Homeಕರ್ನಾಟಕಉರಿಗೌಡ ನಂಜೆಗೌಡ ಕಥೆ; ಬಿಜೆಪಿಯು ಒಕ್ಕಲಿಗರಿಗೆ ದೇಶದ್ರೋಹಿಗಳೆಂಬ ಹಣೆಪಟ್ಟಿ ಕಟ್ಟುತ್ತಿದೆ: ಕಾಂಗ್ರೆಸ್

ಉರಿಗೌಡ ನಂಜೆಗೌಡ ಕಥೆ; ಬಿಜೆಪಿಯು ಒಕ್ಕಲಿಗರಿಗೆ ದೇಶದ್ರೋಹಿಗಳೆಂಬ ಹಣೆಪಟ್ಟಿ ಕಟ್ಟುತ್ತಿದೆ: ಕಾಂಗ್ರೆಸ್

- Advertisement -
- Advertisement -

ಉರಿಗೌಡ ನಂಜೆಗೌಡ ಎನ್ನುವವರು ಟಿಪ್ಪು ಸುಲ್ತಾನ್‌ಅನ್ನು ಕೊಂದರು ಎನ್ನುವ ಹೊಸ ಕಥೆಯನ್ನು ಬಿಜೆಪಿ ಪದೇ ಪದೇ ಹೇಳುತ್ತಿದೆ. ಈ ವಿಚಾರದಲ್ಲಿ ಬಿಜೆಪಿಯವರು ಗೋಬೇಲ್ಸ್ ಥಿಯರಿ ಅಳವಡಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್ ಘಟಕ, ”ಒಂದು ಸುಳ್ಳನ್ನು ನೂರು ಬಾರಿ ಹೇಳಿದರೆ ಅದೇ ಸತ್ಯವಾಗುತ್ತದೆ ಎಂಬ ಗೋಬೇಲ್ಸ್ ಥಿಯರಿಯನ್ನು ಅಳವಡಿಸಿಕೊಂಡಿರುವ ಬಿಜೆಪಿ, ಸುಳ್ಳು ಪಾತ್ರಗಳನ್ನು ಸೃಷ್ಟಿಸಿ ಒಕ್ಕಲಿಗ ಸಮುದಾಯಕ್ಕೆ ದೇಶದ ಸ್ವತಂತ್ರದ ವಿರುದ್ದ ಕೆಲಸ ಮಾಡಿದವರು ಎಂಬ ಹಣೆಪಟ್ಟಿ ಕಟ್ಟುತ್ತಿದೆ” ಎಂದು ವ್ಯಾಖ್ಯಾನಿಸಿದೆ.

ಕಾಂಗ್ರೆಸ್ ಟ್ವೀಟ್‌ನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಆ ವಿಡಿಯೋದಲ್ಲಿ ಸಿಟಿ ರವಿಯವರು ಮಂಡ್ಯದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದಾರೆ. ”ಉರಿಗೌಡ, ನಂಜೇಗೌಡ ಒಕ್ಕಲಿಗರು ಎನ್ನುವುದು ಅವರಿಗೆ ಹೊಟ್ಟೆಉರಿನಾ? ಒಕ್ಕಲಿಗರಲ್ಲಿ ಶೌರ್ಯ ಪ್ರದರ್ಶನ ಮಾಡುವವರು ಇರಬಾರದಾ? ಟಿಪ್ಪು ಹುಲಿಯನ್ನು ಕೊಂದ ಎನ್ನುವುದು ಗಿಣಿಕಥೆ, ಹುಲಿ ಕೊಂದಿದ್ದನ್ನು ನೀವು ನೋಡಿದ್ದೀರಾ? ಟಿಪ್ಪುವನ್ನ ಉರಿಗೌಡ ನಂಜೇಗೌಡ ಕೊಂದಿರುವುದಕ್ಕೆ ಐತಿಹಾಸಿಕ ದಾಖಲೆಗಳೇ ಇವೆ. ಇವು ಹೊರಗಡೆ ಬಂದರೆ ಒಕ್ಕಲಿಗರಲ್ಲಿ ಸ್ವಾಭಿಮಾನ, ಶೈರ್ಯ ಉಕ್ಕುತ್ತದೆ ಹಾಗಾಗಿ ಅದನ್ನು ಅದಮಿಡುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ” ಎಂದು ಸಿಟಿ ರವಿ ಹೇಳಿದ್ದಾರೆ.

ಇದನ್ನೂ ಓದಿ: ‘ಉರಿಗೌಡ, ನಂಜೇಗೌಡ’ರು ಜೀವಿಸಿದ್ದ ಯಾವುದೇ ಕುರುಹು ಇಲ್ಲ: ಆದರೂ ಸುಳ್ಳು ಹೇಳುತ್ತಿರುವ ಬಿಜೆಪಿ

”ಟಿಪ್ಪುವನ್ನು ಕೊಂದವರು ಉರಿಗೌಡ ಮತ್ತು ದೊಡ್ಡ ನಂಜೇಗೌಡ” ಎಂಬ ಸುಳ್ಳು ಕಥೆಯನ್ನು ಹುಟ್ಟಿದ್ದು ವಾಟ್ಸಾಪ್‌ ಯುನಿವರ್ಸಿಟಿಯಲ್ಲಿ, ಬಿಜೆಪಿ ಹಾಗೂ ಅದರ ಬೆಂಬಲಿಗರು ಅದನ್ನೇ ಪ್ರತಿಪಾದಿಸತೊಡಗಿದ್ದಾರೆ. ಈ ಕಥೆಯನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮುನ್ನೆಲೆಗೆ ತಂದರು. ಆನಂತರ ಕೆಲವು ಬಿಜೆಪಿ ನಾಯಕರು ಹಾಗೂ ಅವರ ಬೆಂಬಲಿಗರು ಅದೇ ನಿಜವೇನೋ ಎನ್ನುವಂತೆ ಪದೇ ಪದೇ ಹೇಳಲು ಶುರು ಮಾಡಿದ್ದಾರೆ.

ಈ ಸುಳ್ಳು ಕಥೆಯನ್ನು ಬಿಜೆಪಿಯವರು ಪದೇ ಪದೇ ಹೇಳುವ ಮೂಲಕ ಎಲ್ಲರಿಗೂ ಅದೇ ಸತ್ಯ ಇರಬಹುದು ಎನ್ನುವಂತೆ ಮಾಡುತ್ತಿದ್ದಾರೆ. ಇದನ್ನು ಗೋಬೇಲ್ಸ್ ಥಿಯರಿ ಎಂದು ಹೇಳುತ್ತಾರೆ. ಆದರೆ ಈ ಸುಳ್ಳಿನ ಕಥೆಯ ಮೂಲಕ ಬಿಜೆಪಿಯವರು ಒಕ್ಕಲಿಗರನ್ನು ಮುಸ್ಲಿಂ ವಿರುದ್ಧ ನಿಲ್ಲಿಸುವುದು ಮಾತ್ರವಲ್ಲದೇ, ಒಕ್ಕಲಿಗರು ಬ್ರಿಟಿಷರ ಪರ ಇದ್ದರೆಂದು ಸುಳ್ಳನ್ನು ಪ್ರತಿಪಾದಿಸುತ್ತ, ದೇಶದ ಸ್ವತಂತ್ರದ ವಿರುದ್ದ ಕೆಲಸ ಮಾಡಿದವರು ಎಂಬ ಹಣೆಪಟ್ಟಿ ಕಟ್ಟುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ.

ಬಿಜೆಪಿ ನಾಯಕರು ಚುನಾವಣಾ ಉದ್ದೇಶದಿಂದ ಇಂತಹದ್ದೊಂದು ಸುಳ್ಳು ಕಥೆಯ ಮೂಲಕ ಒಕ್ಕಲಿಗರ ಮತ ಸೆಳೆಯಲು ಮುಂದಾಗಿರಬಹುದು. ಆದರೆ, ಒಕ್ಕಲಿಗರು ಈ ಸುಳ್ಳು ಕಥೆ ಬಗ್ಗೆ ಬಹಳ ಗಂಭಿರವಾಗಿ ಯೋಚಿಸಬೇಕಾಗಿದೆ. ಏಕೆಂದರೆ ಈ ಸುಳ್ಳು ಕಥೆಯಲ್ಲಿ ಟಿಪ್ಪುವನ್ನು ಒಕ್ಕಲಿಗರು ಕೊಂದರು ಎನ್ನುವುದಾದರೆ, ಒಕ್ಕಲಿಗರು ಈ ದೇಶದ ವಿರುದ್ಧ ಕೆಲಸ ಮಾಡಿದವರು, ಬ್ರಿಟಿಷರ ಪರವಾಗಿ ಕೆಲಸ ಮಾಡಿದವರು ಎಂದಾಗುತ್ತದೆ. ಬಿಜೆಪಿಯವರು ಅವಸರದಲ್ಲಿ ಕಟ್ಟಿದ ಸುಳ್ಳಿನ ಕಥೆಯಲ್ಲಿ ಒಕ್ಕಲಿಗರನ್ನು ಹೀರೋ ಮಾಡಲು ಹೋಗಿ ದೇಶದ್ರೋಹಿಗಳು ಎನ್ನುವಂತೆ ತೋರಿಸಲಾಗುತ್ತಿದೆ. ಈ ಸುಳ್ಳು ಕಥೆಯ ಬಗ್ಗೆ ಒಕ್ಕಲಿಗ ಸಮುದಾಯದ ನಾಯಕರು ಮಾತನಾಡುವುದು ಅತ್ಯವಶ್ಯಕವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...