Homeಕರ್ನಾಟಕಮೇ 20ಕ್ಕೆ ಮುಷ್ಕರ: ಕಂಪನಿಗಳಿಗೆ ರೈತರ ಬೆಳೆ ದಾಸ್ತಾನು ಮಾಡಿ, ದರದ ಜೂಜಾಟಕ್ಕೆ ಪರವಾನಗಿ: ಬೀದಿಗಿಳಿಯಲು...

ಮೇ 20ಕ್ಕೆ ಮುಷ್ಕರ: ಕಂಪನಿಗಳಿಗೆ ರೈತರ ಬೆಳೆ ದಾಸ್ತಾನು ಮಾಡಿ, ದರದ ಜೂಜಾಟಕ್ಕೆ ಪರವಾನಗಿ: ಬೀದಿಗಿಳಿಯಲು ಸಂಯುಕ್ತ ಹೋರಾಟ ಕರೆ

- Advertisement -
- Advertisement -

ಬೆಂಗಳೂರು: ಇದೇ ಮೇ 20ರಂದು ಜೆಸಿಟಿಯು ಮತ್ತು ಎಸ್‌ ಕೆ ಎಂ‌ ಜಂಟಿ ನೇತೃತ್ವದಲ್ಲಿ ದೇಶವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ. ಕಾರ್ಮಿಕರೊಂದಿಗೆ ಅಂದು ರೈತರು ಕೂಡ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಹೋರಾಟಕ್ಕಿಳಿಯಲಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವೂ ಬಿಜೆಪಿ ತಂದಿದ್ದ ನೀತಿಗಳನ್ನೇ ಮುಂದುವರೆಸುತ್ತಿರುವುದರಿಂದ ಮತ್ತು ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಕೊಟ್ಟ ಮಾತುಗಳನ್ನೆಲ್ಲಾ ಮರೆತಿರುವುದರಿಂದ ರಾಜ್ಯ ಹಾಗೂ ಕೇಂದ್ರ ಎರಡರ ವಿರುದ್ಧವೂ ಪ್ರತಿಭಟನೆಯನ್ನು ದಾಖಲಿಸಬೇಕಿದೆ ಎಂದು ರಾಜ್ಯ ರೈತ ಸಂಘಟನೆಗಳ ಐಕ್ಯ ವೇದಿಕೆಯಾದ ಸಂಯುಕ್ತ ಹೋರಾಟ-ಕರ್ನಾಟಕವು ಹೇಳಿಕೆಯಲ್ಲಿ ಕರೆ ನೀಡಿದೆ.

ಅಂಬಾನಿ-ಅದಾನಿಯಂತಹ ಬಕಾಸುರ ಕಂಪನಿಗಳ ಕಣ್ಣಿ ಬಿದ್ದಿರುವುದು ಕಾರ್ಮಿಕರ ಶ್ರಮ ಮತ್ತು ಸಾರ್ವಜನಿಕ ಸಂಪತ್ತಿನ ಮೇಲೆ ಮಾತ್ರವಲ್ಲ ರೈತರ ಭೂಮಿ ಮತ್ತು ಬೆಳೆಯ ಮೇಲೆ ಸಹ. ನಮ್ಮ ಭೂಮಿಯನ್ನು ಅವರು ಕಬಳಿಸಬೇಕಿದೆ, ನಮ್ಮ ಬೆಳೆಯನ್ನು ಅವರು ನಿಯಂತ್ರಿಸಬೇಕಿದೆ. ಆದ್ದರಿಂದ ಭೂಮಿಯ ಖರೀದಿಯ ಮೇಲೆ, ಭೂಮಿಯ ಗುತ್ತಿಗೆ ಮೇಲೆ ಇದ್ದ ನಿರ್ಬಂಧಗಳನ್ನೆಲ್ಲಾ ತೆಗೆದು, ಯಾರು ಎಷ್ಟು ಬೇಕಾದರೂ ಖರೀದಿಸಬಹುದು, ಯಾರು ಯಾರಿಂದ ಬೇಕಾದರೂ ಭೂಮಿಯನ್ನು ಗುತ್ತಿಗೆಗೆ ಪಡೆದುಕೊಳ್ಳಬಹುದು ಎಂಬ ಕಾನೂನುಗಳನ್ನು ತರಲಾಗುತ್ತಿದೆ. ಇವುಗಳನ್ನೆಲ್ಲಾ ಪ್ರತಿಭಟಿಸಿ ನಾವು ಮೇ 20ರ ಮುಷ್ಕರದಲ್ಲಿ ಪಾಲ್ಗೊಳ್ಳುವಂತೆ ರಾಜ್ಯದ ಎಲ್ಲ ರೈತ ವರ್ಗಕ್ಕೆ ಕರೆ ನೀಡುತ್ತೇವೆ ಎಂದು ಸಂಯುಕ್ತ ಹೋರಾಟ ಹೇಳಿದೆ.

ರೈತರ ಬೆಳೆಯ ಬೆಲೆ ನಿಗದಿ, ಬೆಲೆ ನಿಯಂತ್ರಣ ಹಾಗೂ ಬೆಂಬಲ ಬೆಲೆಯ ಜಾರಿಗಾಗಿ ಇದ್ದ ಎಪಿಎಂಸಿಗಳನ್ನು ದುರ್ಬಲಗೊಳಿಸಿ, ಮುಚ್ಚಿಹಾಕಿ ಕೃಷಿ ಮಾರುಕಟ್ಟೆಯನ್ನು ಸಂಪೂರ್ಣವಾಗಿ ಖಾಸಗೀ ಕಂಪನಿಗಳಿಗೆ ಒಪ್ಪಿಸುವ ಸಂಚು ರೂಪಗೊಂಡಿದೆ. ರೈತರ ಬೆಳೆಯನ್ನೆಲ್ಲಾ ದೊಡ್ಡ ಪ್ರಮಾಣದಲ್ಲಿ ದಾಸ್ತಾನು ಮಾಡಿ, ರೇಟಿನ ಜೂಜಾಟ ನಡೆಸಿ, ಮನಬಂದ ಬೆಲೆಗೆ ಮಾರಿ ರೈತರನ್ನೂ ಮತ್ತು ಸಾರ್ವಜನಿಕರನ್ನು ಇಬ್ಬರನ್ನೂ ದೋಚುವ ಪರವಾನಗಿಯನ್ನು ಖಾಸಗಿಯವರಿಗೆ ನೀಡಲಾಗುತ್ತಿದೆ. ರೈತರು ತಮ್ಮ ಬೆಳೆಗೆ ಬೆಲೆ ಖಾತ್ರಿ ಕಾಯ್ದೆ ತರಬೇಕೆಂದು ಒತ್ತಾಯಿಸುತ್ತಿದ್ದರೂ, ಐತಿಹಾಸಿಕ ದೆಹಲಿ ರೈತಾಂದೋಲನಕ್ಕೆ ಮಣಿದು, ಅದನ್ನು ಜಾರಿ ಮಾಡುವುದಾಗಿ ತಾತ್ವಿಕವಾಗಿ ಒಪ್ಪಿಕೊಂಡಿದ್ದರೂ, ಆ ನಿಟ್ಟಿನಲ್ಲಿ ಒಂದು ಸಣ್ಣ ಹೆಜ್ಜೆಯನ್ನೂ ಇಡದೆ, ರೈತರನ್ನು ಖಾಸಗೀ ಮಾರುಕಟ್ಟೆಯ ಜೂಜಾಟಕ್ಕೆ ತಳ್ಳುವ ಹುನ್ನಾರಗಳೇ ಚಾಲ್ತಿಯಲ್ಲಿವೆ. ಅದಕ್ಕಾಗಿಯೇ “ಕೃಷಿ ಉತ್ಪನ್ನಗಳ ಮಾರುಕಟ್ಟೆಗಾಗಿ ರಾಷ್ಟ್ರೀಯ ಚೌಕಟ್ಟು ನೀತಿ”ಯನ್ನು ಕೇಂದ್ರ ಸರ್ಕಾರವು ಸಿದ್ಧಪಡಿಸಿ ರಾಜ್ಯಗಳ ಮೂಲಕ ಜಾರಿಗೆ ತರುವ ಪ್ರಯತ್ನದಲ್ಲಿದೆ ಎಂದು ಅದು ಆರೋಪಿಸಿದೆ.

ಮೋದಿ ಸರ್ಕಾರವು ಇದುವರೆಗೆ ಕಾರ್ಪೊರೇಟ್‌ ಕಂಪನಿಗಳ 50 ಲಕ್ಕ ಕೋಟಿಗೂ ಹೆಚ್ಚಿನ ಸಾಲವನ್ನು ಮನ್ನಾ ಮಾಡಿ ಪೋಷಿಸಿದೆ. ಆದರೆ ಇಡೀ ದೇಶದ ರೈತರ ಸಾಲ ಮನ್ನಾ ಮಾಡಲು ಅಗತ್ಯವಿರುವ 5 ಲಕ್ಷ ಕೋಟಿ ಹಣ ತನ್ನ ಬಳಿ ಇಲ್ಲ ಎಂದು ನಾಟಕವಾಡುತ್ತಿದೆ. ವಾಸ್ತವದಲ್ಲಿ ರೈತರನ್ನು ಸಂಕಷ್ಟದಿಂದ ಪಾರು ಮಾಡುವ ಬದಲು, ಅವರನ್ನು ಮತ್ತಷ್ಟು ದುಸ್ಥಿತಿಗೆ ತಳ್ಳಿ, ಅವರು ಭೂಮಿಯನ್ನು ಬಂಡವಾಳಿಗರಿಗೆ ಮಾರಿಕೊಂಡು ಹಳ್ಳಿಗಳನ್ನು ತೊರೆಯುವ ಪರಿಸ್ಥಿತಿ ನಿರ್ಮಾಣ ಮಾಡುತ್ತಿದೆ. ಕಾರ್ಪೊರೇಟ್‌ ಪರವಾಗಿ ನಡೆಯುತ್ತಿರುವ ಈ ಹುನ್ನಾರುಗಳು ರೈತರು ಮತ್ತು ಕಾರ್ಮಿಕರನ್ನು ಮಾತ್ರವಲ್ಲ,ಇಡೀ ದೇಶದ ಜನರ ಮೇಲೆ ವಿಪರೀತಕರ ಪರಿಣಾಮಗಳನ್ನು ಬೀರಲಿವೆ. ಮುಖ್ಯವಾಗಿ ಸರ್ವ ಕ್ಷೇತ್ರಗಳ ಖಾಸಗೀಕರಣ ಮತ್ತು ಕೇಂದ್ರ ಸರ್ಕಾರ ನಡೆಸಿರುವ ಜಿ ಎಸ್‌ ಟಿ ಮತ್ತು ಸೆಸ್‌ ಲೂಟಿಯಿಂದಾಗಿ ಬೆಲೆಗಳು ಏರುತ್ತಾ ಹೋಗಲಿದೆ, ಬದುಕು ದುಬಾರಿಯಾಗುತ್ತಾ ಹೋಗಲಿದೆ. ಮತ್ತೊಂದೆಡೆ ರೈತರನ್ನು ಭೂಮಿಯಿಂದ ಬಿಡಿಸುವ, ಮತ್ತು ಆದಾಯವನ್ನು ಕುಗ್ಗಿಸುತ್ತವೆ. ಒಟ್ಟಾರೆ ಕಂಪನಿಗಳ ಹಿತ ಕಾಯಲು ರೈತರ, ಕಾರ್ಮಿಕರ, ಯುವ ತಲೆಮಾರಿನ ಹಾಗೂ ಎಲ್ಲಾ ಜನಸಾಮಾನ್ಯರ ಬದುಕನ್ನು ಸಂಕಷ್ಟದ ಕೂಪಕ್ಕೆ ತಳ್ಳಲು ಕೇಂದ್ರ ಸರ್ಕಾರ ಹೊರಟಿದೆ ಎಂದು ಸಂಯುಕ್ತ ಹೋರಾಟವು ಆರೋಪಿಸಿದೆ.

ಕೇಂದ್ರದ ಬಿಜೆಪಿ ಸರ್ಕಾರವಂತೂ ಜನಸಾಮಾನ್ಯರ ಪರವಾಗಿ ಇದ್ದಿದ್ದಿಲ್ಲ, ಅದು ಸದಾ ಕಂಪನಿಗಳ ಪರ, ಖಾಸಗೀಕರಣದ ಪರ ನಿಲುವನ್ನೇ ತಾಳಿದೆ. ಹಾಗಾಗಿ ಅದರ ಜೊತೆ ಗುದ್ದಾಡಬೇಕೇ ಹೊರತು ಯಾವುದೇ ನಿರೀಕ್ಷೆ ಇಟ್ಟುಕೊಳ್ಳುವ ಸ್ಥಿತಿ ಇಲ್ಲ. ಆದರೆ ಬಿಜೆಪಿ ತರುತ್ತಿರುವ ಈ ನೀತಿಗಳನ್ನೆಲ್ಲ ವಿರೋಧ ಪಕ್ಷವಾಗಿದ್ದಾಗ ವಿರೋಧಿಸಿದ್ದ ಮತ್ತು ತಾನು ಅಧಿಕಾರಕ್ಕೆ ಬಂದರೆ ಅವನ್ನೆಲ್ಲಾ ರದ್ದು ಮಾಡುವುದಾಗಿ ಪ್ರಣಾಳಿಕೆಯಲ್ಲಿ ಲಿಖಿತ ಭರವಸೆ ನೀಡಿದ್ದ ರಾಜ್ಯ ಕಾಂಗ್ರೆಸ್‌ ಪಕ್ಷ ಅದಿಕಾರಕ್ಕೆ ಬಂದ ನಂತರ ಚಾಚೂ ತಪ್ಪದೆ ಬಿಜೆಪಿಯ ನೀತಿಗಳನ್ನೇ ಪಾಲಿಸುತ್ತಿದೆ. ಬಗರ್‌ ಹುಕುಂ ರೈತರಿಗೆ ಹುಸಿ ಭರವಸೆಗಳನ್ನು ನೀಡುತ್ತಾ, ಇದ್ದಬದ್ದ ಭೂಮಿಯನ್ನೂ ರೈತರಿಂದ ಕಸಿದು ಕಂಪನಿಗಳಿಗೆ ನೀಡುವ ಕೆಲಸ ಮಾಡುತ್ತಿದೆ. ಇದೊಂದು ವಿಶ್ವಾಸ ದ್ರೋಹದ ಕೆಲಸವಾಗಿದೆ ಎಂದು ಅದು ತಿಳಿಸಿದೆ.

ಹೀಗಾಗಿಯೇ ಮೇ 20ರಂದು ದೇಶವ್ಯಾಪಿಯಾಗಿ ನಡೆಸುತ್ತಿರುವ ಮುಷ್ಕರದಲ್ಲಿ ನಾಡಿನ ರೈತರೆಲ್ಲಾ ಭಾಗವಹಿಸಲು ಕರೆ ನೀಡುತ್ತೇವೆ. ಈ ಮುಷ್ಕರವನ್ನು ನಾವು ದೊಡ್ಡ ಮಟ್ಟದಲ್ಲಿ ಯಶಸ್ವಿಗೊಳಿಸಬೇಕಿದೆ. ನಮ್ಮ ನಮ್ಮ ಜಿಲ್ಲೆಯ ಎಲ್ಲಾ ರೈತರು ಆಯ್ದ ಆಯಕಟ್ಟಿನ ಸ್ಥಳಗಳಲ್ಲಿ ಬೃಹತ್‌ ಪ್ರಮಾಣದ ಪ್ರತಿಭಟನೆಗಳನ್ನು ಸಂಘಟಿಸಬೇಕಿದೆ. ಸರ್ಕಾರ ನಮ್ಮ ಹಕ್ಕೊತ್ತಾಯಗಳಿಗೆ ಸ್ಪಂದಿಸದೇ ಹೋದರೆ ರಸ್ತೆಗಳನ್ನು ಬಂದ್‌ ಮಾಡಿ, ಲಕ್ಷಾಂತರ ಸಂಖ್ಯೆಯಲ್ಲಿ ಜೈಲ್‌ ಭರೋ ನಡೆಸಿ ನಮ್ಮ ಪ್ರತಿರೋಧವನ್ನು ದಾಖಲಿಸಬೇಕಿದೆ. ಮೇ 20ರ ಹೋರಾಟ ರೈತ, ಕಾರ್ಮಿಕರು ಕೂಡಿ ಸರ್ಕಾರಗಳಿಗೆ ಕೊಡುತ್ತಿರುವ ಮೊದಲ ಎಚ್ಚರಿಕೆಯಾಗಿದೆ. ಸರ್ಕಾರಗಳು ಸ್ಪಂದಿಸದೇ ಹೋದಲ್ಲಿ ದೇಶದ ಆಗುಹೋಗುಗಗಳನ್ನೇ ಸ್ಥಬ್ದಗೊಳಿಸಬಲ್ಲ ಶಕ್ತಿ ನಮಗಿದೆ ಎಂಬ ಸಂದೇಶವನ್ನೂ ನಾವು ಕಳುಹಿಸಬೇಕಿದೆ ಎಂದು ಅದು ಎಚ್ಚರಿಸಿದೆ.

ರಾಜ್ಯ ಸರ್ಕಾರವು ಕೊಟ್ಟ ಮಾತಿನಂತೆ ಬಿಜೆಪಿ ಜಾರಿಗೆ ತಂದಿದ್ದ “ಭೂ ತಿದ್ದುಪಡಿ ಕಾಯ್ದೆ”, “ಎಪಿಎಂಸಿ ಕಾಯ್ದೆ”, “ಜಾನುವಾರು ಕಾಯ್ದೆ” ಮುಂತಾದವನ್ನು ಕೊಟ್ಟ ಮಾತಿನಂತೆ ಈ ಕೂಡಲೇ ಹಿಂಪಡೆಯಬೇಕು. ರೈತರಿಗೆ ಬೆಲೆ ಖಾತ್ರಿ ಕಾಯ್ದೆ, ಬಗರ್‌ ಹುಕುಂ ರೈತರಿಗೆ ಹಕ್ಕುಪತ್ರ, ದುಡಿಯುವ ಜನರ ಸಾಲಮನ್ನಾ ಮುಂತಾದ ಹಕ್ಕೊತ್ತಾಯಗಳ ಕುರಿತು ಚರ್ಚಿಸಲು ರೈತ ಮತ್ತು ಕಾರ್ಮಿಕ ಸಂಘಟನೆಗಳ ಜೊತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಸಭೆ ಕರೆಯಬೇಕು. ಇವು ನಮ್ಮ ಹಕ್ಕೊತ್ತಾಯಗಳು ಎಂದು ಸಂಯುಕ್ತ ಹೋರಾಟವು ಹೇಳಿಕೆಯಲ್ಲಿ ತಿಳಿಸಿದೆ.

ಮೇ 20ಕ್ಕೆ ದೇಶಾದ್ಯಂತ ಮುಷ್ಕರ: ಕೇಂದ್ರವು ಜಾರಿಗೆ ತರಲು ಹೊರಟಿರುವ 4 ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸುತ್ತಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...