Homeಮುಖಪುಟಆಟೋ ಚಾಲಕನ ಮಗಳು ಮಿಸ್ ಇಂಡಿಯಾ ರನ್ನರ್ ಅಪ್ ಆದ ಕಥೆ

ಆಟೋ ಚಾಲಕನ ಮಗಳು ಮಿಸ್ ಇಂಡಿಯಾ ರನ್ನರ್ ಅಪ್ ಆದ ಕಥೆ

ರನ್ನರ್‌ ಅಪ್ ಆಗಿ ಸನ್ಮಾನ ಸಮಾರಂಭಕ್ಕೆ ಬರಲು ಈಕೆ ಬಳಸಿದ್ದು ತಮ್ಮ ಮನೆಗೆ ಬೆಂಬಲವಾಗಿ ನಿಂತಿದ್ದ ಅಪ್ಪನ ಆಟೋರಿಕ್ಷಾವನ್ನು.

- Advertisement -
- Advertisement -

ಬಡತನದ ಬೆಂಕಿಯಲ್ಲಿ ಬೆಂದು ಚಿನ್ನವಾಗಿ ಹೊರಹೊಮ್ಮಿದ ದಿಟ್ಟೆ ಈ ಬಾರಿಯ ಮಿಸ್ ಇಂಡಿಯಾ 2020 ರ ರನ್ನರ್ ಅಪ್ ಮಾನ್ಯಾ ಸಿಂಗ್. ಹೌದು, ಸಾಧಿಸುವ ಛಲವಿದ್ದರೇ, ಕಂಡ ಕನಸುಗಳನ್ನು ನನಸು ಮಾಡಿಕೊಳ್ಳುವ ಧೃಡ ಇಚ್ಛೆ ಇದ್ದಲ್ಲಿ ಅದು ಸಾಧ್ಯ ಎಂಬುದಕ್ಕೆ ಉದಾಹರಣೆಯಾಗಿ ನಿಂತಿದ್ದಾರೆ ಈಕೆ.

ಮಿಸ್ ಇಂಡಿಯಾ  2020 ರ ಕಿರೀಟ ಪಡೆದ 23 ವರ್ಷದ ತೆಲಂಗಾಣದ ಮಾನಸಾ ವಾರಣಾಸಿ ಅವರಿಗಿಂತ ಹೆಚ್ಚು ಸುದ್ದಿಯಾಗಿದ್ದು, ರನ್ನರ್‌ ಅಪ್ ಆದ 19 ವರ್ಷದ ಉತ್ತರ ಪ್ರದೇಶದ ಮಾನ್ಯಾ ಸಿಂಗ್.

ಖುಷಿ ನಗರದ ಆಟೋ ಡ್ರೈವರ್ ಓಂಪ್ರಕಾಶ್ ಸಿಂಗ್ ಮತ್ತು ಮನೋರಮಾ ಸಿಂಗ್ ಮಗಳಾಗಿದ್ದ ಮಾನ್ಯಾ ಸಿಂಗ್, ತೀವ್ರ ಬಡತನದಲ್ಲಿ ಬೆಳೆದವರು. ಆಟೋ ಓಡಿಸಿ ಬರುತ್ತಿದ್ದ ಹಣವೇ ಇವರ ಕುಟುಂಬದ ಆದಾಯವಾಗಿತ್ತು. ಇಂತಹ ಕುಟುಂಬದಲ್ಲಿ ಬೆಳೆದ ಮಾನ್ಯಾ ತನ್ನ ಕನಸುಗಳನ್ನು ಕಟ್ಟಿಕೊಂಡು ರೈಲು ಹತ್ತಿದ್ದು ಕನಸಿನ ನಗರ ಮುಂಬೈಗೆ.

ಇದನ್ನೂ ಓದಿ:  ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

“ನಾನು ನಿಲ್ದಾಣದಿಂದ ಹೊರನಡೆದಾಗ, ನಾನು ನೋಡಿದ ಮೊದಲ ಸ್ಥಳ ಪಿಜ್ಜಾ ಹಟ್. ನಾನು ಅಲ್ಲಿ ಅರೆಕಾಲಿಕ ಉದ್ಯೋಗ ಮತ್ತು ತಾತ್ಕಾಲಿಕ ಉಳಿದುಕೊಳ್ಳುವ ಅವಕಾಶ ಪಡೆದುಕೊಂಡೆ. ಎರಡು ದಿನಗಳ ನಂತರ, ನಾನು ನನ್ನ ತಂದೆಗೆ ಕರೆ ಮಾಡಿದಾಗ, ಅವರು ಅಳತೊಡಗಿದರು. ಆದರೆ ನಾನು ಇದೆ ನನ್ನ ಸ್ಥಳ ಎಂದು ಧೈರ್ಯ ತುಂಬಿದೆ. ಮರುದಿನವೇ ನನ್ನ ತಂದೆ ತಾಯಿ ಮುಂಬೈಗೆ ಬಂದು ನಿನ್ನ ಕನಸಿಗೆ ನಾನು ಬೆಂಬಲವಾಗಿ ನಿಲ್ಲುತ್ತೇವೆ ಎಂದರು” ಎಂದು ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾನ್ಯಾ ತಿಳಿಸಿದ್ದಾರೆ.

“ನನ್ನ ತಂದೆ ಜೀವನ ಸಾಗಿಸಲು ಆಟೋ ಓಡಿಸಿದರು. ಆದರೂ ನನ್ನನ್ನು ಉತ್ತಮ ಶಾಲೆಗೆ ಕಳುಹಿಸಿದರು. ಜೊತೆಗೆ, ನಾನು ಅರೆಕಾಲಿಕ ಉದ್ಯೋಗಗಳನ್ನು ಮಾಡಿದ್ದೇನೆ” ಎನ್ನುತ್ತಾರೆ ಮಾನ್ಯಾ.

Image result for manya singh

ಮಾನ್ಯಾ ಹೇಳುವಂತೆ, ಆಕೆ ತನ್ನ ಪದವಿ ದಿನಗಳಲ್ಲಿ, ಹತ್ತಾರು ಸ್ಪರ್ಧೆಗಳಿಗೆ ಆಡಿಷನ್ ಮಾಡಿದ್ದಳು, ಆದರೆ ಅವರು “ಶಕಲ್ ಅಚಿ ನಹಿ ಹೈ” (ನಿಮ್ಮ ಮುಖ ಚೆನ್ನಾಗಿ ಕಾಣುತ್ತಿಲ್ಲ) ಅಥವಾ “ನಿಮಗೆ ಇಂಗ್ಲಿಷ್ ಕೂಡ ತಿಳಿದಿಲ್ಲ” ಎಂದು ವಾಪಸ್ ಕಳಿಸುತ್ತಿದ್ದರಂತೆ.

“ಪ್ರತಿ ಬಾರಿ ನಾನು ಸೋತಾಗ ಅಂದುಕೊಳ್ಳುತ್ತಿದ್ದು, ಇನ್ನೆರಡು ಹೆಜ್ಜೆ ಮುಂದಕ್ಕೆ, ಮತ್ತೆರಡು ಹೆಜ್ಜೆ ಮುಂದಕ್ಕೆ ಎಂಬ ಮಾತುಗಳನ್ನು. ಇದು ನನ್ನನ್ನು ಇಲ್ಲಿಗೆ ತಂದಿರಿಸಿದೆ” ಎಂದು ಹೇಳುತ್ತಾರೆ ಮಾನ್ಯಾ ಸಿಂಗ್.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

View this post on Instagram

 

A post shared by Manya Singh (@manyasingh993)

“ನನ್ನ ಕಾಲೇಜು ಶುಲ್ಕವನ್ನು ಪಾವತಿಸಲು ಅಪ್ಪ ನಮ್ಮ ಆಭರಣಗಳನ್ನು ಅಡಮಾನ ಇಟ್ಟಿದ್ದರು. ಸ್ಫರ್ಧೆಗಳಿಗಾಗಿ ಬಟ್ಟೆಗಳನ್ನು ಖರೀದಿಸಲು ನನಗೆ ಹಣದ ಅಗತ್ಯವಿದ್ದರಿಂದ ನಾನು ಪಿಜ್ಜಾ ಹಟ್‌ನಲ್ಲಿ ನೆಲವನ್ನು ಒರೆಸುವ ಕೆಲಸ ಮಾಡಿದ್ದೇನೆ. ಅಲ್ಲಿ ಜನ ಇಂಗ್ಲಿಷ್ ಮಾತಾಡುವುದನ್ನು, ಕಾಲೇಜಿನಲ್ಲಿ ಸ್ನೇಹಿತರು ಹೇಗೆ ಮಾತನಾಡುತ್ತಾರೆ ಎಂಬುದನ್ನು ಹೆಚ್ಚು ಗಮನಿಸುತ್ತಿದೆ”. ನನ್ನ ತಂದೆ ಆಟೋ ಚಾಲಕರು ಎಂದು ನನ್ನ ವಿಡಿಯೋಗಳಲ್ಲಿ ಹೇಳಿದಾಗ ಜನ ಪ್ರಚಾರಕ್ಕಾಗಿ ಎಂದುಕೊಂಡರು. ಆದರೆ ನನಗೆ ನನ್ನ ಮೂಲದ ಬಗ್ಗೆ, ನನ್ನ ತಂದೆಯ ಬಗ್ಗೆ ಹೆಮ್ಮೆಯಿದೆ ಎನ್ನುತ್ತಾರೆ ಈಕೆ.

Image result for manya singh

ರನ್ನರ್‌ ಅಪ್ ಆಗಿ ಸನ್ಮಾನ ಸಮಾರಂಭಕ್ಕೆ ಬರಲು ಈಕೆ ಬಳಸಿದ್ದು ತಮ್ಮ ಮನೆಗೆ ಬೆಂಬಲವಾಗಿ ನಿಂತಿದ್ದ ಅಪ್ಪನ ಆಟೋರಿಕ್ಷಾವನ್ನು.

ಬಡತನ ಎಂದು ಕೈಕಟ್ಟಿ ಕುಳಿತ್ತಿದ್ದರೆ ತನ್ನ ಕನಸು ನನಸಾಗುತ್ತಿರಲಿಲ್ಲ ಎನ್ನುತ್ತಾರೆ ಮಾನ್ಯ. ಇಷ್ಟು ದಿನ ತನಗೆ ಬೆಂಬಲವಾಗಿ ನಿಂತ ತಂದೆ ತಾಯಿಗೆ ಮನೆ ಖರೀದಿಸಿಕೊಡುವ ಮೂಲಕ ನಾನು ಅವರಿಗೆ ಸಹಾಯ ಮಾಡಲು ಆರಂಭಿಸುವೆ. ನನ್ನ ತಂದೆ ನನ್ನಲ್ಲಿ ವಿಶ್ವಾಸವಿರಿಸಿದ್ದರು ಹಾಗಾಗಿ ಇಂದು ಆಟೋ ಚಾಲಕನ ಮಗಳು ತಲೆ ಮೇಲೆ ಕಿರೀಟ ಧರಿಸಿದ್ದಾಳೆ. ಎಂದು ಹೆಮ್ಮೆಯಿಂದ ಹೇಳುತ್ತಾರೆ ಮಾನ್ಯ.


ಇದನ್ನೂ ಓದಿ: ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...