Homeಮುಖಪುಟಮಣಿಪುರದ ಬಗ್ಗೆ ನಿರ್ಲಕ್ಷ್ಯಕ್ಕೆ ಬೆಲೆತೆತ್ತ ಬಿಜೆಪಿ

ಮಣಿಪುರದ ಬಗ್ಗೆ ನಿರ್ಲಕ್ಷ್ಯಕ್ಕೆ ಬೆಲೆತೆತ್ತ ಬಿಜೆಪಿ

- Advertisement -
- Advertisement -

ಪ್ರಕ್ಷುಬ್ಧ ಈಶಾನ್ಯ ರಾಜ್ಯ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ನಡುವೆ ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ನಾಗಾ ಪೀಪಲ್ಸ್ ಫ್ರಂಟ್(ಎನ್‌ಪಿಎಫ್)ನ್ನು ಸೋಲಿಸುವ ಮೂಲಕ ಪ್ರತಿಪಕ್ಷವಾದ ಕಾಂಗ್ರೆಸ್‌ ಎರಡೂ ಸಂಸದೀಯ ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಮೂಲಕ ಮಣಿಪುರದ ಕುರಿತು ನಿರ್ಲಕ್ಷ್ಯ ತೋರಿದ ಬಿಜೆಪಿ ಸರಕಾರಕ್ಕೆ ಮಣಿಪುರದ ಜನತೆ ತಕ್ಕ ಪಾಠವನ್ನು ಕಲಿಸಿದ್ದಾರೆ.

ನಮಗೆ ಶಾಶ್ವತ ಭಯ ಮುಕ್ತ ಬದುಕುವ ವಾತಾವರಣ ಬೇಕು, ಶಿಬಿರಗಳಲ್ಲಿ ದಿನದೂಡುತ್ತಿರುವ ನಾವು ಮತದಾನ ಮಾಡುವುದಿಲ್ಲ ಎಂದು ಲೋಕಸಭೆ ಚುನಾವಣೆಗೆ ಈ ಹಿಂದೆ ಮಣಿಪುರದ ನಿರಾಶ್ರಿತರ ಶಿಬಿರದಲ್ಲಿದ್ದ ಜನತೆ ಬಹಿಷ್ಕಾರವನ್ನು ಹಾಕಿದ್ದರು. ಮಣಿಪುರದಲ್ಲಿ ಶಾಂತಿ ಸ್ಥಾಪನೆ, ಪುನರ್ವಸತಿ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.

ಮಣಿಪುರದಲ್ಲಿ ಎರಡು ಲೋಕಸಭೆ ಕ್ಷೇತ್ರಗಳಿದೆ. ಇನ್ನರ್ ಮಣಿಪುರ ಕ್ಷೇತ್ರದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ, ಕಾಂಗ್ರೆಸ್ ಅಭ್ಯರ್ಥಿ ಅಂಗೋಮ್ಚಾ ಬಿಮೋಲ್ ಅಕೋಯಿಜಮ್ ಅವರು ರಾಜ್ಯ ಶಿಕ್ಷಣ ಸಚಿವ ಬಿಜೆಪಿಯ ಟಿ ಬಸಂತ ಕುಮಾರ್ ಸಿಂಗ್ ಅವರನ್ನು 109,801 ಮತಗಳಿಂದ ಸೋಲಿಸಿದ್ದಾರೆ. ಹೊರ ಮಣಿಪುರ ಕ್ಷೇತ್ರವು ಬುಡಕಟ್ಟು ಸಮುದಾಯಗಳಿಗೆ ಮೀಸಲಾದ ಕ್ಷೇತ್ರ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ಆಲ್‌ಫ್ರೆಡ್ ಕಂಗಮ್ ಆರ್ಥರ್ ಗೆದ್ದುಕೊಂಡಿದ್ದಾರೆ. ಕಂಗಮ್ ಆರ್ಥರ್ ನಿವೃತ್ತ ಕಂದಾಯ ಅಧಿಕಾರಿ ಎನ್‌ಪಿಎಫ್‌ನ ಕಚುಯಿ ತಿಮೋತಿ ಜಿಮಿಕ್ ಅವರನ್ನು 85,418 ಮತಗಳಿಂದ ಸೋಲಿಸಿದ್ದಾರೆ.

2019ರಲ್ಲಿ ಬಿಜೆಪಿ ಇನ್ನರ್ ಮಣಿಪುರ ಸ್ಥಾನವನ್ನು ಗೆದ್ದಿತ್ತು, ಎನ್‌ಪಿಎಫ್ ಹೊರ ಮಣಿಪುರವನ್ನು ಗೆದ್ದುಕೊಂಡಿತ್ತು. ಈ ಬಾರಿ ಇನ್ನರ್ ಮಣಿಪುರದಲ್ಲಿ ಬಿಜೆಪಿ ತನ್ನದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಹೊರ ಮಣಿಪುರದಲ್ಲಿ ಎನ್‌ಪಿಎಫ್‌ಗೆ ಬೆಂಬಲ ನೀಡಿತ್ತು.

ಮಣಿಪುರ ಕಳೆದ ಒಂದು ವರ್ಷ ವ್ಯಾಪಕ ಹಿಂಸಾಚಾರದಿಂದ ಪ್ರಕ್ಷುಬ್ಧವಾಗಿತ್ತು. ಆದರೆ ಪ್ರಧಾನಿ ಮೋದಿ ಒಂದೇ ಒಂದು ಬಾರಿ ಮಣಿಪುರಕ್ಕೆ ಭೇಟಿ ನೀಡಿರಲಿಲ್ಲ. ಹಿಂಸಾಚಾರವನ್ನು ತಡೆಯುವಲ್ಲಿ ಯಾವುದೇ ಪರಿಣಾಮಕಾರಿ ಪ್ರಯತ್ನವನ್ನು ಮಣಿಪುರ ಬಿಜೆಪಿ ಬೆಂಬಲಿತ ಸರಕಾರವಾಗಲೀ, ಕೇಂದ್ರ ಸರಕಾರವಾಗಲೀ ಮಾಡಿರಲಿಲ್ಲ. ಸಂಘರ್ಷಕ್ಕೆ ಸಂಬಂಧಿಸಿದಂತೆ ಬಿರೇನ್‌ ಸಿಂಗ್‌ ನೇತೃತ್ವದ ಸರ್ಕಾರ ಪಕ್ಷಪಾತಿಯಾಗಿ ವರ್ತಿಸಿದೆ. ಅಲ್ಪಸಂಖ್ಯಾತರಾದ, ಮುಖ್ಯವಾಗಿ ಕ್ರೈಸ್ತ ಧರ್ಮಕ್ಕೆ ಸೇರಿದ ಕುಕಿ ಬುಡಕಟ್ಟು ಜನರು ಮತ್ತು ಬಹುಸಂಖ್ಯಾತರಾದ ಮೈತೇಯಿ ಸಮುದಾಯದ ಜನರು ಹಿಂಸಾಕೃತ್ಯಗಳನ್ನು ನಡೆಸಿದ್ದಾರೆ. ಎರಡೂ ಸಮುದಾಯಗಳ ನಡುವಣ ವೈರತ್ವಕ್ಕೆ ಹಲವು ದಶಕಗಳ ಇತಿಹಾಸ ಇದೆ. ಆದರೆ ಹಿಂದೆಂದೂ ಈ ರೀತಿ ನಡೆದಿರಲಿಲ್ಲ. ಮೈತೈ ಸಮುದಾಯದ ತೀವ್ರಗಾಮಿ ಗುಂಪು ಅರಂಬಾಯಿ ತೆಂಗೊಲ್‌ಗೆ ರಾಜ್ಯ ಸರ್ಕಾರವು ಪೂರ್ಣ ಸ್ವಾತಂತ್ರ್ಯವನ್ನೇ ಕೊಟ್ಟಿದ್ದು ಹಿಂಸಾಚಾರದ ತೀವ್ರತೆ ಹೆಚ್ಚಲು ಕಾರಣವಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

ಮಣಿಪುರವು ಒಂದು ವರ್ಷದಿಂದ ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ ಮತ್ತು ಜನರು ಬಳಲುತ್ತಿದ್ದಾರೆ. ಆದರೆ ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳು ಇದನ್ನು ಪರಿಹರಿಸಲು ವಿಫಲವಾಗಿವೆ. ಎರಡೂ ಸ್ಥಾನಗಳಲ್ಲಿ ಕಾಂಗ್ರೆಸ್ ಪರ ತೀರ್ಪು ರಾಜ್ಯದಾದ್ಯಂತ ಮತದಾರರ ಹತಾಶೆಯನ್ನು ಸೂಚಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಕಳೆದ ಒಂದು ವರ್ಷದಿಂದ ಹಿಂಸಾಚಾರ ನಡೆಯುತ್ತಿದ್ದರೂ ರಾಜ್ಯಕ್ಕೆ ಭೇಟಿ ನೀಡಿಲ್ಲ. ಆದರೆ ರಾಹುಲ್‌ ಗಾಂಧಿ ಭಾರತ್‌ ಜೋಡೋ ನ್ಯಾಯ ಯಾತ್ರೆಯನ್ನು ಮಣಿಪುರದಿಂದಲೇ ಆರಂಭಿಸಿದ್ದಾರೆ, ಮಣಿಪುರದ ಜನರಿಗೆ ಧೈರ್ಯ ತುಂಬಿದ್ದಾರೆ ಎಂದು ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೆ ಮೇಘಚಂದ್ರ ಸಿಂಗ್ ಹೇಳಿದ್ದಾರೆ.

ಇದನ್ನು ಓದಿ: ಮೋದಿ ನೇತೃತ್ವದ ಎನ್‌ಡಿಎಗೆ ಬೆಂಬಲಿಸಬೇಡಿ: ನಿತೀಶ್‌, ನಾಯ್ಡುಗೆ ಮಮತಾ ಬ್ಯಾನರ್ಜಿ ಮನವೊಲಿಸಲು ಪ್ರಯತ್ನ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...