Homeಮುಖಪುಟಮಣಿಪುರದ ಬಗ್ಗೆ ನಿರ್ಲಕ್ಷ್ಯಕ್ಕೆ ಬೆಲೆತೆತ್ತ ಬಿಜೆಪಿ

ಮಣಿಪುರದ ಬಗ್ಗೆ ನಿರ್ಲಕ್ಷ್ಯಕ್ಕೆ ಬೆಲೆತೆತ್ತ ಬಿಜೆಪಿ

- Advertisement -
- Advertisement -

ಪ್ರಕ್ಷುಬ್ಧ ಈಶಾನ್ಯ ರಾಜ್ಯ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ನಡುವೆ ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ನಾಗಾ ಪೀಪಲ್ಸ್ ಫ್ರಂಟ್(ಎನ್‌ಪಿಎಫ್)ನ್ನು ಸೋಲಿಸುವ ಮೂಲಕ ಪ್ರತಿಪಕ್ಷವಾದ ಕಾಂಗ್ರೆಸ್‌ ಎರಡೂ ಸಂಸದೀಯ ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಮೂಲಕ ಮಣಿಪುರದ ಕುರಿತು ನಿರ್ಲಕ್ಷ್ಯ ತೋರಿದ ಬಿಜೆಪಿ ಸರಕಾರಕ್ಕೆ ಮಣಿಪುರದ ಜನತೆ ತಕ್ಕ ಪಾಠವನ್ನು ಕಲಿಸಿದ್ದಾರೆ.

ನಮಗೆ ಶಾಶ್ವತ ಭಯ ಮುಕ್ತ ಬದುಕುವ ವಾತಾವರಣ ಬೇಕು, ಶಿಬಿರಗಳಲ್ಲಿ ದಿನದೂಡುತ್ತಿರುವ ನಾವು ಮತದಾನ ಮಾಡುವುದಿಲ್ಲ ಎಂದು ಲೋಕಸಭೆ ಚುನಾವಣೆಗೆ ಈ ಹಿಂದೆ ಮಣಿಪುರದ ನಿರಾಶ್ರಿತರ ಶಿಬಿರದಲ್ಲಿದ್ದ ಜನತೆ ಬಹಿಷ್ಕಾರವನ್ನು ಹಾಕಿದ್ದರು. ಮಣಿಪುರದಲ್ಲಿ ಶಾಂತಿ ಸ್ಥಾಪನೆ, ಪುನರ್ವಸತಿ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.

ಮಣಿಪುರದಲ್ಲಿ ಎರಡು ಲೋಕಸಭೆ ಕ್ಷೇತ್ರಗಳಿದೆ. ಇನ್ನರ್ ಮಣಿಪುರ ಕ್ಷೇತ್ರದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ, ಕಾಂಗ್ರೆಸ್ ಅಭ್ಯರ್ಥಿ ಅಂಗೋಮ್ಚಾ ಬಿಮೋಲ್ ಅಕೋಯಿಜಮ್ ಅವರು ರಾಜ್ಯ ಶಿಕ್ಷಣ ಸಚಿವ ಬಿಜೆಪಿಯ ಟಿ ಬಸಂತ ಕುಮಾರ್ ಸಿಂಗ್ ಅವರನ್ನು 109,801 ಮತಗಳಿಂದ ಸೋಲಿಸಿದ್ದಾರೆ. ಹೊರ ಮಣಿಪುರ ಕ್ಷೇತ್ರವು ಬುಡಕಟ್ಟು ಸಮುದಾಯಗಳಿಗೆ ಮೀಸಲಾದ ಕ್ಷೇತ್ರ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ಆಲ್‌ಫ್ರೆಡ್ ಕಂಗಮ್ ಆರ್ಥರ್ ಗೆದ್ದುಕೊಂಡಿದ್ದಾರೆ. ಕಂಗಮ್ ಆರ್ಥರ್ ನಿವೃತ್ತ ಕಂದಾಯ ಅಧಿಕಾರಿ ಎನ್‌ಪಿಎಫ್‌ನ ಕಚುಯಿ ತಿಮೋತಿ ಜಿಮಿಕ್ ಅವರನ್ನು 85,418 ಮತಗಳಿಂದ ಸೋಲಿಸಿದ್ದಾರೆ.

2019ರಲ್ಲಿ ಬಿಜೆಪಿ ಇನ್ನರ್ ಮಣಿಪುರ ಸ್ಥಾನವನ್ನು ಗೆದ್ದಿತ್ತು, ಎನ್‌ಪಿಎಫ್ ಹೊರ ಮಣಿಪುರವನ್ನು ಗೆದ್ದುಕೊಂಡಿತ್ತು. ಈ ಬಾರಿ ಇನ್ನರ್ ಮಣಿಪುರದಲ್ಲಿ ಬಿಜೆಪಿ ತನ್ನದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಹೊರ ಮಣಿಪುರದಲ್ಲಿ ಎನ್‌ಪಿಎಫ್‌ಗೆ ಬೆಂಬಲ ನೀಡಿತ್ತು.

ಮಣಿಪುರ ಕಳೆದ ಒಂದು ವರ್ಷ ವ್ಯಾಪಕ ಹಿಂಸಾಚಾರದಿಂದ ಪ್ರಕ್ಷುಬ್ಧವಾಗಿತ್ತು. ಆದರೆ ಪ್ರಧಾನಿ ಮೋದಿ ಒಂದೇ ಒಂದು ಬಾರಿ ಮಣಿಪುರಕ್ಕೆ ಭೇಟಿ ನೀಡಿರಲಿಲ್ಲ. ಹಿಂಸಾಚಾರವನ್ನು ತಡೆಯುವಲ್ಲಿ ಯಾವುದೇ ಪರಿಣಾಮಕಾರಿ ಪ್ರಯತ್ನವನ್ನು ಮಣಿಪುರ ಬಿಜೆಪಿ ಬೆಂಬಲಿತ ಸರಕಾರವಾಗಲೀ, ಕೇಂದ್ರ ಸರಕಾರವಾಗಲೀ ಮಾಡಿರಲಿಲ್ಲ. ಸಂಘರ್ಷಕ್ಕೆ ಸಂಬಂಧಿಸಿದಂತೆ ಬಿರೇನ್‌ ಸಿಂಗ್‌ ನೇತೃತ್ವದ ಸರ್ಕಾರ ಪಕ್ಷಪಾತಿಯಾಗಿ ವರ್ತಿಸಿದೆ. ಅಲ್ಪಸಂಖ್ಯಾತರಾದ, ಮುಖ್ಯವಾಗಿ ಕ್ರೈಸ್ತ ಧರ್ಮಕ್ಕೆ ಸೇರಿದ ಕುಕಿ ಬುಡಕಟ್ಟು ಜನರು ಮತ್ತು ಬಹುಸಂಖ್ಯಾತರಾದ ಮೈತೇಯಿ ಸಮುದಾಯದ ಜನರು ಹಿಂಸಾಕೃತ್ಯಗಳನ್ನು ನಡೆಸಿದ್ದಾರೆ. ಎರಡೂ ಸಮುದಾಯಗಳ ನಡುವಣ ವೈರತ್ವಕ್ಕೆ ಹಲವು ದಶಕಗಳ ಇತಿಹಾಸ ಇದೆ. ಆದರೆ ಹಿಂದೆಂದೂ ಈ ರೀತಿ ನಡೆದಿರಲಿಲ್ಲ. ಮೈತೈ ಸಮುದಾಯದ ತೀವ್ರಗಾಮಿ ಗುಂಪು ಅರಂಬಾಯಿ ತೆಂಗೊಲ್‌ಗೆ ರಾಜ್ಯ ಸರ್ಕಾರವು ಪೂರ್ಣ ಸ್ವಾತಂತ್ರ್ಯವನ್ನೇ ಕೊಟ್ಟಿದ್ದು ಹಿಂಸಾಚಾರದ ತೀವ್ರತೆ ಹೆಚ್ಚಲು ಕಾರಣವಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

ಮಣಿಪುರವು ಒಂದು ವರ್ಷದಿಂದ ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ ಮತ್ತು ಜನರು ಬಳಲುತ್ತಿದ್ದಾರೆ. ಆದರೆ ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳು ಇದನ್ನು ಪರಿಹರಿಸಲು ವಿಫಲವಾಗಿವೆ. ಎರಡೂ ಸ್ಥಾನಗಳಲ್ಲಿ ಕಾಂಗ್ರೆಸ್ ಪರ ತೀರ್ಪು ರಾಜ್ಯದಾದ್ಯಂತ ಮತದಾರರ ಹತಾಶೆಯನ್ನು ಸೂಚಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಕಳೆದ ಒಂದು ವರ್ಷದಿಂದ ಹಿಂಸಾಚಾರ ನಡೆಯುತ್ತಿದ್ದರೂ ರಾಜ್ಯಕ್ಕೆ ಭೇಟಿ ನೀಡಿಲ್ಲ. ಆದರೆ ರಾಹುಲ್‌ ಗಾಂಧಿ ಭಾರತ್‌ ಜೋಡೋ ನ್ಯಾಯ ಯಾತ್ರೆಯನ್ನು ಮಣಿಪುರದಿಂದಲೇ ಆರಂಭಿಸಿದ್ದಾರೆ, ಮಣಿಪುರದ ಜನರಿಗೆ ಧೈರ್ಯ ತುಂಬಿದ್ದಾರೆ ಎಂದು ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೆ ಮೇಘಚಂದ್ರ ಸಿಂಗ್ ಹೇಳಿದ್ದಾರೆ.

ಇದನ್ನು ಓದಿ: ಮೋದಿ ನೇತೃತ್ವದ ಎನ್‌ಡಿಎಗೆ ಬೆಂಬಲಿಸಬೇಡಿ: ನಿತೀಶ್‌, ನಾಯ್ಡುಗೆ ಮಮತಾ ಬ್ಯಾನರ್ಜಿ ಮನವೊಲಿಸಲು ಪ್ರಯತ್ನ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...