Homeಮುಖಪುಟಆಟೋ ಚಾಲಕನ ಮಗಳು ಮಿಸ್ ಇಂಡಿಯಾ ರನ್ನರ್ ಅಪ್ ಆದ ಕಥೆ

ಆಟೋ ಚಾಲಕನ ಮಗಳು ಮಿಸ್ ಇಂಡಿಯಾ ರನ್ನರ್ ಅಪ್ ಆದ ಕಥೆ

ರನ್ನರ್‌ ಅಪ್ ಆಗಿ ಸನ್ಮಾನ ಸಮಾರಂಭಕ್ಕೆ ಬರಲು ಈಕೆ ಬಳಸಿದ್ದು ತಮ್ಮ ಮನೆಗೆ ಬೆಂಬಲವಾಗಿ ನಿಂತಿದ್ದ ಅಪ್ಪನ ಆಟೋರಿಕ್ಷಾವನ್ನು.

- Advertisement -
- Advertisement -

ಬಡತನದ ಬೆಂಕಿಯಲ್ಲಿ ಬೆಂದು ಚಿನ್ನವಾಗಿ ಹೊರಹೊಮ್ಮಿದ ದಿಟ್ಟೆ ಈ ಬಾರಿಯ ಮಿಸ್ ಇಂಡಿಯಾ 2020 ರ ರನ್ನರ್ ಅಪ್ ಮಾನ್ಯಾ ಸಿಂಗ್. ಹೌದು, ಸಾಧಿಸುವ ಛಲವಿದ್ದರೇ, ಕಂಡ ಕನಸುಗಳನ್ನು ನನಸು ಮಾಡಿಕೊಳ್ಳುವ ಧೃಡ ಇಚ್ಛೆ ಇದ್ದಲ್ಲಿ ಅದು ಸಾಧ್ಯ ಎಂಬುದಕ್ಕೆ ಉದಾಹರಣೆಯಾಗಿ ನಿಂತಿದ್ದಾರೆ ಈಕೆ.

ಮಿಸ್ ಇಂಡಿಯಾ  2020 ರ ಕಿರೀಟ ಪಡೆದ 23 ವರ್ಷದ ತೆಲಂಗಾಣದ ಮಾನಸಾ ವಾರಣಾಸಿ ಅವರಿಗಿಂತ ಹೆಚ್ಚು ಸುದ್ದಿಯಾಗಿದ್ದು, ರನ್ನರ್‌ ಅಪ್ ಆದ 19 ವರ್ಷದ ಉತ್ತರ ಪ್ರದೇಶದ ಮಾನ್ಯಾ ಸಿಂಗ್.

ಖುಷಿ ನಗರದ ಆಟೋ ಡ್ರೈವರ್ ಓಂಪ್ರಕಾಶ್ ಸಿಂಗ್ ಮತ್ತು ಮನೋರಮಾ ಸಿಂಗ್ ಮಗಳಾಗಿದ್ದ ಮಾನ್ಯಾ ಸಿಂಗ್, ತೀವ್ರ ಬಡತನದಲ್ಲಿ ಬೆಳೆದವರು. ಆಟೋ ಓಡಿಸಿ ಬರುತ್ತಿದ್ದ ಹಣವೇ ಇವರ ಕುಟುಂಬದ ಆದಾಯವಾಗಿತ್ತು. ಇಂತಹ ಕುಟುಂಬದಲ್ಲಿ ಬೆಳೆದ ಮಾನ್ಯಾ ತನ್ನ ಕನಸುಗಳನ್ನು ಕಟ್ಟಿಕೊಂಡು ರೈಲು ಹತ್ತಿದ್ದು ಕನಸಿನ ನಗರ ಮುಂಬೈಗೆ.

ಇದನ್ನೂ ಓದಿ:  ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

“ನಾನು ನಿಲ್ದಾಣದಿಂದ ಹೊರನಡೆದಾಗ, ನಾನು ನೋಡಿದ ಮೊದಲ ಸ್ಥಳ ಪಿಜ್ಜಾ ಹಟ್. ನಾನು ಅಲ್ಲಿ ಅರೆಕಾಲಿಕ ಉದ್ಯೋಗ ಮತ್ತು ತಾತ್ಕಾಲಿಕ ಉಳಿದುಕೊಳ್ಳುವ ಅವಕಾಶ ಪಡೆದುಕೊಂಡೆ. ಎರಡು ದಿನಗಳ ನಂತರ, ನಾನು ನನ್ನ ತಂದೆಗೆ ಕರೆ ಮಾಡಿದಾಗ, ಅವರು ಅಳತೊಡಗಿದರು. ಆದರೆ ನಾನು ಇದೆ ನನ್ನ ಸ್ಥಳ ಎಂದು ಧೈರ್ಯ ತುಂಬಿದೆ. ಮರುದಿನವೇ ನನ್ನ ತಂದೆ ತಾಯಿ ಮುಂಬೈಗೆ ಬಂದು ನಿನ್ನ ಕನಸಿಗೆ ನಾನು ಬೆಂಬಲವಾಗಿ ನಿಲ್ಲುತ್ತೇವೆ ಎಂದರು” ಎಂದು ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾನ್ಯಾ ತಿಳಿಸಿದ್ದಾರೆ.

“ನನ್ನ ತಂದೆ ಜೀವನ ಸಾಗಿಸಲು ಆಟೋ ಓಡಿಸಿದರು. ಆದರೂ ನನ್ನನ್ನು ಉತ್ತಮ ಶಾಲೆಗೆ ಕಳುಹಿಸಿದರು. ಜೊತೆಗೆ, ನಾನು ಅರೆಕಾಲಿಕ ಉದ್ಯೋಗಗಳನ್ನು ಮಾಡಿದ್ದೇನೆ” ಎನ್ನುತ್ತಾರೆ ಮಾನ್ಯಾ.

Image result for manya singh

ಮಾನ್ಯಾ ಹೇಳುವಂತೆ, ಆಕೆ ತನ್ನ ಪದವಿ ದಿನಗಳಲ್ಲಿ, ಹತ್ತಾರು ಸ್ಪರ್ಧೆಗಳಿಗೆ ಆಡಿಷನ್ ಮಾಡಿದ್ದಳು, ಆದರೆ ಅವರು “ಶಕಲ್ ಅಚಿ ನಹಿ ಹೈ” (ನಿಮ್ಮ ಮುಖ ಚೆನ್ನಾಗಿ ಕಾಣುತ್ತಿಲ್ಲ) ಅಥವಾ “ನಿಮಗೆ ಇಂಗ್ಲಿಷ್ ಕೂಡ ತಿಳಿದಿಲ್ಲ” ಎಂದು ವಾಪಸ್ ಕಳಿಸುತ್ತಿದ್ದರಂತೆ.

“ಪ್ರತಿ ಬಾರಿ ನಾನು ಸೋತಾಗ ಅಂದುಕೊಳ್ಳುತ್ತಿದ್ದು, ಇನ್ನೆರಡು ಹೆಜ್ಜೆ ಮುಂದಕ್ಕೆ, ಮತ್ತೆರಡು ಹೆಜ್ಜೆ ಮುಂದಕ್ಕೆ ಎಂಬ ಮಾತುಗಳನ್ನು. ಇದು ನನ್ನನ್ನು ಇಲ್ಲಿಗೆ ತಂದಿರಿಸಿದೆ” ಎಂದು ಹೇಳುತ್ತಾರೆ ಮಾನ್ಯಾ ಸಿಂಗ್.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

View this post on Instagram

 

A post shared by Manya Singh (@manyasingh993)

“ನನ್ನ ಕಾಲೇಜು ಶುಲ್ಕವನ್ನು ಪಾವತಿಸಲು ಅಪ್ಪ ನಮ್ಮ ಆಭರಣಗಳನ್ನು ಅಡಮಾನ ಇಟ್ಟಿದ್ದರು. ಸ್ಫರ್ಧೆಗಳಿಗಾಗಿ ಬಟ್ಟೆಗಳನ್ನು ಖರೀದಿಸಲು ನನಗೆ ಹಣದ ಅಗತ್ಯವಿದ್ದರಿಂದ ನಾನು ಪಿಜ್ಜಾ ಹಟ್‌ನಲ್ಲಿ ನೆಲವನ್ನು ಒರೆಸುವ ಕೆಲಸ ಮಾಡಿದ್ದೇನೆ. ಅಲ್ಲಿ ಜನ ಇಂಗ್ಲಿಷ್ ಮಾತಾಡುವುದನ್ನು, ಕಾಲೇಜಿನಲ್ಲಿ ಸ್ನೇಹಿತರು ಹೇಗೆ ಮಾತನಾಡುತ್ತಾರೆ ಎಂಬುದನ್ನು ಹೆಚ್ಚು ಗಮನಿಸುತ್ತಿದೆ”. ನನ್ನ ತಂದೆ ಆಟೋ ಚಾಲಕರು ಎಂದು ನನ್ನ ವಿಡಿಯೋಗಳಲ್ಲಿ ಹೇಳಿದಾಗ ಜನ ಪ್ರಚಾರಕ್ಕಾಗಿ ಎಂದುಕೊಂಡರು. ಆದರೆ ನನಗೆ ನನ್ನ ಮೂಲದ ಬಗ್ಗೆ, ನನ್ನ ತಂದೆಯ ಬಗ್ಗೆ ಹೆಮ್ಮೆಯಿದೆ ಎನ್ನುತ್ತಾರೆ ಈಕೆ.

Image result for manya singh

ರನ್ನರ್‌ ಅಪ್ ಆಗಿ ಸನ್ಮಾನ ಸಮಾರಂಭಕ್ಕೆ ಬರಲು ಈಕೆ ಬಳಸಿದ್ದು ತಮ್ಮ ಮನೆಗೆ ಬೆಂಬಲವಾಗಿ ನಿಂತಿದ್ದ ಅಪ್ಪನ ಆಟೋರಿಕ್ಷಾವನ್ನು.

ಬಡತನ ಎಂದು ಕೈಕಟ್ಟಿ ಕುಳಿತ್ತಿದ್ದರೆ ತನ್ನ ಕನಸು ನನಸಾಗುತ್ತಿರಲಿಲ್ಲ ಎನ್ನುತ್ತಾರೆ ಮಾನ್ಯ. ಇಷ್ಟು ದಿನ ತನಗೆ ಬೆಂಬಲವಾಗಿ ನಿಂತ ತಂದೆ ತಾಯಿಗೆ ಮನೆ ಖರೀದಿಸಿಕೊಡುವ ಮೂಲಕ ನಾನು ಅವರಿಗೆ ಸಹಾಯ ಮಾಡಲು ಆರಂಭಿಸುವೆ. ನನ್ನ ತಂದೆ ನನ್ನಲ್ಲಿ ವಿಶ್ವಾಸವಿರಿಸಿದ್ದರು ಹಾಗಾಗಿ ಇಂದು ಆಟೋ ಚಾಲಕನ ಮಗಳು ತಲೆ ಮೇಲೆ ಕಿರೀಟ ಧರಿಸಿದ್ದಾಳೆ. ಎಂದು ಹೆಮ್ಮೆಯಿಂದ ಹೇಳುತ್ತಾರೆ ಮಾನ್ಯ.


ಇದನ್ನೂ ಓದಿ: ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...