Homeಕರ್ನಾಟಕಬೀದಿ ನಾಟಕದ ಕಲಾವಿದರನ್ನು ಅಕ್ಷರಶಃ ಬೀದಿಗೆ ತಳ್ಳಿದ ಸರ್ಕಾರ: ನಾಟಕದ ಮೂಲಕ ಪ್ರತಿಭಟನೆ

ಬೀದಿ ನಾಟಕದ ಕಲಾವಿದರನ್ನು ಅಕ್ಷರಶಃ ಬೀದಿಗೆ ತಳ್ಳಿದ ಸರ್ಕಾರ: ನಾಟಕದ ಮೂಲಕ ಪ್ರತಿಭಟನೆ

- Advertisement -
- Advertisement -

ಸರ್ಕಾರದ ನೂರಾರು ಯೋಜನೆಗಳನ್ನು ಬೀದಿ ನಾಟಕಗಳ ಮೂಲಕ ಜನರಿಗೆ ತಲುಪಿಸುತ್ತಿದ್ದ ಕಲಾವಿದರು ಇಂದು ಬೀದಿ ನಾಟಕ ಮಾಡುವ ಮೂಲಕ ಸರ್ಕಾರದ ವಿರುದ್ಧ ಪ್ರತಿಭಟಿಸಿದ್ದಾರೆ. ಬೀದಿ ನಾಟಕಗಳನ್ನು ರಾಜ್ಯ ಸರ್ಕಾರ ಹೊರ ರಾಜ್ಯಗಳ ಖಾಸಗಿ ಕಂಪೆನಿಗೆ ಗುತ್ತಿಗೆ ನೀಡಿದ್ದು, ಇದರಿಂದ ತಮ್ಮ ಬದುಕು ಅತಂತ್ರಗೊಂಡಿದೆ ಎಂದು ಆರೋಪಿಸಿ ರಾಜ್ಯ ಬೀದಿ ನಾಟಕ ಕಲಾತಂಡಗಳ ಒಕ್ಕೂಟ ಇಂದು ಫ್ರೀಡಂ ಪಾರ್ಕ್‌‌ನಲ್ಲಿ ಪ್ರತಿಭಟನೆ ನಡೆಸಿದೆ.

ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ಕಲಾವಿದರು ತಮ್ಮ ಸಂಕಷ್ಟಗಳನ್ನು ಬೀದಿ ನಾಟಕಗಳ ಮೂಲಕ ಪ್ರಸ್ತುತಪಡಿಸಿ, ಹೋರಾಟದ ಹಾಡುಗಳನ್ನು ಹಾಡುವ ಮೂಲಕವೇ ಪ್ರತಿಭಟನೆ ನಡೆಸಿದ್ದು ವಿಶೇಷವಾಗಿತ್ತು.

ಬೀದಿ ನಾಟಕ ತಂಡಗಳ ರಾಜ್ಯಾಧ್ಯಕ್ಷ ಗ್ಯಾರಂಟಿ ರಾಮಣ್ಣ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ, “ಬೀದಿ ನಾಟಕಕಾರರ ಸಂತತಿ ಬಸವಣ್ಣನ ಕಾಲದಿಂದ ಜಾನಪದ ಸಂಸ್ಕೃತಿಯಂತೆ ತಲೆತಲಾಂತರಗಳನ್ನು ದಾಟಿ ಬಂದಿದೆ. ಕಳೆದ 40 ವರ್ಷಗಳಿಂದ ಸರ್ಕಾರದ ಸಾಕಷ್ಟು ಕಾರ್ಯಕ್ರಮಗಳನ್ನು ಬೀದಿ ನಾಟಕಗಳ ಮೂಲಕ ಜನರಲ್ಲಿ ಅರಿವು ಮೂಡಿಸಿದ್ದೇವೆ. ಆದರೆ ಸರ್ಕಾರ ಇನ್ನು ಮುಂದೆ ಎಲ್‌ಇಡಿ ಪರದೆಗಳ ಮೂಲಕ ಜಾಗೃತಿ ಮೂಡಿಸುತ್ತೇವೆ ಎನ್ನುವ ಮೂಲಕ ನಮ್ಮನ್ನು ಬೀದಿಗೆ ತಳ್ಳಿದೆ” ಎಂದು ಆತಂಕ ವ್ಯಕ್ತಪಡಿಸಿದರು.

“ಪೋಲಿಯೋ ಲಸಿಕೆ, ಮಕ್ಕಳ ಮಹಿಳೆಯರ ಅಪೌಷ್ಠಿಕತೆ, ಬಾಲ್ಯ ವಿವಾಹ-ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ, ಕಲಿ-ನಲಿ ಅಕ್ಷರ ದಾಸೋಹಾ, ಸಮಾಜ ಕಲ್ಯಾಣ ಇಲಾಖೆಯಿಂದ ಸಿಗುವ ಸವಲತ್ತುಗಳಿಂದ ಹಿಡಿದು ಪೊಲೀಸ್‌ ಇಲಾಖೆಯ ಸುರಕ್ಷತಾ ಸಪ್ತಾಹದ ವರೆಗೆ ಸರ್ಕಾರದ ಹತ್ತಾರು ಕಾರ್ಯಕ್ರಮಳನ್ನು ನಾವು ಬೀದಿ ನಾಟಕದ ಮೂಲಕ ಜನರಿಗೆ ತಲುಪಿಸಿದ್ದೇವೆ. ಹಾಡು ಕಟ್ಟಿ ಅಭಿನಯದ ಮೂಲಕ ಜನರನ್ನು ನಗಿಸುವ-ಅಳಿಸುವ ಕಲೆಯ ಜೊತೆಗೆ ಚಿಂತನೆಯ ಓರೆಗೆ ಹಚ್ಚುವ ಕೆಲಸವನ್ನೂ ನಾವು ಮಾಡಿದ್ದೇವೆ. ಈ ವೃತ್ತಿಯಲ್ಲಿರುವವರಿಗೆ ಬೇರೆ ಯಾವುದೇ ಉಪ ಕಸುಬುಗಳಿಲ್ಲ. ಇಲ್ಲಿ ಬರುವ ಆದಾಯವೇ ಬದುಕಿಗೆ ಮೂಲ. ಈಗ ಏಕಾಏಕಿ ನಮ್ಮನ್ನು ಕೈಬಿಟ್ಟರೆ ನಾವೇನು ಮಾಡಬೇಕು” ಎಂದು ಪ್ರಶ್ನಿಸಿದರು.

“ಪ್ರತಿ ಜಿಲ್ಲೆಯಲ್ಲಿ 150-200 ಜನರಂತೆ ಸುಮಾರು 5-6 ಸಾವಿರ ಬೀದಿ ನಾಟಕ ಕಲಾವಿದರಿದ್ದೇವೆ. ಕೊರೊನಾ ಸಂದರ್ಭದಲ್ಲಿ ಸತತ ಒಂದೂವರೆ ವರ್ಷಗಳ ಕಾಲ ಬೀದಿ ನಾಟಕ ಮತ್ತು ಬೇರೆ ಕೆಲಸ ಯಾವುದೂ ಇಲ್ಲದೆ ನಾವು ಸಂಕಷ್ಟಕ್ಕೆ ಒಳಗಾಗಿದ್ದೆವು. ಆಗಲೂ ಸರ್ಕಾರ ಸಹಾಯಹಸ್ತ ಚಾಚಲಿಲ್ಲ. ನಾವು ಐಷರಾಮಿ ಜೀವನ ಕೇಳುತ್ತಿಲ್ಲ. ಸಾಮಾನ್ಯ ಜೀವನ ನಡೆಸಲು ಬೀದಿ ನಾಟಕ ಮಾಡಲು ಅವಕಾಶ ಕೊಡಿ ಎಂದಷ್ಟೆ ಕೇಳುತ್ತಿದ್ದೇವೆ. ಆದರೆ ಈಗ ಏಕಾಏಕಿ ಖಾಸಗಿಯವರಿಗೆ ಟೆಂಡರ್ ಕೊಡುವ ಮೂಲಕ ನಮ್ಮ ಆದಾಯ-ಬದುಕನ್ನೇ ಕಸಿದುಕೊಂಡಿರುವುದು ಅನ್ಯಾಯ” ಎಂದು ರಾಮಣ್ಣ ಕಿಡಿಕಾರಿದರು.

ಸಂಘದ ಗೌರವಾಧ್ಯಕ್ಷ ಪುರುಷೋತ್ತಮಗೌಡ ಮಾತನಾಡಿ, “ಖಾಸಗಿ ಕಂಪೆನಿಗಳು ಎಲ್‌ಇಡಿ ಟಿವಿ ಪರದೆಯಲ್ಲಿ ತೋರಿಸುವ ನಾಟಕಗಳು ಜನರಿಗೆ ಅರ್ಥವೂ ಆಗದು. ಕೇವಲ ಕಮಿಷನ್ ಆಸೆಗಾಗಿ ಇದನ್ನು ಹೊರಗುತ್ತಿಗೆ ನೀಡಲಾಗಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಕೂಡಲೇ ವಾರ್ತಾ ಮತ್ತು ಸಂಪರ್ಕ ಇಲಾಕೆ ಖಾಸಗಿ ಕಂಪೆನಿಗೆ ನೀಡಿರುವ ಗುತ್ತಿಗೆಯನ್ನು ಹಿಂಪಡೆದು ಬೀದಿ ನಾಟಕಕಾರರಿಗೆ ಬದುಕು ಕಟ್ಟಿಕೊಡಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ದಾವಣೆಗೆರೆಯ ಹೇಮಂತ್, ತುಮಕೂರಿನ ಮಂಜುನಾಥ್, ಮೈಸೂರಿನ ಸಲ್ಮಾ ಮತ್ತು ಮಂಡ್ಯದ ವೈರಮುಡಿ ಎಚ್.ಪಿ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ಕೋಮು ಗಲಭೆಗಳಿಂದ ಭಾರತದಲ್ಲಿ ಸ್ಥಳಾಂತರಗೊಂಡವರ ಕೆಲವು ಫೈಲ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...