Homeಮುಖಪುಟಬಿಹಾರದಲ್ಲಿ ವಿಚಿತ್ರ ಕಳ್ಳತನ; ರಾತ್ರೋರಾತ್ರಿ ಕೊಳವನ್ನೆ ಕದ್ದ ಕದೀಮರು!

ಬಿಹಾರದಲ್ಲಿ ವಿಚಿತ್ರ ಕಳ್ಳತನ; ರಾತ್ರೋರಾತ್ರಿ ಕೊಳವನ್ನೆ ಕದ್ದ ಕದೀಮರು!

- Advertisement -
- Advertisement -

60-ಅಡಿ ಸೇತುವೆ ಮತ್ತು ರೈಲು ಎಂಜಿನ್ ಕಳ್ಳತನದಿಂದ ಸುದ್ದಿಯಾಗಿದ್ದ ಬಿಹಾರದಲ್ಲಿ ಇದೀಗ ಸಂಪೂರ್ಣ ಕೊಳವೊಂದು ಕಣ್ಮರೆಯಾಗಿದೆ! ರಾಜ್ಯದ ವಿಲಕ್ಷಣ ಕಳ್ಳತನಗಳ ಪಟ್ಟಿಗೆ ಇದೀಗ ಇಡೀ ಕೊಳದ “ಕಳ್ಳತನ” ಪ್ರಕರಣವೂ ಸೇರ್ಪಡೆಯಾಗಿದೆ.

ಕೊಳ ಕದ್ದ ಕದೀಮರು ರಾತ್ರೋರಾತ್ರಿ ಅದರ ಮೇಲೆ ಗುಡಿಸಲು ನಿರ್ಮಿಸಲಾಗಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಕೊಳದ ಜಾಗದಲ್ಲಿ ಗುಡಿಸಲು ಕಂಡ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ, ಜಮೀನು ವಶಕ್ಕೆ ಇಡೀ ಕೊಳಕ್ಕೆ ಮಣ್ಣು ತುಂಬಿದ್ದ ಭೂಮಾಫಿಯಾ ಸದಸ್ಯರು ಪೊಲೀಸರು ಬರುವಷ್ಟರಲ್ಲಿ ಅಲ್ಲಿಂದ ಕಾಲ್ಕಿತ್ತಿದ್ದಾರೆ.

‘ಈ ಕೊಳವು ಸಾರ್ವಜನಿಕ ಒಡೆತನದಲ್ಲಿದ್ದು, ಇದರಲ್ಲಿ ಮೀನು ಸಾಗಾಣಿಕೆ ಹಾಗೂ ಇತರ ಚಟುವಟಿಕೆಗಳಿಗೆ ನೀರನ್ನು ಬಳಸಲಾಗುತ್ತಿತ್ತು’ ಎಂದು ಸ್ಥಳೀಯರು ತಿಳಿಸಿದ್ದು, ದರ್ಬಂಗಾದಲ್ಲಿ ಭೂಮಿಯ ಬೆಲೆ ಏರಿಕೆ ಆಗಿರುವುದಿಂದ ಭೂಗಳ್ಳರ ಕಣ್ಣು ಜಲಮೂಲದ ಮೇಲೆ ಬಿದ್ದಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಕೊಳ ತುಂಬಿಸುವ ಕಾರ್ಯ ಆರಂಭವಾದಾಗಲೆ ಸ್ಥಳೀಯರು ಅಧಿಕಾರಿಗಳಿಗೆ ದೂರು ನೀಡಿದ್ದರು.

ಸಂಬಂಧಪಟ್ಟು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದ ನಂತರ ಕೆಲಕಾಲ ಕಾಮಗಾರಿ ಸ್ಥಗಿತಗೊಂಡಿತ್ತು. ಆದರೆ, ಭೂಮಾಫಿಯಾದವರು ಕತ್ತಲೆಯಲ್ಲಿ ರಹಸ್ಯವಾಗಿ ಕೊಳಕ್ಕೆ ಮಣ್ಣು ತುಂಬಿಸುವ ಕೆಲಸ ಮಾಡಿದ್ದಾರೆ. ಹೀಗೆ ರಾತ್ರಿ ಕಾರ್ಯಾಚಾರಣೆಯಲ್ಲಿ ಅವರು ಇಡೀ ಕೊಳವು ಸಂಪೂರ್ಣವಾಗಿ ಕಣ್ಮರೆಯಾಗುವಂತೆ ಮಾಡಿದ್ದಾರೆ.

‘10-15 ದಿನಗಳಲ್ಲಿ ಕೊಳಕ್ಕೆ ಸಂಪೂರ್ಣವಾಗಿ ಮಣ್ಣು ತುಂಬಿದ್ದಾರೆ’ ಎಂದು ಜನರು ಹೇಳುತ್ತಾರೆ. ರಾತ್ರಿಯಲ್ಲಿ ಮಾತ್ರ ಕೆಲಸ ಮಾಡಲಾಗಿದ್ದು, ಅಧಿಕಾರಿಗಳು ಈ ಹಿಂದೆ ಸ್ಥಳಕ್ಕೆ ಭೇಟಿ ನೀಡಿದಾಗ ಕೆಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್ಡಿಪಿಒ) ಅಮಿತ್ ಕುಮಾರ್ ಹೇಳಿದರು.

ವಿಲಕ್ಷಣ ಕಳ್ಳತನಕ್ಕೆ ಸಾಕ್ಷಿಯಾದ ಬಿಹಾರ:

2022ರ ನವೆಂಬರ್‌ನಲ್ಲಿ ರೈಲ್ವೆ ಡೀಸೆಲ್ ಎಂಜಿನ್ ಕಳ್ಳತನವಾಗಿತ್ತು! ಬೇಗುಸರೈನಲ್ಲಿರುವ ರೈಲ್ವೆ ಯಾರ್ಡ್ ಅಂಗಳಕ್ಕೆ ಸುರಂಗ ಕೊರೆದಿದ್ದ ಕಳ್ಳರು, ಇಂಜಿನ್ನಿನ ಬಿಡಿಭಾಗಗಳನ್ನು ಕದಿಯಲು ಆರಂಭಿಸಿದ್ದರು. ರಿಪೇರಿಗೆ ಬಂದಿದ್ದ ಇಂಜಿನ್ನ ಬಿಡಿ ಭಾಗಗಳನ್ನು ಬೇರ್ಪಡಿಸಿದ್ದ ಕದೀಮರು, ಪೂರ್ಣ ಇಂಜಿನ್ ತೆಗೆದುಕೊಂಡು ಹೋಗಿದ್ದರು.

ಅದೇ ವರ್ಷದ ಆರಂಭದಲ್ಲಿ, ರೋಹ್ತಾಸ್ ಜಿಲ್ಲೆಯಲ್ಲಿ ಸಂಪೂರ್ಣ 60 ಅಡಿ ಸೇತುವೆಯನ್ನು ಕಳವು ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿ ಸೇರಿದಂತೆ ಎಂಟು ಮಂದಿಯನ್ನು ಬಂಧಿಸಲಾಗಿದ್ದು, ಆರೋಪಿಗಳಿಂದ 247 ಕೆಜಿ ಕಬ್ಬಿಣದ ನಾಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಳ್ಳರು ಜೆಸಿಬಿ ಮತ್ತು ಗ್ಯಾಸ್ ಕಟ್ಟರ್ ಬಳಸಿ ಅದನ್ನು ಕೆಡವಿದ್ದು, ಕೇವಲ ಮೂರೇ ದಿನಗಳಲ್ಲಿ ಸೇತುವೆ ನಾಪತ್ತೆಯಾಗಿತ್ತು.

ಇದನ್ನೂ ಓದಿ; ಉತ್ತರಾಖಂಡ: ಅಪ್ರಾಪ್ತೆ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ನಾಯಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...