Homeಚಳವಳಿತೀವ್ರಗೊಳ್ಳುತ್ತಿರುವ ರೈತ ಹೋರಾಟ: ಹರಿಯಾಣದ 60 ಗ್ರಾಮಗಳಲ್ಲಿ ಬಿಜೆಪಿಗೆ ಪ್ರವೇಶ ನಿಷೇಧ

ತೀವ್ರಗೊಳ್ಳುತ್ತಿರುವ ರೈತ ಹೋರಾಟ: ಹರಿಯಾಣದ 60 ಗ್ರಾಮಗಳಲ್ಲಿ ಬಿಜೆಪಿಗೆ ಪ್ರವೇಶ ನಿಷೇಧ

ಬಿಜೆಪಿ ಮತ್ತು ಜೆಜೆಪಿ ನಾಯಕರು ಹಾಗೂ ಕಾರ್ಯಕರ್ತರು ಗ್ರಾಮಕ್ಕೆ ಪ್ರವೇಶಿಸಿದರೆ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನಿನ ವಿರುದ್ದ ದೆಹಲಿಯ ಸುತ್ತ ರೈತರು ಹೋರಾಟ ಮಾಡುತ್ತಿದ್ದಾರೆ. ದೆಹಲಿಯ ನೆರೆಯ ರಾಜ್ಯವಾದ ಹರಿಯಾಣದಲ್ಲಿ ರೈತ ಹೋರಾಟಕ್ಕೆ 60 ಗ್ರಾಮಗಳು ಸಂಪೂರ್ಣವಾಗಿ ಬೆಂಬಲಿಸಿವೆ. ಈ 60 ಗ್ರಾಮಗಳು ರಾಜ್ಯದ ಆಡಳಿತ ಪಕ್ಷವಾದ ಬಿಜೆಪಿ ಹಾಗೂ ಜೆಜೆಪಿ ನಾಯಕರು ಮತ್ತು ಕಾರ್ಯಕರ್ತರಿಗೆ ಪ್ರವೇಶವನ್ನು ನಿಷೇಧಿಸಿದೆ.

ರೈತ ವಿರೋಧಿ ಕಾನೂನನ್ನು ವಿರೋಧಿಸಿ ರಾಷ್ಟ್ರದಾದ್ಯಂತದ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿರುವುದರಿಂದ ರಾಜ್ಯದ ಅನೇಕ ಗ್ರಾಮಗಳ ನಿವಾಸಿಗಳು ಬಿಜೆಪಿ-ಜೆಜೆಪಿಯ ಸಚಿವರು ಮತ್ತು ಶಾಸಕರನ್ನು ಬಹಿಷ್ಕರಿಸಿ ನಿರ್ಣಯಗಳನ್ನು ಅಂಗೀಕರಿಸಿದ್ದಾರೆ.

ಈ ಬಗ್ಗೆ ರೈತರು ಗ್ರಾಮದ ವಿವಿಧ ಪ್ರವೇಶ ಕೇಂದ್ರಗಳಲ್ಲಿ ಹೋರ್ಡಿಂಗ್‌ಗಳನ್ನು ಹಾಕಿದ್ದು, ಬಿಜೆಪಿ ಮತ್ತು ಜೆಜೆಪಿ ನಾಯಕರು ಹಾಗೂ ಕಾರ್ಯಕರ್ತರು ಗ್ರಾಮಕ್ಕೆ ಪ್ರವೇಶಿಸಿದರೆ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ.

ಇದನ್ನೂ ಓದಿ: ಹೋರಾಟವನ್ನು ಬೆಚ್ಚಗಿರಿಸುತ್ತಿರುವ ‘ಟ್ರ್ಯಾಲಿ’ ಎಂಬ ರೈತರ ಬದುಕಿನ ಬಂಡಿ!

ರಾಜ್ಯದ ಫತೇಹಾಬಾದ್‌ನ ಅಹೆರ್ವಾನ್, ಭಾನಿ ಖೇರಾ, ತಲ್ವಾರಾ, ಬಾರಾ, ಸಿಧಾನಿ, ಧನಿ ಬಾಬನ್ಪುರ್, ಕಾಮನಾ ಮತ್ತು ಲಂಬಾ ಗ್ರಾಮಗಳು ಈ ಪಟ್ಟಿಯಲ್ಲಿ ಸೇರಿದೆ. ಈ ಗ್ರಾಮಗಳಲ್ಲಿ ನಿವಾಸಿಗಳು ಆಡಳಿತ ಪಕ್ಷದ ಮುಖಂಡರ ವಿರುದ್ಧ ಬ್ಯಾನರ್‌ಗಳನ್ನು ಅಳವಡಿಸಿದ್ದಾರೆ.

ಇದನ್ನೂ ಓದಿ: ದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ಹಿಸಾರ್‌‌ನ, ಕನಿಷ್ಠ 17 ಹಳ್ಳಿಗಳ ನಿವಾಸಿಗಳು ವಿಧಾನಸಭೆಯ ಉಪಸಭಾಪತಿ ರಣಬೀರ್ ಗಂಗ್ವಾ ಸೇರಿದಂತೆ ಎಲ್ಲಾ ರಾಜಕಾರಣಿಗಳಿಗೆ ಸಾಮಾಜಿಕ ಬಹಿಷ್ಕಾರವನ್ನು ಹಾಕಿ ಹಳ್ಳಿಗಳ ಪ್ರವೇಶವನ್ನು ನಿಷೇಧಿಸಿದ್ದಾರೆ.

ಬಿಜೆಪಿ ಸರ್ಕಾರವನ್ನು ಬೆಂಬಲಿಸಿದ್ದಕ್ಕಾಗಿ ಉಪಮುಖ್ಯಮಂತ್ರಿ, ಜೆಜೆಪಿ ಮುಖಂಡ ದುಶ್ಯಂತ್ ಚೌತಾಲಾ ಮತ್ತು ಹಿಸಾರ್ ಸಂಸದ ಬ್ರಿಜೇಂದ್ರ ಸಿಂಗ್ ಅವರನ್ನು ಸಾಮಾಜಿಕವಾಗಿ ಬಹಿಷ್ಕರಿಸಲಾಗುವುದು ಎಂದು ಜಿಂದ್ ಸರ್ವ್ ಖಾಪ್ (14 ಖಾಪ್ ಸಮುದಾಯಗಳ ಒಕ್ಕೂಟ) ಈಗಾಗಲೇ ಘೋಷಿಸಿದೆ. ಭಿವಾನಿ ಜಿಲ್ಲೆಯ ಲೊಹರು ಗ್ರಾಮದ ನಿವಾಸಿಗಳು ಕೃಷಿ ಸಚಿವ ಜೆ.ಪಿ. ದಲಾಲ್ ಅವನ್ನು ಗ್ರಾಮಕ್ಕೆ ಪ್ರವೇಶಿಸುವುದನ್ನು ಈ ಹಿಂದೆ ತಡೆದಿದ್ದರು.

ಈಗಾಗಲೇ ಹಲವಾರು ಬಿಜೆಪಿ ಮತ್ತು ಜೆಜೆಪಿಯ ನಾಯಕರ ನಿವಾಸಗಳ ಹೊರಗಡೆ  ರೈತರು ಪ್ರತಿಭಟನೆಗಳನ್ನು ನಡೆಸಿದ್ದಾರೆ. ಅಷ್ಟೇ ಅಲ್ಲದೆ ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ದ ರೈತರ ಪರವಾಗಿ ನಾವಿದ್ದೇವೆ ಎಂದು ಐದು ಜೆಜೆಪಿ ಶಾಸಕರು ಈಗಾಗಲೇ ಹೇಳಿದ್ದಾರೆ.

ಇದನ್ನೂ ಓದಿ:ಮೃದು ಧೋರಣೆ ತಳೆಯಿರಿ ಎಂದ ಕೇಂದ್ರ: ರೈತರೊಂದಿಗಿನ 9ನೇ ಸುತ್ತಿನ ಮಾತುಕತೆ ವಿಫಲ 9ನೇ ಸುತ್ತಿನ ಮಾತುಕತೆ ವಿಫಲ: ತಾನು ಬಗ್ಗದೆ, ಮೃದು ಧೋರಣೆ ತಳೆಯುವಂತೆ ಆಗ್ರಹಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...