Homeಚಳವಳಿಸಿಂಘು ಗಡಿಯಲ್ಲಿ ಹೋರಾಟನಿರತ ರೈತರ ಟೆಂಟ್‌ಗಳಿಗೆ ಬೆಂಕಿ ಹಚ್ಚಿದ ದುರ್ಷ್ಕಮಿ, ಟೆಂಟ್‌ಗಳು ಭಸ್ಮ

ಸಿಂಘು ಗಡಿಯಲ್ಲಿ ಹೋರಾಟನಿರತ ರೈತರ ಟೆಂಟ್‌ಗಳಿಗೆ ಬೆಂಕಿ ಹಚ್ಚಿದ ದುರ್ಷ್ಕಮಿ, ಟೆಂಟ್‌ಗಳು ಭಸ್ಮ

- Advertisement -
- Advertisement -

ಕಳೆದ ಐದು ತಿಂಗಳುಗಳಿಂದ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಟೆಂಟ್‌ಗಳಿಗೆ ದುರ್ಷ್ಕಮಿಗಳು ಗುರುವಾರ ಬೆಳಿಗ್ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ಪ್ರತಿಭಟನಾ ನಿರತ ರೈತರ ಎರಡು ಟೆಂಟ್‌ಗಳು ಮತ್ತು ಕಾರು ಬೆಂಕಿಯಲ್ಲಿ ಸುಟ್ಟು ಹೋಗಿದೆ. ಅಪರಿಚಿತ ಜನರು ಬೆಂಕಿ ಹಚ್ಚಿದ್ದಾರೆ. ಎರಡು ಟೆಂಟ್‌ ಒಳಗಿದ್ದ ಪೀಠೋಪಕರಣಗಳು ಮತ್ತು ಅಗತ್ಯ ವಸ್ತುಗಳು ಭಸ್ಮವಾಗಿವೆ. ಅದೃಷ್ಟವಶಾತ್ ಯಾವುದೇ ಸಾವುನೋವುಗಳು ವರದಿಯಾಗಿಲ್ಲ.

ಬೆಂಕಿ ಕಾಣಿಸಿಕೊಂಡ ಕೂಡಲೇ ಅಕ್ಕ-ಪಕ್ಕದ ಟೆಂಟ್‌ನಲ್ಲಿದ್ದ ಪ್ರತಿಭಟನಾಕಾರರು ಸಮಯಕ್ಕೆ ಸರಿಯಾಗಿ ಬೆಂಕಿಯನ್ನು ನಂದಿಸಿದ್ದಾರೆ. ಹಾಗಾಗಿ ಸಾವುನೋವು ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಹಿನ್ನೆಲೆ ರೈತ ಹೋರಾಟ ಮುಂದೂಡಿ, ಮಾತುಕತೆಗೆ ಬನ್ನಿ ಎಂದ ಕೃಷಿ ಸಚಿವ

 

May be an image of 2 people, beard, people standing and road
PC: FB@KisanEktaMorcha

ಘಟನೆ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಪ್ರತಿಭಟನಾ ನಿರತ ಪಂಜಾಬಿನ ರೈತ ಗುರ್ತೇಜ್ ಸಿಂಗ್, “ಪತ್ರಕರ್ತ ಎಂದು ಹೇಳಿಕೊಂಡು ಬಂದಿದ್ದ ವ್ಯಕ್ತಿ ಪ್ರತಿಭಟನೆ ಬಗ್ಗೆ ಮಾಹಿತಿ ಬೇಕು ಎಂದಿದ್ದಾರೆ. ಅವರನ್ನು ನಂಬಿದ ರೈತರು ಬಿಸಿಲು ಜಾಸ್ತಿ ಎಂದು ಟೆಂಟ್ ಒಳಗೆ ಕರೆದು ಕೂರಿಸಿಕೊಂಡಿದ್ದಾರೆ. ಆತ ಸದ್ದಿಲ್ಲದೆ ಬೆಂಕಿ ಹಚ್ಚಿ ತಪ್ಪಿಸಿಕೊಂಡು ಓಡಿ ಹೋಗಿದ್ದಾನೆ. ಎರಡು ದೊಡ್ಡ ದೊಡ್ಡ ಟೆಂಟ್‌ಗಳು ಮತ್ತು ಒಂದು ಕಾರು ಎಲ್ಲಾ ಬೆಂಕಿಯಲ್ಲಿ ಸುಟ್ಟು ಹೋಗಿವೆ. ರೈತರಿಗೆ ಸ್ಪಲ್ಪ ಗಾಯಗಳಾಗಿವೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರ ಹೋರಾಟವನ್ನು ಬೆಂಬಲಿಸಿದ ನಟ ‘ಯಶ್‌’

ರೈತರು ಆರೋಪಿಗಳ ವಿರುದ್ಧ ಕುಂಡ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಒಬ್ಬ ವ್ಯಕ್ತಿಯು ಬಿಆರ್‌ಟಿಎಸ್ ಕಡೆಯಿಂದ ಬಂದು ಎರಡು ಟೆಂಟ್‌ಗಳಿಗೆ ಬೆಂಕಿ ಹಚ್ಚಿದ್ದಾನೆ ಎಂದು ನಮಗೆ ತಿಳಿಸಲಾಗಿದೆ. ಈ ಹುಲ್ಲಿನ ಟೆಂಟ್‌ಗಳನ್ನು ರೈತರು ಬೇಸಿಗೆಯಲ್ಲಿ ನಿರ್ಮಿಸಿದ್ದಾರೆ. ಅವರು ತಮ್ಮ ವಸ್ತುಗಳನ್ನು ಇಟ್ಟುಕೊಂಡು, ಏರ್ ಕೂಲರ್‌ಗಳನ್ನು  ಅಳವಡಿಸಿದ್ದರು” ಎಂದಿದ್ದಾರೆ.

“ಘಟನೆಯ ನಂತರ ಆರೋಪಿಗಳ ಹತ್ತಿರದ ಸ್ಥಳೀಯರ ಗುಂಪಿನಲ್ಲಿ ಸೇರಿಕೊಂಡ ಕಾರಣ ಅವರನ್ನು ಗುರುತಿಸಲು ರೈತರಿಗೆ ಸಾಧ್ಯವಿಲ್ಲ ಎಂದು ರೈತರು ತಿಳಿಸಿದ್ದಾರೆ. ನಾವು ಈ ವಿಷಯವನ್ನು ಪರಿಶೀಲಿಸುತ್ತಿದ್ದೇವೆ ”ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಕಳೆದ ಸೆಪ್ಟೆಂಬರ್‌ನಲ್ಲಿ ಒಕ್ಕೂಟ ಸರ್ಕಾರ ಜಾರಿಗೆ ತಂದ ಮೂರು ವಿವಾದಿತ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನದ ಲಕ್ಷಾಂತರ ರೈತರು ದೆಹಲಿಯ ನಾಲ್ಕು ಗಡಿ ಬಿಂದುಗಳಾದ ಸಿಂಘು, ಟಿಕ್ರಿ (ಹರಿಯಾಣದ ಉದ್ದಕ್ಕೂ), ಶಹಜಾನ್‌ಪುರ ಮತ್ತು ಗಾಜಿಪುರ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಎಲ್ಲಾ ಹಿಂದೂಗಳು ಮುಸ್ಲಿಮರ ಕ್ಷಮೆ ಯಾಚಿಸಬೇಕಾಗಿದೆ: ಕುಂಭಮೇಳದ ಬಗ್ಗೆ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...