Homeಕರ್ನಾಟಕಮಾಂಸಾಹಾರದ ಮೇಲೆ ಮತ್ತೆ ಪ್ರಹಾರ: ಮಠಾಧೀಶರ ಸಲಹೆಗಳಿಗೆ ತೀವ್ರ ವಿರೋಧ

ಮಾಂಸಾಹಾರದ ಮೇಲೆ ಮತ್ತೆ ಪ್ರಹಾರ: ಮಠಾಧೀಶರ ಸಲಹೆಗಳಿಗೆ ತೀವ್ರ ವಿರೋಧ

- Advertisement -
- Advertisement -

ರಾಜ್ಯದಲ್ಲಿ ಮಾಂಸಾಹಾರದ ಕುರಿತು ಚರ್ಚೆ ಮತ್ತೆ ಭುಗಿಲೆದ್ದಿದೆ. ಶಾಲಾ ಶಿಕ್ಷಣದಲ್ಲಿ ಮೌಲ್ಯ ಶಿಕ್ಷಣ ಶಿಕ್ಷಣವನ್ನು ಅನುಷ್ಠಾನಗೊಳಿಸುವುದರ ಕುರಿತು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಠಾಧೀಶರು ಮಾಂಸಾಹಾರದ ಮೇಲೆ ಮತ್ತೆ ಪ್ರಹಾರ ನಡೆಸಿದ್ದಾರೆ. ಮಕ್ಕಳಿಗೆ ಸಾತ್ವಿಕ ಆಹಾರ ನೀಡಬೇಕು, ಅಂಗಡಿಗಳ ಮುಂದೆ ಮಾಂಸ ನೇತು ಹಾಕುವುದನ್ನು ಬ್ಯಾನ್ ಮಾಡಬೇಕೆಂಬ ಆಗ್ರಹಗಳು ಕೇಳಿಬಂದಿವೆ. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಕಂಡುಬಂದಿದೆ.

ಸಭೆಯಲ್ಲಿ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮಾತನಾಡಿ, “ಆಹಾರಕ್ಕೂ ವ್ಯಕ್ತಿತ್ವಕ್ಕೂ ಸಂಬಂಧವಿದೆ.  ಕೆಲವು ಆಹಾರಗಳು ಮಕ್ಕಳಲ್ಲಿ ನಕರಾತ್ಮಕ ಮನೋಭಾವ ಬೆಳೆಸುತ್ತವೆ. ಹಾಗಾಗಿ ಮಕ್ಕಳಿಗೆ ಸಾತ್ವಿಕ ಆಹಾರ ನೀಡಬೇಕು ಮತ್ತು ಭಗವದ್ಗೀತೆಯನ್ನು ಮುಕ್ತವಾಗಿ ಬೋಧಿಸಬೇಕು” ಎಂದು ಪ್ರತಿಪಾದಿಸಿದ್ದಾರೆ.

ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮಾತನಾಡಿ, “ಮಕ್ಕಳ ಮೇಲೆ ಹಿಂಸೆಯ ಪ್ರಭಾವವನ್ನು ಕಡಿಮೆ ಮಾಡಬೇಕು. ಹಾಗಾಗಿ ಮಕ್ಕಳ ಮುಂದೆ ಪ್ರಾಣಿವಧೆ ಮಾಡಬಾರದು ಮತ್ತು ಅಂಗಡಿಗಳ ಮುಂದೆ ಮಾಂಸ ನೇತುಹಾಕಬಾರದು ಅಥವಾ ಅದನ್ನು ಮುಚ್ಚಬೇಕು ಎಂದು ಸಲಹೆ ನೀಡಿದ್ದಾರೆ.

ಮಕ್ಕಳು ಅಪೌಷ್ಠಿಕತೆಯಿಂದ ನರಳುತ್ತಿರುವ ಸಂದರ್ಭದಲ್ಲಿ ಮಾಂಸಾಹಾರದಂತಹ ಪೌಷ್ಠಿಕ ಆಹಾರದ ಮೇಲಿನ ಸ್ವಾಮೀಜಿಗಳ ಪ್ರಹಾರವನ್ನು ಹಲವಾರು ಜನ ಸಾಮಾಜಿಕ ಜಾಲತಾಣಗಳಲ್ಲಿ ಖಂಡಿಸಿದ್ದಾರೆ.

“ಬುದ್ಧನೂ, ರಾಮನೂ, ಕೃಷ್ಣನೂ, ಬಾಬಾ ಸಾಹೇಬರೂ, ವಿವೇಕರೂ ತಿಂದದ್ದು ನೀವು ಹೇಳುವ ಸಾತ್ವಿಕ ಆಹಾರ ಅಲ್ಲ!” ಅಂತ ನಿಮ್ಮ ಮಠಗಳಿಗೊಂದು ಮೈಲ್ ಹಾಕಬೇಕು. ಐಡಿ ಕಳಿಸಿ ಸ್ವಾಮಿಗೋಳೇ! ಹಂಗೇ, “ಹೆಣ್ಮಕ್ಕಳನ್ನು ಹರಿದು ತಿಂದ, ಕಪ್ಪುಹಣ ಬಚ್ಚಿಡುವ, ಸಾವುಗಳನ್ನು ಮುಚ್ಚಿಡುವ ಕಾವಿಗಳ ಆಹಾರ- ಶುದ್ಧ ಸಾತ್ವಿಕವಾದುದೇ!” ಅಂತ ತಿಳಿಸಿ ನಿಮಗೊಂದು ವಾಟ್ಸಾಪೂ ಮಾಡಬೇಕಿದೆ. ನಂಬರೂ ಕಳಿಸಿ ಸ್ವಾಮಿಗೋಳೇ! ಎಂದು ಖ್ಯಾತ ವ್ಯಂಗ್ಯಚಿತ್ರಕಾರ ದಿನೇಶ್ ಕುಕ್ಕಜಡ್ಕ ವ್ಯಂಗ್ಯವಾಡಿದ್ದಾರೆ.

ತೊಂಬತ್ತು ಭಾಗ ಜನರು ತಿನ್ನುವ ಆಹಾರವನ್ನು ತೆಗಳ್ತಾರಲ್ಲ! ಇವರುಗಳು ಸೈಕೊಗಳಿಗಿಂತ ಕ್ರೂರ ಎಂದು ಸಾಮಾಜಿಕ ಕಾರ್ಯಕರ್ತ ವಿ.ಎಲ್ ಬಾಲು ಕಿಡಿಕಾರಿದ್ದಾರೆ.

ಮೌಲಿಕ ಶಿಕ್ಷಣದ ಬಗ್ಗೆ ಶೈಕ್ಷಣಿಕ ತಜ್ಞರ ಸಲಹೆ ಪಡೆಯಬೇಕಿದ್ದ ಸರ್ಕಾರವು ಮಠಾಧೀಶರ ಸಲಹೆಗಳನ್ನು ಪಡೆಯುತ್ತಿರುವುದು ಹಾಸ್ಯಾಸ್ಪದ ಇದರಲ್ಲಿ ಪೇಜಾವರ ಮಠದ ಸ್ವಾಮೀಜಿಯು ಮಾಂಸಹಾರದ ಬಗ್ಗೆ ಅಸಹನೆ ತೋರುವುದನ್ನೇ ಮೌಲ್ಯ ಎಂದಿದ್ದರೆ ಇನ್ನೊಬ್ಬ ಮಹಾಶಯರು ಪುನರ್ಜನ್ಮದ ಬಗ್ಗೆ ತಿಳಿಸಿಕೊಡಿ ಎಂದು ಹೇಳಿರುತ್ತಾರೆ ಇವು ಮೌಲಿಕ ಶಿಕ್ಷಣದ ಸಲಹೆಗಳೇ? ಎಂದು ಮಾಜಿ ಸಚಿವ ಡಾ.ಎಚ್.ಸಿ ಮಹಾದೇವಪ್ಪ ಟ್ವೀಟ್ ಮಾಡಿದ್ದಾರೆ.

RSS ನ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ರಾಜ್ಯ ಸರ್ಕಾರವು RSS ಗೆ ಬೇಕಾದ ಆಹಾರ ವಿರೋಧಿಯಾದ, ಮೌಢ್ಯತೆಯಿಂದ ಕೂಡಿದ, ಕೋಮುವಾದಿ ಪಠ್ಯಗಳನ್ನು ರೂಪಿಸುವ ದುರುದ್ದೇಶವನ್ನು ಹೊಂದಿ ಅದಕ್ಕೆ ತಕ್ಕನಾದ ರೀತಿಯಲ್ಲಿ ಅಭಿಪ್ರಾಯಗಳನ್ನು ಸಂಗ್ರಹ ಮಾಡಿಸಿದೆ. ಇದನ್ನೆಲ್ಲಾ ಮೌಲಿಕ ಸಲಹೆಗಳು ಎಂದು ಒಪ್ಪಲು ಆದೀತೇ? ಎಂದು ಅವರು ಪ್ರಶ್ನಿಸಿದ್ದಾರೆ.

ನಮ್ಮೂರ ಮಾರಿ ಜಾತ್ರೆಯಲ್ಲಿ ಪ್ರತಿ ಮನೆಯಿಂದ ಬರುವ ಮಾಂಸದ ಆಮ್ರದ ಪರಿಮಳದಲ್ಲಿ ನಾನು ಅನುಭವಿಸಿದ ಸಾತ್ವಿಕತೆಯ ಭಾವನೆಯನ್ನು… ಇನ್ಯಾವ ಸಂರ್ಭದಲ್ಲೂ ಅನುಭವಿಸಿಲ್ಲ…
ನನ್ನ ಆಹಾರ ನನ್ನ ಹಕ್ಕು ಎಂದು ಅಕ್ಷತಾ ಹುಂಚದಕಟ್ಟೆಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕರೆಕ್ಟಾಗಿ ಹೇಳಿದಾರೆ! ಸಾತ್ವಿಕ ಆಹಾರ ಅಂದರೆ ಸತ್ವಯುತ ಆಹಾರ! ಅಂದರೆ ಮೊಟ್ಟೆ, ಮಾಂಸ ಇತ್ಯಾದಿ! ಎಂದು ಚಿಂತಕ ಸುರೇಶ್ ಕಂಜರ್ಪಣೆ ತಿಳಿಸಿದ್ದಾರೆ.

ಮಾಂಸದ ಅಂಗಡಿ ಮುಂದೆ ಮಾಂಸ ನೋಡಿದ್ರೆ ಮಕ್ಕಳ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಆದ್ರೆ ಮಠಗಳಲ್ಲಿ ನೀವು ಮಾಡೋ ಪಂಕ್ತಿ ಭೇದ, ಜಾತಿ ಭೇದ ಮಾಡೋದ್ರಿಂದ ಮಕ್ಕಳ ಮನಸ್ಸಿನ ಮೇಲೆ ಯಾವ ಕೆಟ್ಟ ಪರಿಣಾಮ ಬೀರಲ್ಲ ಅಲ್ವಾ ಸ್ವಾಮ್ಗಳೇ ಎಂದು ರಘುನಂದನರವರು ಪ್ರಶ್ನಿಸಿದ್ದಾರೆ.

ಮಾಂಸಾಹಾರವನ್ನು ಕನಿಷ್ಟಗೊಳಿಸಿ ನೋಡುವ, ಸಾತ್ವಿಕ ಆಹಾರವೇ ಉತ್ತಮ ಎಂದು ಪ್ರತಿಪಾದಿಸುವ ಶ್ರೇ‍ಷ್ಠತೆಯ ವ್ಯಸನ ನಿಲ್ಲಬೇಕೆಂದು ಹಲವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ; ದೇವರಿಗೆ ಮಾಂಸಾಹಾರದ ಎಡೆ: ಚಾರಿತ್ರಿಕ, ಜಾನಪದೀಯ ಅಧ್ಯಯನಗಳು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...