Homeಕರ್ನಾಟಕಬೀದಿ ನಾಯಿಗಳ ಮೈಕ್ರೋಚಿಪಿಂಗ್ ವಿರುದ್ಧ ಅರ್ಜಿ | ನೋಟಿಸ್ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್

ಬೀದಿ ನಾಯಿಗಳ ಮೈಕ್ರೋಚಿಪಿಂಗ್ ವಿರುದ್ಧ ಅರ್ಜಿ | ನೋಟಿಸ್ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್

- Advertisement -
- Advertisement -

ಬೆಂಗಳೂರಿನ ಬೀದಿ ನಾಯಿಗಳಿಗೆ ಮೈಕ್ರೋಚಿಪ್‌ಗಳನ್ನು ಅಳವಡಿಸುವ ಬಿಬಿಎಂಪಿಯ ಪ್ರಸ್ತಾಪವನ್ನು ಸೇವ್ ಅವರ್ ಅನಿಮಲ್ಸ್ ಚಾರಿಟಬಲ್ ಟ್ರಸ್ಟ್ ಮತ್ತು ಪರಿಸರ ಹೋರಾಟಗಾರ್ತಿ ನವೀನ ಕಾಮತ್ ಅವರು ರಾಜ್ಯ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್) ಪ್ರತಿಕ್ರಿಯೆಯಾಗಿ ಮಂಗಳವಾರ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು, ಬಿಬಿಎಂಪಿ ಮತ್ತು ಇತರರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಬೀದಿ ನಾಯಿಗಳ

2024 ಫೆಬ್ರವರಿ 29ರ ಬಿಬಿಎಂಪಿ ಪ್ರಸ್ತಾವನೆಯ ಕಾನೂನುಬದ್ಧತೆಯನ್ನು ಪ್ರಶ್ನಿಸುವ ಈ ಅರ್ಜಿಯ ವಾದವನ್ನು ಆಲಿಸಿದ ನಂತರ ಮುಖ್ಯ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ನೋಟಿಸ್‌ಗಳನ್ನು ನೀಡಿದೆ. ನ್ಯಾಯಾಲಯವು ಪ್ರಕರಣವನ್ನು ಡಿಸೆಂಬರ್ 16 ಕ್ಕೆ ಹೆಚ್ಚಿನ ವಿಚಾರಣೆಗೆ ಮುಂದೂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲರು, ”ಬೀದಿ ನಾಯಿಗಳನ್ನು ನಿಯಂತ್ರಿಸಲು ನಾಯಿಗಳಿಗೆ ಮೈಕ್ರೋಚಿಪ್ಪಿಂಗ್ ಅಳವಡಿಸಲು ಬಿಡ್ ನೀಡಲು ಬಿಬಿಎಂಪಿಗೆ ಯಾವುದೇ ಕಾನೂನು ಅಧಿಕಾರವಿಲ್ಲ. ಏಕೆಂದರೆ ಪ್ರಾಣಿ ಜನನ ನಿಯಂತ್ರಣ (ಎಬಿಸಿ) ನಿಯಮಗಳು, 2023, ಇದಕ್ಕೆ ಅನುಮತಿ ನೀಡುವುದಿಲ್ಲ. ಅಲ್ಲದೆ, ಕಾರ್ಯವಿಧಾನವನ್ನು ಮೇಲ್ವಿಚಾರಣೆ ಮಾಡಲು ಸಮಿತಿಯನ್ನು ರಚಿಸುವ ಅಧಿಕಾರ ಮತ್ತು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯಿಂದ ಇದಕ್ಕೆ ಯಾವುದೇ ಅನುಮತಿ ಇರಲಿಲ್ಲ. ಬಿಡ್ ನೀಡುವ ಸಂಪೂರ್ಣ ಪ್ರಕ್ರಿಯೆಯು ಕಾನೂನುಬಾಹಿರವಾಗಿದೆ” ಎಂದು ಹೇಳಿದ್ದಾರೆ.

ಬಿಬಿಎಂಪಿಯ ಜಂಟಿ ನಿರ್ದೇಶಕರು ಪಶ್ಚಿಮ ಮತ್ತು ಆರ್‌ಆರ್‌ನಗರ ವಲಯಗಳಲ್ಲಿ ಪ್ರಾಯೋಗಿಕ ಯೋಜನೆಯಾಗಿ ಮೈಕ್ರೋಚಿಪಿಂಗ್ ಅಳವಡಿಸಲು ಪ್ರಸ್ತಾಪಿಸಿದ್ದು, ಬಿಬಿಎಂಪಿಯ ಉಳಿದ ಆರು ವಲಯಗಳಿಗೆ ವಿಸ್ತರಿಸಲು ಯೋಜಿಸಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಈ ಪ್ರಸ್ತಾವನೆಯನ್ನು ವಿರೋಧಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಅವರ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ ಎಂದು ಅವರು ಹೇಳಿದ್ದಾರೆ.

“ಎಬಿಸಿ ನಿಯಮಗಳು – 2023 ರ ಅಡಿಯಲ್ಲಿ ಮೈಕ್ರೋಚಿಪ್ಪಿಂಗ್ ಅಳವಡಿಕೆಯು ಹೆಚ್ಚುವರಿ ವಿಧಾನವಾಗಿದೆ. ಈ ಅಳವಡಿಕೆಯಲ್ಲಿ ಬೀದಿ ನಾಯಿಗಳನ್ನು ಅನೇಕ ಬಾರಿ ಹಿಡಿಯಬೇಕಾಗುತ್ತದೆ, ಇದು ಈ ನಾಯಿಗಳಿಗೆ ಆಘಾತಕಾರಿಯಾಗಿದ್ದು, ಅವುಗಳಿಗೆ ಅನಗತ್ಯ ಒತ್ತಡ ನೀಡುತ್ತದೆ ಅಥವಾ ಅವುಗಳು ಆಕ್ರಮಣಕಾರಿಯಾಗು ಅಪಾಯವಿರುತ್ತದೆ” ಎಂದು ಅರ್ಜಿದಾರರು ದೂರಿದ್ದಾರೆ.

“ನಾಯಿಗಳ ಲಸಿಕೆ ಸ್ಥಿತಿಯನ್ನು ಕಂಡುಹಿಡಿಯಲು ಮತ್ತು ಮೈಕ್ರೋಚಿಪ್‌ಗಳನ್ನು ಸ್ಕ್ಯಾನ್ ಮಾಡಲು ನಾಯಿಗಳನ್ನು ಹಿಡಿಯಬೇಕಾಗುತ್ತದೆ. ಈ ವೇಳೆ ಸಂಬಂಧಿಸಿದ ಏಜೆನ್ಸಿಗಳ ಅನಗತ್ಯ ಪ್ರಯತ್ನಗಳು ಈ ನಾಯಿಗಳು ಅಕ್ರಮಣಕಾರಿಯಾಲು ಕಾರಣವಾಗುತ್ತವೆ.” ಎಂದು ಅವರು ಹೇಳಿದ್ದಾರೆ. ಬೀದಿ ನಾಯಿಗಳ

ಎಬಿಸಿ ನಿಯಮಗಳು, 2023 ರ ನಿಯಮ 8 (2) ಅನ್ನು ಉಲ್ಲೇಖಿಸಿರುವ ಅರ್ಜಿದಾರರು, ಬೀದಿ ನಾಯಿಗಳಿಗೆ ಜಂತುಹುಳು ನಿವಾರಣೆ, ಸಂತಾನಹರಣ ಮತ್ತು ಸಾಮಾನ್ಯ ರೋಗನಿರೋಧಕಕ್ಕೆ ಮಾತ್ರ ನಿರ್ದಿಷ್ಟ ಅನುಮೋದನೆಯನ್ನು ನೀಡಲಾಗಿದೆ ಎಂದು ಕೋರ್ಟ್‌ಗೆ ಹೇಳಿದ್ದಾರೆ. ಆದರೆ ಈ ಅನುಮೋದಿತ ಕಾರ್ಯವಿಧಾನಗಳ ಭಾಗವಾಗಿ ಮೈಕ್ರೋಚಿಪಿಂಗ್ ಬಗ್ಗೆ ಅದರಲ್ಲಿ ಯಾವುದೇ ಉಲ್ಲೇಖವಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮತ್ತು ನಾಗರಾಜ್ ಸಿರಿಮನೆ ಜಂಟಿ ಹೇಳಿಕೆ

ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮತ್ತು ನಾಗರಾಜ್ ಸಿರಿಮನೆ ಜಂಟಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...