Homeಮುಖಪುಟಉತ್ತರಾಖಂಡದಲ್ಲಿ ಮಾನವರ ಮೃತದೇಹಗಳನ್ನು ಕಿತ್ತು ತಿನ್ನುತ್ತಿರುವ ಬೀದಿ ನಾಯಿಗಳು

ಉತ್ತರಾಖಂಡದಲ್ಲಿ ಮಾನವರ ಮೃತದೇಹಗಳನ್ನು ಕಿತ್ತು ತಿನ್ನುತ್ತಿರುವ ಬೀದಿ ನಾಯಿಗಳು

- Advertisement -
- Advertisement -

ಉತ್ತರಾಖಂಡದ ಉತ್ತರಕಾಶಿಯ ಭಾಗೀರಥಿ ನದಿಯ ದಡದಲ್ಲಿರುವ ಕೇದಾರ ಘಾಟ್‌ನಲ್ಲಿ ಬೀದಿ ನಾಯಿಗಳು ಮಾನವರ ಮೃತದೇಹಗಳನ್ನು ತಿನ್ನುತ್ತಿರುವ ಭೀಕರ ದೃಶ್ಯಗಳು ಹೊರಬಿದ್ದಿವೆ. ಕಳೆದ ಕೆಲವು ದಿನಗಳಿಂದ ಮಳೆಯಿಂದಾಗಿ ಭಾಗೀರಥಿಯ ನೀರಿನ ಮಟ್ಟ ಏರಿಕೆಯಾಗಿ, ಶವಗಳು ಹೊರ ಬಂದಿವೆ. ಅವುಗಳಲ್ಲಿ ಕೆಲವು ಅರ್ಧ ಸುಟ್ಟುಹೋಗಿವೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.

“ನಾನು ನಿನ್ನೆ ಇಲ್ಲಿ ಕೆಲವು ಚಿತ್ರಕಲೆ ರಚಿಸುತ್ತಿದ್ದೆ. ಆಗ ಅರ್ಧ ಸುಟ್ಟ ದೇಹಗಳನ್ನು ಬೀದಿ ನಾಯಿಗಳು  ತಿನ್ನುವುದನ್ನು ನಾನು ನೋಡಿದೆ. ಜಿಲ್ಲಾಡಳಿತ ಮತ್ತು ಮುನ್ಸಿಪಲ್ ಕಾರ್ಪೋರೇಶನ್ ಇದಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು. ಇದು ಮಾನವೀಯತೆಯ ಸಾವು” ಎಂದು ಸ್ಥಳೀಯರು ಹೇಳಿದ್ದಾರೆ.

ಇಲ್ಲಿ ಶವಸಂಸ್ಕಾರ ಮಾಡಿರುವ ದೇಹಗಳು ಕೊರೊನಾ ಸೋಂಕಿತರ ಮೃತದೇಹಗಳಿರುವ ಸಾಧ್ಯತೆ ಇದೆ. ಈಗ ಶವಗಳು ಹೊರ ಬಂದಿರುವ ಕಾರಣ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮತ್ತೊಬ್ಬ ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಡಕತ್ತರಿಯಲ್ಲಿ‌ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲಪಾನ್‌ ಬಂದೋಪಾದ್ಯಾಯ್

ಘಟನೆ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ಆಡಳಿತಕ್ಕೆ ವಿನಂತಿಸಿದ್ದೇವೆ. ಪುರಸಭೆ ಮತ್ತು ಜಿಲ್ಲಾಡಳಿತಕ್ಕೆ ಸ್ಥಳೀಯ ನಿವಾಸಿಗಳು  ದೂರು ನೀಡಿದ್ದರೂ, ಅಂತಿಮ ವಿಧಿಗಳನ್ನು ನಡೆಸಿದ ನಂತರ ಶವಗಳನ್ನು ವಿಲೇವಾರಿ ಮಾಡಲು ಅಧಿಕಾರಿಗಳು ಯಾವುದೇ ವ್ಯವಸ್ಥೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

ಪುರಸಭೆಯ ಅಧ್ಯಕ್ಷ ರಮೇಶ್ ಸೆಮ್ವಾಲ್ ಅವರು ಸ್ಥಳೀಯರಿಂದ ದೂರುಗಳನ್ನು ಸ್ವೀಕರಿಸಿದ ನಂತರ, ಕೇದಾರ್ ಘಾಟ್‌ನಲ್ಲಿ ನದಿಯ ದಂಡೆಯಲ್ಲಿ ಕೊಚ್ಚಿ ಅರ್ಧ ಸುಟ್ಟ ಶವಗಳನ್ನು ದಹನ ಮಾಡಲು ಒಬ್ಬ ವ್ಯಕ್ತಿಯನ್ನು ನಿಯೋಜಿಸಿದ್ದಾರೆ.

“ಕಳೆದ ಕೆಲವು ದಿನಗಳಲ್ಲಿ, ನಮ್ಮ ಪ್ರದೇಶದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಿದೆ. ಮೃತದೇಹಗಳನ್ನು ಸರಿಯಾಗಿ ಸುಡುವುದಿಲ್ಲ ಎಂದು ನನಗೆ ತಿಳಿದುಬಂದಿದೆ. ಆದ್ದರಿಂದ ಅರ್ಧ ಸುಟ್ಟ ಶವಗಳ ಅಂತ್ಯಕ್ರಿಯೆಗಾಗಿ ಕೇದಾರ ಘಾಟ್‌ನಲ್ಲಿ ವ್ಯವಸ್ಥೆ ಮಾಡಲು ನಾನು ಆಡಳಿತಕ್ಕೆ ನಿರ್ದೇಶನ ನೀಡಿದ್ದೇನೆ” ಎಂದು ರಮೇಶ್ ಸೆಮ್ವಾಲ್ ಹೇಳಿದ್ದಾರೆ.

ಈ ಹಿಂದೆ ಉತ್ತರ ಪ್ರದೇಶ ಮತ್ತು ಬಿಹಾರದಿಂದ ಗಂಗಾ ನದಿಯಲ್ಲಿ ಹೆಚ್ಚಿನ ಸಂಖ್ಯೆಯ ಶವಗಳು ತೇಲುತ್ತಿರುವ ಘಟನೆಗಳು ವರದಿಯಾಗಿದ್ದವು. ಈಗ ಉತ್ತರಾಖಂಡದಲ್ಲಿಯೂ ಇಂತಹ ಘಟನೆಗಳು ವರದಿಯಾಗಿವೆ. ಜೊತೆಗೆ ನಾಯಿಗಳು ಮೃತದೇಹಗಳನ್ನು ಕಿತ್ತು ತಿನ್ನುತ್ತಿರುವ ಘಟನೆಗಳು ವರದಿಯಾಗಿವೆ.


ಇದನ್ನೂ ಓದಿ: 5 ಜಿ ತಂತ್ರಜ್ಞಾನ ಅನುಷ್ಠಾನದ ವಿರುದ್ಧ ದೆಹಲಿ ಹೈಕೋರ್ಟ್‌ಗೆ ನಟಿ ಜೂಹಿ ಚಾವ್ಲಾ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...