Homeಮುಖಪುಟವಿಚಿತ್ರ ಘಟನೆ | ಸಿಎಂಗೆ ಸಮೋಸ ನೀಡದ್ದಕ್ಕೆ ಐವರು ಪೊಲೀಸರಿಗೆ ಶೋಕಾಸ್ ನೋಟಿಸ್; ತನಿಖೆಗೆ ಆದೇಶ!

ವಿಚಿತ್ರ ಘಟನೆ | ಸಿಎಂಗೆ ಸಮೋಸ ನೀಡದ್ದಕ್ಕೆ ಐವರು ಪೊಲೀಸರಿಗೆ ಶೋಕಾಸ್ ನೋಟಿಸ್; ತನಿಖೆಗೆ ಆದೇಶ!

- Advertisement -
- Advertisement -

ಸಿಎಂಗೆ ಮೀಸಲಾದ ಸಮೋಸಾವನ್ನು ಅವರ ಸಿಬ್ಬಂದಿಗೆ ನೀಡಿದ ಕಾರಣಕ್ಕೆ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಲ್ಲದೆ, ಐವರು ಪೊಲೀಸರಿಗೆ ಸಮನ್ಸ್ ನೀಡಿರುವ ವಿಚಿತ್ರ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಇಷ್ಟೆ ಅಲ್ಲದೆ, ಈ ಬಗ್ಗೆ ರಾಜ್ಯದ ರಾಜಕೀಯದಲ್ಲಿ ತೀವ್ರ ಚರ್ಚೆ ನಡೆಯುತ್ತಿದ್ದು, ಆಡಳಿತರೂಢ ಪಕ್ಷ ಮತ್ತು ಪ್ರತಿಪಕ್ಷಗಳು ಪರಸ್ಪರ ವಾಗ್ದಾಳಿಗಳು ನಡೆಸುತ್ತಿವೆ.

ಘಟನೆ ಏನು?

ಅಕ್ಟೋಬರ್ 21 ರಂದು ಶಿಮ್ಲಾದ ಹೋಟೆಲ್‌ನಲ್ಲಿ ರಾಜ್ಯದ ಸಿಐಡಿ ಅಧಿಕಾರಿಗಳ ಕಾರ್ಯಕ್ರಮದಲ್ಲಿ ಸಿಎಂ ಸುಖು ಭಾಗವಹಿಸಿದ್ದರು. ಈ ವೇಳೆ ಸಿಎಂಗೆ ಮೀಸಲಾದ ಸಮೋಸಾಗಳು ಪ್ಯಾಕೆಟ್‌ಗಳಲ್ಲಿ ಬಂದಿತ್ತು. ಆದರೆ, ಈ ಸಮೋಸವನ್ನು ಅವರಿಗೆ ನೀಡದೆ ಅವರ ಭದ್ರತಾ ಸಿಬ್ಬಂದಿಗೆ ನೀಡಲಾಗಿತ್ತು. ಈ ಘಟನೆ ರಾಜ್ಯ ಸಿಐಡಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಜ್ಯದ ಕಾಂಗ್ರೆಸ್ ಸರ್ಕಾರವು ಅನಗತ್ಯ ವಿಷಯಗಳತ್ತ ಗಮನ ಹರಿಸುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸುತ್ತಿವೆ.

ಘಟನೆ ನಡೆದು ಹದಿನೈದು ದಿನಗಳ ನಂತರ, ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ನಡೆಸಿದ ತನಿಖೆಯು ಇದನ್ನು “ಸರ್ಕಾರ ವಿರೋಧಿ” ಕೃತ್ಯ ಎಂದು ಬಣ್ಣಿಸಿದೆ. ಇದರ ಪರಿಣಾಮವಾಗಿ ಮಹಿಳಾ ಇನ್ಸ್‌ಪೆಕ್ಟರ್ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಕಾಂಗ್ರೆಸ್ ಸರ್ಕಾರದ ಈ ಕ್ರಮವನ್ನು ಪ್ರತಿಪಕ್ಷ ಬಿಜೆಪಿ ವಿರೋಧಿಸಿದ್ದು, “ಸರ್ಕಾರವು ನಾಪತ್ತೆಯಾಗಿರುವ ಸಮೋಸಾಗಳ ಬಗ್ಗೆ ತನಿಖೆಗೆ ಆದೇಶಿಸಿದೆ. ಆದರೆ ಗಂಭೀರ ಪ್ರಕರಣಗಳತ್ತ ಕಣ್ಣು ಮುಚ್ಚಿ ಕುಳಿತಿದೆ” ಎಂದು ತರಾಟೆಗೆ ತೆಗೆದುಕೊಂಡಿದೆ.

ವಿರೋಧ ಪಕ್ಷದ ನಾಯಕ ಮತ್ತು ಮಾಜಿ ಸಿಎಂ ಜೈ ರಾಮ್ ಠಾಕೂರ್ ಪ್ರತಿಕ್ರಿಯಿಸಿ, “ಪ್ರತಿಪಕ್ಷಗಳು ಆ ಸಮೋಸಗಳನ್ನು ತಿಂದಿಲ್ಲ. ಸರ್ಕಾರದ ಭಾಗವಾಗಿದ್ದ ವ್ಯಕ್ತಿಗಳೆ ಆ ಸಮೋಸಗಳನ್ನು ಬಡಿಸಿದ್ದಾರೆ. ಹಾಗಾದರೆ ಈ ನಡೆಯು ಸರ್ಕಾರಿ ವಿರೋಧಿ ಆಗುವುದು ಹೇಗೆ?” ಎಂದು ಕೇಳಿದ್ದಾರೆ.

“ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳು ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಸಮೋಸಾ ಸಂಚಿಕೆ ಬಗ್ಗೆ ತನಿಖೆಗೆ ಆದೇಶಿಸಬೇಕು” ಎಂದು ಅವರು ಹೇಳಿದ್ದಾರೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರದ ಆರೋಪಗಳ ಬಗ್ಗೆ ತನಿಖೆ ನಡೆಸುತ್ತಿಲ್ಲ. ಬದಲಾಗಿ ಸಮೋಸಾ ವಿತರಣೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹಿಮಾಚಲ ಪ್ರದೇಶದ ಬಿಜೆಪಿಯ ಮಾಜಿ ಮುಖ್ಯಸ್ಥ ಸತ್ಪಾಲ್ ಸತ್ತಿ ಅವರು ಕಾಂಗ್ರೆಸ್ ಸರ್ಕಾರವು ಸಮೋಸಾಗಳ ವಿಚಾರಣೆಗೆ ಆದೇಶಿಸುವ ಮೂಲಕ ನಗೆಪಾಟಲಿಗೀಡಾಗಿದೆ ಎಂದು ಹೇಳಿದ್ದಾರೆ.

ಆದರೆ ಕಾಂಗ್ರೆಸ್ ಸರ್ಕಾರ ಇದನ್ನು ನಿರಾಕರಿಸಿದೆ. ಬಿಜೆಪಿಗೆ ಬೇರೆ ಯಾವುದೇ ಸಮಸ್ಯೆಗಳಿಲ್ಲ. ಕಾಂಗ್ರೆಸ್ ಸರ್ಕಾರದ ವಿರುದ್ಧ ಸುಳ್ಳು ಪ್ರಚಾರ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರ ನರೇಶ್ ಚೌಹಾಣ್ ಹೇಳಿದ್ದಾರೆ.

ವಿವಾದದ ಸುಳಿಯಲ್ಲಿ ಸಿಲುಕಿರುವ ಸಿಐಡಿ ಈ ವಿಚಾರವನ್ನು ಆಂತರಿಕ ವಿಚಾರ ಎಂದು ಬಣ್ಣಿಸಿದ್ದು, ರಾಜಕೀಯ ಮಾಡಬೇಡಿ ಎಂದು ಎಲ್ಲರಿಗೂ ಮನವಿ ಮಾಡಿದೆ. ”ಇದು ನಮ್ಮ ಇಲಾಖೆಯ ಆಂತರಿಕ ವಿಚಾರ. ಸರಕಾರಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ,’’ ಎಂದು ಸಿಐಡಿ ಮಹಾನಿರ್ದೇಶಕ (ಡಿಜಿ) ಸಂಜೀವ್ ರಂಜನ್ ಓಜಾ ಹೇಳಿದ್ದಾರೆ.

ಮುಖ್ಯಮಂತ್ರಿಗಳಿಗೆ ತರಿಸಿದ್ದ ತಿಂಡಿ ಏನಾಯಿತು ಎಂದು ತಿಳಿಯಲು ಕೇವಲ ಮೌಖಿಕ ಆದೇಶಗಳನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. “ಯಾವುದೇ ತನಿಖೆಗೆ ಆದೇಶಿಸಲಾಗಿಲ್ಲ, ಯಾವುದೇ ವಿವರಣೆಯನ್ನು ಕೇಳಲಾಗಿಲ್ಲ ಮತ್ತು ಯಾರ ವಿರುದ್ಧವೂ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಜನರು ಈ ವಿಷಯವನ್ನು ಉಲ್ಬಣಗೊಳಿಸುವುದನ್ನು ಮತ್ತು ರಾಜಕೀಯಗೊಳಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಸಿಐಡಿ ಪ್ರಧಾನ ಕಚೇರಿಗೆ ತೆರಳಿದ್ದ ಮುಖ್ಯಮಂತ್ರಿಗಳಿಗೆ ನೀಡಲು ಶಿಮ್ಲಾದ ಲಕ್ಕರ್ ಬಜಾರ್‌ನಲ್ಲಿರುವ ಹೋಟೆಲ್ ರಾಡಿಸನ್ ಬ್ಲೂನಿಂದ ಮೂರು ಬಾಕ್ಸ್‌ನಲ್ಲಿ ತಿಂಡಿ ತಿನಿಸುಗಳನ್ನು ತರಲಾಗಿತ್ತು. ಆದರೆ ಸಿಎಂಗೆ ಮೀಸಲಾದ ಸಮೋಸವನ್ನು ಯಾರು ತಿಂದರು ಎಂಬ ವಿಚಾರದಲ್ಲಿ ಗಲಾಟೆ ಶುರುವಾದೆ ಎಂದು TNIE ವರದಿ ಮಾಡಿದೆ.

ಆದರೆ, ಡಿಎಸ್ಪಿ ನಡೆಸಿದ ವಿಚಾರಣಾ ವರದಿಯ ಪ್ರಕಾರ ಬಾಕ್ಸ್‌ಗಳನ್ನು ಸಿಎಂ ಭದ್ರತಾ ಸಿಬ್ಬಂದಿಗೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ ಎಂದು ವರದಿ ಉಲ್ಲೇಖಿಸಿದೆ. ವಿಚಿತ್ರ ಘಟನೆ

ಇದನ್ನೂ ಓದಿ: ಮಣಿಪುರ ಹಿಂಸಾಚಾರದಲ್ಲಿ ಸಿಎಂ ಬಿರೇನ್ ಸಿಂಗ್ ಪಾತ್ರ ಆರೋಪ : ಆಡಿಯೋ ಟೇಪ್ ಪರಿಶೀಲಿಸಲಿರುವ ಸುಪ್ರೀಂ ಕೋರ್ಟ್

ಮಣಿಪುರ ಹಿಂಸಾಚಾರದಲ್ಲಿ ಸಿಎಂ ಬಿರೇನ್ ಸಿಂಗ್ ಪಾತ್ರ ಆರೋಪ : ಆಡಿಯೋ ಟೇಪ್ ಪರಿಶೀಲಿಸಲಿರುವ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...