Homeಚಳವಳಿಸಿಂಘು ಗಡಿಯಲ್ಲಿ ಹೋರಾಟನಿರತ ರೈತರ ಟೆಂಟ್‌ಗಳಿಗೆ ಬೆಂಕಿ ಹಚ್ಚಿದ ದುರ್ಷ್ಕಮಿ, ಟೆಂಟ್‌ಗಳು ಭಸ್ಮ

ಸಿಂಘು ಗಡಿಯಲ್ಲಿ ಹೋರಾಟನಿರತ ರೈತರ ಟೆಂಟ್‌ಗಳಿಗೆ ಬೆಂಕಿ ಹಚ್ಚಿದ ದುರ್ಷ್ಕಮಿ, ಟೆಂಟ್‌ಗಳು ಭಸ್ಮ

- Advertisement -
- Advertisement -

ಕಳೆದ ಐದು ತಿಂಗಳುಗಳಿಂದ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಟೆಂಟ್‌ಗಳಿಗೆ ದುರ್ಷ್ಕಮಿಗಳು ಗುರುವಾರ ಬೆಳಿಗ್ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ಪ್ರತಿಭಟನಾ ನಿರತ ರೈತರ ಎರಡು ಟೆಂಟ್‌ಗಳು ಮತ್ತು ಕಾರು ಬೆಂಕಿಯಲ್ಲಿ ಸುಟ್ಟು ಹೋಗಿದೆ. ಅಪರಿಚಿತ ಜನರು ಬೆಂಕಿ ಹಚ್ಚಿದ್ದಾರೆ. ಎರಡು ಟೆಂಟ್‌ ಒಳಗಿದ್ದ ಪೀಠೋಪಕರಣಗಳು ಮತ್ತು ಅಗತ್ಯ ವಸ್ತುಗಳು ಭಸ್ಮವಾಗಿವೆ. ಅದೃಷ್ಟವಶಾತ್ ಯಾವುದೇ ಸಾವುನೋವುಗಳು ವರದಿಯಾಗಿಲ್ಲ.

ಬೆಂಕಿ ಕಾಣಿಸಿಕೊಂಡ ಕೂಡಲೇ ಅಕ್ಕ-ಪಕ್ಕದ ಟೆಂಟ್‌ನಲ್ಲಿದ್ದ ಪ್ರತಿಭಟನಾಕಾರರು ಸಮಯಕ್ಕೆ ಸರಿಯಾಗಿ ಬೆಂಕಿಯನ್ನು ನಂದಿಸಿದ್ದಾರೆ. ಹಾಗಾಗಿ ಸಾವುನೋವು ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಹಿನ್ನೆಲೆ ರೈತ ಹೋರಾಟ ಮುಂದೂಡಿ, ಮಾತುಕತೆಗೆ ಬನ್ನಿ ಎಂದ ಕೃಷಿ ಸಚಿವ

 

May be an image of 2 people, beard, people standing and road
PC: FB@KisanEktaMorcha

ಘಟನೆ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಪ್ರತಿಭಟನಾ ನಿರತ ಪಂಜಾಬಿನ ರೈತ ಗುರ್ತೇಜ್ ಸಿಂಗ್, “ಪತ್ರಕರ್ತ ಎಂದು ಹೇಳಿಕೊಂಡು ಬಂದಿದ್ದ ವ್ಯಕ್ತಿ ಪ್ರತಿಭಟನೆ ಬಗ್ಗೆ ಮಾಹಿತಿ ಬೇಕು ಎಂದಿದ್ದಾರೆ. ಅವರನ್ನು ನಂಬಿದ ರೈತರು ಬಿಸಿಲು ಜಾಸ್ತಿ ಎಂದು ಟೆಂಟ್ ಒಳಗೆ ಕರೆದು ಕೂರಿಸಿಕೊಂಡಿದ್ದಾರೆ. ಆತ ಸದ್ದಿಲ್ಲದೆ ಬೆಂಕಿ ಹಚ್ಚಿ ತಪ್ಪಿಸಿಕೊಂಡು ಓಡಿ ಹೋಗಿದ್ದಾನೆ. ಎರಡು ದೊಡ್ಡ ದೊಡ್ಡ ಟೆಂಟ್‌ಗಳು ಮತ್ತು ಒಂದು ಕಾರು ಎಲ್ಲಾ ಬೆಂಕಿಯಲ್ಲಿ ಸುಟ್ಟು ಹೋಗಿವೆ. ರೈತರಿಗೆ ಸ್ಪಲ್ಪ ಗಾಯಗಳಾಗಿವೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರ ಹೋರಾಟವನ್ನು ಬೆಂಬಲಿಸಿದ ನಟ ‘ಯಶ್‌’

ರೈತರು ಆರೋಪಿಗಳ ವಿರುದ್ಧ ಕುಂಡ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಒಬ್ಬ ವ್ಯಕ್ತಿಯು ಬಿಆರ್‌ಟಿಎಸ್ ಕಡೆಯಿಂದ ಬಂದು ಎರಡು ಟೆಂಟ್‌ಗಳಿಗೆ ಬೆಂಕಿ ಹಚ್ಚಿದ್ದಾನೆ ಎಂದು ನಮಗೆ ತಿಳಿಸಲಾಗಿದೆ. ಈ ಹುಲ್ಲಿನ ಟೆಂಟ್‌ಗಳನ್ನು ರೈತರು ಬೇಸಿಗೆಯಲ್ಲಿ ನಿರ್ಮಿಸಿದ್ದಾರೆ. ಅವರು ತಮ್ಮ ವಸ್ತುಗಳನ್ನು ಇಟ್ಟುಕೊಂಡು, ಏರ್ ಕೂಲರ್‌ಗಳನ್ನು  ಅಳವಡಿಸಿದ್ದರು” ಎಂದಿದ್ದಾರೆ.

“ಘಟನೆಯ ನಂತರ ಆರೋಪಿಗಳ ಹತ್ತಿರದ ಸ್ಥಳೀಯರ ಗುಂಪಿನಲ್ಲಿ ಸೇರಿಕೊಂಡ ಕಾರಣ ಅವರನ್ನು ಗುರುತಿಸಲು ರೈತರಿಗೆ ಸಾಧ್ಯವಿಲ್ಲ ಎಂದು ರೈತರು ತಿಳಿಸಿದ್ದಾರೆ. ನಾವು ಈ ವಿಷಯವನ್ನು ಪರಿಶೀಲಿಸುತ್ತಿದ್ದೇವೆ ”ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಕಳೆದ ಸೆಪ್ಟೆಂಬರ್‌ನಲ್ಲಿ ಒಕ್ಕೂಟ ಸರ್ಕಾರ ಜಾರಿಗೆ ತಂದ ಮೂರು ವಿವಾದಿತ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನದ ಲಕ್ಷಾಂತರ ರೈತರು ದೆಹಲಿಯ ನಾಲ್ಕು ಗಡಿ ಬಿಂದುಗಳಾದ ಸಿಂಘು, ಟಿಕ್ರಿ (ಹರಿಯಾಣದ ಉದ್ದಕ್ಕೂ), ಶಹಜಾನ್‌ಪುರ ಮತ್ತು ಗಾಜಿಪುರ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಎಲ್ಲಾ ಹಿಂದೂಗಳು ಮುಸ್ಲಿಮರ ಕ್ಷಮೆ ಯಾಚಿಸಬೇಕಾಗಿದೆ: ಕುಂಭಮೇಳದ ಬಗ್ಗೆ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...