Homeಮುಖಪುಟಸ್ತ್ರೀಮತಿ-1: ನನ್ನನ್ನೀಗ ಯಾವ ಪಾತ್ರದ ಆಕಾರಕ್ಕೆ ಹೊಂದಿಸಲಿ! -ಡಾ. ಕಾವ್ಯಶ್ರೀ ಎಚ್

ಸ್ತ್ರೀಮತಿ-1: ನನ್ನನ್ನೀಗ ಯಾವ ಪಾತ್ರದ ಆಕಾರಕ್ಕೆ ಹೊಂದಿಸಲಿ! -ಡಾ. ಕಾವ್ಯಶ್ರೀ ಎಚ್

ಹೆಣ್ಣಿಗೆ ಬೇಕಿರುವುದು ನಿರ್ಬಂಧಸಹಿತ ಸಂರಕ್ಷಣೆಯಲ್ಲ, ತಾನು ತಾನಾಗಿಯೇ ಇರುವ ಸ್ವಾತಂತ್ರ್ಯ. ತನ್ನ ಪಾಡಿಗೆ ತಾನಿರಲು, ನಿರಾಳ ಉಸಿರಾಡಲು ಅವಳಿಗೆ ಸ್ವಲ್ಪ ಸ್ಪೇಸ್ ಕೊಡಿ ಪ್ಲೀಸ್!

- Advertisement -
- Advertisement -

ಲಾಕ್‌ಡೌನ್ ಮತ್ತು ದ್ವಿತೀಯ ಪಿಯುಸಿ ಉತ್ತರಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಮುಗಿದಮೇಲೆ ಎಂದಿನಂತೆ ಕಾಲೇಜು ಆರಂಭವಾಗಿದೆ. ಮೊನ್ನೆಯ ದಿನ ಕಾಲೇಜಿಗೆ ಹೋದಮೇಲೆ ಕಾಫಿ ಕುಡಿಯಲೇಬೇಕು ಅನಿಸಿತು. ಮೊದಲಿನಿಂದಲೂ ಕಾಲೇಜಿನಲ್ಲಿ ಅದೊಂದು ರಿಚ್ಯುವಲ್ ಆಗಿಬಿಟ್ಟಿರುವುದರಿಂದಲೂ ಮತ್ತು ನಮ್ಮ ಕ್ಯಾಂಟೀನಿನ ಶುಚಿತ್ವದ ಮೇಲಿರುವ ನಂಬಿಕೆಯಿಂದಲೂ ಕೊರೊನಾ ಸಮಯದಲ್ಲಿಯೂ ಧೈರ್ಯ ಮಾಡಿ ಹೋದೆ. ನನ್ನೊಂದಿಗೆ ಕಾಫಿಗೆ ಜೊತೆಯಾಗುತ್ತಿದ್ದ ಸಹೋದ್ಯೋಗಿಗಳ ವಾಲ್ಯುಯೇಶನ್ ವರ್ಕ್ ಇನ್ನೂ ಮುಗಿದಿರಲಿಲ್ಲವಾದ್ದರಿಂದ ಮತ್ತು ಅಲ್ಲಿದ್ದ ಇನ್ನುಳಿದವರಿಗೆ ಹೊರಬರುವ ಮನಸ್ಸಿರಲಿಲ್ಲವಾದ್ದರಿಂದಲೂ ನಾನೊಬ್ಬಳೇ ಕ್ಯಾಂಟೀನಿಗೆ ಹೊರಟೆ.

ಒಂದೇ ಕಟ್ಟಡದಲ್ಲಿ ಶಾಲೆ, ಕಾಲೇಜುಗಳೆರಡೂ ಇವೆ. ಎಸ್‌ಎಸ್‌ಎಲ್‌ಸಿ ಎಕ್ಸಾಮ್ ಅಂದು ಇರಲಿಲ್ಲವಾದ್ದರಿಂದ ಕ್ಯಾಂಟೀನ್ ತೆರೆದಿತ್ತು. ಕ್ಯಾಂಟೀನ್ ಕೇವಲ ಕಾಲೇಜಿನವರಿಗಷ್ಟೇ ಅಲ್ಲದೇ ಸಾರ್ವಜನಿಕರಿಗೂ ಸೇವೆಯೊದಗಿಸುತ್ತದೆ. ಕಾಫಿ ತೆಗೆದುಕೊಂಡು ಕುಡಿಯುತ್ತಾ ಸುತ್ತಮುತ್ತ ಕಣ್ಣಾಡಿಸಿದೆ. ಅಲ್ಲಿದ್ದ ಬಹುತೇಕರು ವಿಚಿತ್ರವಾಗಿ ನನ್ನನ್ನೇ ಗಮನಿಸುತ್ತಿದ್ದುದು ನೋಡಿ ಅಚ್ಚರಿಯಾಯಿತು. ಯೋಚಿಸುವಷ್ಟರಲ್ಲಿ ತಟ್ಟನೆ ಹೊಳೆಯಿತು. ಅಲ್ಲಿ ಅಂದು ಆ ಇಡೀ ಕ್ಯಾಂಟೀನಿನಲ್ಲಿ ನಾನೊಬ್ಬಳೇ ಹೆಂಗಸು! ಅಷ್ಟು ಪರಿಚಿತ ಮತ್ತು ಆಪ್ತವಾದ ಕ್ಯಾಂಟೀನ್ ಒಂದರೆಕ್ಷಣ ಅಪರಿಚಿತ ಭಾವವನ್ನು ಮೂಡಿಸಿ ಮರೆಯಾಯಿತು. ಮಾಸ್ಕ್ ತೆಗೆದು ನನ್ನ ಕಾಫಿಯನ್ನು ಹೀರುತ್ತಾ ಆಲೋಚನೆಗೆ ಬಿದ್ದೆ.

ಕ್ಯಾಂಟೀನಿಗೆ ಬೆಳಗ್ಗಿನ ವಾಕಿಂಗ್, ಜಾಗ್ಗಿಂಗ್ ಮುಗಿಸಿ ಬರುವವರು, ಇಲ್ಲಿಯ ಕಾಫಿ-ತಿಂಡಿಗೆಂದೇ ಪ್ರತಿದಿನ ಬರುವವರೂ ಇರುತ್ತಾರೆ. ನಾನೇನಾದರೂ ಮನೆಯಲ್ಲಿ ಕುಳಿತು ಬೇಸರವಾಗಿ ಹವಾಸೇವನೆಗೆಂದೊ, ಕಾಫಿ ಕುಡಿಯಲೆಂದೋ ಹೊರಬಂದರೆ ಹೇಗಿರುತ್ತದೆ. ಹೀಗೆ ಗಂಡಸರು ಮನೆಯಿಂದ ಹೊರಗೆ ಬರುವುದಿಲ್ಲವೇ. ನಿಂತಿದ್ದವರು ನಿಂತಿದ್ದ ಹಾಗೆಯೇ ಉಟ್ಟಬಟ್ಟೆಯಲ್ಲಿಯೇ ಚಪ್ಪಲಿಯೇರಿಸಿ ಸ್ವಲ್ಪ ಹೊರಗೆಹೋಗಿ ಬರ‍್ತೀನಿ ಅಂತ ಹೊರಟೇಬಿಡ್ತಾರೆ. ಆದರೆ ಹೆಣ್ಣುಮಕ್ಕಳು ಹಾಗೆ ಹೋಗುವುದಕ್ಕೆ ಸಾಧ್ಯವೇ ಯೋಚಿಸಿ ನೋಡಿ? ಕೊರೊನಾ ಕಾಲದಲ್ಲಿರಲಿ, ಕೊರೊನಾ ಪೂರ್ವದಲ್ಲಿಯೂ, ಕೊರೊನೋತ್ತರ ಕಾಲದಲ್ಲಿಯೂ ಕಲ್ಪಿಸಿಕೊಳ್ಳುವುದಕ್ಕೇ ಕಷ್ಟವಾಗುತ್ತಿದೆ ಅಲ್ಲವೇ? ಇಂತಹ ಸಂದರ್ಭದಲ್ಲಿಯೂ ಅವಳಿಗೆ ಹೊರಬರುವಂತಹ ಅವಶ್ಯಕತೆ ಏನಿದೆ? ಅಂಥಹದ್ದೇನಿರುತ್ತದೆ ಅವರಿಗೆ? ಹೌದಲ್ವಾ? ಸುಮ್ಮನೆ ಮನೆಯಲ್ಲಿದ್ದರೆ ಆಗುವುದಿಲ್ಲವೇ. ಸಾಮಾನ್ಯವಾಗಿ ಎಲ್ಲರ ಅಥವಾ ಬಹುತೇಕರ ಆಲೋಚನಾಧಾಟಿ ಹೀಗೇ ಇರುತ್ತದೆ.

ಇಷ್ಟು ಸಣ್ಣ, ಸೂಕ್ಷ್ಮ ವಿಚಾರಗಳೇ ಒಂದಿಡೀ ಮನೋಧರ್ಮವನ್ನು, ಆಲೋಚನಾಕ್ರಮವನ್ನು ರೂಪಿಸುತ್ತಿರುತ್ತದೆ, ಆದ್ದರಿಂದ ಮನಸ್ಸಿನಲ್ಲಿ ಹಾದುಹೋಗುವ ಇಂತಹ ಸಣ್ಣಸಣ್ಣ ಯೋಚನೆಗಳನ್ನು, ಭಾವನೆಗಳನ್ನೇ ನಾವು ಕೌಂಟರ್ ಮಾಡಬೇಕಿರುವುದು.

ಏಕೆಂದರೆ ಹೆಣ್ಣನ್ನು ಒಂದೊಂದು ಪಾತ್ರದ ಅಚ್ಚಿನೊಳಗೆ ತೂರಿಸಿ ಕೂರಿಸಲಾಗಿದೆ. ತಾಯಿ, ತಂಗಿ, ಹೆಂಡತಿ, ಗೆಳತಿ ಹೀಗೇ. ಕಾರ್ಯೇಶು ದಾಸಿ, ಕರಣೇಶು ಮಂತ್ರಿ, ಭುಜ್ಯೇಶು ಮಾತಾ, ಶಯನೇಶು ರಂಭಾ ಎನ್ನುವ ಸಾಲುಗಳನ್ನೂ ಅಲಿಖಿತ ಶಾಸನದಂತೆ, ಎಂದೂ ಬದಲಾಯಿಸಲಾಗದಂತೆ ಜನಮಾನಸದಲ್ಲಿ ಆಳವಾಗಿ ಕೆತ್ತಿಬಿಟ್ಟಿದ್ದಾರೆ. ಒಂದೊಂದು ಪಾತ್ರವನ್ನೂ ಒಂದೊಂದು ಚೌಕಟ್ಟಿನಲ್ಲಿ ಬಂಧಿಸಿಬಿಟ್ಟಿದ್ದೇವೆ, ನೀರನ್ನು ಪಾತ್ರೆಯ ಒಳಗೆ ಹಾಕಿದಂತೆ. ನೀರನ್ನು ಯಾವ ಪಾತ್ರೆಗೆ ಹಾಕುತ್ತೀರೋ ಆ ಆಕಾರವನ್ನು ಮೈವೆತ್ತುತ್ತದೆ. ಆದರೆ ಸಮಸ್ಯೆ ಎದುರಾಗುವುದು ನೀರು ಅದೇ ಆಕಾರದಲ್ಲಿರಬೇಕು ಎಂದು ನಿರೀಕ್ಷಿಸಿದಾಗ, ನಿರ್ದೇಶಿಸಿದಾಗ, ಫರ್ಮಾನು ಹೊರಡಿಸಿದಾಗ!

ಇತ್ತೀಚೆಗೆ ಅತ್ಯಾಚಾರ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಧೀಶರೊಬ್ಬರು ಆ ಸಂದರ್ಭದಲ್ಲಿ ಅತ್ಯಾಚಾರಕ್ಕೊಳಗಾದ ಹೆಣ್ಣಿನ ಬಗ್ಗೆ ಆಡಿರುವ ಮಾತುಗಳು ಆಘಾತಕಾರಿಯಾಗಿದೆ. ಅತ್ಯಾಚಾರಕ್ಕೆ ಆಕೆಯೇ ಕಾರಣ ಎಂಬಂತೆ ಆಕೆಯ ವರ್ತನೆಯ ವಿಶ್ಲೇಷಣೆ ಮಾಡಿರುವ ನ್ಯಾಯಾಧೀಶರು ಅತ್ಯಾಚಾರವಾದ ನಂತರ ಆಕೆ ಸುಸ್ತಾಗಿ ಮಲಗಿಬಿಟ್ಟಿದ್ದನ್ನು ಒಬ್ಬ `ಭಾರತೀಯ ಮಹಿಳೆ’ಗೆ ತಕ್ಕುದಾದ ನಡವಳಿಕೆ ಅದಲ್ಲ ಎಂದು ಹೇಳಿದ್ದಾರೆ. ಹಾಗಿದ್ದರೆ ಇಲ್ಲಿ ಭಾರತೀಯ ಮಹಿಳೆಯಾಗಿ ಅವಳು ಚಂಡಿಚಾಮುಂಡಿಯ ರೂಪವನ್ನೋ, ಕಾಳಿಯ ಅವತಾರವನ್ನೋ ತಾಳಿ ಅವನನ್ನು ಸಂಹರಿಸಬೇಕಿತ್ತೇ? (ಆಕೆ ಮರುದಿನ ಬೆಳಗ್ಗೆ ಹೋಗಿ ದೂರನ್ನು ಸಲ್ಲಿಸಿದ್ದಾಳೆ)

ದೂರು ನೀಡಿರುವ ಮಹಿಳೆ ಆರೋಪಿಯೊಂದಿಗೆ ತಡರಾತ್ರಿಯವರೆಗೆ ಇದ್ದುದು ಏಕೆ ಎಂದು ಪ್ರಶ್ನಿಸುವುದಲ್ಲದೇ, ಪರೋಕ್ಷವಾಗಿ ಘಟನೆಗೆ ಆಕೆಯೇ ಕಾರಣಳಾಗುತ್ತಾಳೆ ಎಂದಿದ್ದಾರೆ. ಭಾರತೀಯ ಹೆಣ್ಣು `ಹಾಗಿರುವುದಕ್ಕೆ ಸಾಧ್ಯವಿಲ್ಲ’, `ಹಾಗಿರುವುದಿಲ್ಲ’ ಎಂದು ನ್ಯಾಯಾಧೀಶರೇ ತೀರ್ಪು ನೀಡಿದರೆ, ಸುಶಿಕ್ಷಿತರಾಗಿ ಅಷ್ಟು ಉನ್ನತ ಹುದ್ದೆಯನ್ನೇರಿ, ಸಾಮಾಜಿಕ ವ್ಯವಸ್ಥೆಯ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯೂ ಒಬ್ಬ ಸಾಮಾನ್ಯ ಮನುಷ್ಯನಂತೆ ಸಂಕುಚಿತವಾಗಿ ಯೋಚಿಸುವುದಾದರೆ – ಈ ಪೂರ್ವಾಗ್ರಹಗಳು, ಸಮಾಜದ ಅಪ್‌ಬ್ರಿಂಗಿಂಗ್, ಕಂಡೀಶನಿಂಗ್‌ ನಿಂದ ಹೊರಬಂದು ಯೋಚಿಸುವುದು ಅಷ್ಟು ಕಷ್ಟವೆಂದಾದರೆ, ಆ ಆಕ್ಟೋಪಸ್ ಹಿಡಿತ ಎಷ್ಟು ಬಿಗಿಯಾಗಿದೆ. ಅದರಿಂದ ಬಿಡುಗಡೆ ಪಡೆಯುವುದಕ್ಕೆ ಇನ್ನೂ ಎಷ್ಟು ಶತಮಾನಗಳು ಬೇಕಾಗಬಹುದೋ.

`ಅನ್‌ಬಿಕಮಿಂಗ್ ಆಫ್ ಇಂಡಿಯನ್ ವುಮೆನ್’ ಎಂಬ ಸಾಲನ್ನು ಅವರು ಬಳಸಿದ್ದಾರೆ, ಇಲ್ಲಿ ಆಗಬೇಕಿರುವುದು `ಅನ್‌ಲರ್ನಿಂಗ್ ಆಫ್ ಜೆಂಡರ್ ಬಯಾಸ್’, `ಅನ್‌ಲರ್ನಿಂಗ್ ಆಫ್ ಪೆಟ್ರಿಯಾರ್ಕಿ’, `ಅನ್‌ಲರ್ನಿಂಗ್ ಆಫ್ ಮಿಸೊಜಿನಿ’. ರಾತ್ರಿ ಹೊರಗೆ ಹೋಗುವ, ಪುರುಷರೊಂದಿಗೆ ಮಾತನಾಡುವ ಮಹಿಳೆಯರ ನಡತೆ ಸರಿಯಿಲ್ಲ ಎನ್ನುವುದಾದರೆ ನಾವಿನ್ನೂ ಯಾವ ಯುಗದಲ್ಲಿದ್ದೇವೆ. ಮನೆಯಲ್ಲಿ ಅವಳನ್ನು ಕೂಡಿಹಾಕಿ ಪುರುಷ ಮಾತ್ರ ಹೊರಗೆಹೋಗಿ ದುಡಿದುಕೊಂಡು ಬರುವ ಕಾಲ ಇದಲ್ಲ. ಆಕೆಯೂ ಸಮಾನವಾಗಿ ದುಡಿಯುತ್ತಿರುವ ದಿನಮಾನಗಳಲ್ಲಿ ಮತ್ತು ರಾತ್ರಿಪಾಳಿಗಳಲ್ಲೂ ಕರ್ತವ್ಯ ನಿರ್ವಹಿಸಲಾರಂಭಿಸಿ ದಶಕಗಳೇ ಕಳೆದಿದ್ದರೂ, ಅವಳ ಮೇಲೆ ಇಂತಹ ನಿರ್ಬಂಧಗಳನ್ನು ಹೊರಿಸುವುದನ್ನು ಪ್ರಾಕ್ಟಿಕಲ್ ಆಗಿ ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಇನ್ನು ಇದನ್ನು ಆಧರಿಸಿ ಅವಳ ಚಾರಿತ್ರ್ಯದ ಬಗ್ಗೆ ತೀರ್ಪು ಕೊಡುವುದು ಎಷ್ಟು ಸರಿ. ಮಹಿಳೆಯರೂ ಕೂಡ ಇಂತಹ ಹೆಣ್ಣುಮಕ್ಕಳನ್ನು ಆಡಿಕೊಳ್ಳುವುದಿದೆ.

ನಾವು ಆ ಮನೋಧರ್ಮವನ್ನು ಸುಲಭವಾಗಿ ಬದಲಾಯಿಸಲು ಸಾಧ್ಯವೇ ಇಲ್ಲ. ಪುರುಷರದಷ್ಟೇ ಅಲ್ಲ ಮಹಿಳೆಯರದ್ದೂ ಕೂಡ. `ತಪ್ಪಡ್’ ಸಿನಿಮಾಗೆ ಬಂದ ಪ್ರತಿಕ್ರಿಯೆಗಳನ್ನು ಗಮನಿಸುತ್ತಿದ್ದಾಗ ಕೆಲವಷ್ಟು ಹೆಣ್ಣುಮಕ್ಕಳೇ ಆ ಕಥಾವಸ್ತು ಉತ್ಪ್ರೇಕ್ಷೆಯಿಂದ ಕೂಡಿದೆ, ಅಸಂಬದ್ಧವಾಗಿದೆ ಎಂದದ್ದನ್ನು ನೋಡಿದೆ. (ಆ ಚಿತ್ರದಲ್ಲಿನ ನಾಯಕಿ, ಗಂಡ ಪಾರ್ಟಿಯಲ್ಲಿ ತನ್ನ ಕಪಾಳಕ್ಕೆ ಹೊಡೆದ ಕಾರಣಕ್ಕೇ ಆತನಿಂದ ವಿಚ್ಛೇದನ ಪಡೆದುಕೊಳ್ಳುತ್ತಾಳೆ).

ಅಂದರೆ ಈ ಸಮಾಜ ಅವರನ್ನು ಎಷ್ಟರಮಟ್ಟಿಗೆ ಕಂಡೀಶನಿಂಗ್ ಮಾಡಿದೆ ಎಂಬುದು ತಿಳಿದುಬರುತ್ತದೆ. ಇನ್ನು ಮ್ಯಾರಿಟಲ್ ರೇಪ್‌ಅನ್ನು ಅರ್ಥಮಾಡಿಸಲು ಎಷ್ಟು ಶತಮಾನಗಳು ಬೇಕಾಗಬಹುದು. ಈ ಸಮಸ್ಯೆ ಕೇವಲ ಭಾರತೀಯ ಸಮಾಜಕ್ಕೆ ಮಾತ್ರ ಸೀಮಿತವಲ್ಲ.

ವೈಯಕ್ತಿಕ ನಿಲುವುಗಳು ಸಾಂಸ್ಥಿಕ ರೂಪ ಪಡೆದು ಇಡೀ ವ್ಯವಸ್ಥೆಯನ್ನೇ ಪ್ರಭಾವಿಸುವುದಕ್ಕೆ ಇದೊಂದು ಸಣ್ಣ ಉದಾಹರಣೆಯಷ್ಟೇ. ಈ ಘಟನೆಯಂತೂ ಕಾನೂನಾತ್ಮಕವಾಗಿ ಪಿತೃಪ್ರಧಾನ ಮನಸ್ಥಿತಿಗೆ ಒಂದು ಸಾಂವಿಧಾನಿಕ ಚೌಕಟ್ಟನ್ನೂ ಒದಗಿಸುತ್ತಿರುವಂತಿದೆ. `ನಥಿಂಗ್ ಪರ್ಸನಲ್’ ಎಂದು ನಯವಾಗಿ ನುಣುಚಿಕೊಳ್ಳುವುದರಿಂದ ಮುಂದಕ್ಕೆ ಸಾಗಿ `ಪರ್ಸನಲ್ ಇಸ್ ಪೊಲಿಟಿಕಲ್’ ಎನ್ನುವ ಅರಿವು ಮೂಡಬೇಕಿದೆ.

ಪಾತ್ರೆಯೊಳಗೆ ನೀರು ತುಂಬಿಸಿಟ್ಟಂತೆ ನೀನು ಹೀಗೇ ಇರಬೇಕು, ನಿನ್ನ ಪಾತ್ರವಿಷ್ಟೇ ಎಂದರೆ ಹೇಗೆ? ಸ್ತ್ರೀ ತನ್ನ ಪಾತ್ರವನ್ನು ಸ್ವತಂತ್ರವಾಗಿ ನಿರ್ವಹಿಸಲು ತಕ್ಕುದಾದ ಮನೋಭೂಮಿಕೆಯೊಂದನ್ನು ಸಿದ್ಧಪಡಿಸುವುದು ಹೇಗೆ? ಬದಲಾಗದ ಪಿತೃಪ್ರಧಾನ ಸಂಸ್ಕೃತಿಯನ್ನು ಬದಲಾಯಿಸಬೇಕು ಅಂದರೆ ನಾವು ಬದಲಾಗಬೇಕು. ಹೆಣ್ಣಿಗೆ ಬೇಕಿರುವುದು ನಿರ್ಬಂಧಸಹಿತ ಸಂರಕ್ಷಣೆಯಲ್ಲ, ತಾನು ತಾನಾಗಿಯೇ ಇರುವ ಸ್ವಾತಂತ್ರ್ಯ. ತನ್ನ ಪಾಡಿಗೆ ತಾನಿರಲು, ನಿರಾಳ ಉಸಿರಾಡಲು ಅವಳಿಗೆ ಸ್ವಲ್ಪ ಸ್ಪೇಸ್ ಕೊಡಿ ಪ್ಲೀಸ್!

ಕಾಫಿ ಮುಗಿಯುವುದರೊಂದಿಗೇ ಆಲೋಚನಾ ಸರಣಿಯೂ ತುಂಡಾಯಿತು. ಪೇಪರ್ ಕಪ್ಪಿನ ತಳದಲ್ಲಿ ಸ್ವಲ್ಪ ಕಾಫಿ ಉಳಿದಿತ್ತು. ಕಪ್ಪಿನ ಆಕಾರದಲ್ಲಿಯೇ ತಳದಲ್ಲಿದ್ದ ಕಾಫಿ ಅಂಚಿನ ಸುತ್ತಲೂ ಹರಡಿಕೊಂಡಿತ್ತು
ನೋಡುತ್ತಲೇ ಅನ್ನಿಸಿದ್ದು…..

ಹೌದು ನಾನೀಗ ಯಾವ ಪಾತ್ರೆಯ ಒಳಗೆ ಕೂರಲಿ?
ಅಲ್ಲಲ್ಲಾ ಯಾವ ಪಾತ್ರದ ಒಳಹೋಗಲಿ?
ನನ್ನನ್ನು ಈಗ ಯಾವ ಪಾತ್ರದ ಆಕಾರಕ್ಕೆ ಹೊಂದಿಸಲಿ?

ಚಿತ್ತಕಾವ್ಯ: ಇನ್ನೂ ಎಷ್ಟು ದಿನ ಹೇಳಿದ್ದನ್ನೇ ಹೇಳಿಕೊಂಡು ಇರುತ್ತೀರಾ? ಕಾಲ ಬದಲಾಗಿದೆ, ಪುರುಷರ ಮನಸ್ಥಿತಿ ಬದಲಾಗಿದೆ ಎನ್ನುವವರಿಗೇನೂ ಕೊರತೆಯಿಲ್ಲ. ಪುರುಷರ ಮೇಲೆ ಮಹಿಳೆಯರು ನಡೆಸುವ ದೌರ್ಜನದ ಬಗ್ಗೆ ಸ್ತ್ರೀವಾದಿಗಳು ಮಾತನಾಡುವುದಿಲ್ಲ! ಎಂದು ಕೊಂಕು ನುಡಿಯುವವರ ಸಂಖ್ಯೆಯೂ ಕಡಿಮೆ ಏನಿಲ್ಲ. ಆದರೆ ನಾವಿಲ್ಲಿ ಮಾತನಾಡುತ್ತಿರುವುದು ಬಹುಜನಭಾರತದ ಬಹುಸಂಖ್ಯಾತರ ಬಗ್ಗೆ !!

ಎಲ್ಲಿಯವರೆಗೆ ಮಾಡಿದ್ದನ್ನೇ ಮಾಡುತ್ತಿರುತ್ತೀರೋ ಅಲ್ಲಿಯವರೆಗೆ ಹೇಳಿದ್ದನ್ನೇ ಹೇಳುತ್ತಿರಬೇಕಾಗುತ್ತದೆ.

ಡಾ. ಕಾವ್ಯಶ್ರೀ ಎಚ್, ಲೇಖಕಿ- ಉಪನ್ಯಾಸಕಿ. (ಲೇಖಕಿ-ಚಿಂತಕಿ ಚಿಮಮಾಂಡ ಅಡಿಚಿ ಅವರ ಫೆಮಿನಿಸ್ಟ್ ಮ್ಯಾನಿಫೆಸ್ಟೋ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ)


ಇದನ್ನೂ ಓದಿ: ಬಹುಜನ ಭಾರತ: ಲಾಭದ ಗುಲಾಮಗಿರಿಗೆ ಬಿದ್ದಿರುವ ಮಾಧ್ಯಮ! – ಡಿ.ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸ್ಪೇಸ್ ಕೊಡಿ ಅಂತ ಕೇಳೋದಕ್ಕೆ ಅವರ್ಯಾರು? ನಾವೇ ಸೃಷ್ಟಿ ಮಾಡಿಕೊಳ್ಳಬೇಕಿದೆ ಮೇಡಂ.. ಚಂದದ ಬರಹ..

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...