Homeಕರ್ನಾಟಕಬೀದಿ ನಾಟಕದ ಕಲಾವಿದರನ್ನು ಅಕ್ಷರಶಃ ಬೀದಿಗೆ ತಳ್ಳಿದ ಸರ್ಕಾರ: ನಾಟಕದ ಮೂಲಕ ಪ್ರತಿಭಟನೆ

ಬೀದಿ ನಾಟಕದ ಕಲಾವಿದರನ್ನು ಅಕ್ಷರಶಃ ಬೀದಿಗೆ ತಳ್ಳಿದ ಸರ್ಕಾರ: ನಾಟಕದ ಮೂಲಕ ಪ್ರತಿಭಟನೆ

- Advertisement -
- Advertisement -

ಸರ್ಕಾರದ ನೂರಾರು ಯೋಜನೆಗಳನ್ನು ಬೀದಿ ನಾಟಕಗಳ ಮೂಲಕ ಜನರಿಗೆ ತಲುಪಿಸುತ್ತಿದ್ದ ಕಲಾವಿದರು ಇಂದು ಬೀದಿ ನಾಟಕ ಮಾಡುವ ಮೂಲಕ ಸರ್ಕಾರದ ವಿರುದ್ಧ ಪ್ರತಿಭಟಿಸಿದ್ದಾರೆ. ಬೀದಿ ನಾಟಕಗಳನ್ನು ರಾಜ್ಯ ಸರ್ಕಾರ ಹೊರ ರಾಜ್ಯಗಳ ಖಾಸಗಿ ಕಂಪೆನಿಗೆ ಗುತ್ತಿಗೆ ನೀಡಿದ್ದು, ಇದರಿಂದ ತಮ್ಮ ಬದುಕು ಅತಂತ್ರಗೊಂಡಿದೆ ಎಂದು ಆರೋಪಿಸಿ ರಾಜ್ಯ ಬೀದಿ ನಾಟಕ ಕಲಾತಂಡಗಳ ಒಕ್ಕೂಟ ಇಂದು ಫ್ರೀಡಂ ಪಾರ್ಕ್‌‌ನಲ್ಲಿ ಪ್ರತಿಭಟನೆ ನಡೆಸಿದೆ.

ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ಕಲಾವಿದರು ತಮ್ಮ ಸಂಕಷ್ಟಗಳನ್ನು ಬೀದಿ ನಾಟಕಗಳ ಮೂಲಕ ಪ್ರಸ್ತುತಪಡಿಸಿ, ಹೋರಾಟದ ಹಾಡುಗಳನ್ನು ಹಾಡುವ ಮೂಲಕವೇ ಪ್ರತಿಭಟನೆ ನಡೆಸಿದ್ದು ವಿಶೇಷವಾಗಿತ್ತು.

ಬೀದಿ ನಾಟಕ ತಂಡಗಳ ರಾಜ್ಯಾಧ್ಯಕ್ಷ ಗ್ಯಾರಂಟಿ ರಾಮಣ್ಣ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ, “ಬೀದಿ ನಾಟಕಕಾರರ ಸಂತತಿ ಬಸವಣ್ಣನ ಕಾಲದಿಂದ ಜಾನಪದ ಸಂಸ್ಕೃತಿಯಂತೆ ತಲೆತಲಾಂತರಗಳನ್ನು ದಾಟಿ ಬಂದಿದೆ. ಕಳೆದ 40 ವರ್ಷಗಳಿಂದ ಸರ್ಕಾರದ ಸಾಕಷ್ಟು ಕಾರ್ಯಕ್ರಮಗಳನ್ನು ಬೀದಿ ನಾಟಕಗಳ ಮೂಲಕ ಜನರಲ್ಲಿ ಅರಿವು ಮೂಡಿಸಿದ್ದೇವೆ. ಆದರೆ ಸರ್ಕಾರ ಇನ್ನು ಮುಂದೆ ಎಲ್‌ಇಡಿ ಪರದೆಗಳ ಮೂಲಕ ಜಾಗೃತಿ ಮೂಡಿಸುತ್ತೇವೆ ಎನ್ನುವ ಮೂಲಕ ನಮ್ಮನ್ನು ಬೀದಿಗೆ ತಳ್ಳಿದೆ” ಎಂದು ಆತಂಕ ವ್ಯಕ್ತಪಡಿಸಿದರು.

“ಪೋಲಿಯೋ ಲಸಿಕೆ, ಮಕ್ಕಳ ಮಹಿಳೆಯರ ಅಪೌಷ್ಠಿಕತೆ, ಬಾಲ್ಯ ವಿವಾಹ-ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ, ಕಲಿ-ನಲಿ ಅಕ್ಷರ ದಾಸೋಹಾ, ಸಮಾಜ ಕಲ್ಯಾಣ ಇಲಾಖೆಯಿಂದ ಸಿಗುವ ಸವಲತ್ತುಗಳಿಂದ ಹಿಡಿದು ಪೊಲೀಸ್‌ ಇಲಾಖೆಯ ಸುರಕ್ಷತಾ ಸಪ್ತಾಹದ ವರೆಗೆ ಸರ್ಕಾರದ ಹತ್ತಾರು ಕಾರ್ಯಕ್ರಮಳನ್ನು ನಾವು ಬೀದಿ ನಾಟಕದ ಮೂಲಕ ಜನರಿಗೆ ತಲುಪಿಸಿದ್ದೇವೆ. ಹಾಡು ಕಟ್ಟಿ ಅಭಿನಯದ ಮೂಲಕ ಜನರನ್ನು ನಗಿಸುವ-ಅಳಿಸುವ ಕಲೆಯ ಜೊತೆಗೆ ಚಿಂತನೆಯ ಓರೆಗೆ ಹಚ್ಚುವ ಕೆಲಸವನ್ನೂ ನಾವು ಮಾಡಿದ್ದೇವೆ. ಈ ವೃತ್ತಿಯಲ್ಲಿರುವವರಿಗೆ ಬೇರೆ ಯಾವುದೇ ಉಪ ಕಸುಬುಗಳಿಲ್ಲ. ಇಲ್ಲಿ ಬರುವ ಆದಾಯವೇ ಬದುಕಿಗೆ ಮೂಲ. ಈಗ ಏಕಾಏಕಿ ನಮ್ಮನ್ನು ಕೈಬಿಟ್ಟರೆ ನಾವೇನು ಮಾಡಬೇಕು” ಎಂದು ಪ್ರಶ್ನಿಸಿದರು.

“ಪ್ರತಿ ಜಿಲ್ಲೆಯಲ್ಲಿ 150-200 ಜನರಂತೆ ಸುಮಾರು 5-6 ಸಾವಿರ ಬೀದಿ ನಾಟಕ ಕಲಾವಿದರಿದ್ದೇವೆ. ಕೊರೊನಾ ಸಂದರ್ಭದಲ್ಲಿ ಸತತ ಒಂದೂವರೆ ವರ್ಷಗಳ ಕಾಲ ಬೀದಿ ನಾಟಕ ಮತ್ತು ಬೇರೆ ಕೆಲಸ ಯಾವುದೂ ಇಲ್ಲದೆ ನಾವು ಸಂಕಷ್ಟಕ್ಕೆ ಒಳಗಾಗಿದ್ದೆವು. ಆಗಲೂ ಸರ್ಕಾರ ಸಹಾಯಹಸ್ತ ಚಾಚಲಿಲ್ಲ. ನಾವು ಐಷರಾಮಿ ಜೀವನ ಕೇಳುತ್ತಿಲ್ಲ. ಸಾಮಾನ್ಯ ಜೀವನ ನಡೆಸಲು ಬೀದಿ ನಾಟಕ ಮಾಡಲು ಅವಕಾಶ ಕೊಡಿ ಎಂದಷ್ಟೆ ಕೇಳುತ್ತಿದ್ದೇವೆ. ಆದರೆ ಈಗ ಏಕಾಏಕಿ ಖಾಸಗಿಯವರಿಗೆ ಟೆಂಡರ್ ಕೊಡುವ ಮೂಲಕ ನಮ್ಮ ಆದಾಯ-ಬದುಕನ್ನೇ ಕಸಿದುಕೊಂಡಿರುವುದು ಅನ್ಯಾಯ” ಎಂದು ರಾಮಣ್ಣ ಕಿಡಿಕಾರಿದರು.

ಸಂಘದ ಗೌರವಾಧ್ಯಕ್ಷ ಪುರುಷೋತ್ತಮಗೌಡ ಮಾತನಾಡಿ, “ಖಾಸಗಿ ಕಂಪೆನಿಗಳು ಎಲ್‌ಇಡಿ ಟಿವಿ ಪರದೆಯಲ್ಲಿ ತೋರಿಸುವ ನಾಟಕಗಳು ಜನರಿಗೆ ಅರ್ಥವೂ ಆಗದು. ಕೇವಲ ಕಮಿಷನ್ ಆಸೆಗಾಗಿ ಇದನ್ನು ಹೊರಗುತ್ತಿಗೆ ನೀಡಲಾಗಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಕೂಡಲೇ ವಾರ್ತಾ ಮತ್ತು ಸಂಪರ್ಕ ಇಲಾಕೆ ಖಾಸಗಿ ಕಂಪೆನಿಗೆ ನೀಡಿರುವ ಗುತ್ತಿಗೆಯನ್ನು ಹಿಂಪಡೆದು ಬೀದಿ ನಾಟಕಕಾರರಿಗೆ ಬದುಕು ಕಟ್ಟಿಕೊಡಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ದಾವಣೆಗೆರೆಯ ಹೇಮಂತ್, ತುಮಕೂರಿನ ಮಂಜುನಾಥ್, ಮೈಸೂರಿನ ಸಲ್ಮಾ ಮತ್ತು ಮಂಡ್ಯದ ವೈರಮುಡಿ ಎಚ್.ಪಿ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ಕೋಮು ಗಲಭೆಗಳಿಂದ ಭಾರತದಲ್ಲಿ ಸ್ಥಳಾಂತರಗೊಂಡವರ ಕೆಲವು ಫೈಲ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...