Homeಮುಖಪುಟವಿಚಿತ್ರ ಘಟನೆ | ಸಿಎಂಗೆ ಸಮೋಸ ನೀಡದ್ದಕ್ಕೆ ಐವರು ಪೊಲೀಸರಿಗೆ ಶೋಕಾಸ್ ನೋಟಿಸ್; ತನಿಖೆಗೆ ಆದೇಶ!

ವಿಚಿತ್ರ ಘಟನೆ | ಸಿಎಂಗೆ ಸಮೋಸ ನೀಡದ್ದಕ್ಕೆ ಐವರು ಪೊಲೀಸರಿಗೆ ಶೋಕಾಸ್ ನೋಟಿಸ್; ತನಿಖೆಗೆ ಆದೇಶ!

- Advertisement -
- Advertisement -

ಸಿಎಂಗೆ ಮೀಸಲಾದ ಸಮೋಸಾವನ್ನು ಅವರ ಸಿಬ್ಬಂದಿಗೆ ನೀಡಿದ ಕಾರಣಕ್ಕೆ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಲ್ಲದೆ, ಐವರು ಪೊಲೀಸರಿಗೆ ಸಮನ್ಸ್ ನೀಡಿರುವ ವಿಚಿತ್ರ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಇಷ್ಟೆ ಅಲ್ಲದೆ, ಈ ಬಗ್ಗೆ ರಾಜ್ಯದ ರಾಜಕೀಯದಲ್ಲಿ ತೀವ್ರ ಚರ್ಚೆ ನಡೆಯುತ್ತಿದ್ದು, ಆಡಳಿತರೂಢ ಪಕ್ಷ ಮತ್ತು ಪ್ರತಿಪಕ್ಷಗಳು ಪರಸ್ಪರ ವಾಗ್ದಾಳಿಗಳು ನಡೆಸುತ್ತಿವೆ.

ಘಟನೆ ಏನು?

ಅಕ್ಟೋಬರ್ 21 ರಂದು ಶಿಮ್ಲಾದ ಹೋಟೆಲ್‌ನಲ್ಲಿ ರಾಜ್ಯದ ಸಿಐಡಿ ಅಧಿಕಾರಿಗಳ ಕಾರ್ಯಕ್ರಮದಲ್ಲಿ ಸಿಎಂ ಸುಖು ಭಾಗವಹಿಸಿದ್ದರು. ಈ ವೇಳೆ ಸಿಎಂಗೆ ಮೀಸಲಾದ ಸಮೋಸಾಗಳು ಪ್ಯಾಕೆಟ್‌ಗಳಲ್ಲಿ ಬಂದಿತ್ತು. ಆದರೆ, ಈ ಸಮೋಸವನ್ನು ಅವರಿಗೆ ನೀಡದೆ ಅವರ ಭದ್ರತಾ ಸಿಬ್ಬಂದಿಗೆ ನೀಡಲಾಗಿತ್ತು. ಈ ಘಟನೆ ರಾಜ್ಯ ಸಿಐಡಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಜ್ಯದ ಕಾಂಗ್ರೆಸ್ ಸರ್ಕಾರವು ಅನಗತ್ಯ ವಿಷಯಗಳತ್ತ ಗಮನ ಹರಿಸುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸುತ್ತಿವೆ.

ಘಟನೆ ನಡೆದು ಹದಿನೈದು ದಿನಗಳ ನಂತರ, ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ನಡೆಸಿದ ತನಿಖೆಯು ಇದನ್ನು “ಸರ್ಕಾರ ವಿರೋಧಿ” ಕೃತ್ಯ ಎಂದು ಬಣ್ಣಿಸಿದೆ. ಇದರ ಪರಿಣಾಮವಾಗಿ ಮಹಿಳಾ ಇನ್ಸ್‌ಪೆಕ್ಟರ್ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಕಾಂಗ್ರೆಸ್ ಸರ್ಕಾರದ ಈ ಕ್ರಮವನ್ನು ಪ್ರತಿಪಕ್ಷ ಬಿಜೆಪಿ ವಿರೋಧಿಸಿದ್ದು, “ಸರ್ಕಾರವು ನಾಪತ್ತೆಯಾಗಿರುವ ಸಮೋಸಾಗಳ ಬಗ್ಗೆ ತನಿಖೆಗೆ ಆದೇಶಿಸಿದೆ. ಆದರೆ ಗಂಭೀರ ಪ್ರಕರಣಗಳತ್ತ ಕಣ್ಣು ಮುಚ್ಚಿ ಕುಳಿತಿದೆ” ಎಂದು ತರಾಟೆಗೆ ತೆಗೆದುಕೊಂಡಿದೆ.

ವಿರೋಧ ಪಕ್ಷದ ನಾಯಕ ಮತ್ತು ಮಾಜಿ ಸಿಎಂ ಜೈ ರಾಮ್ ಠಾಕೂರ್ ಪ್ರತಿಕ್ರಿಯಿಸಿ, “ಪ್ರತಿಪಕ್ಷಗಳು ಆ ಸಮೋಸಗಳನ್ನು ತಿಂದಿಲ್ಲ. ಸರ್ಕಾರದ ಭಾಗವಾಗಿದ್ದ ವ್ಯಕ್ತಿಗಳೆ ಆ ಸಮೋಸಗಳನ್ನು ಬಡಿಸಿದ್ದಾರೆ. ಹಾಗಾದರೆ ಈ ನಡೆಯು ಸರ್ಕಾರಿ ವಿರೋಧಿ ಆಗುವುದು ಹೇಗೆ?” ಎಂದು ಕೇಳಿದ್ದಾರೆ.

“ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳು ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಸಮೋಸಾ ಸಂಚಿಕೆ ಬಗ್ಗೆ ತನಿಖೆಗೆ ಆದೇಶಿಸಬೇಕು” ಎಂದು ಅವರು ಹೇಳಿದ್ದಾರೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರದ ಆರೋಪಗಳ ಬಗ್ಗೆ ತನಿಖೆ ನಡೆಸುತ್ತಿಲ್ಲ. ಬದಲಾಗಿ ಸಮೋಸಾ ವಿತರಣೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹಿಮಾಚಲ ಪ್ರದೇಶದ ಬಿಜೆಪಿಯ ಮಾಜಿ ಮುಖ್ಯಸ್ಥ ಸತ್ಪಾಲ್ ಸತ್ತಿ ಅವರು ಕಾಂಗ್ರೆಸ್ ಸರ್ಕಾರವು ಸಮೋಸಾಗಳ ವಿಚಾರಣೆಗೆ ಆದೇಶಿಸುವ ಮೂಲಕ ನಗೆಪಾಟಲಿಗೀಡಾಗಿದೆ ಎಂದು ಹೇಳಿದ್ದಾರೆ.

ಆದರೆ ಕಾಂಗ್ರೆಸ್ ಸರ್ಕಾರ ಇದನ್ನು ನಿರಾಕರಿಸಿದೆ. ಬಿಜೆಪಿಗೆ ಬೇರೆ ಯಾವುದೇ ಸಮಸ್ಯೆಗಳಿಲ್ಲ. ಕಾಂಗ್ರೆಸ್ ಸರ್ಕಾರದ ವಿರುದ್ಧ ಸುಳ್ಳು ಪ್ರಚಾರ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರ ನರೇಶ್ ಚೌಹಾಣ್ ಹೇಳಿದ್ದಾರೆ.

ವಿವಾದದ ಸುಳಿಯಲ್ಲಿ ಸಿಲುಕಿರುವ ಸಿಐಡಿ ಈ ವಿಚಾರವನ್ನು ಆಂತರಿಕ ವಿಚಾರ ಎಂದು ಬಣ್ಣಿಸಿದ್ದು, ರಾಜಕೀಯ ಮಾಡಬೇಡಿ ಎಂದು ಎಲ್ಲರಿಗೂ ಮನವಿ ಮಾಡಿದೆ. ”ಇದು ನಮ್ಮ ಇಲಾಖೆಯ ಆಂತರಿಕ ವಿಚಾರ. ಸರಕಾರಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ,’’ ಎಂದು ಸಿಐಡಿ ಮಹಾನಿರ್ದೇಶಕ (ಡಿಜಿ) ಸಂಜೀವ್ ರಂಜನ್ ಓಜಾ ಹೇಳಿದ್ದಾರೆ.

ಮುಖ್ಯಮಂತ್ರಿಗಳಿಗೆ ತರಿಸಿದ್ದ ತಿಂಡಿ ಏನಾಯಿತು ಎಂದು ತಿಳಿಯಲು ಕೇವಲ ಮೌಖಿಕ ಆದೇಶಗಳನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. “ಯಾವುದೇ ತನಿಖೆಗೆ ಆದೇಶಿಸಲಾಗಿಲ್ಲ, ಯಾವುದೇ ವಿವರಣೆಯನ್ನು ಕೇಳಲಾಗಿಲ್ಲ ಮತ್ತು ಯಾರ ವಿರುದ್ಧವೂ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಜನರು ಈ ವಿಷಯವನ್ನು ಉಲ್ಬಣಗೊಳಿಸುವುದನ್ನು ಮತ್ತು ರಾಜಕೀಯಗೊಳಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಸಿಐಡಿ ಪ್ರಧಾನ ಕಚೇರಿಗೆ ತೆರಳಿದ್ದ ಮುಖ್ಯಮಂತ್ರಿಗಳಿಗೆ ನೀಡಲು ಶಿಮ್ಲಾದ ಲಕ್ಕರ್ ಬಜಾರ್‌ನಲ್ಲಿರುವ ಹೋಟೆಲ್ ರಾಡಿಸನ್ ಬ್ಲೂನಿಂದ ಮೂರು ಬಾಕ್ಸ್‌ನಲ್ಲಿ ತಿಂಡಿ ತಿನಿಸುಗಳನ್ನು ತರಲಾಗಿತ್ತು. ಆದರೆ ಸಿಎಂಗೆ ಮೀಸಲಾದ ಸಮೋಸವನ್ನು ಯಾರು ತಿಂದರು ಎಂಬ ವಿಚಾರದಲ್ಲಿ ಗಲಾಟೆ ಶುರುವಾದೆ ಎಂದು TNIE ವರದಿ ಮಾಡಿದೆ.

ಆದರೆ, ಡಿಎಸ್ಪಿ ನಡೆಸಿದ ವಿಚಾರಣಾ ವರದಿಯ ಪ್ರಕಾರ ಬಾಕ್ಸ್‌ಗಳನ್ನು ಸಿಎಂ ಭದ್ರತಾ ಸಿಬ್ಬಂದಿಗೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ ಎಂದು ವರದಿ ಉಲ್ಲೇಖಿಸಿದೆ. ವಿಚಿತ್ರ ಘಟನೆ

ಇದನ್ನೂ ಓದಿ: ಮಣಿಪುರ ಹಿಂಸಾಚಾರದಲ್ಲಿ ಸಿಎಂ ಬಿರೇನ್ ಸಿಂಗ್ ಪಾತ್ರ ಆರೋಪ : ಆಡಿಯೋ ಟೇಪ್ ಪರಿಶೀಲಿಸಲಿರುವ ಸುಪ್ರೀಂ ಕೋರ್ಟ್

ಮಣಿಪುರ ಹಿಂಸಾಚಾರದಲ್ಲಿ ಸಿಎಂ ಬಿರೇನ್ ಸಿಂಗ್ ಪಾತ್ರ ಆರೋಪ : ಆಡಿಯೋ ಟೇಪ್ ಪರಿಶೀಲಿಸಲಿರುವ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...