Homeಮುಖಪುಟಆಟೋ ಚಾಲಕನ ಮಗಳು ಮಿಸ್ ಇಂಡಿಯಾ ರನ್ನರ್ ಅಪ್ ಆದ ಕಥೆ

ಆಟೋ ಚಾಲಕನ ಮಗಳು ಮಿಸ್ ಇಂಡಿಯಾ ರನ್ನರ್ ಅಪ್ ಆದ ಕಥೆ

ರನ್ನರ್‌ ಅಪ್ ಆಗಿ ಸನ್ಮಾನ ಸಮಾರಂಭಕ್ಕೆ ಬರಲು ಈಕೆ ಬಳಸಿದ್ದು ತಮ್ಮ ಮನೆಗೆ ಬೆಂಬಲವಾಗಿ ನಿಂತಿದ್ದ ಅಪ್ಪನ ಆಟೋರಿಕ್ಷಾವನ್ನು.

- Advertisement -
- Advertisement -

ಬಡತನದ ಬೆಂಕಿಯಲ್ಲಿ ಬೆಂದು ಚಿನ್ನವಾಗಿ ಹೊರಹೊಮ್ಮಿದ ದಿಟ್ಟೆ ಈ ಬಾರಿಯ ಮಿಸ್ ಇಂಡಿಯಾ 2020 ರ ರನ್ನರ್ ಅಪ್ ಮಾನ್ಯಾ ಸಿಂಗ್. ಹೌದು, ಸಾಧಿಸುವ ಛಲವಿದ್ದರೇ, ಕಂಡ ಕನಸುಗಳನ್ನು ನನಸು ಮಾಡಿಕೊಳ್ಳುವ ಧೃಡ ಇಚ್ಛೆ ಇದ್ದಲ್ಲಿ ಅದು ಸಾಧ್ಯ ಎಂಬುದಕ್ಕೆ ಉದಾಹರಣೆಯಾಗಿ ನಿಂತಿದ್ದಾರೆ ಈಕೆ.

ಮಿಸ್ ಇಂಡಿಯಾ  2020 ರ ಕಿರೀಟ ಪಡೆದ 23 ವರ್ಷದ ತೆಲಂಗಾಣದ ಮಾನಸಾ ವಾರಣಾಸಿ ಅವರಿಗಿಂತ ಹೆಚ್ಚು ಸುದ್ದಿಯಾಗಿದ್ದು, ರನ್ನರ್‌ ಅಪ್ ಆದ 19 ವರ್ಷದ ಉತ್ತರ ಪ್ರದೇಶದ ಮಾನ್ಯಾ ಸಿಂಗ್.

ಖುಷಿ ನಗರದ ಆಟೋ ಡ್ರೈವರ್ ಓಂಪ್ರಕಾಶ್ ಸಿಂಗ್ ಮತ್ತು ಮನೋರಮಾ ಸಿಂಗ್ ಮಗಳಾಗಿದ್ದ ಮಾನ್ಯಾ ಸಿಂಗ್, ತೀವ್ರ ಬಡತನದಲ್ಲಿ ಬೆಳೆದವರು. ಆಟೋ ಓಡಿಸಿ ಬರುತ್ತಿದ್ದ ಹಣವೇ ಇವರ ಕುಟುಂಬದ ಆದಾಯವಾಗಿತ್ತು. ಇಂತಹ ಕುಟುಂಬದಲ್ಲಿ ಬೆಳೆದ ಮಾನ್ಯಾ ತನ್ನ ಕನಸುಗಳನ್ನು ಕಟ್ಟಿಕೊಂಡು ರೈಲು ಹತ್ತಿದ್ದು ಕನಸಿನ ನಗರ ಮುಂಬೈಗೆ.

ಇದನ್ನೂ ಓದಿ:  ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

“ನಾನು ನಿಲ್ದಾಣದಿಂದ ಹೊರನಡೆದಾಗ, ನಾನು ನೋಡಿದ ಮೊದಲ ಸ್ಥಳ ಪಿಜ್ಜಾ ಹಟ್. ನಾನು ಅಲ್ಲಿ ಅರೆಕಾಲಿಕ ಉದ್ಯೋಗ ಮತ್ತು ತಾತ್ಕಾಲಿಕ ಉಳಿದುಕೊಳ್ಳುವ ಅವಕಾಶ ಪಡೆದುಕೊಂಡೆ. ಎರಡು ದಿನಗಳ ನಂತರ, ನಾನು ನನ್ನ ತಂದೆಗೆ ಕರೆ ಮಾಡಿದಾಗ, ಅವರು ಅಳತೊಡಗಿದರು. ಆದರೆ ನಾನು ಇದೆ ನನ್ನ ಸ್ಥಳ ಎಂದು ಧೈರ್ಯ ತುಂಬಿದೆ. ಮರುದಿನವೇ ನನ್ನ ತಂದೆ ತಾಯಿ ಮುಂಬೈಗೆ ಬಂದು ನಿನ್ನ ಕನಸಿಗೆ ನಾನು ಬೆಂಬಲವಾಗಿ ನಿಲ್ಲುತ್ತೇವೆ ಎಂದರು” ಎಂದು ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾನ್ಯಾ ತಿಳಿಸಿದ್ದಾರೆ.

“ನನ್ನ ತಂದೆ ಜೀವನ ಸಾಗಿಸಲು ಆಟೋ ಓಡಿಸಿದರು. ಆದರೂ ನನ್ನನ್ನು ಉತ್ತಮ ಶಾಲೆಗೆ ಕಳುಹಿಸಿದರು. ಜೊತೆಗೆ, ನಾನು ಅರೆಕಾಲಿಕ ಉದ್ಯೋಗಗಳನ್ನು ಮಾಡಿದ್ದೇನೆ” ಎನ್ನುತ್ತಾರೆ ಮಾನ್ಯಾ.

Image result for manya singh

ಮಾನ್ಯಾ ಹೇಳುವಂತೆ, ಆಕೆ ತನ್ನ ಪದವಿ ದಿನಗಳಲ್ಲಿ, ಹತ್ತಾರು ಸ್ಪರ್ಧೆಗಳಿಗೆ ಆಡಿಷನ್ ಮಾಡಿದ್ದಳು, ಆದರೆ ಅವರು “ಶಕಲ್ ಅಚಿ ನಹಿ ಹೈ” (ನಿಮ್ಮ ಮುಖ ಚೆನ್ನಾಗಿ ಕಾಣುತ್ತಿಲ್ಲ) ಅಥವಾ “ನಿಮಗೆ ಇಂಗ್ಲಿಷ್ ಕೂಡ ತಿಳಿದಿಲ್ಲ” ಎಂದು ವಾಪಸ್ ಕಳಿಸುತ್ತಿದ್ದರಂತೆ.

“ಪ್ರತಿ ಬಾರಿ ನಾನು ಸೋತಾಗ ಅಂದುಕೊಳ್ಳುತ್ತಿದ್ದು, ಇನ್ನೆರಡು ಹೆಜ್ಜೆ ಮುಂದಕ್ಕೆ, ಮತ್ತೆರಡು ಹೆಜ್ಜೆ ಮುಂದಕ್ಕೆ ಎಂಬ ಮಾತುಗಳನ್ನು. ಇದು ನನ್ನನ್ನು ಇಲ್ಲಿಗೆ ತಂದಿರಿಸಿದೆ” ಎಂದು ಹೇಳುತ್ತಾರೆ ಮಾನ್ಯಾ ಸಿಂಗ್.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

View this post on Instagram

 

A post shared by Manya Singh (@manyasingh993)

“ನನ್ನ ಕಾಲೇಜು ಶುಲ್ಕವನ್ನು ಪಾವತಿಸಲು ಅಪ್ಪ ನಮ್ಮ ಆಭರಣಗಳನ್ನು ಅಡಮಾನ ಇಟ್ಟಿದ್ದರು. ಸ್ಫರ್ಧೆಗಳಿಗಾಗಿ ಬಟ್ಟೆಗಳನ್ನು ಖರೀದಿಸಲು ನನಗೆ ಹಣದ ಅಗತ್ಯವಿದ್ದರಿಂದ ನಾನು ಪಿಜ್ಜಾ ಹಟ್‌ನಲ್ಲಿ ನೆಲವನ್ನು ಒರೆಸುವ ಕೆಲಸ ಮಾಡಿದ್ದೇನೆ. ಅಲ್ಲಿ ಜನ ಇಂಗ್ಲಿಷ್ ಮಾತಾಡುವುದನ್ನು, ಕಾಲೇಜಿನಲ್ಲಿ ಸ್ನೇಹಿತರು ಹೇಗೆ ಮಾತನಾಡುತ್ತಾರೆ ಎಂಬುದನ್ನು ಹೆಚ್ಚು ಗಮನಿಸುತ್ತಿದೆ”. ನನ್ನ ತಂದೆ ಆಟೋ ಚಾಲಕರು ಎಂದು ನನ್ನ ವಿಡಿಯೋಗಳಲ್ಲಿ ಹೇಳಿದಾಗ ಜನ ಪ್ರಚಾರಕ್ಕಾಗಿ ಎಂದುಕೊಂಡರು. ಆದರೆ ನನಗೆ ನನ್ನ ಮೂಲದ ಬಗ್ಗೆ, ನನ್ನ ತಂದೆಯ ಬಗ್ಗೆ ಹೆಮ್ಮೆಯಿದೆ ಎನ್ನುತ್ತಾರೆ ಈಕೆ.

Image result for manya singh

ರನ್ನರ್‌ ಅಪ್ ಆಗಿ ಸನ್ಮಾನ ಸಮಾರಂಭಕ್ಕೆ ಬರಲು ಈಕೆ ಬಳಸಿದ್ದು ತಮ್ಮ ಮನೆಗೆ ಬೆಂಬಲವಾಗಿ ನಿಂತಿದ್ದ ಅಪ್ಪನ ಆಟೋರಿಕ್ಷಾವನ್ನು.

ಬಡತನ ಎಂದು ಕೈಕಟ್ಟಿ ಕುಳಿತ್ತಿದ್ದರೆ ತನ್ನ ಕನಸು ನನಸಾಗುತ್ತಿರಲಿಲ್ಲ ಎನ್ನುತ್ತಾರೆ ಮಾನ್ಯ. ಇಷ್ಟು ದಿನ ತನಗೆ ಬೆಂಬಲವಾಗಿ ನಿಂತ ತಂದೆ ತಾಯಿಗೆ ಮನೆ ಖರೀದಿಸಿಕೊಡುವ ಮೂಲಕ ನಾನು ಅವರಿಗೆ ಸಹಾಯ ಮಾಡಲು ಆರಂಭಿಸುವೆ. ನನ್ನ ತಂದೆ ನನ್ನಲ್ಲಿ ವಿಶ್ವಾಸವಿರಿಸಿದ್ದರು ಹಾಗಾಗಿ ಇಂದು ಆಟೋ ಚಾಲಕನ ಮಗಳು ತಲೆ ಮೇಲೆ ಕಿರೀಟ ಧರಿಸಿದ್ದಾಳೆ. ಎಂದು ಹೆಮ್ಮೆಯಿಂದ ಹೇಳುತ್ತಾರೆ ಮಾನ್ಯ.


ಇದನ್ನೂ ಓದಿ: ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...