Homeಮುಖಪುಟಬೀದಿ ನಾಟಕ: ನಾಗಪುರದ ತೊಗಲು ಬೊಂಬೆ ಆಟ

ಬೀದಿ ನಾಟಕ: ನಾಗಪುರದ ತೊಗಲು ಬೊಂಬೆ ಆಟ

- Advertisement -
- Advertisement -

ತೆರೆಯ ಹಿಂದೆ ತೊಗಲು ಬೊಂಬೆ ಆಟಗಾರರು. ತೆರೆಯ ಮೇಲೆ ಬೊಂಬೆಗಳು ಆಡುತ್ತವೆ..

ಹಾಡು :

ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು
ಏನೇ ಬರಲಿ ಯಾರಿಗೂ ಸೋತು ತಲೆಯ ಬಾಗದು
ಎಂದಿಗು ನಾನು ಹೀಗೆ ಇರುವೆ ಎಂದು ನಗುವುದು
ಹೀಗೆ ನಗುತಲಿರುವುದು ಹೀಗೇ ನಗುತಲಿರುವುದು..

(ಬುಡಬುಡಿಕೆಯವನ ಪ್ರವೇಶ)

ಬುಡಬುಡಿಕೆ : ಜಯವಾಗತೈತೆ ಸ್ವಾಮಿ ಜಯವಾಗುತೈತೆ

ಈ ಸಲದ ಚುನಾವಣೆಯಲಿ ಜಯವಾಗುತೈತೆ
ಬುಡಬುಡಿಕೆ ಶಕುನ ನುಡಿಸುತೈತೆ ಸ್ವಾಮಿ

ಈ ಸಲದ ಚುನಾವಣೆಯಲಿ ಗೆಲುವಾಗುತೈತೆ ಸ್ವಾಮಿ
ಗೆಲುವಾಗುತೈತೆ (ಬುಡಬುಡಿಕೆ ನುಡಿಸುವನು)

ಸೂತ್ರಧಾರ : ಏ ಬುಡಬುಡಿಕೆ! ಇಷ್ಟು ದಿನ ಎಲ್ಲೋಗಿದ್ಯೋ?

ಬುಡಬುಡಿಕೆ : ಯಾಕೆ ಸ್ವಾಮಿ? ಹೊಟ್ಟೆ ಪಾಡಿಗೆ ಒಂದು ಊರೆ? ಒಂದು ಕೇರಿನಾ? ಒಂದು ದೇಶನಾ?

ಸೂತ್ರಧಾರ : ಹೌದೌದು! ಏನ್ ಸುಡಾನ್ ದೇಶಕ್ಕೆ ಹೋಗಿದ್ದೇನು? ಬಹಳ ದಿವಸಾತ್ ನೀನು ಬಂದು!

ಬುಡಬುಡಿಕೆ : ಸುಡಾನ್‌ಗೂ ಇಲ್ಲ ಶ್ರೀಲಂಕಾಕ್ಕೂ ಇಲ್ಲ. ನಾಗಪುರಕ್ಕೆ ಹೋಗಿದ್ದೆ.

ಸೂತ್ರಧಾರ : ಅರೆರೆ ಬುಡಬುಡಿಕೆ ನಾಗಪುರಕ್ಕೆ ಯಾಕೋದೋ? ಅಲ್ಲೇನೈತೋ ನೋಡೋಕೆ?

ಬುಡಬುಡಿಕೆ : ಯಾಕೆಂದ್ರೆ ಮಂಕೀಬಾತ್‌ನಲ್ಲಿ ಮೋದಿ ಹೇಳಲಿಲ್ಲವೆ- ನಾಗಪುರ ಎಂದರೆ ತೊಗಲು ಬೊಂಬೆ ತಯಾರಿಕೆಯಲ್ಲಿ ಜಗತ್ಪ್ರಸಿದ್ಧ ಅಂತ, ಆ ಕಾರ್ಯಾಗಾರ ನೋಡಾಕೋಗಿದ್ದೆ.

ಸೂತ್ರಧಾರ: ಏಯ್, ಮಂಕೀಬಾತ್ ಅಲ್ಲೋ ಮನ್ ಕೀ ಬಾತ್! ಮನದ ಮಾತು. ಅದಿರಲಿ ಅಲ್ಲೇನದಲೇ ನೋಡಾಂತದ್ದು?

ಬುಡಬುಡಿಕೆ: ನಾನೂ ಅದೇ ಅಂದ್ಕಂಡಿದ್ದೆ, ನನ್ ಗೆಣೇಕಾರ ಒಬ್ಬ ಬಾರಲೆ ನೋಡಿ ಬರಾನ, ಅದೆಂತ ಚರ್ಮದಲ್ಲಿ ಮಾಡ್ತಾರೆ ಅಂತ ಕರೆದ, ಅವನಿಗೆ ಕಂಪನಿ ಕೊಟ್ಟಿದ್ದೆ.

ಸೂತ್ರಧಾರ: ಸರಿಕಣೋ. ಅಲ್ಲೇನೇನ್ ಕಂಡ್ಯೋ? ಯಾರ್ ತೋರಿಸಿದ್ರು? ಹೆಂಗೆ ಮಾಡ್ತಾರೊ ಆ ತೊಗಲು ಬೊಂಬೆಗಳನ್ನಾ?

ಬುಡಬುಡಿಕೆ: ಅವರಿವರ ಕೈಕಾಲ್ ಕಟ್ಟಿ ಕಾರ್ಯಾಗಾರ ನೋಡಲು ಪರ್ಮಿಷನ್ ತಗೊಂಡ್ವಿ.

ಸೂತ್ರಧಾರ: ಏ ಬುಡಬುಡಿಕೆ, ಗೋವಿನ ಚರ್ಮದಲ್ಲಿ ಆ ಬೊಂಬೆಗಳನ್ನ ಮಾಡ್ತಾರಂತಲ್ಲೊ!

ಬುಡಬುಡಿಕೆ: ಹೌದು, ಇಲ್ಲವಾದರೆ ತೊಗಲು ಬೊಂಬೆಗಳನ್ನು ಮಾಡುವುದು ಹೇಗೆ ಸ್ವಾಮಿ? ತಮಟೆ, ಮೃದಂಗ, ಅರೆ ಇತ್ಯಾದಿ ವಾದ್ಯಗಳನ್ನು ಮಾಡಿದಂತೆಯೇ ಈ ತೊಗಲು ಬೊಂಬೆಗಳನ್ನೂ ಚರ್ಮದಿಂದಲೇ ಮಾಡಬೇಕಲ್ಲ?

ಸೂತ್ರಧಾರ: ಹೆಂಗ್ ಮಾಡ್ತಾರೊ?

ಬುಡಬುಡಿಕೆ: ಮೊದಲು ಆಟಕ್ಕೆ ಬೇಕಾದ ರಾಮ, ಸೀತೆ, ಆಂಜನೇಯ, ಲಕ್ಷ್ಮಣ, ವಾಲಿ, ಸುಗ್ರೀವ, ರಾವಣ, ಕುಂಭಕರ್ಣ, ವಿಭೀಷಣ, ಮಂಡೋದರಿ, ಇಂದ್ರಜಿತು ಇತ್ಯಾದಿ ಪಾತ್ರಗಳ ಆಕಾರಕ್ಕೆ ಸರಿಯಾಗಿ ರೊಟ್ಟಿನ ಮಾಡೆಲ್‌ಗಳನ್ನು ಕತ್ತರಿಸುತ್ತಾರೆ. ಆಮೇಲೆ ಅವಕ್ಕೆ ಹದಮಾಡಿದ ಚರ್ಮವನ್ನು ಹೊದಿಸಿ ಕರೆಕ್ಟಾಗಿ ಕತ್ತರಿಸಿಕೊಳ್ಳುತ್ತಾರೆ.

ಸೂತ್ರಧಾರ: ರೊಟ್ಟಿನ ಮಾದರಿ ಗೊಂಬೆಗಳು ಕೈಕಾಲು ಆಡಿಸುವುದು ಹೇಗೋ?

ಬುಡಬುಡಿಕೆ: ನೀವೇ ಸೂತ್ರಧಾರರಲ್ಲವೆ? ನಮ್ಮ ಶರೀರದ ಅಂಗಾಂಗಗಳು ಹೇಗೆ ಆಡುತ್ತವೊ ಹಾಗೆ. ಕೈ, ಕಾಲು, ಬಾಗು, ಬಳುಕು, ತಲೆ ವಾಲುವಿಕೆ ಇತ್ಯಾದಿಗಳ ಚಲನೆಗೆ ಅನುಕೂಲವಾಗುವಂತೆ ಕೀಲು ಕೀಲಿಗೂ ರಂಧ್ರ ಮಾಡಿ ಸೂತ್ರ (ದಾರ)ಗಳನ್ನು ಹಾಕಿರುತ್ತಾರೆ.

ಸೂತ್ರಧಾರ: ಆಮೇಲೆ?

ಬುಡಬುಡಿಕೆ: ಆಮೇಲೆ, ಆಯಾ ಪಾತ್ರಗಳ ಕಲ್ಪನೆಗೆ ತಕ್ಕಂತೆ ಬಣ್ಣ ಹಚ್ಚುತ್ತಾರೆ, ರಾಮನಿಗೆ ನೀಲವರ್ಣ, ಸೀತೆಗೆ ಬಂಗಾರದ ಬಣ್ಣ, ಆಂಜನೇಯನಿಗೆ ರೋಮ ರೋಮ ಕಾಣುವಂತೆ ಬೂದು ಬಣ್ಣ.. ಲಕ್ಷ್ಮಣ, ಇಂದ್ರಜಿತ್‌ಗೆ ತಾಮ್ರವರ್ಣ.. ಹೀಗೆ ವಿವಿಧ ಪಾತ್ರಗಳಿಗೆ ವಿವಿಧ ವರ್ಣ! ಇಗೋ ಪ್ರದರ್ಶನವನ್ನೇ ನೋಡಿ! ಬೇಕಾದ್ರೆ.

ತೊಗಲು ಬೊಂಬೆ ನಾಟಕ ಆರಂಭ

ತೆರೆಯ ಹಿಂದೆ ಬೊಂಬೆಯಾಟದ ಸೂತ್ರಧಾರ. ಅವನ ಕೈಚಳಕಕ್ಕೆ ಸರಿಯಾಗಿ ನೆರಳು ಬೆಳಕಿನಲ್ಲಿ ಆ ಬೊಂಬೆಗಳು ನರ್ತಿಸುತ್ತವೆ. ಎದುರಿಗೆ ಪ್ರೇಕ್ಷಕ ವರ್ಗ.

ಭಾಗವತನ ಆಲಾಪ: ಆಡುತಾಡುತಾ ಬಂದಾ ರಾಮಾ
ಆಡುತಾಡುತಾ ಬಂದಾ ರಾಮಾ.. (ಪಲ್ಲವಿ)
ಆಡುತ ಪಾಡುತ ನೋಡುತ ಎಡಬಲ
ಆಡುತಾಡುತಾ ಬಂದಾ ರಾಮ. (ಅನು ಪಲ್ಲವಿ)
ಆಡು…ತಾ..ಡು..ತಾ ಬಂದಾ..ರಾ…ಮಾ. ಆಲಾಪ

ಭಾಗವತ: ನಾವು ಈ ದಿನ ಸಂಪೂರ್ಣ ರಾಮಾಯಣ ಎಂಬ ತೊಗಲು ಬೊಂಬೆ ಆಟವನ್ನು ಈ ನಗರದ ಬೀದಿಬೀದಿಗಳಲ್ಲಿ, ಪ್ರದರ್ಶನ ಗಾಡಿಯಲ್ಲಿ ’ರೋಡ್ ಶೋ’ ಮಾಡುತ್ತಿದ್ದೇವೆ. ರಸಿಕಜನ ತಾವಿರುವಲ್ಲಿಯೇ ನೋಡಿ ಆನಂದಿಸಲಿ ಎಂದು.

ಸೂತ್ರಧಾರ: ರೋಡ್ ಶೋ ಪ್ರಯೋಗ ನಮ್ಮ ನಗರದಲ್ಲಿ ಇದೇ ಮೊಟ್ಟ ಮೊದಲನೆಯದು. ನಮ್ಮ ಈ ತೊಗಲು ಬೊಂಬೆ ಆಟವನ್ನು ಜನ ನೋಡಿ ಪ್ರೋತ್ಸಾಹಿಸಬೇಕು ಎಂದು ವಿನಂತಿಸಿಕೊಳ್ಳುತ್ತೇವೆ.

[ಹಿನ್ನೆಲೆ ಸಂಗೀತ, ಧ್ವನಿವರ್ಧಕದಲ್ಲಿ]

ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು
ಏನೇ ಬರಲಿ ಯಾರಿಗೂ ಸೋತು ತಲೆಯ ಬಾಗದು.
ಹಾಡಿನ ಲಯಕ್ಕೆ ಸೀತಾ, ರಾಮ, ಲಕ್ಷ್ಮಣ, ಆಂಜನೇಯ ಬೊಂಬೆಗಳು ಅಭಿನಯಿಸುತ್ತವೆ.

(ಪ್ರದರ್ಶನದ ಟ್ರಕ್ಕು ನಗರದ ಬೀದಿಬೀದಿಗಳಲ್ಲಿ ಕೇಂದ್ರ ವೃತ್ತಗಳಲ್ಲಿ ನಿಂತು ನಿಂತು ಸಾಗುತ್ತದೆ. ಧ್ವನಿವರ್ಧಕದ ಹಾಡಿಗೆ ತಕ್ಕಂತೆ ತೊಗಲು ಬೊಂಬೆಗಳು ಅಭಿನಯಿಸುತ್ತವೆ.)

ಇದನ್ನೂ ಓದಿ: ಒಂದಿಷ್ಟು ಜಪಾನೀ ಹಾಯ್ಕುಗಳು

ಗುಡಿಸಲೆ ಆಗಲಿ ಅರಮನೆಯಾಗಲಿ ಆಟ ನಿಲ್ಲದು
ಹಿರಿಯರೆ ಬರಲಿ ಕಿರಿಯರೆ ಬರಲಿ ಭೇದ ತೋರದು
ಕಷ್ಟವೊ ಸುಖವೊ ಅಳುಕದೆ ಆಡಿ ತೂಗುತಿರುವುದು
ತೂಗುತಿರುವುದು. ಆಡಿಸಿನೋಡು…

ಪ್ರೇಕ್ಷಕ-1: ಯಾವೂರಿನ ಆಟದವರೋ ಮಾರಾಯ ಇವರು?

ಪ್ರೇಕ್ಷಕ-2: ಯಾವೂರು ಆದರೇನು? ಬೊಂಬೆಗಳ ನಟನೆ ನೋಡಿ ಅದ್ಭುತ.

ಪ್ರೇಕ್ಷಕ-3: ಇದು ನಾಗಪುರದ ತೊಗಲು ಬೊಂಬೆ ಆಟದ ಕಂಪನಿಯಂತೆ ಕಂಡ್ರೊ.

ಪ್ರೇಕ್ಷಕ-4: ನಾಗಪುರ ಅಂದ್ರೆ!

ಪ್ರೇಕ್ಷಕ-1: ಅಯೋಧ್ಯೆಯನ್ನೇ, ಹಸ್ತಿನಾವತಿ, ನಾಗಪುರ ಮುಂತಾಗಿ ಕರಿತಾರೆ.

ಪ್ರೇಕ್ಷಕ-4: ಯಾವೂರಾದ್ರೇನು ಇಂಥ ಆಟ ನನ್ನ ಜನ್ಮದಲ್ಲೇ ಕಾಣಲಿಲ್ಲ ಬಿಡೋ.

ಪ್ರದರ್ಶನ ಗಾಡಿ ಮುಂದೆ ಮುಂದೆ ಸಾಗುತ್ತದೆ. ಧ್ವನಿವರ್ಧಕ ಹಾಡುತ್ತದೆ.

ಆಡಿಸುವಾತನ ಕೈ ಚಳಕದಲಿ ಎಲ್ಲ ಅಡಗಿದೆ
ಆತನ ಕರುಣೆಯೆ ಜೀವವ ತುಂಬಿ ಕುಣಿಸಿ ನಗಿಸಿದೆ
ಆ ಕೈ ಸೋತರೆ ಬೊಂಬೆಯ ಕತೆಯು ಕೊನೆಯಾಗುವುದೇ. ಕೊನೆಯಾಗುವುದೇ
ಆಡಿಸಿ ನೋಡು..

ಮುಂದಿನ ಸರ್ಕಲ್‌ನಲ್ಲಿ ಗಾಡಿ ಕೊಂಚ ನಿಲ್ಲುತ್ತದೆ. ಧ್ವನಿವರ್ಧಕ ಹಾಡುತ್ತಲೇ ಇದೆ.

ಒಬ್ಬ ಮುದುಕಿ: ನೋಡವ್ವ ಇದು ತೊಗಲು ಬೊಂಬೆ ಆಟ ಅಂತ ಅನ್ನಿಸುವುದೇ ಇಲ್ಲ. ಜೀವದ ಬೊಂಬೆಗಳು ಹಂಗಿವೆ

ಒಬ್ಬ ತಾಯಿ: ಹೌದಜ್ಜಿ ಈ ತೊಗಲು ಬೊಂಬೆಗಳೇ ನಡೆದಾಡುವ ದೇವರಂತಿವೆ, ಇಷ್ಟು ಜೀವಂತ ಉಂಟೇನಜ್ಜಿ?

ಮಕ್ಕಳ ತಾಯಿ: ಆ ಬೊಂಬೆ ಗಾಡಿ ಎದುರಿಗೆ ತನ್ನ ಕೈಕೂಸನ್ನು ಎತ್ತಿ ನೀವಾಳಿಸಿ ರಸ್ತೆಯಲ್ಲಿ ಅಡ್ಡ ಮಲಗಿಸಿ ತಾನೂ ದೀರ್ಘ ದಂಡ ನಮಸ್ಕರಿಸುತ್ತಾಳೆ.

ಇನ್ನೊಬ್ಬಾಕೆ: ಅವಸರದಿಂದ ಮನೆಯಿಂದ ಈಚೆ ಬಂದವಳೆ ದೇವರ ಗಾಡಿ ಹೋದ ದಾರಿಯ ಧೂಳನ್ನೇ ಎತ್ತಿಕೊಂಡು ಹಣೆಗೆ ಇಟ್ಟುಕೊಳ್ಳುತ್ತಾಳೆ.

ಧ್ವನಿವರ್ಧಕ ಹಾಡುತ್ತದೆ. ಪ್ರದರ್ಶನ ಗಾಡಿ ಮುಂದೆ ಸಾಗುತ್ತದೆ

ಆಡಿಸಿನೋಡು..

ದೃಶ್ಯ ಬದಲು

ಬುಡಬುಡಿಕೆ ಪ್ರವೇಶ: ಶುಭ ನುಡಿಯೆ ಶಕುನದ ಹಕ್ಕಿ ಶುಭನುಡಿಯೆ
ಜಯವಾಗುತೈತೆ ಸ್ವಾಮಿ ಜಯವಾಗುತೈತೆ

ಈ ಸಲದ ಚುನಾವಣೆಯಲಿ ನೀವು ಕೋರಿಕೊಂಡ ಫಲ ಕೈ ಸಾರುತ್ತೆ ಸ್ವಾಮಿ, ಕೈ ಸಾರುತ್ತೆ… ಶುಭ ನುಡಿಯೆ…

ದಿಢೀರನೆ ಸೂತ್ರಧಾರನ ಪ್ರವೇಶ: ಏ ಬುಡಬುಡಿಕೆ, ಇರು ಇರು ಹೋಗಬೇಡ ನೀನ್ ಹೇಳಿದಂಗೆ ನಾಗಪುರದ ತೊಗಲು ಬೊಂಬೆ ಆಟ ಬೊಂಬಾಟ್ ಕಣೋ!

ಬುಡಬುಡಿಕೆ: ಅದಕ್ಕೆ ನಾವು ಹೋಗಿ ಬಂದದ್ದು, ಆ ಕಾರ್ಯಾಗಾರ ನೋಡೋದೆ ಒಂದು ವಿಸ್ಮಯ. ಆ ಸನಾತನ ಕಾರ್ಯಾಗಾರದಲ್ಲಿರುವ ಗುಡಿಕೈಗಾರಿಕೆಯವರ ಕೈ ಚಳಕವೇ ಹಾಗಂತೆ! ಜಗತ್ಪ್ರಸಿದ್ಧ. ಇಂಡಿಯಾ ದೇಶದ ಕೇಂದ್ರ ಬಿಂದು ಅದು.

ಸೂತ್ರಧಾರ: ಕರುನಾಡಿನ ಪುಣ್ಯಕೋಟಿ ಸಂತತಿಯ ಗೋವಿನ ಚರ್ಮ ಕೂಡ ಅಲ್ಲಿಗೆ ಹೋಗುತ್ತದಂತೆ!

ಬುಡಬುಡಿಕೆ: ಗೋವಿನ ಚರ್ಮ ಹೋಗುತ್ತೋ ಅಥವಾ ಜೀವಂತ ಗೋವುಗಳೇ ಹೋಗುತ್ತವೊ ನಮಗೇನೂ ಗೊತ್ತಿಲ್ಲ ಸ್ವಾಮಿ.

ಸೂತ್ರಧಾರ: ಈಗ ಹಂಗೆಲ್ಲ ಜೀವಂತ ಸಾಗಿಸೊ ಹಂಗಿಲ್ಲ- ಖಾಸಗಿ ಗೋರಕ್ಷಕರು ಗಾಡಿ ತಡಿತಾರೆ

ಬುಡಬುಡಿಕೆ: ನಾಗಪುರದ ತೊಗಲು ಬೊಂಬೆ ತಯಾರಿಕೆ ಎಂದ್ರೆ ಯಾರೂ ತಡಿಯಾದಿಲ್ಲ ಬಿಡಿ ಸ್ವಾಮಿ! ಪರವಾನಗಿ ಕೊಡ್ತಾರೆ.

ಸೂತ್ರಧಾರ: ಹೋಗಲಿ, ಬಿಡೋ ನಮಗ್ಯಾಕೆ ಆ ಉಸಾಬರಿ? ಈ ಸಲದ ಚುನಾವಣೆ ಭವಿಷ್ಯ ಏನಾಗುತ್ತೆ ಅಂತ ಹೇಳುತ್ತೇನೊ ನಿನ್ನ ಬುಡಬುಡಿಕೆ ಕಣಿ?

ಬುಡಬುಡಿಕೆ: ಹೇಳ್ತೀನಿ! ಅದಕ್ಕೇ ಅಲ್ವ ನಾನು ಮತ್ತೆ ಬಂದದ್ದು. ಮೊದಲು ಏನಾರ ಕೊಡಿ ಸ್ವಾಮಿ.

ಸೂತ್ರಧಾರ: ಏನ್ ಕೊಡಬೇಕೊ, ಈಗಾಗಲೆ ನಿನ್ನ ಹೆಗಲ ಮೇಲೆ ಅಷ್ಟೊಂದು ಬಟ್ಟೆಬರೆ ಕಂಬಳಿ ಹೊರುವಷ್ಟಿದೆ. ತಲೆ ತುಂಬ ತರಹೇವಾರಿ ಪೇಟ ಹಾಕಿದ್ದೀಯಾ. ಇನ್ನೇನ್ ಬೇಕೊ?

ಬುಡಬುಡಿಕೆ: ಇದೆಲ್ಲ ಉದರ ನಿಮಿತ್ತ ಬಹುಕೃತ ವೇಷ! ನಿಮ್ಮ ರಾಜಕಾರಣಿಗಳೇ ನನಗಿಂತ ಬಹುಕೃತ ವೇಷ ಧರಿಸುತ್ತಾರೆ ರೋಡ್ ಶೋನಲ್ಲಿ. ಸಭೆಗೊಂದು ಡ್ರೆಸ್ಸು. ಕಿರೀಟ, ಹಾರ, ತುರಾಯಿ ಹಾಕ್ಕೊಂಡು ಮಾರೆಮ್ಮಗೆ ಬಿಟ್ಟ ಕೋಣದಂತೆ ಮೆರೀತಾರೆ.

ಸೂತ್ರಧಾರ: ಅವರೇನ್ ಮಾಡ್ತಾರೋ, ಪಾರ್ಟಿಜನ ಕುಣಿಸದ್ದಾಂಗ ಕುಣೀತಾರೆ! ಅಷ್ಟೆ.

ಬುಡಬುಡಿಕೆ: ನಿಜ, ನಿಜ. ಅವರ ವೇಷ ಭೂಷಣ ನೋಡಿದರೆ ನಾಗಪುರದ ತೊಗಲು ಬೊಂಬೆಗಳೂ ನಾಚಿ ನೀರಾಗ್ತವೆ. ಅವರ ಅಭಿನಯ ಕಂಡರೆ ಆಂಜನೇಯ ಕಿಷ್ಕಿಂಧೆಗೆ ಓಟ ಕೀಳುವನು.

ಸೂತ್ರಧಾರ: ಸರಿಸರಿ ಬರೀ ಮಾತೆ ಆಯ್ತು. ನಿನ್ನ ಭವಿಷ್ಯ ಹೇಳೋ. ಕೊಡೋದು ಬಿಡೋದು ಆಮೇಲೆ…

ಬುಡಬುಡಿಕೆ: ಶುಭ ನುಡಿಯೆ ಶಕುನದ ಹಕ್ಕಿ ಶುಭನುಡಿಯೆ….

ಬುಡಬುಡಿಕೆ ನುಡಿಸುತ್ತಾ…

ಈ ಸಲ ಏರುತ್ತಿರುವ ತಾಪಮಾನಕ್ಕೆ ಗಂಗಾ-ಕಾವೇರಿ ನೀರೂ ಬಿಸಿಯಾಗುತ್ತೆ. ’ತಾವರೆ ಹೂ’ ಬಾಡಬಹುದು….
ಈ ಬಿಸಲ ಝಳಕ್ಕೆ ’ಕೈ’ ಅಡ್ಡಲಾಗಿ ಇಟ್ಟವರು ಬಹುಶಃ ಬಚಾವ್….
’ಹುಲ್ಲು ಹೊರೆ ಹೊತ್ತ’ ಹೆಂಗಸಂತೂ ಈ ಸಲದ ಬಿಸಿಲಿಗೆ ಬಸವಳಿದು ಗ್ಯಾನ ತಪ್ತಾಳೆ….
ಶುಭ ನುಡಿಯೇ ಶಕುನದ ಹಕ್ಕಿ ಶುಭ ನುಡಿಯೆ….
ಬುಡಬುಡಿಕೆ ನುಡಿಸುತ್ತಾ ಹೋಗುವನು. ಸೂತ್ರಧಾರ ನೋಡುತ್ತಾ ನಿಲ್ಲುವನು.
-ಹೋಗುವರು-
-ತೆರೆ-

ಪ್ರೊ. ಶಿವರಾಮಯ್ಯ

ಪ್ರೊ.ಶಿವರಾಮಯ್ಯ
ಕನ್ನಡ ಪ್ರಾಧ್ಯಾಪಕರಾಗಿ ನಿವೃತ್ತರಾಗಿರುವ ಶಿವರಾಮಯ್ಯನವರು ತಮ್ಮ ಅಧ್ಯಾಪನ ಮತ್ತು ಸಂಶೋಧನಾ ಕಾರ್ಯಗಳ ಜೊತೆಗೆ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡವರು. ಸ್ವಪ್ನ ಸಂಚಯ (ಕವನ ಸಂಕಲನ), ಉರಿಯ ಉಯ್ಯಾಲೆ (ವಿಮರ್ಶಾ ಬರಹಗಳ ಸಂಕಲನ), ದನಿ ಇಲ್ಲದವರ ದನಿ, ಪಂಪಭಾರತ ಭಾಗ-1 &2 (ಸಂಪಾದನೆ ಮತ್ತು ಗದ್ಯಾನುವಾದ) ಅವರ ಪುಸ್ತಕಗಳಲ್ಲಿ ಕೆಲವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...