Homeಕರ್ನಾಟಕಮಾಂದಲ್‌ಪಟ್ಟಿಯ ಗುಡ್ಡ ವಿಸ್ತಾರದಲ್ಲಿ ಅರಳಿದ ನೀಲಿ ಸಂತಸ! ಕಣ್ಮನ ಸೆಳೆದ ನೀಲಕುರಿಂಜಿಯ ಸೋದರ ಸಂಬಂಧಿ

ಮಾಂದಲ್‌ಪಟ್ಟಿಯ ಗುಡ್ಡ ವಿಸ್ತಾರದಲ್ಲಿ ಅರಳಿದ ನೀಲಿ ಸಂತಸ! ಕಣ್ಮನ ಸೆಳೆದ ನೀಲಕುರಿಂಜಿಯ ಸೋದರ ಸಂಬಂಧಿ

- Advertisement -
- Advertisement -

ಕರ್ನಾಟಕ ರಾಜ್ಯದ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿ 7000ಕ್ಕೂ ಮಿಗಿಲಾದ ಹೂ ಬಿಡುವ ಸಸ್ಯ ಪ್ರಬೇಧಗಳಿವೆ. ಆದರೆ ಸಮುದ್ರ ಮಟ್ಟದಿಂದ 1700 ಮೀಟರ್‌ಗಿಂತಲೂ ಹೆಚ್ಚಿನ ಎತ್ತರದ ಪ್ರದೇಶಗಳಲ್ಲಿರುವ ಶೋಲಾ ಅರಣ್ಯ ಪ್ರದೇಶಗಳ ಪರ್ವತ ಶ್ರೇಣಿಗಳಲ್ಲಿ ಬೆಳೆಯುವ ಹೂ ಬಿಡುವ ಪೊದೆಯಂತಹ ಸಸ್ಯಜಾತಿಯೇ ಕುರಿಂಜಿ ಹೂ ಅಥವಾ ನೀಲಕುರಿಂಜಿ ಹೂ.

ಏನಿದು ನೀಲಕುರಿಂಜಿ?

ವೈಜ್ಞಾನಿಕವಾಗಿ ಗುರುತಿಸಲ್ಪಟ್ಟಿರುವ ಹಲವಾರು ಸಸ್ಯ ಪ್ರಬೇಧಗಳಲ್ಲಿ ಸ್ಟ್ರೊಬಿಲಾಂತಸ್ (Strobilanthes) ಅನ್ನುವ ಸಸ್ಯಕುಲಕ್ಕೆ ಸೇರಿದ ಅಕ್ಯಾಂತೇಸಿಯೇ (Acanthaceae) ಕುಟುಂಬದ ಒಂದು ಸದಸ್ಯ ಈ ನೀಲಕುರಿಂಜಿ. ಸ್ಟ್ರೊಬಿಲಾಂತಸ್ ಸಸ್ಯಕುಲದಲ್ಲಿ 250ಕ್ಕೂ ಹೆಚ್ಚಿನ ಹೂವುಗಳು ಅರಳುತ್ತವೆ. ಕರ್ನಾಟಕದ ಕೊಡಗು ಜಿಲ್ಲೆಯ ಪುಷ್ಪಗಿರಿ ಪರ್ವತಶ್ರೇಣಿ, ಬ್ರಹ್ಮಗಿರಿ ಪರ್ವತಶ್ರೇಣಿ, ಚಿಕ್ಕಮಗಳೂರಿನ ಬಾಬಾಬುಡನ್‌ಗಿರಿ ಪರ್ವತಶ್ರೇಣಿ ಮತ್ತು ಬಳ್ಳಾರಿಯ ಸಂಡೂರಿನ ಬೆಟ್ಟಗಳಲ್ಲಿ ಕೂಡಾ ಈ ಹೂವುಗಳು ಅರಳುತ್ತವೆ.

ನೀಲಕುರಿಂಜಿಯ ವಿಶೇಷ ಏನು?

ಸ್ಟ್ರೊಬಿಲಾಂತಸ್ ಸಸ್ಯಕುಲದ ಹೂವುಗಳಲ್ಲಿ ಕೆಲವು ಹೂವುಗಳು ಪ್ರತೀ ವರ್ಷ ಅರಳಿದರೆ ಕೆಲವು 16 ವರ್ಷಗಳಿಗೊಮ್ಮೆ ಅರಳುತ್ತವೆ. ಹಾಗೇ 12 ವರ್ಷಗಳಿಗೊಮ್ಮೆ ಅರಳುವ ಹೂವೇ ನೀಲಕುರಿಂಜಿ ಹೂವು. ನೀಲಕುರಿಂಜಿ ಎನ್ನುವುದು ಮೂಲದಲ್ಲಿ ತಮಿಳಿನದಾಗಿದ್ದು ನೀಲಿ ಬಣ್ಣದಿಂದ ತುಂಬಿದ ಪರ್ವತ ಎಂದರ್ಥ. ವೈಜ್ಞಾನಿಕವಾಗಿ ಸ್ಟ್ರೊಬಿಲಾಂತಸ್ ಕುಂತಿಯಾನ (Strobilanthes kunthiana) ಎಂಬ ಹೆಸರಿನ ಈ ಹೂವು ಆ ಕುಲದಲ್ಲೇ ಅತೀ ಹೆಚ್ಚು ಪ್ರಮಾಣದಲ್ಲಿ ಪರ್ವತಶ್ರೇಣಿಯ ತುಂಬೆಲ್ಲಾ ಹಬ್ಬಿ ಅರಳುವ ಹೂವಾಗಿದೆ. ಈ ಹೂವು ಅರಳಿರುವ ಕಾಲದಲ್ಲಿ ಇಡೀ ಪರ್ವತವೇ ನೀಲಿ ಬಣ್ಣದಿಂದ ತುಂಬಿ ನೀಲಕುರಿಂಜಿಯೆ ಹೆಸರಿನ ಅರ್ಥವನ್ನು ಸಾರುತ್ತದೆ ಮಾತ್ರವಲ್ಲ ನೋಡುಗರ ಕಣ್ಮನ ಸೆಳೆಯುತ್ತದೆ.

ಈ ನೀಲಕುರಿಂಜಿ ಹೂವುಗಳು ಪ್ರತೀ 12 ವರ್ಷಗಳಿಗೊಮ್ಮೆ ಅರಳುತ್ತದೆ. ಈಗಾಗಲೇ ದಾಖಲಿಸಲ್ಪಟ್ಟಿರುವ ಮಾಹಿತಿಯಂತೆ ಈ ಹೂವು ಮೊದಲ ಬಾರಿಗೆ 1838ರಲ್ಲಿ ದಾಖಲಾಗಿದ್ದು ನಂತರ 12 ವಷರ್ಗಳ ಅಂತರದಲ್ಲಿ 1850, 1862 1874, 1886, 1898, 1910, 1922, 1934, 1946, 1958, 1970, 1982, 1994, 2006 ಮತ್ತು ಕೊನೆಯದಾಗಿ 2018ರಲ್ಲಿ ಅರಳಿರುವುದು ದಾಖಲಾಗಿರುತ್ತದೆ. 2018ರಲ್ಲಿ ಕೊಡಗಿನ ಪುಷ್ಪಗಿರಿ ಪರ್ವತ ಶ್ರೇಣಿಯ ತುದಿಯಲ್ಲಿ ಈ ಹೂವುಗಳು ಅರಳಿರುವುದನ್ನು ಅಲ್ಲಿನ ಅರಣ್ಯಾಧಿಕಾರಿಗಳು ದೃಢೀಕರಿಸಿರುತ್ತಾರೆ. ಮುಂದೆ 2030ಕ್ಕೆ ಅರಳುವುದನ್ನು ನಿರೀಕ್ಷಿಸಲಾಗಿದೆ. ಪುಷ್ಪಗಿರಿ ಅರಣ್ಯ ಪ್ರದೇಶವು ಸಮುದ್ರ ಮಟ್ಟದಿಂದ 1700 ಮೀಟರ್ ಎತ್ತರದಲ್ಲಿರುವುದು ನಾವು ಗಮನಿಸಬೇಕಾದ ವಿಚಾರ.

2021ರಲ್ಲಿ ಕೊಡಗಿನಲ್ಲಿ ಅರಳಿರುವ ಹೂವು ಯಾವುದು?

ಸ್ಟ್ರೊಬಿಲಾಂತಸ್ ಸಸ್ಯಕುಲದಲ್ಲಿ 250ಕ್ಕೂ ಹೆಚ್ಚಿನ ಹೂವುಗಳಿದ್ದು ಅವುಗಳಲ್ಲಿ ಕೊಡಗು ಜಿಲ್ಲೆಯ ಪರ್ವತ ಶ್ರೇಣಿಗಳಲ್ಲಿ ಮೂರು ಜಾತಿಯ ಹೂವುಗಳು ಅರಳುವುದು ದಾಖಲಾಗಿರುತ್ತದೆ. ಅವುಗಳೆಂದರೆ ಸ್ಟ್ರೊಬಿಲಾಂತಸ್ ಕುಂತಿಯಾನ (Strobilanthes kunthiana), ಸ್ಟ್ರೊಬಿಲಾಂತಸ್ ಸಿಸಿಲಿಸ್ (Strobilanthes sessilis) ಮತ್ತು ಸ್ಟ್ರೊಬಿಲಾಂತಸ್ ಕುಸ್ಪಿಡೇಟಸ್ (Strobilanthes cuspidatus). ಇವುಗಳಲ್ಲಿ ಸ್ಟ್ರೊಬಿಲಾಂತಸ್ ಕುಂತಿಯಾನ ಹೊರತುಪಡಿಸಿ ಉಳಿದ 2 ಜಾತಿಯ ಹೂವುಗಳು 4-5-6-7 ವರ್ಷಗಳ ಅಂತರದಲ್ಲಿ ಕೊಡಗು ಜಿಲ್ಲೆಯ ಪರ್ವತಗಳಲ್ಲಿ ಅಥವಾ ಎತ್ತರದ ಗುಡ್ಡಗಳಲ್ಲಿ ಅರಳುವುದನ್ನು ಅಲ್ಲಿನ ಸ್ಥಳೀಯರು ದಾಖಲಿಸಿರುತ್ತಾರೆ. ಸದರಿ 2021ರ ಆಗಸ್ಟ್ ಮಾಹೆಯಲ್ಲಿ ಕೊಡಗಿನ ಅತ್ಯಂತ ಆಕರ್ಷಣೀಯ ಪರ್ವತ ಪ್ರದೇಶವಾದ ಮಾಂದಲ್‌ಪಟ್ಟಿಯಲ್ಲಿ ಮತ್ತು ಪುಷ್ಪಗಿರಿ ಪರ್ವತ ಪ್ರದೇಶದಲ್ಲಿ ಅರಳಿರುವುದು ಸ್ಟ್ರೊಬಿಲಾಂತಸ್ ಸಿಸಿಲಿಸ್ ಜಾತಿಯ ಕುರಿಂಜಿ ಹೂವಾಗಿರುತ್ತದೆ.

ಈ ಹೂವುಗಳನ್ನು ಕಳೆದ ಮೂರು ವರ್ಷಗಳಿಂದ ಕೊಡಗಿನ ಬೇರೆ ಬೇರೆ ಗುಡ್ಡ ಪ್ರದೇಶಗಳಲ್ಲಿ ಅರಳಿರುವುದನ್ನು ನಾನೇ ಕಂಡಿದ್ದೇನೆ. ಕಳೆದ ವರ್ಷ ಕೂಡಾ ಕೊಡಗು ಜಿಲ್ಲೆಯ ಕಾಲೂರಿನಲ್ಲಿ ಮತ್ತು ಪುಷ್ಪಗಿರಿಯಲ್ಲಿ ಈ ಹೂವುಗಳು ಅರಳಿದೆ. ಆದರೆ ಈ ವರ್ಷ ಮಾಂದಲ್‌ಪಟ್ಟಿಯ ಬೆಟ್ಟದ ಪೂರ್ತಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಅರಳಿರುವುದರಿಂದ ಅತ್ಯಂತ ಹೆಚ್ಚಿನ ಮಟ್ಟದಲ್ಲಿ ಸುದ್ದಿಯಾಗಿದ್ದು ಮಾತ್ರವಲ್ಲದೆ ಪ್ರವಾಸಿಗರನ್ನು ಆಕರ್ಷಿಸುವ ಕಾರಣದಿಂದಲೋ ಅಥವಾ ಮಾಹಿತಿಯ ಕೊರತೆಯಿಂದಲೋ ಸುದ್ದಿ ಮಾಧ್ಯಮಗಳು ಮತ್ತು ವಿಶೇಷವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಜನ ಈ ಹೂವುಗಳನ್ನು ನೀಲಕುರಿಂಜಿ ಎಂದು ಕರೆದರು. ಆದರೆ
ವಾಸ್ತವದಲ್ಲಿ ಕೊಡಗು ಜಿಲ್ಲೆಯ ಅನೇಕ ಗುಡ್ಡಗಳಲ್ಲಿ ಅರಳಿರುವ ಈ ನೀಲಿ ಸುಂದರಿ ಮಾತ್ರ ಸ್ಟ್ರೊಬಿಲಾಂತಸ್ ಸಿಸಿಲಿಸ್!.

ವ್ಯತ್ಯಾಸವೇನು?

ಸ್ಟ್ರೊಬಿಲಾಂತಸ್ ಕುಂತಿಯಾನ ಮತ್ತು ಸ್ಟ್ರೊಬಿಲಾಂತಸ್ ಸಿಸಿಲಿಸ್ ಹೂವುಗಳ ನಡುವೆ ಕಾಣಲು ಅಂತಹ ದೊಡ್ಡ ವ್ಯತ್ಯಾಸವೇನಿರುವುದಿಲ್ಲ. ಎರಡೂ ಪೊದೆಯ ಸಸ್ಯಗಳಾಗಿದ್ದು ಹೂವುಗಳು ಗೊಂಚಲಾಗಿ ಬೆಳೆಯುತ್ತದೆ ಮತ್ತು ಹೂವುಗಳಿಗೆ ಬೇರೆ ಹೂವುಗಳಂತೆ ತೊಟ್ಟುಗಳಿರುವುದಿಲ್ಲ. ಹೂವನ್ನು ನೇರ ಗೊಂಚಲಿನಿಂದಲೇ ಬೇರ್ಪಡಿಸಬೇಕು. ಕನಕಾಂಬರ ಹೂವಿನ ಹಾಗೆ!.

ನೀಲಕುರಿಂಜಿಯ ಹೂವುಗಳ ಕಾಂಡವು ತುಸು ಎತ್ತರಕ್ಕೆ, ನೇರವಾಗಿ ಬೆಳಯುವುದಲ್ಲದೆ ಕಾಂಡವು ಗಟ್ಟಿಯಾಗಿರುತ್ತದೆ. ಎಲೆಗಳು ತುಸು ಉದ್ದವಾಗಿರುತ್ತದೆ. ಹೂವಿನ ಮುಂಭಾಗ ತುಸು ಹೆಚ್ಚೇ ಅಗಲವಾಗಿರುತ್ತದೆ. ಆದರೆ ಸ್ಟ್ರೊಬಿಲಾಂತಸ್ ಸಿಸಿಲಿಸ್ ಹೂವುಗಳು ಗಂಟೆಯಾಕಾರದಲ್ಲಿ ಅರಳಿ ಹೂವಿನ ದಳದ ಅಂಚುಗಳು ಸ್ವಲ್ಪವೇ ಸ್ವಲ್ಪ ಹಿಮ್ಮುಖವಾಗಿ ಬಾಗಿರುತ್ತದೆ. ಎರಡೂ ಹೂವುಗಳನ್ನು ಒಟ್ಟಿಗೇ ನೋಡುವ ಕಾಲ ಬಹುಶಃ ಸಿಗಲಾರದೇನೋ ಅಥವಾ ಮುಂಬರುವ ದಿನಗಳಲ್ಲಿ ಒಟ್ಟಿಗೇ ಒಂದೇ ವರ್ಷ ಅರಳುವುದೇನೋ? ಕಾದು ನೋಡಬೇಕಿದೆ.

ವಿನೋದ್ ಕುಮಾರ್ ವಿ ಕೆ

ವಿನೋದ್ ಕುಮಾರ್ ವಿ ಕೆ
ವಿನೋದ್ ಹುಟ್ಟಿದ್ದು ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ. 2011ರಿಂದ ಛಾಯಾಗ್ರಹಣದಲ್ಲಿ ಆಸಕ್ತಿ. ಹಕ್ಕಿ, ಚಿಟ್ಟೆ, ಕೀಟಗಳಿಂದ ಪ್ರಾರಂಭವಾಗಿ ಟ್ರೆಕ್ಕಿಂಗ್ ಹವ್ಯಾಸವಾಗಿ ಬೆಳೆದಿದೆ. ಅರಣ್ಯ ಇಲಾಖೆಯಲ್ಲಿ ಕಚೇರಿ ಸಹಾಯಕನಾಗಿ ವೃತ್ತಿ. ಸದ್ಯಕ್ಕೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ವಾಸವಾಗಿದ್ದಾರೆ.


ಇದನ್ನೂ ಓದಿ: ಗೌರಿ ಕಾರ್ನರ್: ಸೌಹಾರ್ದ ಗಿರಿಯಲ್ಲಿ ನಿಸರ್ಗದ ’ನೀಲಿಗ್ಯಾನ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...