Homeಕರ್ನಾಟಕಮಾಂದಲ್‌ಪಟ್ಟಿಯ ಗುಡ್ಡ ವಿಸ್ತಾರದಲ್ಲಿ ಅರಳಿದ ನೀಲಿ ಸಂತಸ! ಕಣ್ಮನ ಸೆಳೆದ ನೀಲಕುರಿಂಜಿಯ ಸೋದರ ಸಂಬಂಧಿ

ಮಾಂದಲ್‌ಪಟ್ಟಿಯ ಗುಡ್ಡ ವಿಸ್ತಾರದಲ್ಲಿ ಅರಳಿದ ನೀಲಿ ಸಂತಸ! ಕಣ್ಮನ ಸೆಳೆದ ನೀಲಕುರಿಂಜಿಯ ಸೋದರ ಸಂಬಂಧಿ

- Advertisement -
- Advertisement -

ಕರ್ನಾಟಕ ರಾಜ್ಯದ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿ 7000ಕ್ಕೂ ಮಿಗಿಲಾದ ಹೂ ಬಿಡುವ ಸಸ್ಯ ಪ್ರಬೇಧಗಳಿವೆ. ಆದರೆ ಸಮುದ್ರ ಮಟ್ಟದಿಂದ 1700 ಮೀಟರ್‌ಗಿಂತಲೂ ಹೆಚ್ಚಿನ ಎತ್ತರದ ಪ್ರದೇಶಗಳಲ್ಲಿರುವ ಶೋಲಾ ಅರಣ್ಯ ಪ್ರದೇಶಗಳ ಪರ್ವತ ಶ್ರೇಣಿಗಳಲ್ಲಿ ಬೆಳೆಯುವ ಹೂ ಬಿಡುವ ಪೊದೆಯಂತಹ ಸಸ್ಯಜಾತಿಯೇ ಕುರಿಂಜಿ ಹೂ ಅಥವಾ ನೀಲಕುರಿಂಜಿ ಹೂ.

ಏನಿದು ನೀಲಕುರಿಂಜಿ?

ವೈಜ್ಞಾನಿಕವಾಗಿ ಗುರುತಿಸಲ್ಪಟ್ಟಿರುವ ಹಲವಾರು ಸಸ್ಯ ಪ್ರಬೇಧಗಳಲ್ಲಿ ಸ್ಟ್ರೊಬಿಲಾಂತಸ್ (Strobilanthes) ಅನ್ನುವ ಸಸ್ಯಕುಲಕ್ಕೆ ಸೇರಿದ ಅಕ್ಯಾಂತೇಸಿಯೇ (Acanthaceae) ಕುಟುಂಬದ ಒಂದು ಸದಸ್ಯ ಈ ನೀಲಕುರಿಂಜಿ. ಸ್ಟ್ರೊಬಿಲಾಂತಸ್ ಸಸ್ಯಕುಲದಲ್ಲಿ 250ಕ್ಕೂ ಹೆಚ್ಚಿನ ಹೂವುಗಳು ಅರಳುತ್ತವೆ. ಕರ್ನಾಟಕದ ಕೊಡಗು ಜಿಲ್ಲೆಯ ಪುಷ್ಪಗಿರಿ ಪರ್ವತಶ್ರೇಣಿ, ಬ್ರಹ್ಮಗಿರಿ ಪರ್ವತಶ್ರೇಣಿ, ಚಿಕ್ಕಮಗಳೂರಿನ ಬಾಬಾಬುಡನ್‌ಗಿರಿ ಪರ್ವತಶ್ರೇಣಿ ಮತ್ತು ಬಳ್ಳಾರಿಯ ಸಂಡೂರಿನ ಬೆಟ್ಟಗಳಲ್ಲಿ ಕೂಡಾ ಈ ಹೂವುಗಳು ಅರಳುತ್ತವೆ.

ನೀಲಕುರಿಂಜಿಯ ವಿಶೇಷ ಏನು?

ಸ್ಟ್ರೊಬಿಲಾಂತಸ್ ಸಸ್ಯಕುಲದ ಹೂವುಗಳಲ್ಲಿ ಕೆಲವು ಹೂವುಗಳು ಪ್ರತೀ ವರ್ಷ ಅರಳಿದರೆ ಕೆಲವು 16 ವರ್ಷಗಳಿಗೊಮ್ಮೆ ಅರಳುತ್ತವೆ. ಹಾಗೇ 12 ವರ್ಷಗಳಿಗೊಮ್ಮೆ ಅರಳುವ ಹೂವೇ ನೀಲಕುರಿಂಜಿ ಹೂವು. ನೀಲಕುರಿಂಜಿ ಎನ್ನುವುದು ಮೂಲದಲ್ಲಿ ತಮಿಳಿನದಾಗಿದ್ದು ನೀಲಿ ಬಣ್ಣದಿಂದ ತುಂಬಿದ ಪರ್ವತ ಎಂದರ್ಥ. ವೈಜ್ಞಾನಿಕವಾಗಿ ಸ್ಟ್ರೊಬಿಲಾಂತಸ್ ಕುಂತಿಯಾನ (Strobilanthes kunthiana) ಎಂಬ ಹೆಸರಿನ ಈ ಹೂವು ಆ ಕುಲದಲ್ಲೇ ಅತೀ ಹೆಚ್ಚು ಪ್ರಮಾಣದಲ್ಲಿ ಪರ್ವತಶ್ರೇಣಿಯ ತುಂಬೆಲ್ಲಾ ಹಬ್ಬಿ ಅರಳುವ ಹೂವಾಗಿದೆ. ಈ ಹೂವು ಅರಳಿರುವ ಕಾಲದಲ್ಲಿ ಇಡೀ ಪರ್ವತವೇ ನೀಲಿ ಬಣ್ಣದಿಂದ ತುಂಬಿ ನೀಲಕುರಿಂಜಿಯೆ ಹೆಸರಿನ ಅರ್ಥವನ್ನು ಸಾರುತ್ತದೆ ಮಾತ್ರವಲ್ಲ ನೋಡುಗರ ಕಣ್ಮನ ಸೆಳೆಯುತ್ತದೆ.

ಈ ನೀಲಕುರಿಂಜಿ ಹೂವುಗಳು ಪ್ರತೀ 12 ವರ್ಷಗಳಿಗೊಮ್ಮೆ ಅರಳುತ್ತದೆ. ಈಗಾಗಲೇ ದಾಖಲಿಸಲ್ಪಟ್ಟಿರುವ ಮಾಹಿತಿಯಂತೆ ಈ ಹೂವು ಮೊದಲ ಬಾರಿಗೆ 1838ರಲ್ಲಿ ದಾಖಲಾಗಿದ್ದು ನಂತರ 12 ವಷರ್ಗಳ ಅಂತರದಲ್ಲಿ 1850, 1862 1874, 1886, 1898, 1910, 1922, 1934, 1946, 1958, 1970, 1982, 1994, 2006 ಮತ್ತು ಕೊನೆಯದಾಗಿ 2018ರಲ್ಲಿ ಅರಳಿರುವುದು ದಾಖಲಾಗಿರುತ್ತದೆ. 2018ರಲ್ಲಿ ಕೊಡಗಿನ ಪುಷ್ಪಗಿರಿ ಪರ್ವತ ಶ್ರೇಣಿಯ ತುದಿಯಲ್ಲಿ ಈ ಹೂವುಗಳು ಅರಳಿರುವುದನ್ನು ಅಲ್ಲಿನ ಅರಣ್ಯಾಧಿಕಾರಿಗಳು ದೃಢೀಕರಿಸಿರುತ್ತಾರೆ. ಮುಂದೆ 2030ಕ್ಕೆ ಅರಳುವುದನ್ನು ನಿರೀಕ್ಷಿಸಲಾಗಿದೆ. ಪುಷ್ಪಗಿರಿ ಅರಣ್ಯ ಪ್ರದೇಶವು ಸಮುದ್ರ ಮಟ್ಟದಿಂದ 1700 ಮೀಟರ್ ಎತ್ತರದಲ್ಲಿರುವುದು ನಾವು ಗಮನಿಸಬೇಕಾದ ವಿಚಾರ.

2021ರಲ್ಲಿ ಕೊಡಗಿನಲ್ಲಿ ಅರಳಿರುವ ಹೂವು ಯಾವುದು?

ಸ್ಟ್ರೊಬಿಲಾಂತಸ್ ಸಸ್ಯಕುಲದಲ್ಲಿ 250ಕ್ಕೂ ಹೆಚ್ಚಿನ ಹೂವುಗಳಿದ್ದು ಅವುಗಳಲ್ಲಿ ಕೊಡಗು ಜಿಲ್ಲೆಯ ಪರ್ವತ ಶ್ರೇಣಿಗಳಲ್ಲಿ ಮೂರು ಜಾತಿಯ ಹೂವುಗಳು ಅರಳುವುದು ದಾಖಲಾಗಿರುತ್ತದೆ. ಅವುಗಳೆಂದರೆ ಸ್ಟ್ರೊಬಿಲಾಂತಸ್ ಕುಂತಿಯಾನ (Strobilanthes kunthiana), ಸ್ಟ್ರೊಬಿಲಾಂತಸ್ ಸಿಸಿಲಿಸ್ (Strobilanthes sessilis) ಮತ್ತು ಸ್ಟ್ರೊಬಿಲಾಂತಸ್ ಕುಸ್ಪಿಡೇಟಸ್ (Strobilanthes cuspidatus). ಇವುಗಳಲ್ಲಿ ಸ್ಟ್ರೊಬಿಲಾಂತಸ್ ಕುಂತಿಯಾನ ಹೊರತುಪಡಿಸಿ ಉಳಿದ 2 ಜಾತಿಯ ಹೂವುಗಳು 4-5-6-7 ವರ್ಷಗಳ ಅಂತರದಲ್ಲಿ ಕೊಡಗು ಜಿಲ್ಲೆಯ ಪರ್ವತಗಳಲ್ಲಿ ಅಥವಾ ಎತ್ತರದ ಗುಡ್ಡಗಳಲ್ಲಿ ಅರಳುವುದನ್ನು ಅಲ್ಲಿನ ಸ್ಥಳೀಯರು ದಾಖಲಿಸಿರುತ್ತಾರೆ. ಸದರಿ 2021ರ ಆಗಸ್ಟ್ ಮಾಹೆಯಲ್ಲಿ ಕೊಡಗಿನ ಅತ್ಯಂತ ಆಕರ್ಷಣೀಯ ಪರ್ವತ ಪ್ರದೇಶವಾದ ಮಾಂದಲ್‌ಪಟ್ಟಿಯಲ್ಲಿ ಮತ್ತು ಪುಷ್ಪಗಿರಿ ಪರ್ವತ ಪ್ರದೇಶದಲ್ಲಿ ಅರಳಿರುವುದು ಸ್ಟ್ರೊಬಿಲಾಂತಸ್ ಸಿಸಿಲಿಸ್ ಜಾತಿಯ ಕುರಿಂಜಿ ಹೂವಾಗಿರುತ್ತದೆ.

ಈ ಹೂವುಗಳನ್ನು ಕಳೆದ ಮೂರು ವರ್ಷಗಳಿಂದ ಕೊಡಗಿನ ಬೇರೆ ಬೇರೆ ಗುಡ್ಡ ಪ್ರದೇಶಗಳಲ್ಲಿ ಅರಳಿರುವುದನ್ನು ನಾನೇ ಕಂಡಿದ್ದೇನೆ. ಕಳೆದ ವರ್ಷ ಕೂಡಾ ಕೊಡಗು ಜಿಲ್ಲೆಯ ಕಾಲೂರಿನಲ್ಲಿ ಮತ್ತು ಪುಷ್ಪಗಿರಿಯಲ್ಲಿ ಈ ಹೂವುಗಳು ಅರಳಿದೆ. ಆದರೆ ಈ ವರ್ಷ ಮಾಂದಲ್‌ಪಟ್ಟಿಯ ಬೆಟ್ಟದ ಪೂರ್ತಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಅರಳಿರುವುದರಿಂದ ಅತ್ಯಂತ ಹೆಚ್ಚಿನ ಮಟ್ಟದಲ್ಲಿ ಸುದ್ದಿಯಾಗಿದ್ದು ಮಾತ್ರವಲ್ಲದೆ ಪ್ರವಾಸಿಗರನ್ನು ಆಕರ್ಷಿಸುವ ಕಾರಣದಿಂದಲೋ ಅಥವಾ ಮಾಹಿತಿಯ ಕೊರತೆಯಿಂದಲೋ ಸುದ್ದಿ ಮಾಧ್ಯಮಗಳು ಮತ್ತು ವಿಶೇಷವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಜನ ಈ ಹೂವುಗಳನ್ನು ನೀಲಕುರಿಂಜಿ ಎಂದು ಕರೆದರು. ಆದರೆ
ವಾಸ್ತವದಲ್ಲಿ ಕೊಡಗು ಜಿಲ್ಲೆಯ ಅನೇಕ ಗುಡ್ಡಗಳಲ್ಲಿ ಅರಳಿರುವ ಈ ನೀಲಿ ಸುಂದರಿ ಮಾತ್ರ ಸ್ಟ್ರೊಬಿಲಾಂತಸ್ ಸಿಸಿಲಿಸ್!.

ವ್ಯತ್ಯಾಸವೇನು?

ಸ್ಟ್ರೊಬಿಲಾಂತಸ್ ಕುಂತಿಯಾನ ಮತ್ತು ಸ್ಟ್ರೊಬಿಲಾಂತಸ್ ಸಿಸಿಲಿಸ್ ಹೂವುಗಳ ನಡುವೆ ಕಾಣಲು ಅಂತಹ ದೊಡ್ಡ ವ್ಯತ್ಯಾಸವೇನಿರುವುದಿಲ್ಲ. ಎರಡೂ ಪೊದೆಯ ಸಸ್ಯಗಳಾಗಿದ್ದು ಹೂವುಗಳು ಗೊಂಚಲಾಗಿ ಬೆಳೆಯುತ್ತದೆ ಮತ್ತು ಹೂವುಗಳಿಗೆ ಬೇರೆ ಹೂವುಗಳಂತೆ ತೊಟ್ಟುಗಳಿರುವುದಿಲ್ಲ. ಹೂವನ್ನು ನೇರ ಗೊಂಚಲಿನಿಂದಲೇ ಬೇರ್ಪಡಿಸಬೇಕು. ಕನಕಾಂಬರ ಹೂವಿನ ಹಾಗೆ!.

ನೀಲಕುರಿಂಜಿಯ ಹೂವುಗಳ ಕಾಂಡವು ತುಸು ಎತ್ತರಕ್ಕೆ, ನೇರವಾಗಿ ಬೆಳಯುವುದಲ್ಲದೆ ಕಾಂಡವು ಗಟ್ಟಿಯಾಗಿರುತ್ತದೆ. ಎಲೆಗಳು ತುಸು ಉದ್ದವಾಗಿರುತ್ತದೆ. ಹೂವಿನ ಮುಂಭಾಗ ತುಸು ಹೆಚ್ಚೇ ಅಗಲವಾಗಿರುತ್ತದೆ. ಆದರೆ ಸ್ಟ್ರೊಬಿಲಾಂತಸ್ ಸಿಸಿಲಿಸ್ ಹೂವುಗಳು ಗಂಟೆಯಾಕಾರದಲ್ಲಿ ಅರಳಿ ಹೂವಿನ ದಳದ ಅಂಚುಗಳು ಸ್ವಲ್ಪವೇ ಸ್ವಲ್ಪ ಹಿಮ್ಮುಖವಾಗಿ ಬಾಗಿರುತ್ತದೆ. ಎರಡೂ ಹೂವುಗಳನ್ನು ಒಟ್ಟಿಗೇ ನೋಡುವ ಕಾಲ ಬಹುಶಃ ಸಿಗಲಾರದೇನೋ ಅಥವಾ ಮುಂಬರುವ ದಿನಗಳಲ್ಲಿ ಒಟ್ಟಿಗೇ ಒಂದೇ ವರ್ಷ ಅರಳುವುದೇನೋ? ಕಾದು ನೋಡಬೇಕಿದೆ.

ವಿನೋದ್ ಕುಮಾರ್ ವಿ ಕೆ

ವಿನೋದ್ ಕುಮಾರ್ ವಿ ಕೆ
ವಿನೋದ್ ಹುಟ್ಟಿದ್ದು ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ. 2011ರಿಂದ ಛಾಯಾಗ್ರಹಣದಲ್ಲಿ ಆಸಕ್ತಿ. ಹಕ್ಕಿ, ಚಿಟ್ಟೆ, ಕೀಟಗಳಿಂದ ಪ್ರಾರಂಭವಾಗಿ ಟ್ರೆಕ್ಕಿಂಗ್ ಹವ್ಯಾಸವಾಗಿ ಬೆಳೆದಿದೆ. ಅರಣ್ಯ ಇಲಾಖೆಯಲ್ಲಿ ಕಚೇರಿ ಸಹಾಯಕನಾಗಿ ವೃತ್ತಿ. ಸದ್ಯಕ್ಕೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ವಾಸವಾಗಿದ್ದಾರೆ.


ಇದನ್ನೂ ಓದಿ: ಗೌರಿ ಕಾರ್ನರ್: ಸೌಹಾರ್ದ ಗಿರಿಯಲ್ಲಿ ನಿಸರ್ಗದ ’ನೀಲಿಗ್ಯಾನ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...