Homeಕರ್ನಾಟಕಮಾಂಸಾಹಾರದ ಮೇಲೆ ಮತ್ತೆ ಪ್ರಹಾರ: ಮಠಾಧೀಶರ ಸಲಹೆಗಳಿಗೆ ತೀವ್ರ ವಿರೋಧ

ಮಾಂಸಾಹಾರದ ಮೇಲೆ ಮತ್ತೆ ಪ್ರಹಾರ: ಮಠಾಧೀಶರ ಸಲಹೆಗಳಿಗೆ ತೀವ್ರ ವಿರೋಧ

- Advertisement -
- Advertisement -

ರಾಜ್ಯದಲ್ಲಿ ಮಾಂಸಾಹಾರದ ಕುರಿತು ಚರ್ಚೆ ಮತ್ತೆ ಭುಗಿಲೆದ್ದಿದೆ. ಶಾಲಾ ಶಿಕ್ಷಣದಲ್ಲಿ ಮೌಲ್ಯ ಶಿಕ್ಷಣ ಶಿಕ್ಷಣವನ್ನು ಅನುಷ್ಠಾನಗೊಳಿಸುವುದರ ಕುರಿತು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಠಾಧೀಶರು ಮಾಂಸಾಹಾರದ ಮೇಲೆ ಮತ್ತೆ ಪ್ರಹಾರ ನಡೆಸಿದ್ದಾರೆ. ಮಕ್ಕಳಿಗೆ ಸಾತ್ವಿಕ ಆಹಾರ ನೀಡಬೇಕು, ಅಂಗಡಿಗಳ ಮುಂದೆ ಮಾಂಸ ನೇತು ಹಾಕುವುದನ್ನು ಬ್ಯಾನ್ ಮಾಡಬೇಕೆಂಬ ಆಗ್ರಹಗಳು ಕೇಳಿಬಂದಿವೆ. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಕಂಡುಬಂದಿದೆ.

ಸಭೆಯಲ್ಲಿ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮಾತನಾಡಿ, “ಆಹಾರಕ್ಕೂ ವ್ಯಕ್ತಿತ್ವಕ್ಕೂ ಸಂಬಂಧವಿದೆ.  ಕೆಲವು ಆಹಾರಗಳು ಮಕ್ಕಳಲ್ಲಿ ನಕರಾತ್ಮಕ ಮನೋಭಾವ ಬೆಳೆಸುತ್ತವೆ. ಹಾಗಾಗಿ ಮಕ್ಕಳಿಗೆ ಸಾತ್ವಿಕ ಆಹಾರ ನೀಡಬೇಕು ಮತ್ತು ಭಗವದ್ಗೀತೆಯನ್ನು ಮುಕ್ತವಾಗಿ ಬೋಧಿಸಬೇಕು” ಎಂದು ಪ್ರತಿಪಾದಿಸಿದ್ದಾರೆ.

ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮಾತನಾಡಿ, “ಮಕ್ಕಳ ಮೇಲೆ ಹಿಂಸೆಯ ಪ್ರಭಾವವನ್ನು ಕಡಿಮೆ ಮಾಡಬೇಕು. ಹಾಗಾಗಿ ಮಕ್ಕಳ ಮುಂದೆ ಪ್ರಾಣಿವಧೆ ಮಾಡಬಾರದು ಮತ್ತು ಅಂಗಡಿಗಳ ಮುಂದೆ ಮಾಂಸ ನೇತುಹಾಕಬಾರದು ಅಥವಾ ಅದನ್ನು ಮುಚ್ಚಬೇಕು ಎಂದು ಸಲಹೆ ನೀಡಿದ್ದಾರೆ.

ಮಕ್ಕಳು ಅಪೌಷ್ಠಿಕತೆಯಿಂದ ನರಳುತ್ತಿರುವ ಸಂದರ್ಭದಲ್ಲಿ ಮಾಂಸಾಹಾರದಂತಹ ಪೌಷ್ಠಿಕ ಆಹಾರದ ಮೇಲಿನ ಸ್ವಾಮೀಜಿಗಳ ಪ್ರಹಾರವನ್ನು ಹಲವಾರು ಜನ ಸಾಮಾಜಿಕ ಜಾಲತಾಣಗಳಲ್ಲಿ ಖಂಡಿಸಿದ್ದಾರೆ.

“ಬುದ್ಧನೂ, ರಾಮನೂ, ಕೃಷ್ಣನೂ, ಬಾಬಾ ಸಾಹೇಬರೂ, ವಿವೇಕರೂ ತಿಂದದ್ದು ನೀವು ಹೇಳುವ ಸಾತ್ವಿಕ ಆಹಾರ ಅಲ್ಲ!” ಅಂತ ನಿಮ್ಮ ಮಠಗಳಿಗೊಂದು ಮೈಲ್ ಹಾಕಬೇಕು. ಐಡಿ ಕಳಿಸಿ ಸ್ವಾಮಿಗೋಳೇ! ಹಂಗೇ, “ಹೆಣ್ಮಕ್ಕಳನ್ನು ಹರಿದು ತಿಂದ, ಕಪ್ಪುಹಣ ಬಚ್ಚಿಡುವ, ಸಾವುಗಳನ್ನು ಮುಚ್ಚಿಡುವ ಕಾವಿಗಳ ಆಹಾರ- ಶುದ್ಧ ಸಾತ್ವಿಕವಾದುದೇ!” ಅಂತ ತಿಳಿಸಿ ನಿಮಗೊಂದು ವಾಟ್ಸಾಪೂ ಮಾಡಬೇಕಿದೆ. ನಂಬರೂ ಕಳಿಸಿ ಸ್ವಾಮಿಗೋಳೇ! ಎಂದು ಖ್ಯಾತ ವ್ಯಂಗ್ಯಚಿತ್ರಕಾರ ದಿನೇಶ್ ಕುಕ್ಕಜಡ್ಕ ವ್ಯಂಗ್ಯವಾಡಿದ್ದಾರೆ.

ತೊಂಬತ್ತು ಭಾಗ ಜನರು ತಿನ್ನುವ ಆಹಾರವನ್ನು ತೆಗಳ್ತಾರಲ್ಲ! ಇವರುಗಳು ಸೈಕೊಗಳಿಗಿಂತ ಕ್ರೂರ ಎಂದು ಸಾಮಾಜಿಕ ಕಾರ್ಯಕರ್ತ ವಿ.ಎಲ್ ಬಾಲು ಕಿಡಿಕಾರಿದ್ದಾರೆ.

ಮೌಲಿಕ ಶಿಕ್ಷಣದ ಬಗ್ಗೆ ಶೈಕ್ಷಣಿಕ ತಜ್ಞರ ಸಲಹೆ ಪಡೆಯಬೇಕಿದ್ದ ಸರ್ಕಾರವು ಮಠಾಧೀಶರ ಸಲಹೆಗಳನ್ನು ಪಡೆಯುತ್ತಿರುವುದು ಹಾಸ್ಯಾಸ್ಪದ ಇದರಲ್ಲಿ ಪೇಜಾವರ ಮಠದ ಸ್ವಾಮೀಜಿಯು ಮಾಂಸಹಾರದ ಬಗ್ಗೆ ಅಸಹನೆ ತೋರುವುದನ್ನೇ ಮೌಲ್ಯ ಎಂದಿದ್ದರೆ ಇನ್ನೊಬ್ಬ ಮಹಾಶಯರು ಪುನರ್ಜನ್ಮದ ಬಗ್ಗೆ ತಿಳಿಸಿಕೊಡಿ ಎಂದು ಹೇಳಿರುತ್ತಾರೆ ಇವು ಮೌಲಿಕ ಶಿಕ್ಷಣದ ಸಲಹೆಗಳೇ? ಎಂದು ಮಾಜಿ ಸಚಿವ ಡಾ.ಎಚ್.ಸಿ ಮಹಾದೇವಪ್ಪ ಟ್ವೀಟ್ ಮಾಡಿದ್ದಾರೆ.

RSS ನ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ರಾಜ್ಯ ಸರ್ಕಾರವು RSS ಗೆ ಬೇಕಾದ ಆಹಾರ ವಿರೋಧಿಯಾದ, ಮೌಢ್ಯತೆಯಿಂದ ಕೂಡಿದ, ಕೋಮುವಾದಿ ಪಠ್ಯಗಳನ್ನು ರೂಪಿಸುವ ದುರುದ್ದೇಶವನ್ನು ಹೊಂದಿ ಅದಕ್ಕೆ ತಕ್ಕನಾದ ರೀತಿಯಲ್ಲಿ ಅಭಿಪ್ರಾಯಗಳನ್ನು ಸಂಗ್ರಹ ಮಾಡಿಸಿದೆ. ಇದನ್ನೆಲ್ಲಾ ಮೌಲಿಕ ಸಲಹೆಗಳು ಎಂದು ಒಪ್ಪಲು ಆದೀತೇ? ಎಂದು ಅವರು ಪ್ರಶ್ನಿಸಿದ್ದಾರೆ.

ನಮ್ಮೂರ ಮಾರಿ ಜಾತ್ರೆಯಲ್ಲಿ ಪ್ರತಿ ಮನೆಯಿಂದ ಬರುವ ಮಾಂಸದ ಆಮ್ರದ ಪರಿಮಳದಲ್ಲಿ ನಾನು ಅನುಭವಿಸಿದ ಸಾತ್ವಿಕತೆಯ ಭಾವನೆಯನ್ನು… ಇನ್ಯಾವ ಸಂರ್ಭದಲ್ಲೂ ಅನುಭವಿಸಿಲ್ಲ…
ನನ್ನ ಆಹಾರ ನನ್ನ ಹಕ್ಕು ಎಂದು ಅಕ್ಷತಾ ಹುಂಚದಕಟ್ಟೆಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕರೆಕ್ಟಾಗಿ ಹೇಳಿದಾರೆ! ಸಾತ್ವಿಕ ಆಹಾರ ಅಂದರೆ ಸತ್ವಯುತ ಆಹಾರ! ಅಂದರೆ ಮೊಟ್ಟೆ, ಮಾಂಸ ಇತ್ಯಾದಿ! ಎಂದು ಚಿಂತಕ ಸುರೇಶ್ ಕಂಜರ್ಪಣೆ ತಿಳಿಸಿದ್ದಾರೆ.

ಮಾಂಸದ ಅಂಗಡಿ ಮುಂದೆ ಮಾಂಸ ನೋಡಿದ್ರೆ ಮಕ್ಕಳ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಆದ್ರೆ ಮಠಗಳಲ್ಲಿ ನೀವು ಮಾಡೋ ಪಂಕ್ತಿ ಭೇದ, ಜಾತಿ ಭೇದ ಮಾಡೋದ್ರಿಂದ ಮಕ್ಕಳ ಮನಸ್ಸಿನ ಮೇಲೆ ಯಾವ ಕೆಟ್ಟ ಪರಿಣಾಮ ಬೀರಲ್ಲ ಅಲ್ವಾ ಸ್ವಾಮ್ಗಳೇ ಎಂದು ರಘುನಂದನರವರು ಪ್ರಶ್ನಿಸಿದ್ದಾರೆ.

ಮಾಂಸಾಹಾರವನ್ನು ಕನಿಷ್ಟಗೊಳಿಸಿ ನೋಡುವ, ಸಾತ್ವಿಕ ಆಹಾರವೇ ಉತ್ತಮ ಎಂದು ಪ್ರತಿಪಾದಿಸುವ ಶ್ರೇ‍ಷ್ಠತೆಯ ವ್ಯಸನ ನಿಲ್ಲಬೇಕೆಂದು ಹಲವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ; ದೇವರಿಗೆ ಮಾಂಸಾಹಾರದ ಎಡೆ: ಚಾರಿತ್ರಿಕ, ಜಾನಪದೀಯ ಅಧ್ಯಯನಗಳು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...