Homeಕರ್ನಾಟಕಮಾಂಸಾಹಾರದ ಮೇಲೆ ಮತ್ತೆ ಪ್ರಹಾರ: ಮಠಾಧೀಶರ ಸಲಹೆಗಳಿಗೆ ತೀವ್ರ ವಿರೋಧ

ಮಾಂಸಾಹಾರದ ಮೇಲೆ ಮತ್ತೆ ಪ್ರಹಾರ: ಮಠಾಧೀಶರ ಸಲಹೆಗಳಿಗೆ ತೀವ್ರ ವಿರೋಧ

- Advertisement -
- Advertisement -

ರಾಜ್ಯದಲ್ಲಿ ಮಾಂಸಾಹಾರದ ಕುರಿತು ಚರ್ಚೆ ಮತ್ತೆ ಭುಗಿಲೆದ್ದಿದೆ. ಶಾಲಾ ಶಿಕ್ಷಣದಲ್ಲಿ ಮೌಲ್ಯ ಶಿಕ್ಷಣ ಶಿಕ್ಷಣವನ್ನು ಅನುಷ್ಠಾನಗೊಳಿಸುವುದರ ಕುರಿತು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಠಾಧೀಶರು ಮಾಂಸಾಹಾರದ ಮೇಲೆ ಮತ್ತೆ ಪ್ರಹಾರ ನಡೆಸಿದ್ದಾರೆ. ಮಕ್ಕಳಿಗೆ ಸಾತ್ವಿಕ ಆಹಾರ ನೀಡಬೇಕು, ಅಂಗಡಿಗಳ ಮುಂದೆ ಮಾಂಸ ನೇತು ಹಾಕುವುದನ್ನು ಬ್ಯಾನ್ ಮಾಡಬೇಕೆಂಬ ಆಗ್ರಹಗಳು ಕೇಳಿಬಂದಿವೆ. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಕಂಡುಬಂದಿದೆ.

ಸಭೆಯಲ್ಲಿ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮಾತನಾಡಿ, “ಆಹಾರಕ್ಕೂ ವ್ಯಕ್ತಿತ್ವಕ್ಕೂ ಸಂಬಂಧವಿದೆ.  ಕೆಲವು ಆಹಾರಗಳು ಮಕ್ಕಳಲ್ಲಿ ನಕರಾತ್ಮಕ ಮನೋಭಾವ ಬೆಳೆಸುತ್ತವೆ. ಹಾಗಾಗಿ ಮಕ್ಕಳಿಗೆ ಸಾತ್ವಿಕ ಆಹಾರ ನೀಡಬೇಕು ಮತ್ತು ಭಗವದ್ಗೀತೆಯನ್ನು ಮುಕ್ತವಾಗಿ ಬೋಧಿಸಬೇಕು” ಎಂದು ಪ್ರತಿಪಾದಿಸಿದ್ದಾರೆ.

ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮಾತನಾಡಿ, “ಮಕ್ಕಳ ಮೇಲೆ ಹಿಂಸೆಯ ಪ್ರಭಾವವನ್ನು ಕಡಿಮೆ ಮಾಡಬೇಕು. ಹಾಗಾಗಿ ಮಕ್ಕಳ ಮುಂದೆ ಪ್ರಾಣಿವಧೆ ಮಾಡಬಾರದು ಮತ್ತು ಅಂಗಡಿಗಳ ಮುಂದೆ ಮಾಂಸ ನೇತುಹಾಕಬಾರದು ಅಥವಾ ಅದನ್ನು ಮುಚ್ಚಬೇಕು ಎಂದು ಸಲಹೆ ನೀಡಿದ್ದಾರೆ.

ಮಕ್ಕಳು ಅಪೌಷ್ಠಿಕತೆಯಿಂದ ನರಳುತ್ತಿರುವ ಸಂದರ್ಭದಲ್ಲಿ ಮಾಂಸಾಹಾರದಂತಹ ಪೌಷ್ಠಿಕ ಆಹಾರದ ಮೇಲಿನ ಸ್ವಾಮೀಜಿಗಳ ಪ್ರಹಾರವನ್ನು ಹಲವಾರು ಜನ ಸಾಮಾಜಿಕ ಜಾಲತಾಣಗಳಲ್ಲಿ ಖಂಡಿಸಿದ್ದಾರೆ.

“ಬುದ್ಧನೂ, ರಾಮನೂ, ಕೃಷ್ಣನೂ, ಬಾಬಾ ಸಾಹೇಬರೂ, ವಿವೇಕರೂ ತಿಂದದ್ದು ನೀವು ಹೇಳುವ ಸಾತ್ವಿಕ ಆಹಾರ ಅಲ್ಲ!” ಅಂತ ನಿಮ್ಮ ಮಠಗಳಿಗೊಂದು ಮೈಲ್ ಹಾಕಬೇಕು. ಐಡಿ ಕಳಿಸಿ ಸ್ವಾಮಿಗೋಳೇ! ಹಂಗೇ, “ಹೆಣ್ಮಕ್ಕಳನ್ನು ಹರಿದು ತಿಂದ, ಕಪ್ಪುಹಣ ಬಚ್ಚಿಡುವ, ಸಾವುಗಳನ್ನು ಮುಚ್ಚಿಡುವ ಕಾವಿಗಳ ಆಹಾರ- ಶುದ್ಧ ಸಾತ್ವಿಕವಾದುದೇ!” ಅಂತ ತಿಳಿಸಿ ನಿಮಗೊಂದು ವಾಟ್ಸಾಪೂ ಮಾಡಬೇಕಿದೆ. ನಂಬರೂ ಕಳಿಸಿ ಸ್ವಾಮಿಗೋಳೇ! ಎಂದು ಖ್ಯಾತ ವ್ಯಂಗ್ಯಚಿತ್ರಕಾರ ದಿನೇಶ್ ಕುಕ್ಕಜಡ್ಕ ವ್ಯಂಗ್ಯವಾಡಿದ್ದಾರೆ.

ತೊಂಬತ್ತು ಭಾಗ ಜನರು ತಿನ್ನುವ ಆಹಾರವನ್ನು ತೆಗಳ್ತಾರಲ್ಲ! ಇವರುಗಳು ಸೈಕೊಗಳಿಗಿಂತ ಕ್ರೂರ ಎಂದು ಸಾಮಾಜಿಕ ಕಾರ್ಯಕರ್ತ ವಿ.ಎಲ್ ಬಾಲು ಕಿಡಿಕಾರಿದ್ದಾರೆ.

ಮೌಲಿಕ ಶಿಕ್ಷಣದ ಬಗ್ಗೆ ಶೈಕ್ಷಣಿಕ ತಜ್ಞರ ಸಲಹೆ ಪಡೆಯಬೇಕಿದ್ದ ಸರ್ಕಾರವು ಮಠಾಧೀಶರ ಸಲಹೆಗಳನ್ನು ಪಡೆಯುತ್ತಿರುವುದು ಹಾಸ್ಯಾಸ್ಪದ ಇದರಲ್ಲಿ ಪೇಜಾವರ ಮಠದ ಸ್ವಾಮೀಜಿಯು ಮಾಂಸಹಾರದ ಬಗ್ಗೆ ಅಸಹನೆ ತೋರುವುದನ್ನೇ ಮೌಲ್ಯ ಎಂದಿದ್ದರೆ ಇನ್ನೊಬ್ಬ ಮಹಾಶಯರು ಪುನರ್ಜನ್ಮದ ಬಗ್ಗೆ ತಿಳಿಸಿಕೊಡಿ ಎಂದು ಹೇಳಿರುತ್ತಾರೆ ಇವು ಮೌಲಿಕ ಶಿಕ್ಷಣದ ಸಲಹೆಗಳೇ? ಎಂದು ಮಾಜಿ ಸಚಿವ ಡಾ.ಎಚ್.ಸಿ ಮಹಾದೇವಪ್ಪ ಟ್ವೀಟ್ ಮಾಡಿದ್ದಾರೆ.

RSS ನ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ರಾಜ್ಯ ಸರ್ಕಾರವು RSS ಗೆ ಬೇಕಾದ ಆಹಾರ ವಿರೋಧಿಯಾದ, ಮೌಢ್ಯತೆಯಿಂದ ಕೂಡಿದ, ಕೋಮುವಾದಿ ಪಠ್ಯಗಳನ್ನು ರೂಪಿಸುವ ದುರುದ್ದೇಶವನ್ನು ಹೊಂದಿ ಅದಕ್ಕೆ ತಕ್ಕನಾದ ರೀತಿಯಲ್ಲಿ ಅಭಿಪ್ರಾಯಗಳನ್ನು ಸಂಗ್ರಹ ಮಾಡಿಸಿದೆ. ಇದನ್ನೆಲ್ಲಾ ಮೌಲಿಕ ಸಲಹೆಗಳು ಎಂದು ಒಪ್ಪಲು ಆದೀತೇ? ಎಂದು ಅವರು ಪ್ರಶ್ನಿಸಿದ್ದಾರೆ.

ನಮ್ಮೂರ ಮಾರಿ ಜಾತ್ರೆಯಲ್ಲಿ ಪ್ರತಿ ಮನೆಯಿಂದ ಬರುವ ಮಾಂಸದ ಆಮ್ರದ ಪರಿಮಳದಲ್ಲಿ ನಾನು ಅನುಭವಿಸಿದ ಸಾತ್ವಿಕತೆಯ ಭಾವನೆಯನ್ನು… ಇನ್ಯಾವ ಸಂರ್ಭದಲ್ಲೂ ಅನುಭವಿಸಿಲ್ಲ…
ನನ್ನ ಆಹಾರ ನನ್ನ ಹಕ್ಕು ಎಂದು ಅಕ್ಷತಾ ಹುಂಚದಕಟ್ಟೆಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕರೆಕ್ಟಾಗಿ ಹೇಳಿದಾರೆ! ಸಾತ್ವಿಕ ಆಹಾರ ಅಂದರೆ ಸತ್ವಯುತ ಆಹಾರ! ಅಂದರೆ ಮೊಟ್ಟೆ, ಮಾಂಸ ಇತ್ಯಾದಿ! ಎಂದು ಚಿಂತಕ ಸುರೇಶ್ ಕಂಜರ್ಪಣೆ ತಿಳಿಸಿದ್ದಾರೆ.

ಮಾಂಸದ ಅಂಗಡಿ ಮುಂದೆ ಮಾಂಸ ನೋಡಿದ್ರೆ ಮಕ್ಕಳ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಆದ್ರೆ ಮಠಗಳಲ್ಲಿ ನೀವು ಮಾಡೋ ಪಂಕ್ತಿ ಭೇದ, ಜಾತಿ ಭೇದ ಮಾಡೋದ್ರಿಂದ ಮಕ್ಕಳ ಮನಸ್ಸಿನ ಮೇಲೆ ಯಾವ ಕೆಟ್ಟ ಪರಿಣಾಮ ಬೀರಲ್ಲ ಅಲ್ವಾ ಸ್ವಾಮ್ಗಳೇ ಎಂದು ರಘುನಂದನರವರು ಪ್ರಶ್ನಿಸಿದ್ದಾರೆ.

ಮಾಂಸಾಹಾರವನ್ನು ಕನಿಷ್ಟಗೊಳಿಸಿ ನೋಡುವ, ಸಾತ್ವಿಕ ಆಹಾರವೇ ಉತ್ತಮ ಎಂದು ಪ್ರತಿಪಾದಿಸುವ ಶ್ರೇ‍ಷ್ಠತೆಯ ವ್ಯಸನ ನಿಲ್ಲಬೇಕೆಂದು ಹಲವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ; ದೇವರಿಗೆ ಮಾಂಸಾಹಾರದ ಎಡೆ: ಚಾರಿತ್ರಿಕ, ಜಾನಪದೀಯ ಅಧ್ಯಯನಗಳು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...