಂತೊ ಅನ್ನೊ ಅಂಜಿಕೆ ಇರತದೆ. ಅದು ಒಟ್ಟು ನಮ್ಮ ವ್ಯಕ್ತಿತ್ವವನ್ನೇ ನಿಯಂತ್ರಸೋಂತ ಅಳುಕು. ಆದ್ರೆ ನಮ್ಮ ರಾಮಣ್ಣನ ಮನಿಗೆ ಬರೋರಿಗೆ ಇಂತ ಯಾವ ಅಳಕೂ ಇರತಿರಲಿಲ್ಲ. ಅವುರ ಸ್ವಂತ ಮನಿಗಿಂತ ಇಲ್ಲಿ ನಿರಾಳವಾಗಿರೋರು. ಅದ್ಕೆ ಈ ಮಾರ್ಗವಾಗಿ ಹೋಗಿ ಬರೋ ಸಾಹಿತಿಗಳ್ಯಲ್ಲ ಇಲ್ಲಿ ಇಳುದು ರಾಮಣ್ಣನ ಮಾತಾಡ್ಸಿ ಹೋಗರು. ರಾಮಣ್ಣನ ಹೆಂಡತಿ ರಾಜಮ್ಮ ಭಾಳ ದೊಡ್ಡತನದ ಹೆಣ್ಣು ಮಗಳು. ನಾನೊಬ್ಬ ಡಾಕ್ಟರೆಡ್ತಿ ಅಂತ ಎಂದೂ ತೋರಿಸಿಗಳ್‌ಲಿಲ್ಲ. ರಾಮಣ್ಣನ್ನ ಹುಡಿಕಂಡು ಬಂದೋರಿಗೆ ಊಟ ಮಾಡಿಸಿ ಕಳಸೋರು. ಅವುರು ಮಾಡತಿದ್ದ ಬಾಡಿನ ಸಾರು ತುಂಬಾ ಫೇಮಸ್ಸು. ವಳ್ಳೆ ಮಸಾಲೆ ಹಾಕಿ ಮಾಡೋರು. ಇಡೀ ಬೀದಿನೆ ಘಮಗುಡೋದು. ಒಂದು ಸತಿ ಉಂಡೋರು ಮತ್ತೆ ಬರೋರು. ಈ ಬಾಡ್ನೆಸರಿಗೆ ಯಂಥಾ ಸಗತಿ ಅಂದ್ರೆ ಮುನಿಸಿಗಂಡ ಅಕ್ಕಪಕ್ಕದ ಮನಿಯೋರು ಅದ್ಯಂಗೋ ಮಾತಾಡಿಸಿಗಂಡು ಬತ್ತರೆ. ಮಾತು ಬುಟ್ಟೊರು ಕೂಡ ಮನಿಗೆ ಬಂದ ನಂಟ್ರು ಮಾತಾಡಸೊ ನ್ಯಪದಲ್ಲಿ ಬಂದೋಯ್ತರೆ. ಅದ್ಕೆ ನೋಡು ನಮ್ಮ ಕಡೆ ನ್ಯಡಿಯೋ ಮಾರಾಮಾರಿ ಜಗಳ ಬಾಡಿನೂಟದಲ್ಲಿ ರಾಜಿಯಾಯ್ತವೆ. ಅಂಗಾಗಿ ರಾಜಮ್ಮನೋರು ಮಾಡೋ ಬಾಡಿನ ಸಾರಿನ ವಾಸನೆ ಕುಡದೋರು ತಿರಗ ಬಂದೋಗರು.

ಅವುನು ತಾನೆ ಏನು ಅಂತೀ, ಸಾಹಿತಿ ಗೆಳೆಯರು ಕಂಡೇಟಿಗೆ ನಿಧಿ ಸಿಕ್ಕಿದಂಗಾಡನು. ಸಾಹಿತಿಗಳ ಕಂಡೇಟಿಗೆ ಮಟನ್ ಸ್ಟಾಲ್ ಹೊಳಿಯದು. ಅವುನ ಮನೆಲಿ ಮರಿಗೌಡ ಅಂತ ಇದ್ದ. ಅವುನ್ನ ರವಿಕಾಂತ ಮಡಿಯ ಮಡಿಯ ಅನ್ನೊನು. ಅವುನಿನ್ನ ಸಣ್ಣುಡಗ ಆಗ. ಆದ್ರಿಂದ ಮರಿಗೌಡನಿಗೆ ಅಂಟಿಗಂಡಿರನು. ಮನಿಗೆ ಬಂದ ಗೆಳೆಯರು ರಾಮಣ್ಣನ ಅಧ್ಯಕ್ಷತೆಲಿ ಸಾಲಿಗೆ ಊಟಕ್ಕೆ ಕುತಗಳರು. ಪ್ರತಿಯೊಬ್ಬರಿಗೂ ಸಪರೇಟಾಗಿ ಚಟ್ನೆ ತುಂಬ ಬಾಡತಂದು ದಬ್ಬಾಕಿಬುಟ್ಟೋಗನು ಮರಿಗೌಡ. ಮುದ್ದೆನೂ ಅಂಗೆಯಾ ಒಂದೊಂದೇ ಮುದ್ದೆ ತಂದು ಇಕ್ಕೊರು. ಬಾಡಿನೆಸರು ಬುಟ್ಟೇಟಿಗೆ ರಾಮಣ್ಣ ಖಂಡದ ಪೀಸ ತಗಂಡು ಹುರಿಗಾಳೆಸಗಂಡಂಗೆ ಬಾಯಿಗೆಸಗಳನು. ಮತ್ತೆ ಸಾಹಿತ್ಯನೂ ಶುರು ಮಾಡಿಕಳನು. ಇಂತ ಪಾರ್ಟಿ ನಿರಂತರವಾಗಿ ನ್ಯಡಿಯವು. ನಡುಮನೆಲಿ ಕನ್ನಡ ಸಾಹಿತ್ಯದ ಚರ್ಚೆಗಳು ನ್ಯಡದ್ರೆ ಕ್ವಾಣೆ ವಳಗಡೆ ಬಾಡು ಬೆಯ್ಯದು. ಮಾತಾಡಿ ಸಾಕಾದ ಸಾಹಿತಿಗಳು ಚಟ್ನೆತುಂಬ ಬಾಡು ಬಂದಮ್ಯಾಲೆ ತ್ಯಪ್ಪಗಾಗೋರು. ಅಂತೂ ಮೈಸೂರಿನ ದಿನಗಳು ರಾಮಣ್ಣ ಹರದನಳ್ಳಿಗೆ ಬಂದ ಮ್ಯಾಲೆ ನಾಗಮಂಗಲದಲ್ಲಿ ಶುರುವಾದೊ. ಅದೊಂದು ಸುಭಿಕ್ಷದ ಕಾಲ.

ರಾಮಣ್ಣ ದಿನಾ ಹರದನಳ್ಳಿಗೋಗಿ ಬರೋನು. ನಮ್ಮಣ್ಣ ಎಮ್ಮೆಲ್ಲೆ ಐ.ಬಿ ಮುಂದಗಡೆ ಕುತಗಳರು. ರಾಮಣ್ಣನ ಮಾತು ಅಂದ್ರೆ ಅವುರಿಗೆ ತುಂಬಾ ಇಷ್ಟ. ಪರಸ್ಪರ ಗೌರವ ಇದ್ದೊರು. ರಾಮಣ್ಣನ ಮಾತು ಅಂದ್ರೆ ಅದರಲ್ಲೇನಾರ ಹಾಸ್ಯಮಯವಾದ್ದು ಇದ್ದೇ ಇರತದೆ ಅಂತ ತಿಳಕಂಡಿದ್ರು. ಅಂಗಾಗಿ ನಾಗಮಂಗಲದಲ್ಲಿದ್ದಾಗ ರಾಮಣ್ಣ ಬರದ್ನೆ ಕಾಯೋರು. ಒಂದಿನ ರಾಮಣ್ಣ ಬಂದು ಒಂದು ಪ್ರಸಂಗ ಹೇಳಿದ. ವಬ್ಬ ವಜಕಟ್ಟಾದ ಮನ್ಸ ಹೆಡತಿ ಕರಕಂಡು ಬಂದು “ಸ್ವಾಮಿ ಇವುಳು ರಾತ್ರಿಯಲ್ಲ ನಿದ್ದೆ ಕೊಡ್ಳಿಲ್ಲ” ಅಂದ. ರಾಮಣ್ಣ ಏನೇನೊ ಯೋಚನೆ ಮಾಡಿ ’ಯಾಕೆ ಏನು ಮಾಡಿದ್ಲಪ್ಪಾ’ ಅಂದವ್ನೆ. “ಅಯ್ಯೋ ಅವುಳ ಗೋಳ ನೋಡಕ್ಕಾಗಲಿಲ್ಲ ಸ್ವಾಮಿ. ಅವುಳ ವಲ ಕುಯ್ಯಕ್ಕೆ ಕರಕಂಡೋಗಿದ್ದೇ ತೆಪ್ಪಾಯ್ತು ನೋಡಿ” ಅಂತ ಮುಖ್ಯ ವಿಷಯದ ಸುತ್ತ ಮಾತಾಡತಿದ್ನಂತೆ. ’ಅದೇನಾಗದೆ ಹೇಳಿಗೌಡ್ರೆ’ ಅಂದಾಗ “ವಲ ಕುಯ್ತ ಮುಂಬರದಾಗ ಕೂಳೆ ತರಕತ್ತಂತೆ. ಅಷ್ಟೆಯಾ ಅದ್ಕೆ ರಾತ್ರ್ಯಲ್ಲ ನರಳಿದ್ಲು. ಅದೇನು ವಸಿ ನೋಡಿ” ಅಂದನಂತೆ. ಸರಿ ರಾಮಣ್ಣ ಆಯಮ್ಮನ ಮರ್ಮಸ್ಥಾನ ಚೆಕಪ್ ಮಾಡಬೇಕಾದ್ರಿಂದ, ಆತನೂ ಇರದು ವಳ್ಳೆದು ಅಂತ “ನೀನು ಬಾರಪ್ಪ ವಳಿಕೆ” ಅಂದನಂತೆ. ಅವುನು ತಲೆ ವಗದು “ಅದೇನು ನೀವೆ ಮಾಡಿ ಸ್ವಾಮಿ, ನಾನು ನೋಡದಿಲ ಅದ” ಅಂದನಂತೆ. ಎಷ್ಟು ಕರದ್ರೂ ಬರಲಿಲವಂತೆ. ಇಂತವೇಳಿ ನಮ್ಮಣ್ಣನ ನಗಸೋನು.

ಇನ್ನೊಂದು ಸಾರ್ತಿ ಸರಕಾರದ ಕಾರ್ಯಕ್ರಮದಲ್ಲಿ ಸಿಕ್ಕಿ ಸಿಕ್ಕಿದೋರನ್ಯಲ್ಲ ಹಿಡಿದು ಫ್ಯಾಮಿಲಿ ಪ್ಲಾನಿಂಗ್ ಆಪರೇಷನ್ ಮಾಡಿದ್ರಂತೆ. ಒಬ್ಬ ಬಂದು “ಅಲ್ಲಾ ಸ್ವಾಮಿ ಹಿಂಗೂ ಮಾಡ್ಯರೆ ಇದು ನ್ಯಾಯವೆ” ಅಂದನಂತೆ.

“ಯಾಕಯ್ಯ ಏನು ಮಾಡಿದ್ರು ನಿಂಗೆ?”

“ನನ್ನನ್ನೂ ಯಳಕಂಡೋಗಿ ನರ ಕಟ್ ಮಾಡಿದ್ರು ಸ್ವಾಮಿ.”

“ಅದು ಫ್ಯಾಮಿಲಿ ಪ್ಲಾನಿಂಗ್ ಆಪರೇಷನ್ನು ಕಣಯ್ಯ ವಳ್ಳೆದಾಯ್ತದೆ ಬುಡು. ಮಕ್ಕಳು ಮರಿಯಾಯ್ತವೆ ಅಂತ ಯೇಚ್ನೆ ಮಾಡಂಗೇಯಿಲ್ಲ.”

“ಸರಿ ಸ್ವಾಮಿ ಗದ್ದಿಗೆ ನೀರು ಬುಡಬೇಕಾದ್ರೆ ಕ್ಯರೆಲಿ ನೀರಿರಬೇಕಲವೆ? ಬತ್ತ್ಯೋಗಿರೊ ಕ್ಯರೆ ತೂಬಿನ ಗುಂಡಿನೆ ಮುಚ್ಚಿದರಲ್ಲ. ಹಿಂಗೂ ಮಾಡ್ಯರೆ” ಅಂತ ಗೋಳಾಡಿದನಂತೆ.

“ಆಗ ರಾಮಣ್ಣ ಅದವುರಿಗೆ ಗೊತ್ತಿಲ್ಲ ಬುಡಿಗೌಡ್ರೇ. ನಿಮ್ಮ ಕ್ಯರೆ ಬತ್ತಿ ಮೀನು ಸತ್ತಿರದು ಅವುರಿಗ್ಯಂಗೆ ಗೊತ್ತಾಗಬೇಕು. ನೋಡಕ್ಕೆ ಜೋರಾಗಿದ್ದಿರಲ್ಲಾ ಅದ್ಕೆ ಹಿಡಕಂಡೋಗಿ ಆಪರೇಷನ್ ಮಾಡ್ಯವುರೆ. ತ್ವಂದ್ರೆ ಏನೂಯಿಲ್ಲ. ನೀವು ಮದ್ಲಿಗಿಂತ ಜೋರಾಗಿರತಿರಿ” ಅಂತ ಸಮಾಧಾನ ಮಾಡಿ ಕಳಿಸಿದನಂತೆ. ಇಂತ ಕತೆ ಕೇಳಕ್ಕೆ ರಾಮಣ್ಣನ್ನ ಕಾಯರು. ಅವುನು ಬಂದು ಒಂದಲ್ಲಾ ಒಂದು ಹೇಳನು. ಅದರಲ್ಲಿ ಅವುನ ಇಮೇಜಿನೇಷನ್ ಕೂಡ ಇರವು. ಅವೇನು ನಮ್ಮಣ್ಣನಿಗೆ ಗೊತ್ತಾಯ್ತಾಯಿರಲಿಲ್ಲ. ನಮ್ಮಣ್ಣನೂ ರಾಮಣ್ಣನಿಗೆ ತನ್ನ ಅನುಭವ ಹೇಳೋನು.

ನಮ್ಮಣ್ಣ ಆಗ ಹೊಸ ಎಮ್ಮೆಲ್ಲೆ. ನಮ್ಮದು ದೊಡ್ಡ ತಾಲ್ಲೂಕು. ಜನಗಳ ಮಕ ಪರಿಚಯ ಇಟಗಳದು ಬಾಳಕಷ್ಟ. ಅಂತ ಟೇಮಲ್ಲಿ ಯಾರೋ ಬಂದು ಅವುರೆದ್ರಿಗೆ ನಿಂತವುರೆ. ಅವುರ್‍ಯಾವೂರೊರು ಅನ್ನದು ಗೆಪ್ಪಿಗೆ ಬತ್ತಾಯಿಲ್ಲ. ಅದ ತಿಳಕಳಕ್ಕೆ ಮಳೆಯಂಗೆ ನಿಮ್ಮ ಕಡೆ ಅಂತ ಕೇಳಿದರಂತೆ. “ಏ ತಾಳಿನಕ್ಯರಿಗೆ ಊದದೆ. ನಮ್ಮೂರು ಬಿದರಕ್ಯರಿಗೆ ಒಂದನಿ ಮಳಿಲ್ಲ ಅಂದಾಗ ಓಹೊ ಬಂದಿರೋದು ಬಿದಿರಿಕ್ಯರಿಯೋರು ಅಂತ ಗೊತ್ತಾಗದಂತೆ. ಸರಿ ಬಂದಿರೋರು ಸಮಸ್ಯೆ ಏನು ಅಂತ ತಿಳಕಬೇಕಲ್ಲ. ಆಗ ನಿಧಾನವಾಗಿ “ಅದ ಹೇಳಿದ್ದಿನಿ, ಅವುರು ಬರ್ಲಿ ಅಂದವುರೆ” ಅಂತ ಅಂದಾಜಲ್ಲೊಂದು ಮಾತಂದು ಅದ್ನೂ ಅವುನ ಕೈಲೆ ಬಾಯಿ ಬುಡಸೋ ಪ್ಲಾನ ಮಾಡಿದರಂತೆ. ಅಂಗಂದಕೂಡ್ಳೆ “ನಾವು ಬರದೇನು ಸಾ ನೀವು ತಾಸಿಲ್ದಾರಿಗೊಂದು ಮಾತೇಳಿರ್ರಾಯ್ತು, ಯಲ್ಲ ಬಗೆಹರಿತದೆ” ಅಂದನಂತೆ. ಓಹೊ ಇದು ರೆವಿನ್ಯೂ ಇಲಾಖೆ ವಿಷಯ ಅಂತ ತಿಳಕಂಡು ಮುಂದುವರಿದರಂತೆ. ಇದ ಕೇಳಿಕಂಡು ಬಂದ ರಾಮಣ್ಣ “ಯಮ್ಮೆಲ್ಲೆ ಕ್ಯಲಸ ಭಾಳ ಕಷ್ಟ ಕಣ್ಲ. ನಿಮ್ಮಣ್ಣನೂ ಬುದ್ಧಿವಂತ. ಎಷ್ಟೇ ಆಗಲಿ ಲಾಯರಾಗಿದ್ದೊರಲವೆ” ಅಂತ ನಗಾಡಿದ. ಬಾಡ ತಿನ್ನದರಲ್ಲಿ ರಾಮಣ್ಣ ನಮ್ಮಣ್ಣ ಒಂದೇ ತರ ಇದ್ರು. ಸಮಾನ ಅಭಿರುಚಿ ಇತ್ತು.

ರಾಮಣ್ಣ ಇಲ್ಲಿಗೆ ಬಂದ ಮ್ಯಾಲೆ ಲಾಟರಿ ಟಿಕೆಟ್ ತಗಳೋನು. ಅದು ಸಂಬಳ ಬಂದಾಗ. ಅದರ ಉದ್ದೇಶ ಏನಪ್ಪಾ ಅಂದ್ರೆ ಅಕಸ್ಮಾತ್ ಲಾಟರಿ ಹೊಡಿತು ಅನ್ನು ಚೇಬುತುಂಬ ದುಡ್ಡ ಮಡಿಕಂಡು ಬಡರೋಗಿಗಳಿಗೆ ಸಹಾಯ ಮಾಡಬುದಲ್ಲಾ ಅನ್ನೊ ಕನಸು ಅವುನಿಗೆ. ಪಾಪ ಯಾವತ್ತೂ ಲಾಟ್ರಿ ವಡಿಲಿಲ್ಲ. ಒಂದು ಸಂಬಳದಲ್ಲಿ ಒಂದಿಷ್ಟು ಪುಸ್ತಕ ತಗಳನು. ಲಾಟರಿ ಟಿಕೆಟ್ ತಗಳದು, ದುಂದುಗಾರಿಕೆ ಮಾಡದು ಹಿಂಗೆ ಮಾಡತಿದ್ದ. ಮಕ್ಕಳಿನ್ನೂ ಚಿಕ್ಕೋರು. ಅವುರ ಓದಿನ ಕರ್ಚು ಇರಲಿಲ್ಲ. ಅಂಗಾಗಿ ಸಂಬಳದಲ್ಲಿ ಒಂದು ಪೈಸೆನೂ ಉಳಸದಂಗೆ ಜಾಲಿಯಾಗಿದ್ದ.

ಕೊಪ್ಪದ ತಿಮ್ಮಯ್ಯ ಅನ್ನೊ ಪಿಡಿಒ ಇದ್ದ. ಅವುನ ಜ್ವತೆ ಸೇರಿಕಂಡ ರಾಮಣ್ಣ ಕೆ.ಆರ್ ಪೇಟೆತ ಯಿರೊ ತಂಡೇಕೆರೆ ಸಂತಿಗೋಗಿ ಬಾಡತರೋನು. “ವಚ್ಚರಿ ಬೀಜದ ಭಾಗ ಇರಂಗೆ ಕೊಡಯ್ಯ” ಅಂತ ಹೇಳಿ ಅರ್ಧ ಮರಿನೆ ತರೋರು. ಇದ ನೋಡಿದ ನಾನು

“ಅದ್ಯಾಕಷ್ಟೊಂದು ಬಾಡ ತತ್ತಿರಿ” ಅಂದ್ರೇ,

“ಉರುಬಾಡು ಮಾಡಿಕಂಡು ತಿಂತಿವಿಕಲ, ಬೇಕಿದ್ರೆ ಬಾ” ಅನ್ನೊನು.

“ಅದ್ಯಂತ ಉರುಬಾಡು ಮಾರಾಯ” ಅಂದ್ರೆ,

“ಮಾಡ್ತಿವಿ ನೋಡು ಬಾ” ಅಂತಿದ್ದ. ಒಂದು ಬೀಜದ ಭಾಗ ಅಂದ್ರೆ ಏಳೆಂಟು ಕೆಜಿ ಬರದು. ಅದನ್ನ ಉರುದು ಮಡಿಕಂಡು ತಿನ್ನನ ಅಂದ್ರೆ ಒಂದೂವರದಿನಕೆ ಮುಗದೋಗದು. ಸಾಹಿತಿಗಳು ಬಂದ್ರಂತೂ ಅಷ್ಟು ದಿನಕ್ಕೂ ಸಾಲ್ತಿರಲಿಲ್ಲ. ಅವುನ ಮನೆಲಿ ತರಕಾರಿ ಸಾರು ಮಾಡಿದ್ನೆ ನೋಡಲಿಲ್ಲ ನಾನು.

ರಾಮಣ್ಣನ ಕೆಲಸದಲ್ಲಿ ಅವುನ್ನ ಕೇಳೋರೆ ಇರಲಿಲ್ಲ. ಅಧಿಕಾರಿಗಳ ಕೈಲಿ ಹೇಳಿಸಿಗಂಡು ಕ್ಯಲಸ ಮಾಡೊತರ ಇರಲಿಲ್ಲ ಅವುನು. ಕಂಪ್ಲೇಂಟ್ ಬರದಂಗೆ ತನ್ನ ಕೆಲಸ ಮಾಡೋನು. ಅವುನು ಇಲ್ಲಿದ್ದಾಗ ಮೂರನೆ ಜನಪದ ಸಾಹಿತ್ಯ ಸಮ್ಮೇಳನ ನ್ಯಡಿತು. ನಮ್ಮಣ್ಣ ಯಾವುದೇ ಕಾರ್ಯಕ್ರಮ ಮಾಡದ್ರಲ್ಲಿ ಅಥವಾ ಸಂಘಟಸೊದ್ರಲ್ಲಿ ಅಂತ ಶಕ್ತಿ ಇಲ್ದೊರು. ಆದ್ರಿಂದ ಆ ಸಮ್ಮೇಳನ ಜವಾಬ್ದಾರಿ ಹೊರಕ್ಕೆ ಹಿಂದೇಟಾಕುವಾಗ ರಾಮಣ್ಣ “ನ್ಯಾವೆಲ್ಲ ಇದ್ದಿವಿ ಹೆದರಬ್ಯಾಡಿ ಸಾರ್ ಅಂತ ಸಮ್ಮೇಳನ ನ್ಯಡಿಯಂಗೆ ಮಾಡಿದ. ನಮ್ಮ ತಾಲೂಕಿನವರೆ ಆದ ಜೀಶಂಪ, ಹೆಚ್.ಎನ್ ನಾಗೇಗೌಡ್ರು, ಹ.ಕ ರಾಜೇಗೌಡ್ರು ಇಂತ ಘಟಾನುಘಟಿಗಳೇ ಜನಪದ ವಿದ್ವಾಂಸರು. ಅಲ್ದೆ ಮಾದಪ್ಪಗೌಡ್ರು ಸಿಂಗಾರಿಗೌಡ್ರು ಚಿಗರಿಗೌಡರು ಇದ್ರು. ಇವುರ್‍ಯಾಲ್ಲಾರ್ನು ಒಳಗೊಂಡು, ಯಲ್ಲಾರ ಜೊತೆಲೂ ಸಲಗೆಯಿಂದ ಮಾತಾಡ್ತ ಇಡೀ ಸಮ್ಮೇಳನ ಚನ್ನಾಗಿ ನ್ಯಡಿಯಂಗೆ ಮಾಡಿದ. ಅವಾಗ ರಾಮಣ್ಣನ ಇನ್ನೊಂದು ಮುಖ ನೋಡಿದಂಗಯ್ತು. ಅವುನು ಒಳ್ಳೆ ಸಂಘಟಕ ಅಷ್ಟೆ ಅಲ್ಲ ಲೀಡ್ರು ಕೂಡ ಆಗಿದ್ದ. ಆದ್ರೆ ಲೀಡರ್‌ಶಿಪ್ಪ ಒಪ್ಪಿಗಳದೆ ಕಾರ್ಯಕರ್ತನಾಗಿ ಗುರುತಿಸಿಗಳಕ್ಕೆ ಇಷ್ಟಪಡನು. ಮೂರನೆ ಜಾನಪದ ಸಮ್ಮೇಳನ ಒಂದು ದಾಖಲೆಯಾಯ್ತು. ಅದಾದ ಮೇಲೆ ಎಲ್ಲೂ ನ್ಯಡಿಲಿಲ್ಲ ಅನ್ನಸ್ತದೆ. ನಮ್ಮ ತಾಲೂಕಿನಲ್ಲವುನು ಹರದನಳ್ಳಿ ಆಸುಪತ್ರೆ ಕಟ್ಟಿದ. ಜನಪದ ಸಮ್ಮೇಳನದ ರೂವಾರಿಯಾದ.

ಹೇಳ್ದವ್ರು: ಡಾ. ಕಮಲಾಕ್ಷಣ್ಣ
ಬರ್ಕಂಡವ್ರು: ಬಿ ಚಂದ್ರೇಗೌಡ


ಇದನ್ನೂ ಓದಿ: ಹಿಂಗಿದ್ದ ನಮ್ಮ ರಾಮಣ್ಣ-8; “ಬೈಬಾರ್ದು ಕಲ; ಅವುಕೇನು ಬೈಸಿಗತ್ತವೆ; ತಿರಗ ಇತ್ತಗೆ ಬರದಂಗೆ ವಂಟೋಯ್ತವೆ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....