Homeಕರ್ನಾಟಕಬೀದಿ ನಾಟಕದ ಕಲಾವಿದರನ್ನು ಅಕ್ಷರಶಃ ಬೀದಿಗೆ ತಳ್ಳಿದ ಸರ್ಕಾರ: ನಾಟಕದ ಮೂಲಕ ಪ್ರತಿಭಟನೆ

ಬೀದಿ ನಾಟಕದ ಕಲಾವಿದರನ್ನು ಅಕ್ಷರಶಃ ಬೀದಿಗೆ ತಳ್ಳಿದ ಸರ್ಕಾರ: ನಾಟಕದ ಮೂಲಕ ಪ್ರತಿಭಟನೆ

- Advertisement -
- Advertisement -

ಸರ್ಕಾರದ ನೂರಾರು ಯೋಜನೆಗಳನ್ನು ಬೀದಿ ನಾಟಕಗಳ ಮೂಲಕ ಜನರಿಗೆ ತಲುಪಿಸುತ್ತಿದ್ದ ಕಲಾವಿದರು ಇಂದು ಬೀದಿ ನಾಟಕ ಮಾಡುವ ಮೂಲಕ ಸರ್ಕಾರದ ವಿರುದ್ಧ ಪ್ರತಿಭಟಿಸಿದ್ದಾರೆ. ಬೀದಿ ನಾಟಕಗಳನ್ನು ರಾಜ್ಯ ಸರ್ಕಾರ ಹೊರ ರಾಜ್ಯಗಳ ಖಾಸಗಿ ಕಂಪೆನಿಗೆ ಗುತ್ತಿಗೆ ನೀಡಿದ್ದು, ಇದರಿಂದ ತಮ್ಮ ಬದುಕು ಅತಂತ್ರಗೊಂಡಿದೆ ಎಂದು ಆರೋಪಿಸಿ ರಾಜ್ಯ ಬೀದಿ ನಾಟಕ ಕಲಾತಂಡಗಳ ಒಕ್ಕೂಟ ಇಂದು ಫ್ರೀಡಂ ಪಾರ್ಕ್‌‌ನಲ್ಲಿ ಪ್ರತಿಭಟನೆ ನಡೆಸಿದೆ.

ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ಕಲಾವಿದರು ತಮ್ಮ ಸಂಕಷ್ಟಗಳನ್ನು ಬೀದಿ ನಾಟಕಗಳ ಮೂಲಕ ಪ್ರಸ್ತುತಪಡಿಸಿ, ಹೋರಾಟದ ಹಾಡುಗಳನ್ನು ಹಾಡುವ ಮೂಲಕವೇ ಪ್ರತಿಭಟನೆ ನಡೆಸಿದ್ದು ವಿಶೇಷವಾಗಿತ್ತು.

ಬೀದಿ ನಾಟಕ ತಂಡಗಳ ರಾಜ್ಯಾಧ್ಯಕ್ಷ ಗ್ಯಾರಂಟಿ ರಾಮಣ್ಣ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ, “ಬೀದಿ ನಾಟಕಕಾರರ ಸಂತತಿ ಬಸವಣ್ಣನ ಕಾಲದಿಂದ ಜಾನಪದ ಸಂಸ್ಕೃತಿಯಂತೆ ತಲೆತಲಾಂತರಗಳನ್ನು ದಾಟಿ ಬಂದಿದೆ. ಕಳೆದ 40 ವರ್ಷಗಳಿಂದ ಸರ್ಕಾರದ ಸಾಕಷ್ಟು ಕಾರ್ಯಕ್ರಮಗಳನ್ನು ಬೀದಿ ನಾಟಕಗಳ ಮೂಲಕ ಜನರಲ್ಲಿ ಅರಿವು ಮೂಡಿಸಿದ್ದೇವೆ. ಆದರೆ ಸರ್ಕಾರ ಇನ್ನು ಮುಂದೆ ಎಲ್‌ಇಡಿ ಪರದೆಗಳ ಮೂಲಕ ಜಾಗೃತಿ ಮೂಡಿಸುತ್ತೇವೆ ಎನ್ನುವ ಮೂಲಕ ನಮ್ಮನ್ನು ಬೀದಿಗೆ ತಳ್ಳಿದೆ” ಎಂದು ಆತಂಕ ವ್ಯಕ್ತಪಡಿಸಿದರು.

“ಪೋಲಿಯೋ ಲಸಿಕೆ, ಮಕ್ಕಳ ಮಹಿಳೆಯರ ಅಪೌಷ್ಠಿಕತೆ, ಬಾಲ್ಯ ವಿವಾಹ-ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ, ಕಲಿ-ನಲಿ ಅಕ್ಷರ ದಾಸೋಹಾ, ಸಮಾಜ ಕಲ್ಯಾಣ ಇಲಾಖೆಯಿಂದ ಸಿಗುವ ಸವಲತ್ತುಗಳಿಂದ ಹಿಡಿದು ಪೊಲೀಸ್‌ ಇಲಾಖೆಯ ಸುರಕ್ಷತಾ ಸಪ್ತಾಹದ ವರೆಗೆ ಸರ್ಕಾರದ ಹತ್ತಾರು ಕಾರ್ಯಕ್ರಮಳನ್ನು ನಾವು ಬೀದಿ ನಾಟಕದ ಮೂಲಕ ಜನರಿಗೆ ತಲುಪಿಸಿದ್ದೇವೆ. ಹಾಡು ಕಟ್ಟಿ ಅಭಿನಯದ ಮೂಲಕ ಜನರನ್ನು ನಗಿಸುವ-ಅಳಿಸುವ ಕಲೆಯ ಜೊತೆಗೆ ಚಿಂತನೆಯ ಓರೆಗೆ ಹಚ್ಚುವ ಕೆಲಸವನ್ನೂ ನಾವು ಮಾಡಿದ್ದೇವೆ. ಈ ವೃತ್ತಿಯಲ್ಲಿರುವವರಿಗೆ ಬೇರೆ ಯಾವುದೇ ಉಪ ಕಸುಬುಗಳಿಲ್ಲ. ಇಲ್ಲಿ ಬರುವ ಆದಾಯವೇ ಬದುಕಿಗೆ ಮೂಲ. ಈಗ ಏಕಾಏಕಿ ನಮ್ಮನ್ನು ಕೈಬಿಟ್ಟರೆ ನಾವೇನು ಮಾಡಬೇಕು” ಎಂದು ಪ್ರಶ್ನಿಸಿದರು.

“ಪ್ರತಿ ಜಿಲ್ಲೆಯಲ್ಲಿ 150-200 ಜನರಂತೆ ಸುಮಾರು 5-6 ಸಾವಿರ ಬೀದಿ ನಾಟಕ ಕಲಾವಿದರಿದ್ದೇವೆ. ಕೊರೊನಾ ಸಂದರ್ಭದಲ್ಲಿ ಸತತ ಒಂದೂವರೆ ವರ್ಷಗಳ ಕಾಲ ಬೀದಿ ನಾಟಕ ಮತ್ತು ಬೇರೆ ಕೆಲಸ ಯಾವುದೂ ಇಲ್ಲದೆ ನಾವು ಸಂಕಷ್ಟಕ್ಕೆ ಒಳಗಾಗಿದ್ದೆವು. ಆಗಲೂ ಸರ್ಕಾರ ಸಹಾಯಹಸ್ತ ಚಾಚಲಿಲ್ಲ. ನಾವು ಐಷರಾಮಿ ಜೀವನ ಕೇಳುತ್ತಿಲ್ಲ. ಸಾಮಾನ್ಯ ಜೀವನ ನಡೆಸಲು ಬೀದಿ ನಾಟಕ ಮಾಡಲು ಅವಕಾಶ ಕೊಡಿ ಎಂದಷ್ಟೆ ಕೇಳುತ್ತಿದ್ದೇವೆ. ಆದರೆ ಈಗ ಏಕಾಏಕಿ ಖಾಸಗಿಯವರಿಗೆ ಟೆಂಡರ್ ಕೊಡುವ ಮೂಲಕ ನಮ್ಮ ಆದಾಯ-ಬದುಕನ್ನೇ ಕಸಿದುಕೊಂಡಿರುವುದು ಅನ್ಯಾಯ” ಎಂದು ರಾಮಣ್ಣ ಕಿಡಿಕಾರಿದರು.

ಸಂಘದ ಗೌರವಾಧ್ಯಕ್ಷ ಪುರುಷೋತ್ತಮಗೌಡ ಮಾತನಾಡಿ, “ಖಾಸಗಿ ಕಂಪೆನಿಗಳು ಎಲ್‌ಇಡಿ ಟಿವಿ ಪರದೆಯಲ್ಲಿ ತೋರಿಸುವ ನಾಟಕಗಳು ಜನರಿಗೆ ಅರ್ಥವೂ ಆಗದು. ಕೇವಲ ಕಮಿಷನ್ ಆಸೆಗಾಗಿ ಇದನ್ನು ಹೊರಗುತ್ತಿಗೆ ನೀಡಲಾಗಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಕೂಡಲೇ ವಾರ್ತಾ ಮತ್ತು ಸಂಪರ್ಕ ಇಲಾಕೆ ಖಾಸಗಿ ಕಂಪೆನಿಗೆ ನೀಡಿರುವ ಗುತ್ತಿಗೆಯನ್ನು ಹಿಂಪಡೆದು ಬೀದಿ ನಾಟಕಕಾರರಿಗೆ ಬದುಕು ಕಟ್ಟಿಕೊಡಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ದಾವಣೆಗೆರೆಯ ಹೇಮಂತ್, ತುಮಕೂರಿನ ಮಂಜುನಾಥ್, ಮೈಸೂರಿನ ಸಲ್ಮಾ ಮತ್ತು ಮಂಡ್ಯದ ವೈರಮುಡಿ ಎಚ್.ಪಿ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ಕೋಮು ಗಲಭೆಗಳಿಂದ ಭಾರತದಲ್ಲಿ ಸ್ಥಳಾಂತರಗೊಂಡವರ ಕೆಲವು ಫೈಲ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...