Homeಕರ್ನಾಟಕಮಾಂಸಾಹಾರದ ಮೇಲೆ ಮತ್ತೆ ಪ್ರಹಾರ: ಮಠಾಧೀಶರ ಸಲಹೆಗಳಿಗೆ ತೀವ್ರ ವಿರೋಧ

ಮಾಂಸಾಹಾರದ ಮೇಲೆ ಮತ್ತೆ ಪ್ರಹಾರ: ಮಠಾಧೀಶರ ಸಲಹೆಗಳಿಗೆ ತೀವ್ರ ವಿರೋಧ

- Advertisement -
- Advertisement -

ರಾಜ್ಯದಲ್ಲಿ ಮಾಂಸಾಹಾರದ ಕುರಿತು ಚರ್ಚೆ ಮತ್ತೆ ಭುಗಿಲೆದ್ದಿದೆ. ಶಾಲಾ ಶಿಕ್ಷಣದಲ್ಲಿ ಮೌಲ್ಯ ಶಿಕ್ಷಣ ಶಿಕ್ಷಣವನ್ನು ಅನುಷ್ಠಾನಗೊಳಿಸುವುದರ ಕುರಿತು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಠಾಧೀಶರು ಮಾಂಸಾಹಾರದ ಮೇಲೆ ಮತ್ತೆ ಪ್ರಹಾರ ನಡೆಸಿದ್ದಾರೆ. ಮಕ್ಕಳಿಗೆ ಸಾತ್ವಿಕ ಆಹಾರ ನೀಡಬೇಕು, ಅಂಗಡಿಗಳ ಮುಂದೆ ಮಾಂಸ ನೇತು ಹಾಕುವುದನ್ನು ಬ್ಯಾನ್ ಮಾಡಬೇಕೆಂಬ ಆಗ್ರಹಗಳು ಕೇಳಿಬಂದಿವೆ. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಕಂಡುಬಂದಿದೆ.

ಸಭೆಯಲ್ಲಿ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮಾತನಾಡಿ, “ಆಹಾರಕ್ಕೂ ವ್ಯಕ್ತಿತ್ವಕ್ಕೂ ಸಂಬಂಧವಿದೆ.  ಕೆಲವು ಆಹಾರಗಳು ಮಕ್ಕಳಲ್ಲಿ ನಕರಾತ್ಮಕ ಮನೋಭಾವ ಬೆಳೆಸುತ್ತವೆ. ಹಾಗಾಗಿ ಮಕ್ಕಳಿಗೆ ಸಾತ್ವಿಕ ಆಹಾರ ನೀಡಬೇಕು ಮತ್ತು ಭಗವದ್ಗೀತೆಯನ್ನು ಮುಕ್ತವಾಗಿ ಬೋಧಿಸಬೇಕು” ಎಂದು ಪ್ರತಿಪಾದಿಸಿದ್ದಾರೆ.

ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮಾತನಾಡಿ, “ಮಕ್ಕಳ ಮೇಲೆ ಹಿಂಸೆಯ ಪ್ರಭಾವವನ್ನು ಕಡಿಮೆ ಮಾಡಬೇಕು. ಹಾಗಾಗಿ ಮಕ್ಕಳ ಮುಂದೆ ಪ್ರಾಣಿವಧೆ ಮಾಡಬಾರದು ಮತ್ತು ಅಂಗಡಿಗಳ ಮುಂದೆ ಮಾಂಸ ನೇತುಹಾಕಬಾರದು ಅಥವಾ ಅದನ್ನು ಮುಚ್ಚಬೇಕು ಎಂದು ಸಲಹೆ ನೀಡಿದ್ದಾರೆ.

ಮಕ್ಕಳು ಅಪೌಷ್ಠಿಕತೆಯಿಂದ ನರಳುತ್ತಿರುವ ಸಂದರ್ಭದಲ್ಲಿ ಮಾಂಸಾಹಾರದಂತಹ ಪೌಷ್ಠಿಕ ಆಹಾರದ ಮೇಲಿನ ಸ್ವಾಮೀಜಿಗಳ ಪ್ರಹಾರವನ್ನು ಹಲವಾರು ಜನ ಸಾಮಾಜಿಕ ಜಾಲತಾಣಗಳಲ್ಲಿ ಖಂಡಿಸಿದ್ದಾರೆ.

“ಬುದ್ಧನೂ, ರಾಮನೂ, ಕೃಷ್ಣನೂ, ಬಾಬಾ ಸಾಹೇಬರೂ, ವಿವೇಕರೂ ತಿಂದದ್ದು ನೀವು ಹೇಳುವ ಸಾತ್ವಿಕ ಆಹಾರ ಅಲ್ಲ!” ಅಂತ ನಿಮ್ಮ ಮಠಗಳಿಗೊಂದು ಮೈಲ್ ಹಾಕಬೇಕು. ಐಡಿ ಕಳಿಸಿ ಸ್ವಾಮಿಗೋಳೇ! ಹಂಗೇ, “ಹೆಣ್ಮಕ್ಕಳನ್ನು ಹರಿದು ತಿಂದ, ಕಪ್ಪುಹಣ ಬಚ್ಚಿಡುವ, ಸಾವುಗಳನ್ನು ಮುಚ್ಚಿಡುವ ಕಾವಿಗಳ ಆಹಾರ- ಶುದ್ಧ ಸಾತ್ವಿಕವಾದುದೇ!” ಅಂತ ತಿಳಿಸಿ ನಿಮಗೊಂದು ವಾಟ್ಸಾಪೂ ಮಾಡಬೇಕಿದೆ. ನಂಬರೂ ಕಳಿಸಿ ಸ್ವಾಮಿಗೋಳೇ! ಎಂದು ಖ್ಯಾತ ವ್ಯಂಗ್ಯಚಿತ್ರಕಾರ ದಿನೇಶ್ ಕುಕ್ಕಜಡ್ಕ ವ್ಯಂಗ್ಯವಾಡಿದ್ದಾರೆ.

ತೊಂಬತ್ತು ಭಾಗ ಜನರು ತಿನ್ನುವ ಆಹಾರವನ್ನು ತೆಗಳ್ತಾರಲ್ಲ! ಇವರುಗಳು ಸೈಕೊಗಳಿಗಿಂತ ಕ್ರೂರ ಎಂದು ಸಾಮಾಜಿಕ ಕಾರ್ಯಕರ್ತ ವಿ.ಎಲ್ ಬಾಲು ಕಿಡಿಕಾರಿದ್ದಾರೆ.

ಮೌಲಿಕ ಶಿಕ್ಷಣದ ಬಗ್ಗೆ ಶೈಕ್ಷಣಿಕ ತಜ್ಞರ ಸಲಹೆ ಪಡೆಯಬೇಕಿದ್ದ ಸರ್ಕಾರವು ಮಠಾಧೀಶರ ಸಲಹೆಗಳನ್ನು ಪಡೆಯುತ್ತಿರುವುದು ಹಾಸ್ಯಾಸ್ಪದ ಇದರಲ್ಲಿ ಪೇಜಾವರ ಮಠದ ಸ್ವಾಮೀಜಿಯು ಮಾಂಸಹಾರದ ಬಗ್ಗೆ ಅಸಹನೆ ತೋರುವುದನ್ನೇ ಮೌಲ್ಯ ಎಂದಿದ್ದರೆ ಇನ್ನೊಬ್ಬ ಮಹಾಶಯರು ಪುನರ್ಜನ್ಮದ ಬಗ್ಗೆ ತಿಳಿಸಿಕೊಡಿ ಎಂದು ಹೇಳಿರುತ್ತಾರೆ ಇವು ಮೌಲಿಕ ಶಿಕ್ಷಣದ ಸಲಹೆಗಳೇ? ಎಂದು ಮಾಜಿ ಸಚಿವ ಡಾ.ಎಚ್.ಸಿ ಮಹಾದೇವಪ್ಪ ಟ್ವೀಟ್ ಮಾಡಿದ್ದಾರೆ.

RSS ನ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ರಾಜ್ಯ ಸರ್ಕಾರವು RSS ಗೆ ಬೇಕಾದ ಆಹಾರ ವಿರೋಧಿಯಾದ, ಮೌಢ್ಯತೆಯಿಂದ ಕೂಡಿದ, ಕೋಮುವಾದಿ ಪಠ್ಯಗಳನ್ನು ರೂಪಿಸುವ ದುರುದ್ದೇಶವನ್ನು ಹೊಂದಿ ಅದಕ್ಕೆ ತಕ್ಕನಾದ ರೀತಿಯಲ್ಲಿ ಅಭಿಪ್ರಾಯಗಳನ್ನು ಸಂಗ್ರಹ ಮಾಡಿಸಿದೆ. ಇದನ್ನೆಲ್ಲಾ ಮೌಲಿಕ ಸಲಹೆಗಳು ಎಂದು ಒಪ್ಪಲು ಆದೀತೇ? ಎಂದು ಅವರು ಪ್ರಶ್ನಿಸಿದ್ದಾರೆ.

ನಮ್ಮೂರ ಮಾರಿ ಜಾತ್ರೆಯಲ್ಲಿ ಪ್ರತಿ ಮನೆಯಿಂದ ಬರುವ ಮಾಂಸದ ಆಮ್ರದ ಪರಿಮಳದಲ್ಲಿ ನಾನು ಅನುಭವಿಸಿದ ಸಾತ್ವಿಕತೆಯ ಭಾವನೆಯನ್ನು… ಇನ್ಯಾವ ಸಂರ್ಭದಲ್ಲೂ ಅನುಭವಿಸಿಲ್ಲ…
ನನ್ನ ಆಹಾರ ನನ್ನ ಹಕ್ಕು ಎಂದು ಅಕ್ಷತಾ ಹುಂಚದಕಟ್ಟೆಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕರೆಕ್ಟಾಗಿ ಹೇಳಿದಾರೆ! ಸಾತ್ವಿಕ ಆಹಾರ ಅಂದರೆ ಸತ್ವಯುತ ಆಹಾರ! ಅಂದರೆ ಮೊಟ್ಟೆ, ಮಾಂಸ ಇತ್ಯಾದಿ! ಎಂದು ಚಿಂತಕ ಸುರೇಶ್ ಕಂಜರ್ಪಣೆ ತಿಳಿಸಿದ್ದಾರೆ.

ಮಾಂಸದ ಅಂಗಡಿ ಮುಂದೆ ಮಾಂಸ ನೋಡಿದ್ರೆ ಮಕ್ಕಳ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಆದ್ರೆ ಮಠಗಳಲ್ಲಿ ನೀವು ಮಾಡೋ ಪಂಕ್ತಿ ಭೇದ, ಜಾತಿ ಭೇದ ಮಾಡೋದ್ರಿಂದ ಮಕ್ಕಳ ಮನಸ್ಸಿನ ಮೇಲೆ ಯಾವ ಕೆಟ್ಟ ಪರಿಣಾಮ ಬೀರಲ್ಲ ಅಲ್ವಾ ಸ್ವಾಮ್ಗಳೇ ಎಂದು ರಘುನಂದನರವರು ಪ್ರಶ್ನಿಸಿದ್ದಾರೆ.

ಮಾಂಸಾಹಾರವನ್ನು ಕನಿಷ್ಟಗೊಳಿಸಿ ನೋಡುವ, ಸಾತ್ವಿಕ ಆಹಾರವೇ ಉತ್ತಮ ಎಂದು ಪ್ರತಿಪಾದಿಸುವ ಶ್ರೇ‍ಷ್ಠತೆಯ ವ್ಯಸನ ನಿಲ್ಲಬೇಕೆಂದು ಹಲವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ; ದೇವರಿಗೆ ಮಾಂಸಾಹಾರದ ಎಡೆ: ಚಾರಿತ್ರಿಕ, ಜಾನಪದೀಯ ಅಧ್ಯಯನಗಳು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...