Homeಕರ್ನಾಟಕಉರಿಗೌಡ ನಂಜೆಗೌಡ ಕಥೆ; ಬಿಜೆಪಿಯು ಒಕ್ಕಲಿಗರಿಗೆ ದೇಶದ್ರೋಹಿಗಳೆಂಬ ಹಣೆಪಟ್ಟಿ ಕಟ್ಟುತ್ತಿದೆ: ಕಾಂಗ್ರೆಸ್

ಉರಿಗೌಡ ನಂಜೆಗೌಡ ಕಥೆ; ಬಿಜೆಪಿಯು ಒಕ್ಕಲಿಗರಿಗೆ ದೇಶದ್ರೋಹಿಗಳೆಂಬ ಹಣೆಪಟ್ಟಿ ಕಟ್ಟುತ್ತಿದೆ: ಕಾಂಗ್ರೆಸ್

- Advertisement -
- Advertisement -

ಉರಿಗೌಡ ನಂಜೆಗೌಡ ಎನ್ನುವವರು ಟಿಪ್ಪು ಸುಲ್ತಾನ್‌ಅನ್ನು ಕೊಂದರು ಎನ್ನುವ ಹೊಸ ಕಥೆಯನ್ನು ಬಿಜೆಪಿ ಪದೇ ಪದೇ ಹೇಳುತ್ತಿದೆ. ಈ ವಿಚಾರದಲ್ಲಿ ಬಿಜೆಪಿಯವರು ಗೋಬೇಲ್ಸ್ ಥಿಯರಿ ಅಳವಡಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್ ಘಟಕ, ”ಒಂದು ಸುಳ್ಳನ್ನು ನೂರು ಬಾರಿ ಹೇಳಿದರೆ ಅದೇ ಸತ್ಯವಾಗುತ್ತದೆ ಎಂಬ ಗೋಬೇಲ್ಸ್ ಥಿಯರಿಯನ್ನು ಅಳವಡಿಸಿಕೊಂಡಿರುವ ಬಿಜೆಪಿ, ಸುಳ್ಳು ಪಾತ್ರಗಳನ್ನು ಸೃಷ್ಟಿಸಿ ಒಕ್ಕಲಿಗ ಸಮುದಾಯಕ್ಕೆ ದೇಶದ ಸ್ವತಂತ್ರದ ವಿರುದ್ದ ಕೆಲಸ ಮಾಡಿದವರು ಎಂಬ ಹಣೆಪಟ್ಟಿ ಕಟ್ಟುತ್ತಿದೆ” ಎಂದು ವ್ಯಾಖ್ಯಾನಿಸಿದೆ.

ಕಾಂಗ್ರೆಸ್ ಟ್ವೀಟ್‌ನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಆ ವಿಡಿಯೋದಲ್ಲಿ ಸಿಟಿ ರವಿಯವರು ಮಂಡ್ಯದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದಾರೆ. ”ಉರಿಗೌಡ, ನಂಜೇಗೌಡ ಒಕ್ಕಲಿಗರು ಎನ್ನುವುದು ಅವರಿಗೆ ಹೊಟ್ಟೆಉರಿನಾ? ಒಕ್ಕಲಿಗರಲ್ಲಿ ಶೌರ್ಯ ಪ್ರದರ್ಶನ ಮಾಡುವವರು ಇರಬಾರದಾ? ಟಿಪ್ಪು ಹುಲಿಯನ್ನು ಕೊಂದ ಎನ್ನುವುದು ಗಿಣಿಕಥೆ, ಹುಲಿ ಕೊಂದಿದ್ದನ್ನು ನೀವು ನೋಡಿದ್ದೀರಾ? ಟಿಪ್ಪುವನ್ನ ಉರಿಗೌಡ ನಂಜೇಗೌಡ ಕೊಂದಿರುವುದಕ್ಕೆ ಐತಿಹಾಸಿಕ ದಾಖಲೆಗಳೇ ಇವೆ. ಇವು ಹೊರಗಡೆ ಬಂದರೆ ಒಕ್ಕಲಿಗರಲ್ಲಿ ಸ್ವಾಭಿಮಾನ, ಶೈರ್ಯ ಉಕ್ಕುತ್ತದೆ ಹಾಗಾಗಿ ಅದನ್ನು ಅದಮಿಡುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ” ಎಂದು ಸಿಟಿ ರವಿ ಹೇಳಿದ್ದಾರೆ.

ಇದನ್ನೂ ಓದಿ: ‘ಉರಿಗೌಡ, ನಂಜೇಗೌಡ’ರು ಜೀವಿಸಿದ್ದ ಯಾವುದೇ ಕುರುಹು ಇಲ್ಲ: ಆದರೂ ಸುಳ್ಳು ಹೇಳುತ್ತಿರುವ ಬಿಜೆಪಿ

”ಟಿಪ್ಪುವನ್ನು ಕೊಂದವರು ಉರಿಗೌಡ ಮತ್ತು ದೊಡ್ಡ ನಂಜೇಗೌಡ” ಎಂಬ ಸುಳ್ಳು ಕಥೆಯನ್ನು ಹುಟ್ಟಿದ್ದು ವಾಟ್ಸಾಪ್‌ ಯುನಿವರ್ಸಿಟಿಯಲ್ಲಿ, ಬಿಜೆಪಿ ಹಾಗೂ ಅದರ ಬೆಂಬಲಿಗರು ಅದನ್ನೇ ಪ್ರತಿಪಾದಿಸತೊಡಗಿದ್ದಾರೆ. ಈ ಕಥೆಯನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮುನ್ನೆಲೆಗೆ ತಂದರು. ಆನಂತರ ಕೆಲವು ಬಿಜೆಪಿ ನಾಯಕರು ಹಾಗೂ ಅವರ ಬೆಂಬಲಿಗರು ಅದೇ ನಿಜವೇನೋ ಎನ್ನುವಂತೆ ಪದೇ ಪದೇ ಹೇಳಲು ಶುರು ಮಾಡಿದ್ದಾರೆ.

ಈ ಸುಳ್ಳು ಕಥೆಯನ್ನು ಬಿಜೆಪಿಯವರು ಪದೇ ಪದೇ ಹೇಳುವ ಮೂಲಕ ಎಲ್ಲರಿಗೂ ಅದೇ ಸತ್ಯ ಇರಬಹುದು ಎನ್ನುವಂತೆ ಮಾಡುತ್ತಿದ್ದಾರೆ. ಇದನ್ನು ಗೋಬೇಲ್ಸ್ ಥಿಯರಿ ಎಂದು ಹೇಳುತ್ತಾರೆ. ಆದರೆ ಈ ಸುಳ್ಳಿನ ಕಥೆಯ ಮೂಲಕ ಬಿಜೆಪಿಯವರು ಒಕ್ಕಲಿಗರನ್ನು ಮುಸ್ಲಿಂ ವಿರುದ್ಧ ನಿಲ್ಲಿಸುವುದು ಮಾತ್ರವಲ್ಲದೇ, ಒಕ್ಕಲಿಗರು ಬ್ರಿಟಿಷರ ಪರ ಇದ್ದರೆಂದು ಸುಳ್ಳನ್ನು ಪ್ರತಿಪಾದಿಸುತ್ತ, ದೇಶದ ಸ್ವತಂತ್ರದ ವಿರುದ್ದ ಕೆಲಸ ಮಾಡಿದವರು ಎಂಬ ಹಣೆಪಟ್ಟಿ ಕಟ್ಟುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ.

ಬಿಜೆಪಿ ನಾಯಕರು ಚುನಾವಣಾ ಉದ್ದೇಶದಿಂದ ಇಂತಹದ್ದೊಂದು ಸುಳ್ಳು ಕಥೆಯ ಮೂಲಕ ಒಕ್ಕಲಿಗರ ಮತ ಸೆಳೆಯಲು ಮುಂದಾಗಿರಬಹುದು. ಆದರೆ, ಒಕ್ಕಲಿಗರು ಈ ಸುಳ್ಳು ಕಥೆ ಬಗ್ಗೆ ಬಹಳ ಗಂಭಿರವಾಗಿ ಯೋಚಿಸಬೇಕಾಗಿದೆ. ಏಕೆಂದರೆ ಈ ಸುಳ್ಳು ಕಥೆಯಲ್ಲಿ ಟಿಪ್ಪುವನ್ನು ಒಕ್ಕಲಿಗರು ಕೊಂದರು ಎನ್ನುವುದಾದರೆ, ಒಕ್ಕಲಿಗರು ಈ ದೇಶದ ವಿರುದ್ಧ ಕೆಲಸ ಮಾಡಿದವರು, ಬ್ರಿಟಿಷರ ಪರವಾಗಿ ಕೆಲಸ ಮಾಡಿದವರು ಎಂದಾಗುತ್ತದೆ. ಬಿಜೆಪಿಯವರು ಅವಸರದಲ್ಲಿ ಕಟ್ಟಿದ ಸುಳ್ಳಿನ ಕಥೆಯಲ್ಲಿ ಒಕ್ಕಲಿಗರನ್ನು ಹೀರೋ ಮಾಡಲು ಹೋಗಿ ದೇಶದ್ರೋಹಿಗಳು ಎನ್ನುವಂತೆ ತೋರಿಸಲಾಗುತ್ತಿದೆ. ಈ ಸುಳ್ಳು ಕಥೆಯ ಬಗ್ಗೆ ಒಕ್ಕಲಿಗ ಸಮುದಾಯದ ನಾಯಕರು ಮಾತನಾಡುವುದು ಅತ್ಯವಶ್ಯಕವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...