Homeಕರ್ನಾಟಕಉರಿಗೌಡ ನಂಜೆಗೌಡ ಕಥೆ; ಬಿಜೆಪಿಯು ಒಕ್ಕಲಿಗರಿಗೆ ದೇಶದ್ರೋಹಿಗಳೆಂಬ ಹಣೆಪಟ್ಟಿ ಕಟ್ಟುತ್ತಿದೆ: ಕಾಂಗ್ರೆಸ್

ಉರಿಗೌಡ ನಂಜೆಗೌಡ ಕಥೆ; ಬಿಜೆಪಿಯು ಒಕ್ಕಲಿಗರಿಗೆ ದೇಶದ್ರೋಹಿಗಳೆಂಬ ಹಣೆಪಟ್ಟಿ ಕಟ್ಟುತ್ತಿದೆ: ಕಾಂಗ್ರೆಸ್

- Advertisement -
- Advertisement -

ಉರಿಗೌಡ ನಂಜೆಗೌಡ ಎನ್ನುವವರು ಟಿಪ್ಪು ಸುಲ್ತಾನ್‌ಅನ್ನು ಕೊಂದರು ಎನ್ನುವ ಹೊಸ ಕಥೆಯನ್ನು ಬಿಜೆಪಿ ಪದೇ ಪದೇ ಹೇಳುತ್ತಿದೆ. ಈ ವಿಚಾರದಲ್ಲಿ ಬಿಜೆಪಿಯವರು ಗೋಬೇಲ್ಸ್ ಥಿಯರಿ ಅಳವಡಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್ ಘಟಕ, ”ಒಂದು ಸುಳ್ಳನ್ನು ನೂರು ಬಾರಿ ಹೇಳಿದರೆ ಅದೇ ಸತ್ಯವಾಗುತ್ತದೆ ಎಂಬ ಗೋಬೇಲ್ಸ್ ಥಿಯರಿಯನ್ನು ಅಳವಡಿಸಿಕೊಂಡಿರುವ ಬಿಜೆಪಿ, ಸುಳ್ಳು ಪಾತ್ರಗಳನ್ನು ಸೃಷ್ಟಿಸಿ ಒಕ್ಕಲಿಗ ಸಮುದಾಯಕ್ಕೆ ದೇಶದ ಸ್ವತಂತ್ರದ ವಿರುದ್ದ ಕೆಲಸ ಮಾಡಿದವರು ಎಂಬ ಹಣೆಪಟ್ಟಿ ಕಟ್ಟುತ್ತಿದೆ” ಎಂದು ವ್ಯಾಖ್ಯಾನಿಸಿದೆ.

ಕಾಂಗ್ರೆಸ್ ಟ್ವೀಟ್‌ನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಆ ವಿಡಿಯೋದಲ್ಲಿ ಸಿಟಿ ರವಿಯವರು ಮಂಡ್ಯದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದಾರೆ. ”ಉರಿಗೌಡ, ನಂಜೇಗೌಡ ಒಕ್ಕಲಿಗರು ಎನ್ನುವುದು ಅವರಿಗೆ ಹೊಟ್ಟೆಉರಿನಾ? ಒಕ್ಕಲಿಗರಲ್ಲಿ ಶೌರ್ಯ ಪ್ರದರ್ಶನ ಮಾಡುವವರು ಇರಬಾರದಾ? ಟಿಪ್ಪು ಹುಲಿಯನ್ನು ಕೊಂದ ಎನ್ನುವುದು ಗಿಣಿಕಥೆ, ಹುಲಿ ಕೊಂದಿದ್ದನ್ನು ನೀವು ನೋಡಿದ್ದೀರಾ? ಟಿಪ್ಪುವನ್ನ ಉರಿಗೌಡ ನಂಜೇಗೌಡ ಕೊಂದಿರುವುದಕ್ಕೆ ಐತಿಹಾಸಿಕ ದಾಖಲೆಗಳೇ ಇವೆ. ಇವು ಹೊರಗಡೆ ಬಂದರೆ ಒಕ್ಕಲಿಗರಲ್ಲಿ ಸ್ವಾಭಿಮಾನ, ಶೈರ್ಯ ಉಕ್ಕುತ್ತದೆ ಹಾಗಾಗಿ ಅದನ್ನು ಅದಮಿಡುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ” ಎಂದು ಸಿಟಿ ರವಿ ಹೇಳಿದ್ದಾರೆ.

ಇದನ್ನೂ ಓದಿ: ‘ಉರಿಗೌಡ, ನಂಜೇಗೌಡ’ರು ಜೀವಿಸಿದ್ದ ಯಾವುದೇ ಕುರುಹು ಇಲ್ಲ: ಆದರೂ ಸುಳ್ಳು ಹೇಳುತ್ತಿರುವ ಬಿಜೆಪಿ

”ಟಿಪ್ಪುವನ್ನು ಕೊಂದವರು ಉರಿಗೌಡ ಮತ್ತು ದೊಡ್ಡ ನಂಜೇಗೌಡ” ಎಂಬ ಸುಳ್ಳು ಕಥೆಯನ್ನು ಹುಟ್ಟಿದ್ದು ವಾಟ್ಸಾಪ್‌ ಯುನಿವರ್ಸಿಟಿಯಲ್ಲಿ, ಬಿಜೆಪಿ ಹಾಗೂ ಅದರ ಬೆಂಬಲಿಗರು ಅದನ್ನೇ ಪ್ರತಿಪಾದಿಸತೊಡಗಿದ್ದಾರೆ. ಈ ಕಥೆಯನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮುನ್ನೆಲೆಗೆ ತಂದರು. ಆನಂತರ ಕೆಲವು ಬಿಜೆಪಿ ನಾಯಕರು ಹಾಗೂ ಅವರ ಬೆಂಬಲಿಗರು ಅದೇ ನಿಜವೇನೋ ಎನ್ನುವಂತೆ ಪದೇ ಪದೇ ಹೇಳಲು ಶುರು ಮಾಡಿದ್ದಾರೆ.

ಈ ಸುಳ್ಳು ಕಥೆಯನ್ನು ಬಿಜೆಪಿಯವರು ಪದೇ ಪದೇ ಹೇಳುವ ಮೂಲಕ ಎಲ್ಲರಿಗೂ ಅದೇ ಸತ್ಯ ಇರಬಹುದು ಎನ್ನುವಂತೆ ಮಾಡುತ್ತಿದ್ದಾರೆ. ಇದನ್ನು ಗೋಬೇಲ್ಸ್ ಥಿಯರಿ ಎಂದು ಹೇಳುತ್ತಾರೆ. ಆದರೆ ಈ ಸುಳ್ಳಿನ ಕಥೆಯ ಮೂಲಕ ಬಿಜೆಪಿಯವರು ಒಕ್ಕಲಿಗರನ್ನು ಮುಸ್ಲಿಂ ವಿರುದ್ಧ ನಿಲ್ಲಿಸುವುದು ಮಾತ್ರವಲ್ಲದೇ, ಒಕ್ಕಲಿಗರು ಬ್ರಿಟಿಷರ ಪರ ಇದ್ದರೆಂದು ಸುಳ್ಳನ್ನು ಪ್ರತಿಪಾದಿಸುತ್ತ, ದೇಶದ ಸ್ವತಂತ್ರದ ವಿರುದ್ದ ಕೆಲಸ ಮಾಡಿದವರು ಎಂಬ ಹಣೆಪಟ್ಟಿ ಕಟ್ಟುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ.

ಬಿಜೆಪಿ ನಾಯಕರು ಚುನಾವಣಾ ಉದ್ದೇಶದಿಂದ ಇಂತಹದ್ದೊಂದು ಸುಳ್ಳು ಕಥೆಯ ಮೂಲಕ ಒಕ್ಕಲಿಗರ ಮತ ಸೆಳೆಯಲು ಮುಂದಾಗಿರಬಹುದು. ಆದರೆ, ಒಕ್ಕಲಿಗರು ಈ ಸುಳ್ಳು ಕಥೆ ಬಗ್ಗೆ ಬಹಳ ಗಂಭಿರವಾಗಿ ಯೋಚಿಸಬೇಕಾಗಿದೆ. ಏಕೆಂದರೆ ಈ ಸುಳ್ಳು ಕಥೆಯಲ್ಲಿ ಟಿಪ್ಪುವನ್ನು ಒಕ್ಕಲಿಗರು ಕೊಂದರು ಎನ್ನುವುದಾದರೆ, ಒಕ್ಕಲಿಗರು ಈ ದೇಶದ ವಿರುದ್ಧ ಕೆಲಸ ಮಾಡಿದವರು, ಬ್ರಿಟಿಷರ ಪರವಾಗಿ ಕೆಲಸ ಮಾಡಿದವರು ಎಂದಾಗುತ್ತದೆ. ಬಿಜೆಪಿಯವರು ಅವಸರದಲ್ಲಿ ಕಟ್ಟಿದ ಸುಳ್ಳಿನ ಕಥೆಯಲ್ಲಿ ಒಕ್ಕಲಿಗರನ್ನು ಹೀರೋ ಮಾಡಲು ಹೋಗಿ ದೇಶದ್ರೋಹಿಗಳು ಎನ್ನುವಂತೆ ತೋರಿಸಲಾಗುತ್ತಿದೆ. ಈ ಸುಳ್ಳು ಕಥೆಯ ಬಗ್ಗೆ ಒಕ್ಕಲಿಗ ಸಮುದಾಯದ ನಾಯಕರು ಮಾತನಾಡುವುದು ಅತ್ಯವಶ್ಯಕವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...