Homeಮುಖಪುಟಉತ್ತರಾಖಂಡದಲ್ಲಿ ಮಾನವರ ಮೃತದೇಹಗಳನ್ನು ಕಿತ್ತು ತಿನ್ನುತ್ತಿರುವ ಬೀದಿ ನಾಯಿಗಳು

ಉತ್ತರಾಖಂಡದಲ್ಲಿ ಮಾನವರ ಮೃತದೇಹಗಳನ್ನು ಕಿತ್ತು ತಿನ್ನುತ್ತಿರುವ ಬೀದಿ ನಾಯಿಗಳು

- Advertisement -
- Advertisement -

ಉತ್ತರಾಖಂಡದ ಉತ್ತರಕಾಶಿಯ ಭಾಗೀರಥಿ ನದಿಯ ದಡದಲ್ಲಿರುವ ಕೇದಾರ ಘಾಟ್‌ನಲ್ಲಿ ಬೀದಿ ನಾಯಿಗಳು ಮಾನವರ ಮೃತದೇಹಗಳನ್ನು ತಿನ್ನುತ್ತಿರುವ ಭೀಕರ ದೃಶ್ಯಗಳು ಹೊರಬಿದ್ದಿವೆ. ಕಳೆದ ಕೆಲವು ದಿನಗಳಿಂದ ಮಳೆಯಿಂದಾಗಿ ಭಾಗೀರಥಿಯ ನೀರಿನ ಮಟ್ಟ ಏರಿಕೆಯಾಗಿ, ಶವಗಳು ಹೊರ ಬಂದಿವೆ. ಅವುಗಳಲ್ಲಿ ಕೆಲವು ಅರ್ಧ ಸುಟ್ಟುಹೋಗಿವೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.

“ನಾನು ನಿನ್ನೆ ಇಲ್ಲಿ ಕೆಲವು ಚಿತ್ರಕಲೆ ರಚಿಸುತ್ತಿದ್ದೆ. ಆಗ ಅರ್ಧ ಸುಟ್ಟ ದೇಹಗಳನ್ನು ಬೀದಿ ನಾಯಿಗಳು  ತಿನ್ನುವುದನ್ನು ನಾನು ನೋಡಿದೆ. ಜಿಲ್ಲಾಡಳಿತ ಮತ್ತು ಮುನ್ಸಿಪಲ್ ಕಾರ್ಪೋರೇಶನ್ ಇದಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು. ಇದು ಮಾನವೀಯತೆಯ ಸಾವು” ಎಂದು ಸ್ಥಳೀಯರು ಹೇಳಿದ್ದಾರೆ.

ಇಲ್ಲಿ ಶವಸಂಸ್ಕಾರ ಮಾಡಿರುವ ದೇಹಗಳು ಕೊರೊನಾ ಸೋಂಕಿತರ ಮೃತದೇಹಗಳಿರುವ ಸಾಧ್ಯತೆ ಇದೆ. ಈಗ ಶವಗಳು ಹೊರ ಬಂದಿರುವ ಕಾರಣ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮತ್ತೊಬ್ಬ ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಡಕತ್ತರಿಯಲ್ಲಿ‌ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲಪಾನ್‌ ಬಂದೋಪಾದ್ಯಾಯ್

ಘಟನೆ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ಆಡಳಿತಕ್ಕೆ ವಿನಂತಿಸಿದ್ದೇವೆ. ಪುರಸಭೆ ಮತ್ತು ಜಿಲ್ಲಾಡಳಿತಕ್ಕೆ ಸ್ಥಳೀಯ ನಿವಾಸಿಗಳು  ದೂರು ನೀಡಿದ್ದರೂ, ಅಂತಿಮ ವಿಧಿಗಳನ್ನು ನಡೆಸಿದ ನಂತರ ಶವಗಳನ್ನು ವಿಲೇವಾರಿ ಮಾಡಲು ಅಧಿಕಾರಿಗಳು ಯಾವುದೇ ವ್ಯವಸ್ಥೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

ಪುರಸಭೆಯ ಅಧ್ಯಕ್ಷ ರಮೇಶ್ ಸೆಮ್ವಾಲ್ ಅವರು ಸ್ಥಳೀಯರಿಂದ ದೂರುಗಳನ್ನು ಸ್ವೀಕರಿಸಿದ ನಂತರ, ಕೇದಾರ್ ಘಾಟ್‌ನಲ್ಲಿ ನದಿಯ ದಂಡೆಯಲ್ಲಿ ಕೊಚ್ಚಿ ಅರ್ಧ ಸುಟ್ಟ ಶವಗಳನ್ನು ದಹನ ಮಾಡಲು ಒಬ್ಬ ವ್ಯಕ್ತಿಯನ್ನು ನಿಯೋಜಿಸಿದ್ದಾರೆ.

“ಕಳೆದ ಕೆಲವು ದಿನಗಳಲ್ಲಿ, ನಮ್ಮ ಪ್ರದೇಶದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಿದೆ. ಮೃತದೇಹಗಳನ್ನು ಸರಿಯಾಗಿ ಸುಡುವುದಿಲ್ಲ ಎಂದು ನನಗೆ ತಿಳಿದುಬಂದಿದೆ. ಆದ್ದರಿಂದ ಅರ್ಧ ಸುಟ್ಟ ಶವಗಳ ಅಂತ್ಯಕ್ರಿಯೆಗಾಗಿ ಕೇದಾರ ಘಾಟ್‌ನಲ್ಲಿ ವ್ಯವಸ್ಥೆ ಮಾಡಲು ನಾನು ಆಡಳಿತಕ್ಕೆ ನಿರ್ದೇಶನ ನೀಡಿದ್ದೇನೆ” ಎಂದು ರಮೇಶ್ ಸೆಮ್ವಾಲ್ ಹೇಳಿದ್ದಾರೆ.

ಈ ಹಿಂದೆ ಉತ್ತರ ಪ್ರದೇಶ ಮತ್ತು ಬಿಹಾರದಿಂದ ಗಂಗಾ ನದಿಯಲ್ಲಿ ಹೆಚ್ಚಿನ ಸಂಖ್ಯೆಯ ಶವಗಳು ತೇಲುತ್ತಿರುವ ಘಟನೆಗಳು ವರದಿಯಾಗಿದ್ದವು. ಈಗ ಉತ್ತರಾಖಂಡದಲ್ಲಿಯೂ ಇಂತಹ ಘಟನೆಗಳು ವರದಿಯಾಗಿವೆ. ಜೊತೆಗೆ ನಾಯಿಗಳು ಮೃತದೇಹಗಳನ್ನು ಕಿತ್ತು ತಿನ್ನುತ್ತಿರುವ ಘಟನೆಗಳು ವರದಿಯಾಗಿವೆ.


ಇದನ್ನೂ ಓದಿ: 5 ಜಿ ತಂತ್ರಜ್ಞಾನ ಅನುಷ್ಠಾನದ ವಿರುದ್ಧ ದೆಹಲಿ ಹೈಕೋರ್ಟ್‌ಗೆ ನಟಿ ಜೂಹಿ ಚಾವ್ಲಾ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...