Homeಮುಖಪುಟಬೆಲೆ ಏರಿಕೆ ವಿರುದ್ಧ ಶಿವ-ಪಾರ್ವತಿ ವೇಷದಲ್ಲಿ ಬೀದಿನಾಟಕ: ವ್ಯಕ್ತಿಯ ಬಂಧನ

ಬೆಲೆ ಏರಿಕೆ ವಿರುದ್ಧ ಶಿವ-ಪಾರ್ವತಿ ವೇಷದಲ್ಲಿ ಬೀದಿನಾಟಕ: ವ್ಯಕ್ತಿಯ ಬಂಧನ

- Advertisement -
- Advertisement -

ಶಿವ-ಪಾರ್ವತಿ ವೇಷ ಧರಿಸಿದ ರಂಗಭೂಮಿ ಕಲಾವಿದರಿಬ್ಬರು ಬೆಲೆ ಏರಿಕೆ ವಿರುದ್ಧ ವಿನೂತನ ಬೀದಿ ನಾಟಕ ಪ್ರದರ್ಶಿಸಿದ್ದಾರೆ. ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಜನರ ಗಮನ ಸೆಳೆದಿದೆ. ಕೂಡಲೇ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಎಂಬ ಆರೋಪದಲ್ಲಿ ಶಿವನ ಪಾತ್ರ ನಿರ್ವಹಿಸಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಅಸ್ಸಾಂನಲ್ಲಿ ಜರುಗಿದೆ.

ಅಸ್ಸಾಂನ ನಾಗೋನ್ ನಗರದಲ್ಲಿ ಈ ಬೀದಿ ನಾಟಕ ನಡೆದಿದ್ದು, ಸಾರ್ವಜನಿಕರ ಗಮನೆ ಸೆಳೆದಿದೆ. ಇಬ್ಬರೆ ನಟರು ಶಿವ-ಪಾರ್ವತಿಯ ವೇಷ ಧರಿಸಿ ಹಲವೆಡೆ ನಾಟಕ ಪ್ರದರ್ಶಿಸಿದ್ದಾರೆ.

ಬಿರಿಂಚಿ ಬೋರಾ ಎಂಬ ಕಲಾವಿದರೊಬ್ಬರು ಶಿವನ ವೇಷ ಧರಿಸಿದರೆ, ನಟಿ ಪರಿಶಿಮಿತ ಎನ್ನುವವರು ಪಾರ್ವತಿಯ ವೇಷ ಧರಿಸಿ ಬೀದಿ ನಾಟಕದಲ್ಲಿ ಭಾಗವಹಿಸಿದ್ದರು. ಮನೆಯಿಂದಲೇ ಶಿವ ಪಾರ್ವತಿಯ ವೇಷದಲ್ಲಿ ರಾಯಲ್ ಎನ್‌ಫೀಲ್ಡ್‌ ಬೈಕ್‌ನಲ್ಲಿ ಹೊರಟ ಅವರ ಬೈಕ್ ದಾರಿ ಮಧ್ಯೆಯೆ ನಿಂತು ಹೋಗುತ್ತದೆ. ಆಗ ಪಾರ್ವತಿ ಗೊಣಗುಡುತ್ತಾ ಶಿವನನ್ನು ಶಪಿಸುತ್ತಾರೆ. ಆಗ ಶಿವ ಪಾರ್ವತಿಯ ನಡುವೆ ವಾದ-ವಿದಾದ ನಡೆದು, ‘ಪೆಟ್ರೋಲ್ ಖಾಲಿ ಆದರೆ ನಾನೇನು ಮಾಡುವುದು, ಎಷ್ಟು ದುಡ್ಡು ಕೊಟ್ಟರೂ ಬೇಗ ಖಾಲಿಯಾಗುತ್ತದೆ. ನನ್ನನ್ನು ಬೈಯ್ಯುವುದರ ಬದಲು ಪೆಟ್ರೋಲ್ ದರ ಹೆಚ್ಚು ಮಾಡಿದ ನರೇಂದ್ರ ಮೋದಿ ಸರ್ಕಾರಕ್ಕೆ ಬೈಯಿ’ ಎನ್ನುತ್ತಾರೆ ಶಿವ. ಅಲ್ಲದೆ ಅಲ್ಲಿ ಸುತ್ತ ನೆರೆದಿದ್ದ ಜನರನ್ನು ಉದ್ದೇಶಿಸಿ ದಯವಿಟ್ಟು ಸರ್ಕಾರದ ಬೆಲೆ ಏರಿಕೆ ವಿರುದ್ಧ ದನಿಯೆತ್ತಿ ಪ್ರತಿಭಟಿಸಿ ಎಂದು ಕರೆ ನೀಡುತ್ತಾರೆ.

ಇಂತಹ ವಿನೂತನ ಬೀದಿನಾಟಕವನ್ನು ಅಲ್ಲಿ ನೆರೆದಿದ್ದವರು ಕುತೂಹಲದಿಂದ ವೀಕ್ಷಿಸಿ ಚಪ್ಪಾಳೆ ತಟ್ಟಿ ಬೆಂಬಲಿಸಿದ್ದಾರೆ. ಅಲ್ಲದೆ ವಿಡಿಯೋ ಮಾಡಿ ವೈರಲ್ ಮಾಡಿದ್ದಾರೆ. ಆದರೆ ಅದೇ ಸಂದರ್ಭದಲ್ಲಿ ಇದನ್ನು ಸಹಿಸದ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸಂಘಟನೆಯವರು ಬೀದಿ ನಾಟಕ ಮಾಡಿದ ಕಲಾವಿದನ ವಿರುದ್ಧ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಎಂದು ಪೊಲೀಸ್ ದೂರು ಸಲ್ಲಿಸಿದ್ದಾರೆ.

ಪೊಲೀಸರು ನಟ ಬಿರಿಂಚಿ ಬೋರಾರನ್ನು ಬಂಧಿಸಿದ್ದಾರೆ. ಆನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ; ಇದು ನಮ್ಮ ಭವಿಷ್ಯಕ್ಕಾಗಿ: ಜನಾಂದೋಲನಕ್ಕೆ ಲಂಕಾ ಮಾಜಿ ಕ್ರಿಕೆಟಿಗರ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದ್ದದ್ದು ಹೇಳಿದ್ರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಅಂದ್ರಂತೆ.. ಇಲ್ಲಿ ಯಾರು ಅನ್ಯಾಯದ ವಿರುದ್ಧ ದ್ವನಿ ಎತ್ತಬಾರದು, ಪ್ರತಿಭಟಿಸಬಾರದು ಒಂದು ವೇಳೆ ಹಾಗೇನಾದ್ರೂ ಮಾಡಿದ್ರೆ ಕೆಲವರು ಅವರೇ ಮೆಣಸಿನಕಾಯಿಯ ತುದಿ ಚಿವುಟಿ ಅಂಡಿಗೆ ಏರಿಸ್ಕೊಂಡು ಬಂದಬಿಡತಾವೇ ಅವ್ರಿಗೆ ಇಲ್ದಿರೋ ಸೆಕ್ಷನ್ ಅಡಿ ಕೇಸ್ ದಾಖಸೋಕೆ ಥೂ…. ಇವರ ಜನ್ಮಕ್ಕೆ ನಾಯಿ ಉಚ್ಚೆ ಹುಯ್ಲಿ.. ಇದೇನು ಪ್ರಜಾಪ್ರಭುತ್ವನಾ ಇಲ್ಲ ರಾಜಬ್ರಭುತ್ವನಾ ಅನ್ನೋದೇ ದೊಡ್ಡ ಪ್ರಶ್ನೆಯಾಗಿದೆ.ಇದೆ ಕೆಲಸ ಬೇರೆ ಧರ್ಮದ ನಟರು ಮಾಡಿದ್ರೆ ಆಗ್ಲೇ ಇಲ್ಲೊಂದು ಹುಚ್ಚು, ಬೇವರ್ಸಿ, ಕಂತ್ರಿ, ಕಜ್ಜಿ, ಹಲ್ಕಟ್, ಹಡಬಿಟ್ಟಿ ನಾಯಿ ಬೊಗಳಿರೋದು.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...