Homeಕರ್ನಾಟಕಮೇ 20ಕ್ಕೆ ಮುಷ್ಕರ: ಕಂಪನಿಗಳಿಗೆ ರೈತರ ಬೆಳೆ ದಾಸ್ತಾನು ಮಾಡಿ, ದರದ ಜೂಜಾಟಕ್ಕೆ ಪರವಾನಗಿ: ಬೀದಿಗಿಳಿಯಲು...

ಮೇ 20ಕ್ಕೆ ಮುಷ್ಕರ: ಕಂಪನಿಗಳಿಗೆ ರೈತರ ಬೆಳೆ ದಾಸ್ತಾನು ಮಾಡಿ, ದರದ ಜೂಜಾಟಕ್ಕೆ ಪರವಾನಗಿ: ಬೀದಿಗಿಳಿಯಲು ಸಂಯುಕ್ತ ಹೋರಾಟ ಕರೆ

- Advertisement -
- Advertisement -

ಬೆಂಗಳೂರು: ಇದೇ ಮೇ 20ರಂದು ಜೆಸಿಟಿಯು ಮತ್ತು ಎಸ್‌ ಕೆ ಎಂ‌ ಜಂಟಿ ನೇತೃತ್ವದಲ್ಲಿ ದೇಶವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ. ಕಾರ್ಮಿಕರೊಂದಿಗೆ ಅಂದು ರೈತರು ಕೂಡ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಹೋರಾಟಕ್ಕಿಳಿಯಲಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವೂ ಬಿಜೆಪಿ ತಂದಿದ್ದ ನೀತಿಗಳನ್ನೇ ಮುಂದುವರೆಸುತ್ತಿರುವುದರಿಂದ ಮತ್ತು ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಕೊಟ್ಟ ಮಾತುಗಳನ್ನೆಲ್ಲಾ ಮರೆತಿರುವುದರಿಂದ ರಾಜ್ಯ ಹಾಗೂ ಕೇಂದ್ರ ಎರಡರ ವಿರುದ್ಧವೂ ಪ್ರತಿಭಟನೆಯನ್ನು ದಾಖಲಿಸಬೇಕಿದೆ ಎಂದು ರಾಜ್ಯ ರೈತ ಸಂಘಟನೆಗಳ ಐಕ್ಯ ವೇದಿಕೆಯಾದ ಸಂಯುಕ್ತ ಹೋರಾಟ-ಕರ್ನಾಟಕವು ಹೇಳಿಕೆಯಲ್ಲಿ ಕರೆ ನೀಡಿದೆ.

ಅಂಬಾನಿ-ಅದಾನಿಯಂತಹ ಬಕಾಸುರ ಕಂಪನಿಗಳ ಕಣ್ಣಿ ಬಿದ್ದಿರುವುದು ಕಾರ್ಮಿಕರ ಶ್ರಮ ಮತ್ತು ಸಾರ್ವಜನಿಕ ಸಂಪತ್ತಿನ ಮೇಲೆ ಮಾತ್ರವಲ್ಲ ರೈತರ ಭೂಮಿ ಮತ್ತು ಬೆಳೆಯ ಮೇಲೆ ಸಹ. ನಮ್ಮ ಭೂಮಿಯನ್ನು ಅವರು ಕಬಳಿಸಬೇಕಿದೆ, ನಮ್ಮ ಬೆಳೆಯನ್ನು ಅವರು ನಿಯಂತ್ರಿಸಬೇಕಿದೆ. ಆದ್ದರಿಂದ ಭೂಮಿಯ ಖರೀದಿಯ ಮೇಲೆ, ಭೂಮಿಯ ಗುತ್ತಿಗೆ ಮೇಲೆ ಇದ್ದ ನಿರ್ಬಂಧಗಳನ್ನೆಲ್ಲಾ ತೆಗೆದು, ಯಾರು ಎಷ್ಟು ಬೇಕಾದರೂ ಖರೀದಿಸಬಹುದು, ಯಾರು ಯಾರಿಂದ ಬೇಕಾದರೂ ಭೂಮಿಯನ್ನು ಗುತ್ತಿಗೆಗೆ ಪಡೆದುಕೊಳ್ಳಬಹುದು ಎಂಬ ಕಾನೂನುಗಳನ್ನು ತರಲಾಗುತ್ತಿದೆ. ಇವುಗಳನ್ನೆಲ್ಲಾ ಪ್ರತಿಭಟಿಸಿ ನಾವು ಮೇ 20ರ ಮುಷ್ಕರದಲ್ಲಿ ಪಾಲ್ಗೊಳ್ಳುವಂತೆ ರಾಜ್ಯದ ಎಲ್ಲ ರೈತ ವರ್ಗಕ್ಕೆ ಕರೆ ನೀಡುತ್ತೇವೆ ಎಂದು ಸಂಯುಕ್ತ ಹೋರಾಟ ಹೇಳಿದೆ.

ರೈತರ ಬೆಳೆಯ ಬೆಲೆ ನಿಗದಿ, ಬೆಲೆ ನಿಯಂತ್ರಣ ಹಾಗೂ ಬೆಂಬಲ ಬೆಲೆಯ ಜಾರಿಗಾಗಿ ಇದ್ದ ಎಪಿಎಂಸಿಗಳನ್ನು ದುರ್ಬಲಗೊಳಿಸಿ, ಮುಚ್ಚಿಹಾಕಿ ಕೃಷಿ ಮಾರುಕಟ್ಟೆಯನ್ನು ಸಂಪೂರ್ಣವಾಗಿ ಖಾಸಗೀ ಕಂಪನಿಗಳಿಗೆ ಒಪ್ಪಿಸುವ ಸಂಚು ರೂಪಗೊಂಡಿದೆ. ರೈತರ ಬೆಳೆಯನ್ನೆಲ್ಲಾ ದೊಡ್ಡ ಪ್ರಮಾಣದಲ್ಲಿ ದಾಸ್ತಾನು ಮಾಡಿ, ರೇಟಿನ ಜೂಜಾಟ ನಡೆಸಿ, ಮನಬಂದ ಬೆಲೆಗೆ ಮಾರಿ ರೈತರನ್ನೂ ಮತ್ತು ಸಾರ್ವಜನಿಕರನ್ನು ಇಬ್ಬರನ್ನೂ ದೋಚುವ ಪರವಾನಗಿಯನ್ನು ಖಾಸಗಿಯವರಿಗೆ ನೀಡಲಾಗುತ್ತಿದೆ. ರೈತರು ತಮ್ಮ ಬೆಳೆಗೆ ಬೆಲೆ ಖಾತ್ರಿ ಕಾಯ್ದೆ ತರಬೇಕೆಂದು ಒತ್ತಾಯಿಸುತ್ತಿದ್ದರೂ, ಐತಿಹಾಸಿಕ ದೆಹಲಿ ರೈತಾಂದೋಲನಕ್ಕೆ ಮಣಿದು, ಅದನ್ನು ಜಾರಿ ಮಾಡುವುದಾಗಿ ತಾತ್ವಿಕವಾಗಿ ಒಪ್ಪಿಕೊಂಡಿದ್ದರೂ, ಆ ನಿಟ್ಟಿನಲ್ಲಿ ಒಂದು ಸಣ್ಣ ಹೆಜ್ಜೆಯನ್ನೂ ಇಡದೆ, ರೈತರನ್ನು ಖಾಸಗೀ ಮಾರುಕಟ್ಟೆಯ ಜೂಜಾಟಕ್ಕೆ ತಳ್ಳುವ ಹುನ್ನಾರಗಳೇ ಚಾಲ್ತಿಯಲ್ಲಿವೆ. ಅದಕ್ಕಾಗಿಯೇ “ಕೃಷಿ ಉತ್ಪನ್ನಗಳ ಮಾರುಕಟ್ಟೆಗಾಗಿ ರಾಷ್ಟ್ರೀಯ ಚೌಕಟ್ಟು ನೀತಿ”ಯನ್ನು ಕೇಂದ್ರ ಸರ್ಕಾರವು ಸಿದ್ಧಪಡಿಸಿ ರಾಜ್ಯಗಳ ಮೂಲಕ ಜಾರಿಗೆ ತರುವ ಪ್ರಯತ್ನದಲ್ಲಿದೆ ಎಂದು ಅದು ಆರೋಪಿಸಿದೆ.

ಮೋದಿ ಸರ್ಕಾರವು ಇದುವರೆಗೆ ಕಾರ್ಪೊರೇಟ್‌ ಕಂಪನಿಗಳ 50 ಲಕ್ಕ ಕೋಟಿಗೂ ಹೆಚ್ಚಿನ ಸಾಲವನ್ನು ಮನ್ನಾ ಮಾಡಿ ಪೋಷಿಸಿದೆ. ಆದರೆ ಇಡೀ ದೇಶದ ರೈತರ ಸಾಲ ಮನ್ನಾ ಮಾಡಲು ಅಗತ್ಯವಿರುವ 5 ಲಕ್ಷ ಕೋಟಿ ಹಣ ತನ್ನ ಬಳಿ ಇಲ್ಲ ಎಂದು ನಾಟಕವಾಡುತ್ತಿದೆ. ವಾಸ್ತವದಲ್ಲಿ ರೈತರನ್ನು ಸಂಕಷ್ಟದಿಂದ ಪಾರು ಮಾಡುವ ಬದಲು, ಅವರನ್ನು ಮತ್ತಷ್ಟು ದುಸ್ಥಿತಿಗೆ ತಳ್ಳಿ, ಅವರು ಭೂಮಿಯನ್ನು ಬಂಡವಾಳಿಗರಿಗೆ ಮಾರಿಕೊಂಡು ಹಳ್ಳಿಗಳನ್ನು ತೊರೆಯುವ ಪರಿಸ್ಥಿತಿ ನಿರ್ಮಾಣ ಮಾಡುತ್ತಿದೆ. ಕಾರ್ಪೊರೇಟ್‌ ಪರವಾಗಿ ನಡೆಯುತ್ತಿರುವ ಈ ಹುನ್ನಾರುಗಳು ರೈತರು ಮತ್ತು ಕಾರ್ಮಿಕರನ್ನು ಮಾತ್ರವಲ್ಲ,ಇಡೀ ದೇಶದ ಜನರ ಮೇಲೆ ವಿಪರೀತಕರ ಪರಿಣಾಮಗಳನ್ನು ಬೀರಲಿವೆ. ಮುಖ್ಯವಾಗಿ ಸರ್ವ ಕ್ಷೇತ್ರಗಳ ಖಾಸಗೀಕರಣ ಮತ್ತು ಕೇಂದ್ರ ಸರ್ಕಾರ ನಡೆಸಿರುವ ಜಿ ಎಸ್‌ ಟಿ ಮತ್ತು ಸೆಸ್‌ ಲೂಟಿಯಿಂದಾಗಿ ಬೆಲೆಗಳು ಏರುತ್ತಾ ಹೋಗಲಿದೆ, ಬದುಕು ದುಬಾರಿಯಾಗುತ್ತಾ ಹೋಗಲಿದೆ. ಮತ್ತೊಂದೆಡೆ ರೈತರನ್ನು ಭೂಮಿಯಿಂದ ಬಿಡಿಸುವ, ಮತ್ತು ಆದಾಯವನ್ನು ಕುಗ್ಗಿಸುತ್ತವೆ. ಒಟ್ಟಾರೆ ಕಂಪನಿಗಳ ಹಿತ ಕಾಯಲು ರೈತರ, ಕಾರ್ಮಿಕರ, ಯುವ ತಲೆಮಾರಿನ ಹಾಗೂ ಎಲ್ಲಾ ಜನಸಾಮಾನ್ಯರ ಬದುಕನ್ನು ಸಂಕಷ್ಟದ ಕೂಪಕ್ಕೆ ತಳ್ಳಲು ಕೇಂದ್ರ ಸರ್ಕಾರ ಹೊರಟಿದೆ ಎಂದು ಸಂಯುಕ್ತ ಹೋರಾಟವು ಆರೋಪಿಸಿದೆ.

ಕೇಂದ್ರದ ಬಿಜೆಪಿ ಸರ್ಕಾರವಂತೂ ಜನಸಾಮಾನ್ಯರ ಪರವಾಗಿ ಇದ್ದಿದ್ದಿಲ್ಲ, ಅದು ಸದಾ ಕಂಪನಿಗಳ ಪರ, ಖಾಸಗೀಕರಣದ ಪರ ನಿಲುವನ್ನೇ ತಾಳಿದೆ. ಹಾಗಾಗಿ ಅದರ ಜೊತೆ ಗುದ್ದಾಡಬೇಕೇ ಹೊರತು ಯಾವುದೇ ನಿರೀಕ್ಷೆ ಇಟ್ಟುಕೊಳ್ಳುವ ಸ್ಥಿತಿ ಇಲ್ಲ. ಆದರೆ ಬಿಜೆಪಿ ತರುತ್ತಿರುವ ಈ ನೀತಿಗಳನ್ನೆಲ್ಲ ವಿರೋಧ ಪಕ್ಷವಾಗಿದ್ದಾಗ ವಿರೋಧಿಸಿದ್ದ ಮತ್ತು ತಾನು ಅಧಿಕಾರಕ್ಕೆ ಬಂದರೆ ಅವನ್ನೆಲ್ಲಾ ರದ್ದು ಮಾಡುವುದಾಗಿ ಪ್ರಣಾಳಿಕೆಯಲ್ಲಿ ಲಿಖಿತ ಭರವಸೆ ನೀಡಿದ್ದ ರಾಜ್ಯ ಕಾಂಗ್ರೆಸ್‌ ಪಕ್ಷ ಅದಿಕಾರಕ್ಕೆ ಬಂದ ನಂತರ ಚಾಚೂ ತಪ್ಪದೆ ಬಿಜೆಪಿಯ ನೀತಿಗಳನ್ನೇ ಪಾಲಿಸುತ್ತಿದೆ. ಬಗರ್‌ ಹುಕುಂ ರೈತರಿಗೆ ಹುಸಿ ಭರವಸೆಗಳನ್ನು ನೀಡುತ್ತಾ, ಇದ್ದಬದ್ದ ಭೂಮಿಯನ್ನೂ ರೈತರಿಂದ ಕಸಿದು ಕಂಪನಿಗಳಿಗೆ ನೀಡುವ ಕೆಲಸ ಮಾಡುತ್ತಿದೆ. ಇದೊಂದು ವಿಶ್ವಾಸ ದ್ರೋಹದ ಕೆಲಸವಾಗಿದೆ ಎಂದು ಅದು ತಿಳಿಸಿದೆ.

ಹೀಗಾಗಿಯೇ ಮೇ 20ರಂದು ದೇಶವ್ಯಾಪಿಯಾಗಿ ನಡೆಸುತ್ತಿರುವ ಮುಷ್ಕರದಲ್ಲಿ ನಾಡಿನ ರೈತರೆಲ್ಲಾ ಭಾಗವಹಿಸಲು ಕರೆ ನೀಡುತ್ತೇವೆ. ಈ ಮುಷ್ಕರವನ್ನು ನಾವು ದೊಡ್ಡ ಮಟ್ಟದಲ್ಲಿ ಯಶಸ್ವಿಗೊಳಿಸಬೇಕಿದೆ. ನಮ್ಮ ನಮ್ಮ ಜಿಲ್ಲೆಯ ಎಲ್ಲಾ ರೈತರು ಆಯ್ದ ಆಯಕಟ್ಟಿನ ಸ್ಥಳಗಳಲ್ಲಿ ಬೃಹತ್‌ ಪ್ರಮಾಣದ ಪ್ರತಿಭಟನೆಗಳನ್ನು ಸಂಘಟಿಸಬೇಕಿದೆ. ಸರ್ಕಾರ ನಮ್ಮ ಹಕ್ಕೊತ್ತಾಯಗಳಿಗೆ ಸ್ಪಂದಿಸದೇ ಹೋದರೆ ರಸ್ತೆಗಳನ್ನು ಬಂದ್‌ ಮಾಡಿ, ಲಕ್ಷಾಂತರ ಸಂಖ್ಯೆಯಲ್ಲಿ ಜೈಲ್‌ ಭರೋ ನಡೆಸಿ ನಮ್ಮ ಪ್ರತಿರೋಧವನ್ನು ದಾಖಲಿಸಬೇಕಿದೆ. ಮೇ 20ರ ಹೋರಾಟ ರೈತ, ಕಾರ್ಮಿಕರು ಕೂಡಿ ಸರ್ಕಾರಗಳಿಗೆ ಕೊಡುತ್ತಿರುವ ಮೊದಲ ಎಚ್ಚರಿಕೆಯಾಗಿದೆ. ಸರ್ಕಾರಗಳು ಸ್ಪಂದಿಸದೇ ಹೋದಲ್ಲಿ ದೇಶದ ಆಗುಹೋಗುಗಗಳನ್ನೇ ಸ್ಥಬ್ದಗೊಳಿಸಬಲ್ಲ ಶಕ್ತಿ ನಮಗಿದೆ ಎಂಬ ಸಂದೇಶವನ್ನೂ ನಾವು ಕಳುಹಿಸಬೇಕಿದೆ ಎಂದು ಅದು ಎಚ್ಚರಿಸಿದೆ.

ರಾಜ್ಯ ಸರ್ಕಾರವು ಕೊಟ್ಟ ಮಾತಿನಂತೆ ಬಿಜೆಪಿ ಜಾರಿಗೆ ತಂದಿದ್ದ “ಭೂ ತಿದ್ದುಪಡಿ ಕಾಯ್ದೆ”, “ಎಪಿಎಂಸಿ ಕಾಯ್ದೆ”, “ಜಾನುವಾರು ಕಾಯ್ದೆ” ಮುಂತಾದವನ್ನು ಕೊಟ್ಟ ಮಾತಿನಂತೆ ಈ ಕೂಡಲೇ ಹಿಂಪಡೆಯಬೇಕು. ರೈತರಿಗೆ ಬೆಲೆ ಖಾತ್ರಿ ಕಾಯ್ದೆ, ಬಗರ್‌ ಹುಕುಂ ರೈತರಿಗೆ ಹಕ್ಕುಪತ್ರ, ದುಡಿಯುವ ಜನರ ಸಾಲಮನ್ನಾ ಮುಂತಾದ ಹಕ್ಕೊತ್ತಾಯಗಳ ಕುರಿತು ಚರ್ಚಿಸಲು ರೈತ ಮತ್ತು ಕಾರ್ಮಿಕ ಸಂಘಟನೆಗಳ ಜೊತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಸಭೆ ಕರೆಯಬೇಕು. ಇವು ನಮ್ಮ ಹಕ್ಕೊತ್ತಾಯಗಳು ಎಂದು ಸಂಯುಕ್ತ ಹೋರಾಟವು ಹೇಳಿಕೆಯಲ್ಲಿ ತಿಳಿಸಿದೆ.

ಮೇ 20ಕ್ಕೆ ದೇಶಾದ್ಯಂತ ಮುಷ್ಕರ: ಕೇಂದ್ರವು ಜಾರಿಗೆ ತರಲು ಹೊರಟಿರುವ 4 ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸುತ್ತಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...