HomeUncategorizedಟ್ರಂಪ್ ಭೇಟಿಗಾಗಿ ಆಗ್ರಾ ಮತ್ತು ತಾಜ್‌ ಸುಂದರೀಕರಣ : ಯುಮುನ ಕೊಳಕು ಮರೆ ಮಾಚಲು ಶುದ್ದ...

ಟ್ರಂಪ್ ಭೇಟಿಗಾಗಿ ಆಗ್ರಾ ಮತ್ತು ತಾಜ್‌ ಸುಂದರೀಕರಣ : ಯುಮುನ ಕೊಳಕು ಮರೆ ಮಾಚಲು ಶುದ್ದ ನೀರು

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಎರಡು ದಿನಗಳ ಭಾರತ ಭೇಟಿಗೆ ಮುಂಚಿತವಾಗಿ ತಾಜ್ ಮಹಲ್ ಇರುವ ಪಟ್ಟಣವಾದ ಆಗ್ರಾದ ಬೀದಿಗಳನ್ನು ಸುಂದರಗೊಳಿಸಲಾಗುತ್ತಿದೆ. ಗೋಡೆಗಳಿಗೆ ಬಣ್ಣಬಣ್ಣದ ಪೈಂಟ್ ಹೊಡೆಲಾಗುತ್ತಿದೆ. ಅಲ್ಲದೇ ಯಮುನಾ ನದಿಗೆ ಶುದ್ಧ ನೀರನ್ನು ಬಿಡುಗಡೆ ಮಾಡುವ ಮೂಲಕ ಅದರ ಕೊಳಕನ್ನು ಮರೆ ಮಾಚಲು ಯತ್ನಿಸಲಾಗುತ್ತಿದೆ.

ಅಮೆರಿಕಾದ ಭದ್ರತಾ ತಂಡವು ಸೋಮವಾರ ತಾಜ್ ಮಹಲ್ ಗೆ ಭೇಟಿ ನೀಡಿದೆ. ಅಲ್ಲದೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಅದೇ ದಿನ ಆಗ್ರಾಕ್ಕೆ ತೆರಳಿ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ.

ಬೆಳಿಗ್ಗೆ ತಾಜ್ ಮಹಲ್ ಸಂಕೀರ್ಣದೊಳಗಿನ ಕಾರಂಜಿಗಳನ್ನು ಸ್ವಚ್ಛಗೊಳಿಸಲಾಯಿತು. ಕೆಲಸಗಾರರು ಕಾರಂಜಿಗಳು ಮತ್ತು ಮಾರ್ಗಗಳನ್ನು ಉಜ್ಜಿ ತೊಳೆಯುವ ದೃಶ್ಯಗಳು ಕಂಡುಬಂದವು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಭಾರತದ ಪುರಾತತ್ವ ಸಮೀಕ್ಷೆ ನಿರ್ವಹಿಸುವ ಯಾವುದೇ ಸ್ಮಾರಕದ ದುರಸ್ತಿ ಮತ್ತು ಪುನಃಸ್ಥಾಪನೆಗೆ ಕಟ್ಟುನಿಟ್ಟಾದ ಮಾರ್ಗಸೂಚಿಗಳಿವೆ. ಆದರೆ ಅವೆಲ್ಲವುಗಳನ್ನು ಉಲ್ಲಂಘಿಸಿ ಕಾಮಗಾರಿಗಳು ನಡೆಯುತ್ತಿವೆ ಎಂಬ ಆರೋಪ ಕೇಳಿಬಂದಿದೆ.

“ಮುಖ್ಯ ಮಾರ್ಗದಲ್ಲಿ ಮತ್ತು ತಾಜ್ ಮಹಲ್ ಪ್ರದೇಶದ ಸಮೀಪವಿರುವ ಎಲ್ಲಾ ಮನೆಗಳು, ಅಂಗಡಿಗಳು, ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳನ್ನು ಗುರುತಿಸಲಾಗಿದೆ. ಪರಿಶೀಲನೆ ಪ್ರಕ್ರಿಯೆ ಮುಗಿಯಲಿದೆ. ಪರಿಶೀಲನೆಗಾಗಿ ಕೆಲವು ತಂಡಗಳನ್ನು ಸಹ ನೇಮಿಸಲಾಗಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಬೊಟ್ರೆ ರೋಹನ್ ಪ್ರಮೋದ್ ಅವರು ತಿಳಿಸಿದ್ದಾರೆ ಎಂದು ಎಎನ್‌ಐ ಹೇಳಿದೆ.

ಉತ್ತರಾಖಂಡ, ಹರಿಯಾಣ, ದೆಹಲಿ, ಮತ್ತು ಉತ್ತರ ಪ್ರದೇಶದ ಮೂಲಕ ಹಾದುಹೋಗುವ ಮತ್ತು ತಾಜ್‌ಮಹಲ್‌ನ ಹಿಂದೆ ಹರಿಯುವ ಯಮುನಾ ಕಳೆದ ಕೆಲವು ದಶಕಗಳಲ್ಲಿ ಕೈಗಾರಿಕೆ ಮತ್ತು ಒಳಚರಂಡಿಗಳ ಮಾಲಿನ್ಯದಿಂದ ತೀವ್ರವಾಗಿ ನರಳುತ್ತಿದೆ. ಹಾಗಾಗಿ ಕಳೆದ ಕೆಲವು ದಿನಗಳಲ್ಲಿ ಉತ್ತರಪ್ರದೇಶದ ನೀರಾವರಿ ಇಲಾಖೆಯು ದೆಹಲಿ ಮತ್ತು ಉತ್ತರ ಪ್ರದೇಶದ ಜೀವನಾಡಿಯಾಗಿರುವ ಯಮುನಾಕ್ಕೆ 500 ಕ್ಕೂ ಹೆಚ್ಚು ಕ್ಯೂಸೆಕ್  ಶುದ್ಧ ನೀರನ್ನು ಬಿಡುಗಡೆ ಮಾಡಲಾಗಿದೆ.

ಪ್ರಧಾನಮಂತ್ರಿ ಮೋದಿಯವರ ತವರು ರಾಜ್ಯ ಗುಜರಾತ್‌ನ  ಅಹಮದಾಬಾದ್‌ನಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಸೋಮವಾರ ತಮ್ಮ ಎರಡು ದಿನಗಳ ಭೇಟಿಯನ್ನು ಪ್ರಾರಂಭಿಸಲಿದ್ದಾರೆ. ಅಹಮದಾಬಾದ್‌ನಲ್ಲಿ ಹೊಸದಾಗಿ ನಿರ್ಮಿಸಲಾದ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ “ನಮಸ್ತೆ ಟ್ರಂಪ್” ಕಾರ್ಯಕ್ರಮದಲ್ಲಿ ಅಧ್ಯಕ್ಷ ಟ್ರಂಪ್ ಮತ್ತು ಅವರ ಪತ್ನಿ ಮೆಲಾನಿಯಾ ಭಾಗವಹಿಸಲಿದ್ದಾರೆ. ನಂತರ ದೆಹಲಿಗೆ ಹೋಗುವ ದಾರಿಯಲ್ಲಿ ತಾಜ್ ಮಹಲ್ ನೋಡಲು ಆಗ್ರಾಕ್ಕೆ ಹೋಗಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...

ಬಿಜೆಪಿ ಕಾರ್ಯಕರ್ತನ ಬಳಿ 3,400ಕ್ಕೂ ಹೆಚ್ಚು SIR ಎನ್ಯುಮರೇಷನ್‌ ಫಾರಂಗಳು ಪತ್ತೆ!-ವರದಿ

ಮತದಾರರ ವಿವರಗಳಿರುವ 3,400ಕ್ಕೂ ಹೆಚ್ಚು ಎಸ್‌ಐಆರ್ ಎನ್ಯುಮರೇಷನ್ ಫಾರಂಗಳು ಸ್ಥಳೀಯ ಬಿಜೆಪಿ ಕಾರ್ಯಕರ್ತನ ಬಳಿ ಪತ್ತೆಯಾದ ಬಳಿಕ, ನವಿ ಮುಂಬೈನಲ್ಲಿ ಐವರು ಬೂತ್ ಮಟ್ಟದ ಅಧಿಕಾರಿಗಳನ್ನು (ಬಿಎಲ್‌ಒ) ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಗುರುವಾರ (ಆ.27)...