Homeಮುಖಪುಟಮಣಿಪುರದ ಬಗ್ಗೆ ನಿರ್ಲಕ್ಷ್ಯಕ್ಕೆ ಬೆಲೆತೆತ್ತ ಬಿಜೆಪಿ

ಮಣಿಪುರದ ಬಗ್ಗೆ ನಿರ್ಲಕ್ಷ್ಯಕ್ಕೆ ಬೆಲೆತೆತ್ತ ಬಿಜೆಪಿ

- Advertisement -
- Advertisement -

ಪ್ರಕ್ಷುಬ್ಧ ಈಶಾನ್ಯ ರಾಜ್ಯ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ನಡುವೆ ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ನಾಗಾ ಪೀಪಲ್ಸ್ ಫ್ರಂಟ್(ಎನ್‌ಪಿಎಫ್)ನ್ನು ಸೋಲಿಸುವ ಮೂಲಕ ಪ್ರತಿಪಕ್ಷವಾದ ಕಾಂಗ್ರೆಸ್‌ ಎರಡೂ ಸಂಸದೀಯ ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಮೂಲಕ ಮಣಿಪುರದ ಕುರಿತು ನಿರ್ಲಕ್ಷ್ಯ ತೋರಿದ ಬಿಜೆಪಿ ಸರಕಾರಕ್ಕೆ ಮಣಿಪುರದ ಜನತೆ ತಕ್ಕ ಪಾಠವನ್ನು ಕಲಿಸಿದ್ದಾರೆ.

ನಮಗೆ ಶಾಶ್ವತ ಭಯ ಮುಕ್ತ ಬದುಕುವ ವಾತಾವರಣ ಬೇಕು, ಶಿಬಿರಗಳಲ್ಲಿ ದಿನದೂಡುತ್ತಿರುವ ನಾವು ಮತದಾನ ಮಾಡುವುದಿಲ್ಲ ಎಂದು ಲೋಕಸಭೆ ಚುನಾವಣೆಗೆ ಈ ಹಿಂದೆ ಮಣಿಪುರದ ನಿರಾಶ್ರಿತರ ಶಿಬಿರದಲ್ಲಿದ್ದ ಜನತೆ ಬಹಿಷ್ಕಾರವನ್ನು ಹಾಕಿದ್ದರು. ಮಣಿಪುರದಲ್ಲಿ ಶಾಂತಿ ಸ್ಥಾಪನೆ, ಪುನರ್ವಸತಿ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.

ಮಣಿಪುರದಲ್ಲಿ ಎರಡು ಲೋಕಸಭೆ ಕ್ಷೇತ್ರಗಳಿದೆ. ಇನ್ನರ್ ಮಣಿಪುರ ಕ್ಷೇತ್ರದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ, ಕಾಂಗ್ರೆಸ್ ಅಭ್ಯರ್ಥಿ ಅಂಗೋಮ್ಚಾ ಬಿಮೋಲ್ ಅಕೋಯಿಜಮ್ ಅವರು ರಾಜ್ಯ ಶಿಕ್ಷಣ ಸಚಿವ ಬಿಜೆಪಿಯ ಟಿ ಬಸಂತ ಕುಮಾರ್ ಸಿಂಗ್ ಅವರನ್ನು 109,801 ಮತಗಳಿಂದ ಸೋಲಿಸಿದ್ದಾರೆ. ಹೊರ ಮಣಿಪುರ ಕ್ಷೇತ್ರವು ಬುಡಕಟ್ಟು ಸಮುದಾಯಗಳಿಗೆ ಮೀಸಲಾದ ಕ್ಷೇತ್ರ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ಆಲ್‌ಫ್ರೆಡ್ ಕಂಗಮ್ ಆರ್ಥರ್ ಗೆದ್ದುಕೊಂಡಿದ್ದಾರೆ. ಕಂಗಮ್ ಆರ್ಥರ್ ನಿವೃತ್ತ ಕಂದಾಯ ಅಧಿಕಾರಿ ಎನ್‌ಪಿಎಫ್‌ನ ಕಚುಯಿ ತಿಮೋತಿ ಜಿಮಿಕ್ ಅವರನ್ನು 85,418 ಮತಗಳಿಂದ ಸೋಲಿಸಿದ್ದಾರೆ.

2019ರಲ್ಲಿ ಬಿಜೆಪಿ ಇನ್ನರ್ ಮಣಿಪುರ ಸ್ಥಾನವನ್ನು ಗೆದ್ದಿತ್ತು, ಎನ್‌ಪಿಎಫ್ ಹೊರ ಮಣಿಪುರವನ್ನು ಗೆದ್ದುಕೊಂಡಿತ್ತು. ಈ ಬಾರಿ ಇನ್ನರ್ ಮಣಿಪುರದಲ್ಲಿ ಬಿಜೆಪಿ ತನ್ನದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಹೊರ ಮಣಿಪುರದಲ್ಲಿ ಎನ್‌ಪಿಎಫ್‌ಗೆ ಬೆಂಬಲ ನೀಡಿತ್ತು.

ಮಣಿಪುರ ಕಳೆದ ಒಂದು ವರ್ಷ ವ್ಯಾಪಕ ಹಿಂಸಾಚಾರದಿಂದ ಪ್ರಕ್ಷುಬ್ಧವಾಗಿತ್ತು. ಆದರೆ ಪ್ರಧಾನಿ ಮೋದಿ ಒಂದೇ ಒಂದು ಬಾರಿ ಮಣಿಪುರಕ್ಕೆ ಭೇಟಿ ನೀಡಿರಲಿಲ್ಲ. ಹಿಂಸಾಚಾರವನ್ನು ತಡೆಯುವಲ್ಲಿ ಯಾವುದೇ ಪರಿಣಾಮಕಾರಿ ಪ್ರಯತ್ನವನ್ನು ಮಣಿಪುರ ಬಿಜೆಪಿ ಬೆಂಬಲಿತ ಸರಕಾರವಾಗಲೀ, ಕೇಂದ್ರ ಸರಕಾರವಾಗಲೀ ಮಾಡಿರಲಿಲ್ಲ. ಸಂಘರ್ಷಕ್ಕೆ ಸಂಬಂಧಿಸಿದಂತೆ ಬಿರೇನ್‌ ಸಿಂಗ್‌ ನೇತೃತ್ವದ ಸರ್ಕಾರ ಪಕ್ಷಪಾತಿಯಾಗಿ ವರ್ತಿಸಿದೆ. ಅಲ್ಪಸಂಖ್ಯಾತರಾದ, ಮುಖ್ಯವಾಗಿ ಕ್ರೈಸ್ತ ಧರ್ಮಕ್ಕೆ ಸೇರಿದ ಕುಕಿ ಬುಡಕಟ್ಟು ಜನರು ಮತ್ತು ಬಹುಸಂಖ್ಯಾತರಾದ ಮೈತೇಯಿ ಸಮುದಾಯದ ಜನರು ಹಿಂಸಾಕೃತ್ಯಗಳನ್ನು ನಡೆಸಿದ್ದಾರೆ. ಎರಡೂ ಸಮುದಾಯಗಳ ನಡುವಣ ವೈರತ್ವಕ್ಕೆ ಹಲವು ದಶಕಗಳ ಇತಿಹಾಸ ಇದೆ. ಆದರೆ ಹಿಂದೆಂದೂ ಈ ರೀತಿ ನಡೆದಿರಲಿಲ್ಲ. ಮೈತೈ ಸಮುದಾಯದ ತೀವ್ರಗಾಮಿ ಗುಂಪು ಅರಂಬಾಯಿ ತೆಂಗೊಲ್‌ಗೆ ರಾಜ್ಯ ಸರ್ಕಾರವು ಪೂರ್ಣ ಸ್ವಾತಂತ್ರ್ಯವನ್ನೇ ಕೊಟ್ಟಿದ್ದು ಹಿಂಸಾಚಾರದ ತೀವ್ರತೆ ಹೆಚ್ಚಲು ಕಾರಣವಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

ಮಣಿಪುರವು ಒಂದು ವರ್ಷದಿಂದ ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ ಮತ್ತು ಜನರು ಬಳಲುತ್ತಿದ್ದಾರೆ. ಆದರೆ ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳು ಇದನ್ನು ಪರಿಹರಿಸಲು ವಿಫಲವಾಗಿವೆ. ಎರಡೂ ಸ್ಥಾನಗಳಲ್ಲಿ ಕಾಂಗ್ರೆಸ್ ಪರ ತೀರ್ಪು ರಾಜ್ಯದಾದ್ಯಂತ ಮತದಾರರ ಹತಾಶೆಯನ್ನು ಸೂಚಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಕಳೆದ ಒಂದು ವರ್ಷದಿಂದ ಹಿಂಸಾಚಾರ ನಡೆಯುತ್ತಿದ್ದರೂ ರಾಜ್ಯಕ್ಕೆ ಭೇಟಿ ನೀಡಿಲ್ಲ. ಆದರೆ ರಾಹುಲ್‌ ಗಾಂಧಿ ಭಾರತ್‌ ಜೋಡೋ ನ್ಯಾಯ ಯಾತ್ರೆಯನ್ನು ಮಣಿಪುರದಿಂದಲೇ ಆರಂಭಿಸಿದ್ದಾರೆ, ಮಣಿಪುರದ ಜನರಿಗೆ ಧೈರ್ಯ ತುಂಬಿದ್ದಾರೆ ಎಂದು ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೆ ಮೇಘಚಂದ್ರ ಸಿಂಗ್ ಹೇಳಿದ್ದಾರೆ.

ಇದನ್ನು ಓದಿ: ಮೋದಿ ನೇತೃತ್ವದ ಎನ್‌ಡಿಎಗೆ ಬೆಂಬಲಿಸಬೇಡಿ: ನಿತೀಶ್‌, ನಾಯ್ಡುಗೆ ಮಮತಾ ಬ್ಯಾನರ್ಜಿ ಮನವೊಲಿಸಲು ಪ್ರಯತ್ನ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...