Homeಮುಖಪುಟಆಟೋ ಚಾಲಕನ ಮಗಳು ಮಿಸ್ ಇಂಡಿಯಾ ರನ್ನರ್ ಅಪ್ ಆದ ಕಥೆ

ಆಟೋ ಚಾಲಕನ ಮಗಳು ಮಿಸ್ ಇಂಡಿಯಾ ರನ್ನರ್ ಅಪ್ ಆದ ಕಥೆ

ರನ್ನರ್‌ ಅಪ್ ಆಗಿ ಸನ್ಮಾನ ಸಮಾರಂಭಕ್ಕೆ ಬರಲು ಈಕೆ ಬಳಸಿದ್ದು ತಮ್ಮ ಮನೆಗೆ ಬೆಂಬಲವಾಗಿ ನಿಂತಿದ್ದ ಅಪ್ಪನ ಆಟೋರಿಕ್ಷಾವನ್ನು.

- Advertisement -
- Advertisement -

ಬಡತನದ ಬೆಂಕಿಯಲ್ಲಿ ಬೆಂದು ಚಿನ್ನವಾಗಿ ಹೊರಹೊಮ್ಮಿದ ದಿಟ್ಟೆ ಈ ಬಾರಿಯ ಮಿಸ್ ಇಂಡಿಯಾ 2020 ರ ರನ್ನರ್ ಅಪ್ ಮಾನ್ಯಾ ಸಿಂಗ್. ಹೌದು, ಸಾಧಿಸುವ ಛಲವಿದ್ದರೇ, ಕಂಡ ಕನಸುಗಳನ್ನು ನನಸು ಮಾಡಿಕೊಳ್ಳುವ ಧೃಡ ಇಚ್ಛೆ ಇದ್ದಲ್ಲಿ ಅದು ಸಾಧ್ಯ ಎಂಬುದಕ್ಕೆ ಉದಾಹರಣೆಯಾಗಿ ನಿಂತಿದ್ದಾರೆ ಈಕೆ.

ಮಿಸ್ ಇಂಡಿಯಾ  2020 ರ ಕಿರೀಟ ಪಡೆದ 23 ವರ್ಷದ ತೆಲಂಗಾಣದ ಮಾನಸಾ ವಾರಣಾಸಿ ಅವರಿಗಿಂತ ಹೆಚ್ಚು ಸುದ್ದಿಯಾಗಿದ್ದು, ರನ್ನರ್‌ ಅಪ್ ಆದ 19 ವರ್ಷದ ಉತ್ತರ ಪ್ರದೇಶದ ಮಾನ್ಯಾ ಸಿಂಗ್.

ಖುಷಿ ನಗರದ ಆಟೋ ಡ್ರೈವರ್ ಓಂಪ್ರಕಾಶ್ ಸಿಂಗ್ ಮತ್ತು ಮನೋರಮಾ ಸಿಂಗ್ ಮಗಳಾಗಿದ್ದ ಮಾನ್ಯಾ ಸಿಂಗ್, ತೀವ್ರ ಬಡತನದಲ್ಲಿ ಬೆಳೆದವರು. ಆಟೋ ಓಡಿಸಿ ಬರುತ್ತಿದ್ದ ಹಣವೇ ಇವರ ಕುಟುಂಬದ ಆದಾಯವಾಗಿತ್ತು. ಇಂತಹ ಕುಟುಂಬದಲ್ಲಿ ಬೆಳೆದ ಮಾನ್ಯಾ ತನ್ನ ಕನಸುಗಳನ್ನು ಕಟ್ಟಿಕೊಂಡು ರೈಲು ಹತ್ತಿದ್ದು ಕನಸಿನ ನಗರ ಮುಂಬೈಗೆ.

ಇದನ್ನೂ ಓದಿ:  ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

“ನಾನು ನಿಲ್ದಾಣದಿಂದ ಹೊರನಡೆದಾಗ, ನಾನು ನೋಡಿದ ಮೊದಲ ಸ್ಥಳ ಪಿಜ್ಜಾ ಹಟ್. ನಾನು ಅಲ್ಲಿ ಅರೆಕಾಲಿಕ ಉದ್ಯೋಗ ಮತ್ತು ತಾತ್ಕಾಲಿಕ ಉಳಿದುಕೊಳ್ಳುವ ಅವಕಾಶ ಪಡೆದುಕೊಂಡೆ. ಎರಡು ದಿನಗಳ ನಂತರ, ನಾನು ನನ್ನ ತಂದೆಗೆ ಕರೆ ಮಾಡಿದಾಗ, ಅವರು ಅಳತೊಡಗಿದರು. ಆದರೆ ನಾನು ಇದೆ ನನ್ನ ಸ್ಥಳ ಎಂದು ಧೈರ್ಯ ತುಂಬಿದೆ. ಮರುದಿನವೇ ನನ್ನ ತಂದೆ ತಾಯಿ ಮುಂಬೈಗೆ ಬಂದು ನಿನ್ನ ಕನಸಿಗೆ ನಾನು ಬೆಂಬಲವಾಗಿ ನಿಲ್ಲುತ್ತೇವೆ ಎಂದರು” ಎಂದು ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾನ್ಯಾ ತಿಳಿಸಿದ್ದಾರೆ.

“ನನ್ನ ತಂದೆ ಜೀವನ ಸಾಗಿಸಲು ಆಟೋ ಓಡಿಸಿದರು. ಆದರೂ ನನ್ನನ್ನು ಉತ್ತಮ ಶಾಲೆಗೆ ಕಳುಹಿಸಿದರು. ಜೊತೆಗೆ, ನಾನು ಅರೆಕಾಲಿಕ ಉದ್ಯೋಗಗಳನ್ನು ಮಾಡಿದ್ದೇನೆ” ಎನ್ನುತ್ತಾರೆ ಮಾನ್ಯಾ.

Image result for manya singh

ಮಾನ್ಯಾ ಹೇಳುವಂತೆ, ಆಕೆ ತನ್ನ ಪದವಿ ದಿನಗಳಲ್ಲಿ, ಹತ್ತಾರು ಸ್ಪರ್ಧೆಗಳಿಗೆ ಆಡಿಷನ್ ಮಾಡಿದ್ದಳು, ಆದರೆ ಅವರು “ಶಕಲ್ ಅಚಿ ನಹಿ ಹೈ” (ನಿಮ್ಮ ಮುಖ ಚೆನ್ನಾಗಿ ಕಾಣುತ್ತಿಲ್ಲ) ಅಥವಾ “ನಿಮಗೆ ಇಂಗ್ಲಿಷ್ ಕೂಡ ತಿಳಿದಿಲ್ಲ” ಎಂದು ವಾಪಸ್ ಕಳಿಸುತ್ತಿದ್ದರಂತೆ.

“ಪ್ರತಿ ಬಾರಿ ನಾನು ಸೋತಾಗ ಅಂದುಕೊಳ್ಳುತ್ತಿದ್ದು, ಇನ್ನೆರಡು ಹೆಜ್ಜೆ ಮುಂದಕ್ಕೆ, ಮತ್ತೆರಡು ಹೆಜ್ಜೆ ಮುಂದಕ್ಕೆ ಎಂಬ ಮಾತುಗಳನ್ನು. ಇದು ನನ್ನನ್ನು ಇಲ್ಲಿಗೆ ತಂದಿರಿಸಿದೆ” ಎಂದು ಹೇಳುತ್ತಾರೆ ಮಾನ್ಯಾ ಸಿಂಗ್.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

View this post on Instagram

 

A post shared by Manya Singh (@manyasingh993)

“ನನ್ನ ಕಾಲೇಜು ಶುಲ್ಕವನ್ನು ಪಾವತಿಸಲು ಅಪ್ಪ ನಮ್ಮ ಆಭರಣಗಳನ್ನು ಅಡಮಾನ ಇಟ್ಟಿದ್ದರು. ಸ್ಫರ್ಧೆಗಳಿಗಾಗಿ ಬಟ್ಟೆಗಳನ್ನು ಖರೀದಿಸಲು ನನಗೆ ಹಣದ ಅಗತ್ಯವಿದ್ದರಿಂದ ನಾನು ಪಿಜ್ಜಾ ಹಟ್‌ನಲ್ಲಿ ನೆಲವನ್ನು ಒರೆಸುವ ಕೆಲಸ ಮಾಡಿದ್ದೇನೆ. ಅಲ್ಲಿ ಜನ ಇಂಗ್ಲಿಷ್ ಮಾತಾಡುವುದನ್ನು, ಕಾಲೇಜಿನಲ್ಲಿ ಸ್ನೇಹಿತರು ಹೇಗೆ ಮಾತನಾಡುತ್ತಾರೆ ಎಂಬುದನ್ನು ಹೆಚ್ಚು ಗಮನಿಸುತ್ತಿದೆ”. ನನ್ನ ತಂದೆ ಆಟೋ ಚಾಲಕರು ಎಂದು ನನ್ನ ವಿಡಿಯೋಗಳಲ್ಲಿ ಹೇಳಿದಾಗ ಜನ ಪ್ರಚಾರಕ್ಕಾಗಿ ಎಂದುಕೊಂಡರು. ಆದರೆ ನನಗೆ ನನ್ನ ಮೂಲದ ಬಗ್ಗೆ, ನನ್ನ ತಂದೆಯ ಬಗ್ಗೆ ಹೆಮ್ಮೆಯಿದೆ ಎನ್ನುತ್ತಾರೆ ಈಕೆ.

Image result for manya singh

ರನ್ನರ್‌ ಅಪ್ ಆಗಿ ಸನ್ಮಾನ ಸಮಾರಂಭಕ್ಕೆ ಬರಲು ಈಕೆ ಬಳಸಿದ್ದು ತಮ್ಮ ಮನೆಗೆ ಬೆಂಬಲವಾಗಿ ನಿಂತಿದ್ದ ಅಪ್ಪನ ಆಟೋರಿಕ್ಷಾವನ್ನು.

ಬಡತನ ಎಂದು ಕೈಕಟ್ಟಿ ಕುಳಿತ್ತಿದ್ದರೆ ತನ್ನ ಕನಸು ನನಸಾಗುತ್ತಿರಲಿಲ್ಲ ಎನ್ನುತ್ತಾರೆ ಮಾನ್ಯ. ಇಷ್ಟು ದಿನ ತನಗೆ ಬೆಂಬಲವಾಗಿ ನಿಂತ ತಂದೆ ತಾಯಿಗೆ ಮನೆ ಖರೀದಿಸಿಕೊಡುವ ಮೂಲಕ ನಾನು ಅವರಿಗೆ ಸಹಾಯ ಮಾಡಲು ಆರಂಭಿಸುವೆ. ನನ್ನ ತಂದೆ ನನ್ನಲ್ಲಿ ವಿಶ್ವಾಸವಿರಿಸಿದ್ದರು ಹಾಗಾಗಿ ಇಂದು ಆಟೋ ಚಾಲಕನ ಮಗಳು ತಲೆ ಮೇಲೆ ಕಿರೀಟ ಧರಿಸಿದ್ದಾಳೆ. ಎಂದು ಹೆಮ್ಮೆಯಿಂದ ಹೇಳುತ್ತಾರೆ ಮಾನ್ಯ.


ಇದನ್ನೂ ಓದಿ: ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...