Homeಮುಖಪುಟವಿಚಿತ್ರ ಘಟನೆ | ಸಿಎಂಗೆ ಸಮೋಸ ನೀಡದ್ದಕ್ಕೆ ಐವರು ಪೊಲೀಸರಿಗೆ ಶೋಕಾಸ್ ನೋಟಿಸ್; ತನಿಖೆಗೆ ಆದೇಶ!

ವಿಚಿತ್ರ ಘಟನೆ | ಸಿಎಂಗೆ ಸಮೋಸ ನೀಡದ್ದಕ್ಕೆ ಐವರು ಪೊಲೀಸರಿಗೆ ಶೋಕಾಸ್ ನೋಟಿಸ್; ತನಿಖೆಗೆ ಆದೇಶ!

- Advertisement -
- Advertisement -

ಸಿಎಂಗೆ ಮೀಸಲಾದ ಸಮೋಸಾವನ್ನು ಅವರ ಸಿಬ್ಬಂದಿಗೆ ನೀಡಿದ ಕಾರಣಕ್ಕೆ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಲ್ಲದೆ, ಐವರು ಪೊಲೀಸರಿಗೆ ಸಮನ್ಸ್ ನೀಡಿರುವ ವಿಚಿತ್ರ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಇಷ್ಟೆ ಅಲ್ಲದೆ, ಈ ಬಗ್ಗೆ ರಾಜ್ಯದ ರಾಜಕೀಯದಲ್ಲಿ ತೀವ್ರ ಚರ್ಚೆ ನಡೆಯುತ್ತಿದ್ದು, ಆಡಳಿತರೂಢ ಪಕ್ಷ ಮತ್ತು ಪ್ರತಿಪಕ್ಷಗಳು ಪರಸ್ಪರ ವಾಗ್ದಾಳಿಗಳು ನಡೆಸುತ್ತಿವೆ.

ಘಟನೆ ಏನು?

ಅಕ್ಟೋಬರ್ 21 ರಂದು ಶಿಮ್ಲಾದ ಹೋಟೆಲ್‌ನಲ್ಲಿ ರಾಜ್ಯದ ಸಿಐಡಿ ಅಧಿಕಾರಿಗಳ ಕಾರ್ಯಕ್ರಮದಲ್ಲಿ ಸಿಎಂ ಸುಖು ಭಾಗವಹಿಸಿದ್ದರು. ಈ ವೇಳೆ ಸಿಎಂಗೆ ಮೀಸಲಾದ ಸಮೋಸಾಗಳು ಪ್ಯಾಕೆಟ್‌ಗಳಲ್ಲಿ ಬಂದಿತ್ತು. ಆದರೆ, ಈ ಸಮೋಸವನ್ನು ಅವರಿಗೆ ನೀಡದೆ ಅವರ ಭದ್ರತಾ ಸಿಬ್ಬಂದಿಗೆ ನೀಡಲಾಗಿತ್ತು. ಈ ಘಟನೆ ರಾಜ್ಯ ಸಿಐಡಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಜ್ಯದ ಕಾಂಗ್ರೆಸ್ ಸರ್ಕಾರವು ಅನಗತ್ಯ ವಿಷಯಗಳತ್ತ ಗಮನ ಹರಿಸುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸುತ್ತಿವೆ.

ಘಟನೆ ನಡೆದು ಹದಿನೈದು ದಿನಗಳ ನಂತರ, ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ನಡೆಸಿದ ತನಿಖೆಯು ಇದನ್ನು “ಸರ್ಕಾರ ವಿರೋಧಿ” ಕೃತ್ಯ ಎಂದು ಬಣ್ಣಿಸಿದೆ. ಇದರ ಪರಿಣಾಮವಾಗಿ ಮಹಿಳಾ ಇನ್ಸ್‌ಪೆಕ್ಟರ್ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಕಾಂಗ್ರೆಸ್ ಸರ್ಕಾರದ ಈ ಕ್ರಮವನ್ನು ಪ್ರತಿಪಕ್ಷ ಬಿಜೆಪಿ ವಿರೋಧಿಸಿದ್ದು, “ಸರ್ಕಾರವು ನಾಪತ್ತೆಯಾಗಿರುವ ಸಮೋಸಾಗಳ ಬಗ್ಗೆ ತನಿಖೆಗೆ ಆದೇಶಿಸಿದೆ. ಆದರೆ ಗಂಭೀರ ಪ್ರಕರಣಗಳತ್ತ ಕಣ್ಣು ಮುಚ್ಚಿ ಕುಳಿತಿದೆ” ಎಂದು ತರಾಟೆಗೆ ತೆಗೆದುಕೊಂಡಿದೆ.

ವಿರೋಧ ಪಕ್ಷದ ನಾಯಕ ಮತ್ತು ಮಾಜಿ ಸಿಎಂ ಜೈ ರಾಮ್ ಠಾಕೂರ್ ಪ್ರತಿಕ್ರಿಯಿಸಿ, “ಪ್ರತಿಪಕ್ಷಗಳು ಆ ಸಮೋಸಗಳನ್ನು ತಿಂದಿಲ್ಲ. ಸರ್ಕಾರದ ಭಾಗವಾಗಿದ್ದ ವ್ಯಕ್ತಿಗಳೆ ಆ ಸಮೋಸಗಳನ್ನು ಬಡಿಸಿದ್ದಾರೆ. ಹಾಗಾದರೆ ಈ ನಡೆಯು ಸರ್ಕಾರಿ ವಿರೋಧಿ ಆಗುವುದು ಹೇಗೆ?” ಎಂದು ಕೇಳಿದ್ದಾರೆ.

“ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳು ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಸಮೋಸಾ ಸಂಚಿಕೆ ಬಗ್ಗೆ ತನಿಖೆಗೆ ಆದೇಶಿಸಬೇಕು” ಎಂದು ಅವರು ಹೇಳಿದ್ದಾರೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರದ ಆರೋಪಗಳ ಬಗ್ಗೆ ತನಿಖೆ ನಡೆಸುತ್ತಿಲ್ಲ. ಬದಲಾಗಿ ಸಮೋಸಾ ವಿತರಣೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹಿಮಾಚಲ ಪ್ರದೇಶದ ಬಿಜೆಪಿಯ ಮಾಜಿ ಮುಖ್ಯಸ್ಥ ಸತ್ಪಾಲ್ ಸತ್ತಿ ಅವರು ಕಾಂಗ್ರೆಸ್ ಸರ್ಕಾರವು ಸಮೋಸಾಗಳ ವಿಚಾರಣೆಗೆ ಆದೇಶಿಸುವ ಮೂಲಕ ನಗೆಪಾಟಲಿಗೀಡಾಗಿದೆ ಎಂದು ಹೇಳಿದ್ದಾರೆ.

ಆದರೆ ಕಾಂಗ್ರೆಸ್ ಸರ್ಕಾರ ಇದನ್ನು ನಿರಾಕರಿಸಿದೆ. ಬಿಜೆಪಿಗೆ ಬೇರೆ ಯಾವುದೇ ಸಮಸ್ಯೆಗಳಿಲ್ಲ. ಕಾಂಗ್ರೆಸ್ ಸರ್ಕಾರದ ವಿರುದ್ಧ ಸುಳ್ಳು ಪ್ರಚಾರ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರ ನರೇಶ್ ಚೌಹಾಣ್ ಹೇಳಿದ್ದಾರೆ.

ವಿವಾದದ ಸುಳಿಯಲ್ಲಿ ಸಿಲುಕಿರುವ ಸಿಐಡಿ ಈ ವಿಚಾರವನ್ನು ಆಂತರಿಕ ವಿಚಾರ ಎಂದು ಬಣ್ಣಿಸಿದ್ದು, ರಾಜಕೀಯ ಮಾಡಬೇಡಿ ಎಂದು ಎಲ್ಲರಿಗೂ ಮನವಿ ಮಾಡಿದೆ. ”ಇದು ನಮ್ಮ ಇಲಾಖೆಯ ಆಂತರಿಕ ವಿಚಾರ. ಸರಕಾರಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ,’’ ಎಂದು ಸಿಐಡಿ ಮಹಾನಿರ್ದೇಶಕ (ಡಿಜಿ) ಸಂಜೀವ್ ರಂಜನ್ ಓಜಾ ಹೇಳಿದ್ದಾರೆ.

ಮುಖ್ಯಮಂತ್ರಿಗಳಿಗೆ ತರಿಸಿದ್ದ ತಿಂಡಿ ಏನಾಯಿತು ಎಂದು ತಿಳಿಯಲು ಕೇವಲ ಮೌಖಿಕ ಆದೇಶಗಳನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. “ಯಾವುದೇ ತನಿಖೆಗೆ ಆದೇಶಿಸಲಾಗಿಲ್ಲ, ಯಾವುದೇ ವಿವರಣೆಯನ್ನು ಕೇಳಲಾಗಿಲ್ಲ ಮತ್ತು ಯಾರ ವಿರುದ್ಧವೂ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಜನರು ಈ ವಿಷಯವನ್ನು ಉಲ್ಬಣಗೊಳಿಸುವುದನ್ನು ಮತ್ತು ರಾಜಕೀಯಗೊಳಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಸಿಐಡಿ ಪ್ರಧಾನ ಕಚೇರಿಗೆ ತೆರಳಿದ್ದ ಮುಖ್ಯಮಂತ್ರಿಗಳಿಗೆ ನೀಡಲು ಶಿಮ್ಲಾದ ಲಕ್ಕರ್ ಬಜಾರ್‌ನಲ್ಲಿರುವ ಹೋಟೆಲ್ ರಾಡಿಸನ್ ಬ್ಲೂನಿಂದ ಮೂರು ಬಾಕ್ಸ್‌ನಲ್ಲಿ ತಿಂಡಿ ತಿನಿಸುಗಳನ್ನು ತರಲಾಗಿತ್ತು. ಆದರೆ ಸಿಎಂಗೆ ಮೀಸಲಾದ ಸಮೋಸವನ್ನು ಯಾರು ತಿಂದರು ಎಂಬ ವಿಚಾರದಲ್ಲಿ ಗಲಾಟೆ ಶುರುವಾದೆ ಎಂದು TNIE ವರದಿ ಮಾಡಿದೆ.

ಆದರೆ, ಡಿಎಸ್ಪಿ ನಡೆಸಿದ ವಿಚಾರಣಾ ವರದಿಯ ಪ್ರಕಾರ ಬಾಕ್ಸ್‌ಗಳನ್ನು ಸಿಎಂ ಭದ್ರತಾ ಸಿಬ್ಬಂದಿಗೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ ಎಂದು ವರದಿ ಉಲ್ಲೇಖಿಸಿದೆ. ವಿಚಿತ್ರ ಘಟನೆ

ಇದನ್ನೂ ಓದಿ: ಮಣಿಪುರ ಹಿಂಸಾಚಾರದಲ್ಲಿ ಸಿಎಂ ಬಿರೇನ್ ಸಿಂಗ್ ಪಾತ್ರ ಆರೋಪ : ಆಡಿಯೋ ಟೇಪ್ ಪರಿಶೀಲಿಸಲಿರುವ ಸುಪ್ರೀಂ ಕೋರ್ಟ್

ಮಣಿಪುರ ಹಿಂಸಾಚಾರದಲ್ಲಿ ಸಿಎಂ ಬಿರೇನ್ ಸಿಂಗ್ ಪಾತ್ರ ಆರೋಪ : ಆಡಿಯೋ ಟೇಪ್ ಪರಿಶೀಲಿಸಲಿರುವ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...