Homeಕರ್ನಾಟಕಮಾಂಸಾಹಾರದ ಮೇಲೆ ಮತ್ತೆ ಪ್ರಹಾರ: ಮಠಾಧೀಶರ ಸಲಹೆಗಳಿಗೆ ತೀವ್ರ ವಿರೋಧ

ಮಾಂಸಾಹಾರದ ಮೇಲೆ ಮತ್ತೆ ಪ್ರಹಾರ: ಮಠಾಧೀಶರ ಸಲಹೆಗಳಿಗೆ ತೀವ್ರ ವಿರೋಧ

- Advertisement -
- Advertisement -

ರಾಜ್ಯದಲ್ಲಿ ಮಾಂಸಾಹಾರದ ಕುರಿತು ಚರ್ಚೆ ಮತ್ತೆ ಭುಗಿಲೆದ್ದಿದೆ. ಶಾಲಾ ಶಿಕ್ಷಣದಲ್ಲಿ ಮೌಲ್ಯ ಶಿಕ್ಷಣ ಶಿಕ್ಷಣವನ್ನು ಅನುಷ್ಠಾನಗೊಳಿಸುವುದರ ಕುರಿತು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಠಾಧೀಶರು ಮಾಂಸಾಹಾರದ ಮೇಲೆ ಮತ್ತೆ ಪ್ರಹಾರ ನಡೆಸಿದ್ದಾರೆ. ಮಕ್ಕಳಿಗೆ ಸಾತ್ವಿಕ ಆಹಾರ ನೀಡಬೇಕು, ಅಂಗಡಿಗಳ ಮುಂದೆ ಮಾಂಸ ನೇತು ಹಾಕುವುದನ್ನು ಬ್ಯಾನ್ ಮಾಡಬೇಕೆಂಬ ಆಗ್ರಹಗಳು ಕೇಳಿಬಂದಿವೆ. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಕಂಡುಬಂದಿದೆ.

ಸಭೆಯಲ್ಲಿ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮಾತನಾಡಿ, “ಆಹಾರಕ್ಕೂ ವ್ಯಕ್ತಿತ್ವಕ್ಕೂ ಸಂಬಂಧವಿದೆ.  ಕೆಲವು ಆಹಾರಗಳು ಮಕ್ಕಳಲ್ಲಿ ನಕರಾತ್ಮಕ ಮನೋಭಾವ ಬೆಳೆಸುತ್ತವೆ. ಹಾಗಾಗಿ ಮಕ್ಕಳಿಗೆ ಸಾತ್ವಿಕ ಆಹಾರ ನೀಡಬೇಕು ಮತ್ತು ಭಗವದ್ಗೀತೆಯನ್ನು ಮುಕ್ತವಾಗಿ ಬೋಧಿಸಬೇಕು” ಎಂದು ಪ್ರತಿಪಾದಿಸಿದ್ದಾರೆ.

ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮಾತನಾಡಿ, “ಮಕ್ಕಳ ಮೇಲೆ ಹಿಂಸೆಯ ಪ್ರಭಾವವನ್ನು ಕಡಿಮೆ ಮಾಡಬೇಕು. ಹಾಗಾಗಿ ಮಕ್ಕಳ ಮುಂದೆ ಪ್ರಾಣಿವಧೆ ಮಾಡಬಾರದು ಮತ್ತು ಅಂಗಡಿಗಳ ಮುಂದೆ ಮಾಂಸ ನೇತುಹಾಕಬಾರದು ಅಥವಾ ಅದನ್ನು ಮುಚ್ಚಬೇಕು ಎಂದು ಸಲಹೆ ನೀಡಿದ್ದಾರೆ.

ಮಕ್ಕಳು ಅಪೌಷ್ಠಿಕತೆಯಿಂದ ನರಳುತ್ತಿರುವ ಸಂದರ್ಭದಲ್ಲಿ ಮಾಂಸಾಹಾರದಂತಹ ಪೌಷ್ಠಿಕ ಆಹಾರದ ಮೇಲಿನ ಸ್ವಾಮೀಜಿಗಳ ಪ್ರಹಾರವನ್ನು ಹಲವಾರು ಜನ ಸಾಮಾಜಿಕ ಜಾಲತಾಣಗಳಲ್ಲಿ ಖಂಡಿಸಿದ್ದಾರೆ.

“ಬುದ್ಧನೂ, ರಾಮನೂ, ಕೃಷ್ಣನೂ, ಬಾಬಾ ಸಾಹೇಬರೂ, ವಿವೇಕರೂ ತಿಂದದ್ದು ನೀವು ಹೇಳುವ ಸಾತ್ವಿಕ ಆಹಾರ ಅಲ್ಲ!” ಅಂತ ನಿಮ್ಮ ಮಠಗಳಿಗೊಂದು ಮೈಲ್ ಹಾಕಬೇಕು. ಐಡಿ ಕಳಿಸಿ ಸ್ವಾಮಿಗೋಳೇ! ಹಂಗೇ, “ಹೆಣ್ಮಕ್ಕಳನ್ನು ಹರಿದು ತಿಂದ, ಕಪ್ಪುಹಣ ಬಚ್ಚಿಡುವ, ಸಾವುಗಳನ್ನು ಮುಚ್ಚಿಡುವ ಕಾವಿಗಳ ಆಹಾರ- ಶುದ್ಧ ಸಾತ್ವಿಕವಾದುದೇ!” ಅಂತ ತಿಳಿಸಿ ನಿಮಗೊಂದು ವಾಟ್ಸಾಪೂ ಮಾಡಬೇಕಿದೆ. ನಂಬರೂ ಕಳಿಸಿ ಸ್ವಾಮಿಗೋಳೇ! ಎಂದು ಖ್ಯಾತ ವ್ಯಂಗ್ಯಚಿತ್ರಕಾರ ದಿನೇಶ್ ಕುಕ್ಕಜಡ್ಕ ವ್ಯಂಗ್ಯವಾಡಿದ್ದಾರೆ.

ತೊಂಬತ್ತು ಭಾಗ ಜನರು ತಿನ್ನುವ ಆಹಾರವನ್ನು ತೆಗಳ್ತಾರಲ್ಲ! ಇವರುಗಳು ಸೈಕೊಗಳಿಗಿಂತ ಕ್ರೂರ ಎಂದು ಸಾಮಾಜಿಕ ಕಾರ್ಯಕರ್ತ ವಿ.ಎಲ್ ಬಾಲು ಕಿಡಿಕಾರಿದ್ದಾರೆ.

ಮೌಲಿಕ ಶಿಕ್ಷಣದ ಬಗ್ಗೆ ಶೈಕ್ಷಣಿಕ ತಜ್ಞರ ಸಲಹೆ ಪಡೆಯಬೇಕಿದ್ದ ಸರ್ಕಾರವು ಮಠಾಧೀಶರ ಸಲಹೆಗಳನ್ನು ಪಡೆಯುತ್ತಿರುವುದು ಹಾಸ್ಯಾಸ್ಪದ ಇದರಲ್ಲಿ ಪೇಜಾವರ ಮಠದ ಸ್ವಾಮೀಜಿಯು ಮಾಂಸಹಾರದ ಬಗ್ಗೆ ಅಸಹನೆ ತೋರುವುದನ್ನೇ ಮೌಲ್ಯ ಎಂದಿದ್ದರೆ ಇನ್ನೊಬ್ಬ ಮಹಾಶಯರು ಪುನರ್ಜನ್ಮದ ಬಗ್ಗೆ ತಿಳಿಸಿಕೊಡಿ ಎಂದು ಹೇಳಿರುತ್ತಾರೆ ಇವು ಮೌಲಿಕ ಶಿಕ್ಷಣದ ಸಲಹೆಗಳೇ? ಎಂದು ಮಾಜಿ ಸಚಿವ ಡಾ.ಎಚ್.ಸಿ ಮಹಾದೇವಪ್ಪ ಟ್ವೀಟ್ ಮಾಡಿದ್ದಾರೆ.

RSS ನ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ರಾಜ್ಯ ಸರ್ಕಾರವು RSS ಗೆ ಬೇಕಾದ ಆಹಾರ ವಿರೋಧಿಯಾದ, ಮೌಢ್ಯತೆಯಿಂದ ಕೂಡಿದ, ಕೋಮುವಾದಿ ಪಠ್ಯಗಳನ್ನು ರೂಪಿಸುವ ದುರುದ್ದೇಶವನ್ನು ಹೊಂದಿ ಅದಕ್ಕೆ ತಕ್ಕನಾದ ರೀತಿಯಲ್ಲಿ ಅಭಿಪ್ರಾಯಗಳನ್ನು ಸಂಗ್ರಹ ಮಾಡಿಸಿದೆ. ಇದನ್ನೆಲ್ಲಾ ಮೌಲಿಕ ಸಲಹೆಗಳು ಎಂದು ಒಪ್ಪಲು ಆದೀತೇ? ಎಂದು ಅವರು ಪ್ರಶ್ನಿಸಿದ್ದಾರೆ.

ನಮ್ಮೂರ ಮಾರಿ ಜಾತ್ರೆಯಲ್ಲಿ ಪ್ರತಿ ಮನೆಯಿಂದ ಬರುವ ಮಾಂಸದ ಆಮ್ರದ ಪರಿಮಳದಲ್ಲಿ ನಾನು ಅನುಭವಿಸಿದ ಸಾತ್ವಿಕತೆಯ ಭಾವನೆಯನ್ನು… ಇನ್ಯಾವ ಸಂರ್ಭದಲ್ಲೂ ಅನುಭವಿಸಿಲ್ಲ…
ನನ್ನ ಆಹಾರ ನನ್ನ ಹಕ್ಕು ಎಂದು ಅಕ್ಷತಾ ಹುಂಚದಕಟ್ಟೆಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕರೆಕ್ಟಾಗಿ ಹೇಳಿದಾರೆ! ಸಾತ್ವಿಕ ಆಹಾರ ಅಂದರೆ ಸತ್ವಯುತ ಆಹಾರ! ಅಂದರೆ ಮೊಟ್ಟೆ, ಮಾಂಸ ಇತ್ಯಾದಿ! ಎಂದು ಚಿಂತಕ ಸುರೇಶ್ ಕಂಜರ್ಪಣೆ ತಿಳಿಸಿದ್ದಾರೆ.

ಮಾಂಸದ ಅಂಗಡಿ ಮುಂದೆ ಮಾಂಸ ನೋಡಿದ್ರೆ ಮಕ್ಕಳ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಆದ್ರೆ ಮಠಗಳಲ್ಲಿ ನೀವು ಮಾಡೋ ಪಂಕ್ತಿ ಭೇದ, ಜಾತಿ ಭೇದ ಮಾಡೋದ್ರಿಂದ ಮಕ್ಕಳ ಮನಸ್ಸಿನ ಮೇಲೆ ಯಾವ ಕೆಟ್ಟ ಪರಿಣಾಮ ಬೀರಲ್ಲ ಅಲ್ವಾ ಸ್ವಾಮ್ಗಳೇ ಎಂದು ರಘುನಂದನರವರು ಪ್ರಶ್ನಿಸಿದ್ದಾರೆ.

ಮಾಂಸಾಹಾರವನ್ನು ಕನಿಷ್ಟಗೊಳಿಸಿ ನೋಡುವ, ಸಾತ್ವಿಕ ಆಹಾರವೇ ಉತ್ತಮ ಎಂದು ಪ್ರತಿಪಾದಿಸುವ ಶ್ರೇ‍ಷ್ಠತೆಯ ವ್ಯಸನ ನಿಲ್ಲಬೇಕೆಂದು ಹಲವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ; ದೇವರಿಗೆ ಮಾಂಸಾಹಾರದ ಎಡೆ: ಚಾರಿತ್ರಿಕ, ಜಾನಪದೀಯ ಅಧ್ಯಯನಗಳು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...