Homeಕರ್ನಾಟಕಬೀದಿ ನಾಯಿಗಳ ಮೈಕ್ರೋಚಿಪಿಂಗ್ ವಿರುದ್ಧ ಅರ್ಜಿ | ನೋಟಿಸ್ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್

ಬೀದಿ ನಾಯಿಗಳ ಮೈಕ್ರೋಚಿಪಿಂಗ್ ವಿರುದ್ಧ ಅರ್ಜಿ | ನೋಟಿಸ್ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್

- Advertisement -
- Advertisement -

ಬೆಂಗಳೂರಿನ ಬೀದಿ ನಾಯಿಗಳಿಗೆ ಮೈಕ್ರೋಚಿಪ್‌ಗಳನ್ನು ಅಳವಡಿಸುವ ಬಿಬಿಎಂಪಿಯ ಪ್ರಸ್ತಾಪವನ್ನು ಸೇವ್ ಅವರ್ ಅನಿಮಲ್ಸ್ ಚಾರಿಟಬಲ್ ಟ್ರಸ್ಟ್ ಮತ್ತು ಪರಿಸರ ಹೋರಾಟಗಾರ್ತಿ ನವೀನ ಕಾಮತ್ ಅವರು ರಾಜ್ಯ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್) ಪ್ರತಿಕ್ರಿಯೆಯಾಗಿ ಮಂಗಳವಾರ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು, ಬಿಬಿಎಂಪಿ ಮತ್ತು ಇತರರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಬೀದಿ ನಾಯಿಗಳ

2024 ಫೆಬ್ರವರಿ 29ರ ಬಿಬಿಎಂಪಿ ಪ್ರಸ್ತಾವನೆಯ ಕಾನೂನುಬದ್ಧತೆಯನ್ನು ಪ್ರಶ್ನಿಸುವ ಈ ಅರ್ಜಿಯ ವಾದವನ್ನು ಆಲಿಸಿದ ನಂತರ ಮುಖ್ಯ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ನೋಟಿಸ್‌ಗಳನ್ನು ನೀಡಿದೆ. ನ್ಯಾಯಾಲಯವು ಪ್ರಕರಣವನ್ನು ಡಿಸೆಂಬರ್ 16 ಕ್ಕೆ ಹೆಚ್ಚಿನ ವಿಚಾರಣೆಗೆ ಮುಂದೂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲರು, ”ಬೀದಿ ನಾಯಿಗಳನ್ನು ನಿಯಂತ್ರಿಸಲು ನಾಯಿಗಳಿಗೆ ಮೈಕ್ರೋಚಿಪ್ಪಿಂಗ್ ಅಳವಡಿಸಲು ಬಿಡ್ ನೀಡಲು ಬಿಬಿಎಂಪಿಗೆ ಯಾವುದೇ ಕಾನೂನು ಅಧಿಕಾರವಿಲ್ಲ. ಏಕೆಂದರೆ ಪ್ರಾಣಿ ಜನನ ನಿಯಂತ್ರಣ (ಎಬಿಸಿ) ನಿಯಮಗಳು, 2023, ಇದಕ್ಕೆ ಅನುಮತಿ ನೀಡುವುದಿಲ್ಲ. ಅಲ್ಲದೆ, ಕಾರ್ಯವಿಧಾನವನ್ನು ಮೇಲ್ವಿಚಾರಣೆ ಮಾಡಲು ಸಮಿತಿಯನ್ನು ರಚಿಸುವ ಅಧಿಕಾರ ಮತ್ತು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯಿಂದ ಇದಕ್ಕೆ ಯಾವುದೇ ಅನುಮತಿ ಇರಲಿಲ್ಲ. ಬಿಡ್ ನೀಡುವ ಸಂಪೂರ್ಣ ಪ್ರಕ್ರಿಯೆಯು ಕಾನೂನುಬಾಹಿರವಾಗಿದೆ” ಎಂದು ಹೇಳಿದ್ದಾರೆ.

ಬಿಬಿಎಂಪಿಯ ಜಂಟಿ ನಿರ್ದೇಶಕರು ಪಶ್ಚಿಮ ಮತ್ತು ಆರ್‌ಆರ್‌ನಗರ ವಲಯಗಳಲ್ಲಿ ಪ್ರಾಯೋಗಿಕ ಯೋಜನೆಯಾಗಿ ಮೈಕ್ರೋಚಿಪಿಂಗ್ ಅಳವಡಿಸಲು ಪ್ರಸ್ತಾಪಿಸಿದ್ದು, ಬಿಬಿಎಂಪಿಯ ಉಳಿದ ಆರು ವಲಯಗಳಿಗೆ ವಿಸ್ತರಿಸಲು ಯೋಜಿಸಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಈ ಪ್ರಸ್ತಾವನೆಯನ್ನು ವಿರೋಧಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಅವರ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ ಎಂದು ಅವರು ಹೇಳಿದ್ದಾರೆ.

“ಎಬಿಸಿ ನಿಯಮಗಳು – 2023 ರ ಅಡಿಯಲ್ಲಿ ಮೈಕ್ರೋಚಿಪ್ಪಿಂಗ್ ಅಳವಡಿಕೆಯು ಹೆಚ್ಚುವರಿ ವಿಧಾನವಾಗಿದೆ. ಈ ಅಳವಡಿಕೆಯಲ್ಲಿ ಬೀದಿ ನಾಯಿಗಳನ್ನು ಅನೇಕ ಬಾರಿ ಹಿಡಿಯಬೇಕಾಗುತ್ತದೆ, ಇದು ಈ ನಾಯಿಗಳಿಗೆ ಆಘಾತಕಾರಿಯಾಗಿದ್ದು, ಅವುಗಳಿಗೆ ಅನಗತ್ಯ ಒತ್ತಡ ನೀಡುತ್ತದೆ ಅಥವಾ ಅವುಗಳು ಆಕ್ರಮಣಕಾರಿಯಾಗು ಅಪಾಯವಿರುತ್ತದೆ” ಎಂದು ಅರ್ಜಿದಾರರು ದೂರಿದ್ದಾರೆ.

“ನಾಯಿಗಳ ಲಸಿಕೆ ಸ್ಥಿತಿಯನ್ನು ಕಂಡುಹಿಡಿಯಲು ಮತ್ತು ಮೈಕ್ರೋಚಿಪ್‌ಗಳನ್ನು ಸ್ಕ್ಯಾನ್ ಮಾಡಲು ನಾಯಿಗಳನ್ನು ಹಿಡಿಯಬೇಕಾಗುತ್ತದೆ. ಈ ವೇಳೆ ಸಂಬಂಧಿಸಿದ ಏಜೆನ್ಸಿಗಳ ಅನಗತ್ಯ ಪ್ರಯತ್ನಗಳು ಈ ನಾಯಿಗಳು ಅಕ್ರಮಣಕಾರಿಯಾಲು ಕಾರಣವಾಗುತ್ತವೆ.” ಎಂದು ಅವರು ಹೇಳಿದ್ದಾರೆ. ಬೀದಿ ನಾಯಿಗಳ

ಎಬಿಸಿ ನಿಯಮಗಳು, 2023 ರ ನಿಯಮ 8 (2) ಅನ್ನು ಉಲ್ಲೇಖಿಸಿರುವ ಅರ್ಜಿದಾರರು, ಬೀದಿ ನಾಯಿಗಳಿಗೆ ಜಂತುಹುಳು ನಿವಾರಣೆ, ಸಂತಾನಹರಣ ಮತ್ತು ಸಾಮಾನ್ಯ ರೋಗನಿರೋಧಕಕ್ಕೆ ಮಾತ್ರ ನಿರ್ದಿಷ್ಟ ಅನುಮೋದನೆಯನ್ನು ನೀಡಲಾಗಿದೆ ಎಂದು ಕೋರ್ಟ್‌ಗೆ ಹೇಳಿದ್ದಾರೆ. ಆದರೆ ಈ ಅನುಮೋದಿತ ಕಾರ್ಯವಿಧಾನಗಳ ಭಾಗವಾಗಿ ಮೈಕ್ರೋಚಿಪಿಂಗ್ ಬಗ್ಗೆ ಅದರಲ್ಲಿ ಯಾವುದೇ ಉಲ್ಲೇಖವಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮತ್ತು ನಾಗರಾಜ್ ಸಿರಿಮನೆ ಜಂಟಿ ಹೇಳಿಕೆ

ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮತ್ತು ನಾಗರಾಜ್ ಸಿರಿಮನೆ ಜಂಟಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...