Homeಮುಖಪುಟಆಟೋ ಚಾಲಕನ ಮಗಳು ಮಿಸ್ ಇಂಡಿಯಾ ರನ್ನರ್ ಅಪ್ ಆದ ಕಥೆ

ಆಟೋ ಚಾಲಕನ ಮಗಳು ಮಿಸ್ ಇಂಡಿಯಾ ರನ್ನರ್ ಅಪ್ ಆದ ಕಥೆ

ರನ್ನರ್‌ ಅಪ್ ಆಗಿ ಸನ್ಮಾನ ಸಮಾರಂಭಕ್ಕೆ ಬರಲು ಈಕೆ ಬಳಸಿದ್ದು ತಮ್ಮ ಮನೆಗೆ ಬೆಂಬಲವಾಗಿ ನಿಂತಿದ್ದ ಅಪ್ಪನ ಆಟೋರಿಕ್ಷಾವನ್ನು.

- Advertisement -
- Advertisement -

ಬಡತನದ ಬೆಂಕಿಯಲ್ಲಿ ಬೆಂದು ಚಿನ್ನವಾಗಿ ಹೊರಹೊಮ್ಮಿದ ದಿಟ್ಟೆ ಈ ಬಾರಿಯ ಮಿಸ್ ಇಂಡಿಯಾ 2020 ರ ರನ್ನರ್ ಅಪ್ ಮಾನ್ಯಾ ಸಿಂಗ್. ಹೌದು, ಸಾಧಿಸುವ ಛಲವಿದ್ದರೇ, ಕಂಡ ಕನಸುಗಳನ್ನು ನನಸು ಮಾಡಿಕೊಳ್ಳುವ ಧೃಡ ಇಚ್ಛೆ ಇದ್ದಲ್ಲಿ ಅದು ಸಾಧ್ಯ ಎಂಬುದಕ್ಕೆ ಉದಾಹರಣೆಯಾಗಿ ನಿಂತಿದ್ದಾರೆ ಈಕೆ.

ಮಿಸ್ ಇಂಡಿಯಾ  2020 ರ ಕಿರೀಟ ಪಡೆದ 23 ವರ್ಷದ ತೆಲಂಗಾಣದ ಮಾನಸಾ ವಾರಣಾಸಿ ಅವರಿಗಿಂತ ಹೆಚ್ಚು ಸುದ್ದಿಯಾಗಿದ್ದು, ರನ್ನರ್‌ ಅಪ್ ಆದ 19 ವರ್ಷದ ಉತ್ತರ ಪ್ರದೇಶದ ಮಾನ್ಯಾ ಸಿಂಗ್.

ಖುಷಿ ನಗರದ ಆಟೋ ಡ್ರೈವರ್ ಓಂಪ್ರಕಾಶ್ ಸಿಂಗ್ ಮತ್ತು ಮನೋರಮಾ ಸಿಂಗ್ ಮಗಳಾಗಿದ್ದ ಮಾನ್ಯಾ ಸಿಂಗ್, ತೀವ್ರ ಬಡತನದಲ್ಲಿ ಬೆಳೆದವರು. ಆಟೋ ಓಡಿಸಿ ಬರುತ್ತಿದ್ದ ಹಣವೇ ಇವರ ಕುಟುಂಬದ ಆದಾಯವಾಗಿತ್ತು. ಇಂತಹ ಕುಟುಂಬದಲ್ಲಿ ಬೆಳೆದ ಮಾನ್ಯಾ ತನ್ನ ಕನಸುಗಳನ್ನು ಕಟ್ಟಿಕೊಂಡು ರೈಲು ಹತ್ತಿದ್ದು ಕನಸಿನ ನಗರ ಮುಂಬೈಗೆ.

ಇದನ್ನೂ ಓದಿ:  ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

“ನಾನು ನಿಲ್ದಾಣದಿಂದ ಹೊರನಡೆದಾಗ, ನಾನು ನೋಡಿದ ಮೊದಲ ಸ್ಥಳ ಪಿಜ್ಜಾ ಹಟ್. ನಾನು ಅಲ್ಲಿ ಅರೆಕಾಲಿಕ ಉದ್ಯೋಗ ಮತ್ತು ತಾತ್ಕಾಲಿಕ ಉಳಿದುಕೊಳ್ಳುವ ಅವಕಾಶ ಪಡೆದುಕೊಂಡೆ. ಎರಡು ದಿನಗಳ ನಂತರ, ನಾನು ನನ್ನ ತಂದೆಗೆ ಕರೆ ಮಾಡಿದಾಗ, ಅವರು ಅಳತೊಡಗಿದರು. ಆದರೆ ನಾನು ಇದೆ ನನ್ನ ಸ್ಥಳ ಎಂದು ಧೈರ್ಯ ತುಂಬಿದೆ. ಮರುದಿನವೇ ನನ್ನ ತಂದೆ ತಾಯಿ ಮುಂಬೈಗೆ ಬಂದು ನಿನ್ನ ಕನಸಿಗೆ ನಾನು ಬೆಂಬಲವಾಗಿ ನಿಲ್ಲುತ್ತೇವೆ ಎಂದರು” ಎಂದು ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾನ್ಯಾ ತಿಳಿಸಿದ್ದಾರೆ.

“ನನ್ನ ತಂದೆ ಜೀವನ ಸಾಗಿಸಲು ಆಟೋ ಓಡಿಸಿದರು. ಆದರೂ ನನ್ನನ್ನು ಉತ್ತಮ ಶಾಲೆಗೆ ಕಳುಹಿಸಿದರು. ಜೊತೆಗೆ, ನಾನು ಅರೆಕಾಲಿಕ ಉದ್ಯೋಗಗಳನ್ನು ಮಾಡಿದ್ದೇನೆ” ಎನ್ನುತ್ತಾರೆ ಮಾನ್ಯಾ.

Image result for manya singh

ಮಾನ್ಯಾ ಹೇಳುವಂತೆ, ಆಕೆ ತನ್ನ ಪದವಿ ದಿನಗಳಲ್ಲಿ, ಹತ್ತಾರು ಸ್ಪರ್ಧೆಗಳಿಗೆ ಆಡಿಷನ್ ಮಾಡಿದ್ದಳು, ಆದರೆ ಅವರು “ಶಕಲ್ ಅಚಿ ನಹಿ ಹೈ” (ನಿಮ್ಮ ಮುಖ ಚೆನ್ನಾಗಿ ಕಾಣುತ್ತಿಲ್ಲ) ಅಥವಾ “ನಿಮಗೆ ಇಂಗ್ಲಿಷ್ ಕೂಡ ತಿಳಿದಿಲ್ಲ” ಎಂದು ವಾಪಸ್ ಕಳಿಸುತ್ತಿದ್ದರಂತೆ.

“ಪ್ರತಿ ಬಾರಿ ನಾನು ಸೋತಾಗ ಅಂದುಕೊಳ್ಳುತ್ತಿದ್ದು, ಇನ್ನೆರಡು ಹೆಜ್ಜೆ ಮುಂದಕ್ಕೆ, ಮತ್ತೆರಡು ಹೆಜ್ಜೆ ಮುಂದಕ್ಕೆ ಎಂಬ ಮಾತುಗಳನ್ನು. ಇದು ನನ್ನನ್ನು ಇಲ್ಲಿಗೆ ತಂದಿರಿಸಿದೆ” ಎಂದು ಹೇಳುತ್ತಾರೆ ಮಾನ್ಯಾ ಸಿಂಗ್.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

View this post on Instagram

 

A post shared by Manya Singh (@manyasingh993)

“ನನ್ನ ಕಾಲೇಜು ಶುಲ್ಕವನ್ನು ಪಾವತಿಸಲು ಅಪ್ಪ ನಮ್ಮ ಆಭರಣಗಳನ್ನು ಅಡಮಾನ ಇಟ್ಟಿದ್ದರು. ಸ್ಫರ್ಧೆಗಳಿಗಾಗಿ ಬಟ್ಟೆಗಳನ್ನು ಖರೀದಿಸಲು ನನಗೆ ಹಣದ ಅಗತ್ಯವಿದ್ದರಿಂದ ನಾನು ಪಿಜ್ಜಾ ಹಟ್‌ನಲ್ಲಿ ನೆಲವನ್ನು ಒರೆಸುವ ಕೆಲಸ ಮಾಡಿದ್ದೇನೆ. ಅಲ್ಲಿ ಜನ ಇಂಗ್ಲಿಷ್ ಮಾತಾಡುವುದನ್ನು, ಕಾಲೇಜಿನಲ್ಲಿ ಸ್ನೇಹಿತರು ಹೇಗೆ ಮಾತನಾಡುತ್ತಾರೆ ಎಂಬುದನ್ನು ಹೆಚ್ಚು ಗಮನಿಸುತ್ತಿದೆ”. ನನ್ನ ತಂದೆ ಆಟೋ ಚಾಲಕರು ಎಂದು ನನ್ನ ವಿಡಿಯೋಗಳಲ್ಲಿ ಹೇಳಿದಾಗ ಜನ ಪ್ರಚಾರಕ್ಕಾಗಿ ಎಂದುಕೊಂಡರು. ಆದರೆ ನನಗೆ ನನ್ನ ಮೂಲದ ಬಗ್ಗೆ, ನನ್ನ ತಂದೆಯ ಬಗ್ಗೆ ಹೆಮ್ಮೆಯಿದೆ ಎನ್ನುತ್ತಾರೆ ಈಕೆ.

Image result for manya singh

ರನ್ನರ್‌ ಅಪ್ ಆಗಿ ಸನ್ಮಾನ ಸಮಾರಂಭಕ್ಕೆ ಬರಲು ಈಕೆ ಬಳಸಿದ್ದು ತಮ್ಮ ಮನೆಗೆ ಬೆಂಬಲವಾಗಿ ನಿಂತಿದ್ದ ಅಪ್ಪನ ಆಟೋರಿಕ್ಷಾವನ್ನು.

ಬಡತನ ಎಂದು ಕೈಕಟ್ಟಿ ಕುಳಿತ್ತಿದ್ದರೆ ತನ್ನ ಕನಸು ನನಸಾಗುತ್ತಿರಲಿಲ್ಲ ಎನ್ನುತ್ತಾರೆ ಮಾನ್ಯ. ಇಷ್ಟು ದಿನ ತನಗೆ ಬೆಂಬಲವಾಗಿ ನಿಂತ ತಂದೆ ತಾಯಿಗೆ ಮನೆ ಖರೀದಿಸಿಕೊಡುವ ಮೂಲಕ ನಾನು ಅವರಿಗೆ ಸಹಾಯ ಮಾಡಲು ಆರಂಭಿಸುವೆ. ನನ್ನ ತಂದೆ ನನ್ನಲ್ಲಿ ವಿಶ್ವಾಸವಿರಿಸಿದ್ದರು ಹಾಗಾಗಿ ಇಂದು ಆಟೋ ಚಾಲಕನ ಮಗಳು ತಲೆ ಮೇಲೆ ಕಿರೀಟ ಧರಿಸಿದ್ದಾಳೆ. ಎಂದು ಹೆಮ್ಮೆಯಿಂದ ಹೇಳುತ್ತಾರೆ ಮಾನ್ಯ.


ಇದನ್ನೂ ಓದಿ: ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...